ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ
ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು ಅರಣ್ಯ ಪ್ರದೇಶದ ಮಧ್ಯಭಾಗದಲ್ಲಿರುವ ಶ್ರೀ ಮುತ್ತುರಾಯಸ್ವಾಮಿ ದೇವಸ್ಥಾನದಲ್ಲಿ ೩೨ನೇ ವರ್ಷದ ಜಾತ್ರಾ ಮಹೋತ್ಸವವು ಅದ್ಧೂರಿಯಾಗಿ ನಡೆಯಿತು.
ದೇವಸ್ಥನದ ಮುಖ್ಯ ಅರ್ಚಕರಾದ ನರಸಿಂಹಮೂರ್ತಿರವರ ನೇತೃತ್ವದಲ್ಲಿ ಶ್ರೀ ಮುತ್ತುರಾಯಸ್ವಾಮಿ ಚಾರಿಟಬಲ್ ಟ್ರಸ್ಟ್ ಸೇವಾ ಸಮಿತಿ ವತಿಯಿಂದ ರಾತ್ರಿಯಿಂದಲೇ ಪೂಜಾ ಕಾರ್ಯಕ್ರಮಗಳು ನಡೆದವು. ಮಂಗಳವಾರ ಬೆಳಿಗ್ಗೆ ೬.೩೦ ಗಂಟೆಗೆ ಹೊಳೆ ಮಜ್ಜನ ಸೇವೆ, ಗಣಪತಿಹೋಮ, ನವಗ್ರಹ ಹೋಮ, ಶಾಂತಿಹೋಮ, ಮಹಾಮಂಗಳಾರತಿ ಮಾಡಿದ ನಂತರ ತೀರ್ಥಪ್ರಸಾದ ವಿತರಿಸಲಾಯಿತು. ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸ್ಥಳೀಯ ಗ್ರಾಮಸ್ಥರು ಸೇರಿದಂತೆ ತಾಲ್ಲೂಕಿನ ಸುತ್ತಮುತ್ತಲಿನ ಗ್ರಾಮದ ಭಕ್ತಾದಿಗಳು ಹಾಗೂ ಕೊಡಗು, ಮೈಸೂರು, ಬೆಂಗಳೂರಿನಿಂದ ಆಗಮಿಸಿದ್ದ ಅಪಾರ ಸಂಖ್ಯೆಯ ಭಕ್ತಾದಿಗಳು ಪಾಲ್ಗೊಂಡಿದ್ದರು. ಜಾತ್ರೆಗೆ ಬಂದಂತಹ ಭಕ್ತಾದಿಗಳಿಗೆ ಶ್ರೀಮುತ್ತುರಾಯಸ್ವಾಮಿ ಚಾರಿಟ ಬಲ್ ಟ್ರಸ್ಟ್ ವತಿಯಿಂದ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
ಸಾವಿರಾರು ಭಕ್ತಾದಿಗಳು ಒಂದೇ ಸಮಯದಲ್ಲಿ ಜಾತ್ರೆಗೆ ಬಂದ ಕಾರಣ ಕೆಲವು ಗಂಟೆಗಳಕಾಲ ರಸ್ತೆ ಸಂಚಾರದಲ್ಲಿ ವ್ಯತ್ಯಯವಾಯಿತು. ಶ್ರೀ ಮುತ್ತುರಾಯಸ್ವಾಮಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ರಾಮಚಂದ್ರ ಮಾತನಾಡಿ, ಈ ದೇವಸ್ಥಾನಕ್ಕೆ ೧೦೦ ವರ್ಷಗಳ ಇತಿಹಾಸವಿದ್ದು, ರಾಜ್ಯಾದ್ಯಂತ ಭಕ್ತ ಸಮೂಹವನ್ನು ಹೊಂದಿದೆ.
ಈ ಹಿಂದೆ ದೇವಸ್ಥಾನವು ಆನೆಚೌಕೂರು ಮೀಸಲು ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿದ್ದ ಸಂದರ್ಭದಲ್ಲಿ ಈ ಭಾಗದ ಸುತ್ತಮುತ್ತಲ್ಲಿನ ಗ್ರಾಮದ ಬಡವರು ಹಾಗೂ ಮಧ್ಯಮ ವರ್ಗದವರಿಗೆ ಕಡಿಮೆ ದರದಲ್ಲಿ ಮದುವೆ, ನಾಮಕರಣ ಹಾಗೂ ಹರಕೆ ಮುಂತಾದ ಸಮಾರಂಭ ನಡೆಸಲು ಸಹಕಾರವಾಗುತ್ತಿತ್ತು. ಆದರೆ ಈಗ ಈ ಪ್ರದೇಶವನ್ನು ನಾಗರಹೊಳೆ ಹುಲಿ ಸಂರಕ್ಷಣಾ ಪ್ರದೇಶದ ಬಫರ್ ಜೋನ್ ವ್ಯಾಪ್ತಿಯ ಅರಣ್ಯಪ್ರದೇಶವೆಂದು ಗುರುತಿಸಿರುವುದರಿಂದ ಜಾತ್ರೆಯನ್ನು ಹೊರತುಪಡಿಸಿ ಯಾವುದೇ ರೀತಿಯ ಸಮಾರಂಭಗಳನ್ನು ನಡೆಸಲು ಅರಣ್ಯ ಇಲಾಖೆಯಿಂದ ನಿರ್ಬಂಧವಿದೆ. ದಿನದಿಂದ ದಿನಕ್ಕೆ ಭಕ್ತಾದಿಗಳ ಸಂಖ್ಯೆ ಕ್ಷೀಣಿಸುತ್ತಿದ್ದು ಭಕ್ತಾದಿಗಳಿಂದ ದೊರಕುತ್ತಿದ್ದ ಹರಕೆಯ ಹಣ ಹಾಗೂ ದಾನ ದತ್ತಿ ಸಂಗ್ರಹ ವಾಗದ ಕಾರಣ ದೇವಸ್ಥಾನದ ಎಲ್ಲಾ ರೀತಿಯ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ ಎಂದರು.
ಮಾಜಿ ಶಾಸಕರಾದ ಕೆ.ಮಹದೇವ್, ಪಿರಿಯಾಪಟ್ಟಣ ತಹಸಿಲ್ದಾರ್ ನಿಸರ್ಗಪ್ರಿಯ, ಉಪ ತಹಸಿಲ್ದಾರ್ ವಿನೋದ್ ಕುಮಾರ್, ಇನ್ ಸ್ಪೆಕ್ಟರ್ ಗೋವಿಂದರಾಜು, ಸಮಿತಿಯ ಕಾರ್ಯದರ್ಶಿ ಪಾಪಣ್ಣ, ಸದಸ್ಯರಾದ ಶ್ರೀನಿವಾಸ್, ಶಿವರಾಜ್, ಕಾಂತರಾಜು, ಕೃಷ್ಣೇಗೌಡ, ರಾಮೇಗೌಡ, ಸುರೇಶ್, ರಮೇಶ್, ಕುಮಾರ, ವಿ.ಎಸ್.ರಾಮಕೃಷ್ಣ, ಶಿವಣ್ಣ, ರಘು, ಮುತ್ತುರಾಜು, ನವೀನ್, ಸುಬ್ರಮಣಿ, ಸತೀಶ, ಪ್ರಭು ಕುಮಾರ್, ರಾಮಕೃಷ್ಣ, ಅರವಿಂದ, ನಂದಿ, ಅಕ್ಕಪಕ್ಕದ ಗ್ರಾಮಗಳ ಸಾವಿರಾರು ಭಕ್ತರು ಭಾಗವಹಿಸಿದ್ದರು.
ಸಂಚಾರ ದಟ್ಟಣೆ: ಮಧ್ಯಾಹ್ನದ ವೇಳೆ ಭಕ್ತರು ಏಕಾಏಕಿ ಆಗಮಿಸಿದ್ದರಿಂದ ಒಂದೆರಡು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಉಂಟಾಗಿ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಯಿತು.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…