Andolana originals

ಅದ್ದೂರಿಯಾಗಿ ನೆರವೇರಿದ ಶ್ರೀ ಮುತ್ತುರಾಯಸ್ವಾಮಿ ಜಾತ್ರೆ

ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ

ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು ಅರಣ್ಯ ಪ್ರದೇಶದ ಮಧ್ಯಭಾಗದಲ್ಲಿರುವ ಶ್ರೀ ಮುತ್ತುರಾಯಸ್ವಾಮಿ ದೇವಸ್ಥಾನದಲ್ಲಿ ೩೨ನೇ ವರ್ಷದ ಜಾತ್ರಾ ಮಹೋತ್ಸವವು ಅದ್ಧೂರಿಯಾಗಿ ನಡೆಯಿತು.

ದೇವಸ್ಥನದ ಮುಖ್ಯ ಅರ್ಚಕರಾದ ನರಸಿಂಹಮೂರ್ತಿರವರ ನೇತೃತ್ವದಲ್ಲಿ ಶ್ರೀ ಮುತ್ತುರಾಯಸ್ವಾಮಿ ಚಾರಿಟಬಲ್ ಟ್ರಸ್ಟ್ ಸೇವಾ ಸಮಿತಿ ವತಿಯಿಂದ ರಾತ್ರಿಯಿಂದಲೇ ಪೂಜಾ ಕಾರ್ಯಕ್ರಮಗಳು ನಡೆದವು. ಮಂಗಳವಾರ ಬೆಳಿಗ್ಗೆ ೬.೩೦ ಗಂಟೆಗೆ ಹೊಳೆ ಮಜ್ಜನ ಸೇವೆ, ಗಣಪತಿಹೋಮ, ನವಗ್ರಹ ಹೋಮ, ಶಾಂತಿಹೋಮ, ಮಹಾಮಂಗಳಾರತಿ ಮಾಡಿದ ನಂತರ ತೀರ್ಥಪ್ರಸಾದ ವಿತರಿಸಲಾಯಿತು. ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸ್ಥಳೀಯ ಗ್ರಾಮಸ್ಥರು ಸೇರಿದಂತೆ ತಾಲ್ಲೂಕಿನ ಸುತ್ತಮುತ್ತಲಿನ ಗ್ರಾಮದ ಭಕ್ತಾದಿಗಳು ಹಾಗೂ ಕೊಡಗು, ಮೈಸೂರು, ಬೆಂಗಳೂರಿನಿಂದ ಆಗಮಿಸಿದ್ದ ಅಪಾರ ಸಂಖ್ಯೆಯ ಭಕ್ತಾದಿಗಳು ಪಾಲ್ಗೊಂಡಿದ್ದರು. ಜಾತ್ರೆಗೆ ಬಂದಂತಹ ಭಕ್ತಾದಿಗಳಿಗೆ ಶ್ರೀಮುತ್ತುರಾಯಸ್ವಾಮಿ ಚಾರಿಟ ಬಲ್ ಟ್ರಸ್ಟ್ ವತಿಯಿಂದ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

ಸಾವಿರಾರು ಭಕ್ತಾದಿಗಳು ಒಂದೇ ಸಮಯದಲ್ಲಿ ಜಾತ್ರೆಗೆ ಬಂದ ಕಾರಣ ಕೆಲವು ಗಂಟೆಗಳಕಾಲ ರಸ್ತೆ ಸಂಚಾರದಲ್ಲಿ ವ್ಯತ್ಯಯವಾಯಿತು. ಶ್ರೀ ಮುತ್ತುರಾಯಸ್ವಾಮಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ರಾಮಚಂದ್ರ ಮಾತನಾಡಿ, ಈ ದೇವಸ್ಥಾನಕ್ಕೆ ೧೦೦ ವರ್ಷಗಳ ಇತಿಹಾಸವಿದ್ದು, ರಾಜ್ಯಾದ್ಯಂತ ಭಕ್ತ ಸಮೂಹವನ್ನು ಹೊಂದಿದೆ.

ಈ ಹಿಂದೆ ದೇವಸ್ಥಾನವು ಆನೆಚೌಕೂರು ಮೀಸಲು ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿದ್ದ ಸಂದರ್ಭದಲ್ಲಿ ಈ ಭಾಗದ ಸುತ್ತಮುತ್ತಲ್ಲಿನ ಗ್ರಾಮದ ಬಡವರು ಹಾಗೂ ಮಧ್ಯಮ ವರ್ಗದವರಿಗೆ ಕಡಿಮೆ ದರದಲ್ಲಿ ಮದುವೆ, ನಾಮಕರಣ ಹಾಗೂ ಹರಕೆ ಮುಂತಾದ ಸಮಾರಂಭ ನಡೆಸಲು ಸಹಕಾರವಾಗುತ್ತಿತ್ತು. ಆದರೆ ಈಗ ಈ ಪ್ರದೇಶವನ್ನು ನಾಗರಹೊಳೆ ಹುಲಿ ಸಂರಕ್ಷಣಾ ಪ್ರದೇಶದ ಬಫರ್ ಜೋನ್ ವ್ಯಾಪ್ತಿಯ ಅರಣ್ಯಪ್ರದೇಶವೆಂದು ಗುರುತಿಸಿರುವುದರಿಂದ ಜಾತ್ರೆಯನ್ನು ಹೊರತುಪಡಿಸಿ ಯಾವುದೇ ರೀತಿಯ ಸಮಾರಂಭಗಳನ್ನು ನಡೆಸಲು ಅರಣ್ಯ ಇಲಾಖೆಯಿಂದ ನಿರ್ಬಂಧವಿದೆ. ದಿನದಿಂದ ದಿನಕ್ಕೆ ಭಕ್ತಾದಿಗಳ ಸಂಖ್ಯೆ ಕ್ಷೀಣಿಸುತ್ತಿದ್ದು ಭಕ್ತಾದಿಗಳಿಂದ ದೊರಕುತ್ತಿದ್ದ ಹರಕೆಯ ಹಣ ಹಾಗೂ ದಾನ ದತ್ತಿ ಸಂಗ್ರಹ ವಾಗದ ಕಾರಣ ದೇವಸ್ಥಾನದ ಎಲ್ಲಾ ರೀತಿಯ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ ಎಂದರು.

ಮಾಜಿ ಶಾಸಕರಾದ ಕೆ.ಮಹದೇವ್, ಪಿರಿಯಾಪಟ್ಟಣ ತಹಸಿಲ್ದಾರ್ ನಿಸರ್ಗಪ್ರಿಯ, ಉಪ ತಹಸಿಲ್ದಾರ್ ವಿನೋದ್ ಕುಮಾರ್, ಇನ್ ಸ್ಪೆಕ್ಟರ್ ಗೋವಿಂದರಾಜು, ಸಮಿತಿಯ ಕಾರ್ಯದರ್ಶಿ ಪಾಪಣ್ಣ, ಸದಸ್ಯರಾದ ಶ್ರೀನಿವಾಸ್, ಶಿವರಾಜ್, ಕಾಂತರಾಜು, ಕೃಷ್ಣೇಗೌಡ, ರಾಮೇಗೌಡ, ಸುರೇಶ್, ರಮೇಶ್, ಕುಮಾರ, ವಿ.ಎಸ್.ರಾಮಕೃಷ್ಣ, ಶಿವಣ್ಣ, ರಘು, ಮುತ್ತುರಾಜು, ನವೀನ್, ಸುಬ್ರಮಣಿ, ಸತೀಶ, ಪ್ರಭು ಕುಮಾರ್, ರಾಮಕೃಷ್ಣ, ಅರವಿಂದ, ನಂದಿ, ಅಕ್ಕಪಕ್ಕದ ಗ್ರಾಮಗಳ ಸಾವಿರಾರು ಭಕ್ತರು ಭಾಗವಹಿಸಿದ್ದರು.

ಸಂಚಾರ ದಟ್ಟಣೆ:  ಮಧ್ಯಾಹ್ನದ ವೇಳೆ ಭಕ್ತರು ಏಕಾಏಕಿ ಆಗಮಿಸಿದ್ದರಿಂದ ಒಂದೆರಡು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಉಂಟಾಗಿ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಯಿತು.

ಆಂದೋಲನ ಡೆಸ್ಕ್

Recent Posts

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

1 hour ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

4 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

4 hours ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

4 hours ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

5 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

6 hours ago