ದುರ್ನಾತ ಸಹಿಸಲಾಗದೆ ನಿವಾಸಿಗಳ ಪರಿತಾಪ; ಸಮಸ್ಯೆ ಬಗೆಹರಿಸಲು ಆಗ್ರಹ
ಕೆ. ಬಿ. ರಮೇಶನಾಯಕ
ಮೈಸೂರು: ಕಾವೇರಿ ನದಿಗೆ, ಮಳೆ ನೀರು ಚರಂಡಿಗೆ ಯುಜಿಡಿ ನೀರು ಸೇರಿದಂತೆ ತಡೆಯಲು ಒಂದು ಕಡೆ ಯೋಜನೆ ರೂಪಿಸುತ್ತಿದ್ದರೆ, ಮತ್ತೊಂದೆಡೆ ಶ್ರೀರಾಂಪುರ ರಿಂಗ್ ರಸ್ತೆಯ ತಗ್ಗು ಪ್ರದೇಶವು ಯುಜಿಡಿಯ ಕೆರೆಯಂತೆಯೇ ಆಗಿಬಿಟ್ಟಿದೆ.
ನಗರಪಾಲಿಕೆ ಹಾಗೂ ಶ್ರೀರಾಂಪುರಕ್ಕೆ ಹೊಂದಿಕೊಂಡಂತೆ ಇರುವ ರಿಂಗ್ ರಸ್ತೆಯ ಶಂಕರಲಿಂಗೇಗೌಡ ಬಡಾವಣೆಯ ನಿವಾಸಿಗಳು ಸಮೀಪದಲ್ಲೇ ಹೊರ ಬರುತ್ತಿರುವ ಕೊಳಚೆ ನೀರಿನ ದುರ್ವಾಸನೆಯನ್ನು ತಾಳಲಾಗದೆ ಪರಿತಪಿಸುತ್ತಿದ್ದಾರೆ. ನಗರದ ಹೊರವಲಯದ ರಮಾಬಾಯಿನಗರ, ಶಂಕರಲಿಂಗೇಗೌಡ ಬಡಾವಣೆಯಲ್ಲಿ ದಲಿತರು, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಜನರೇ ಹೆಚ್ಚಾಗಿ ವಾಸಿಸುತ್ತಿದ್ದಾರೆ. ಗುಡಿಸಲಿನಲ್ಲಿ ವಾಸ ಮಾಡುತ್ತಿದ್ದ ಈ ಜನರಿಗೆ ಎರಡು ದಶಕಗಳ ಹಿಂದೆ ವಾಸಿಸಲು ಮನೆ ಒದಗಿಸಿದ್ದನ್ನು ಬಿಟ್ಟರೆ, ಬೇರೇನೂ ಮೂಲ ಸೌಕರ್ಯಗಳನ್ನು ಕಲ್ಪಿಸಿಲ್ಲ.
ಮೈಸೂರಿನ ಜೆ. ಪಿ. ನಗರ, ಶ್ರೀರಾಂಪುರ, ಅರವಿಂದನಗರ ಇನ್ನಿತರೆ ಬಡಾವಣೆಗಳಿಂದ ಹರಿದು ಬರುತ್ತಿರುವ ಮಲಿನ ನೀರು ಈ ಬಡಾವಣೆಯ ಮೂಲಕವೇ ಪೈಪ್ಲೈನ್ನಲ್ಲಿ ಹಾದು ಹೋಗುತ್ತಿದೆ. ರಿಂಗ್ ರಸ್ತೆಯಿಂದ ಸಂಪರ್ಕ ಪಡೆದಿರುವ ಪೈಪ್ಲೈನ್ನಲ್ಲಿ ಹರಿದು ಹೋಗುವ ನೀರು ನೇರವಾಗಿ ರಾಯನಕೆರೆ ಮಲಿನ ನೀರು ಸಂಸ್ಕರಣಾ ಘಟಕಕ್ಕೆ ಸೇರ್ಪಡೆಯಾಗುತ್ತಿದೆ. ಆದರೆ, ಈ ಬಡಾವಣೆಯಲ್ಲಿ ಹರಿಯುವ ನೀರನ್ನು ಮುಖ್ಯ ಕೊಳವೆ ಮಾರ್ಗಕ್ಕೆ ಸಂಪರ್ಕ ಕಲ್ಪಿಸಲು ಪೈಪ್ಲೈನ್ ಅಳವಡಿಸದಿರುವ ಕಾರಣ ಬಹಿರಂಗವಾಗಿ ಹರಿಯುವುದಕ್ಕೆ ಕಾರಣವಾಗಿದೆ.
ಕೆರೆಯಂತಾದ ಪ್ರದೇಶ: ಶ್ರೀರಾಂಪುರ ರಿಂಗ್ ರಸ್ತೆಯ ನ್ಯಾಯಾಽಶರ ವಸತಿ ಬಡಾವಣೆಗೆ ಹತ್ತಿರವಿರುವ ತಗ್ಗು ಪ್ರದೇಶಗಳು ಕೆರೆಯಂತಾಗಿದೆ. ರಮಾಬಾಯಿನಗರ ಸೇರಿದಂತೆ ಅಕ್ಕಪಕ್ಕದ ಬಡಾವಣೆಗಳಿಂದ ಮೋರಿಯ ಮೂಲಕ ಹರಿದು ಬಂದು ಇಲ್ಲಿ ನಿಲ್ಲುತ್ತಿದೆ. ಈ ಜಾಗದಲ್ಲಿ ಈಗ ಕಲುಷಿತ ನೀರು ನಿಲ್ಲುತ್ತಿರುವ ಕಾರಣ ಮಲಿನ ಕೆರೆಯ ವಾತಾವರಣ ಕಾಣಿಸಿಕೊಂಡಿದೆ. ಇದಕ್ಕೆ ಹೊಂದಿಕೊಂಡಂತೆ ೨೦೦ ಮೀಟರ್ ಪ್ರದೇಶದಲ್ಲಿ ವಾಸಿಸುವ ನಿವಾಸಿಗಳು ವಾಸನೆ ತಾಳಲಾರದೆ ಪರದಾಡುತ್ತಿದ್ದಾರೆ.
ಬೆಳಿಗ್ಗೆ ಎದ್ದು ಕೂಲಿ ಕೆಲಸಕ್ಕೆ ಹೋಗಿ ಬೆವರು ಸುರಿಸುವ ಈ ಜನರು, ಸಂಜೆ ಮನೆಗೆ ಬಂದು ನೆಮ್ಮದಿಯಾಗಿ ಕಾಲ ಕಳೆಯದಂತಾಗಿದೆ. ಈ ಕೆಟ್ಟ ವಾಸನೆಯ ಪರಿಣಾಮವಾಗಿ ಅನೇಕರು ಮಧುಮೇಹ, ನೆಗಡಿ, ಶೀತ, ಜ್ವರ ಮೊದಲಾದ ಸಮಸ್ಯೆಗಳಿಗೆ ಸಿಲುಕಿ ನರಳುತ್ತಿದ್ದಾರೆ ಎಂದು ಹೇಳಲಾಗಿದೆ.
ಬಾತುಕೋಳಿಗಳ ವಿಹಾರ: ಕುಕ್ಕರಹಳ್ಳಿ, ದಳವಾಯಿ ಕೆರೆಗಳಲ್ಲಿ ನೆಲೆಸಿರುವಂತೆ ಈ ಜಾಗದಲ್ಲೂ ನೂರಾರು ಬಾತುಕೋಳಿಗಳು ವಾಸವಾಗಿದ್ದು, ಕಲುಷಿತ ನೀರು ಸೇವನೆಯಿಂದ ಈ ಪಕ್ಷಿಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಬಹುದು.
ಶೀಘ್ರದಲ್ಲೇ ಎಸ್ಟಿಪಿ ಘಟಕ: ರಿಂಗ್ ರಸ್ತೆಯ ಕೆಲವು ಪ್ರದೇಶಗಳಲ್ಲಿ ಯುಜಿಡಿ ನೀರು ಚರಂಡಿ ಮೂಲಕ ಹಾದು ಹೋಗದಂತೆ ತಡೆಯಲು ಎಸ್ಟಿಪಿ ಘಟಕ ನಿರ್ಮಾಣಕ್ಕೆ ಅನುಮೋದನೆ ನೀಡಿದೆ. ಗ್ರಾಪಂನಿಂದ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಿದ ಬಳಿಕ ಹಲವಾರು ಸಮಸ್ಯೆಗಳು ಕಂಡುಬರುತ್ತಿವೆ. ಒಂದೊಂದು ಸಮಸ್ಯೆಗಳನ್ನು ಕೈಗೆತ್ತಿಕೊಂಡು ಪರಿಹಾರ ಕಲ್ಪಿಸುವುದಕ್ಕೆ ಕ್ರಮಕೈಗೊಳ್ಳಲಾಗುತ್ತಿದೆ.
ರಮಾಬಾಯಿನಗರ, ಶಂಕರಲಿಂಗೇಗೌಡ ಬಡಾವಣೆ, ಗೌತಮನಗರ ಸೇರಿದಂತೆ ಎಸ್ಟಿಪಿ ಘಟಕ ನಿರ್ಮಾಣಕ್ಕೆ ಜಾಗ ಗುರುತಿಸಲಾಗಿದೆ. ಸರ್ಕಾರದಿಂದಲೂ ಅನುಮೋದನೆ ದೊರೆತಿದೆ. ಶೀಘ್ರದಲ್ಲೇ ಆಡಳಿತಾತ್ಮಕ ಅನುಮೋದನೆ ಪಡೆದುಕೊಂಡು ಮುಖ್ಯ ಪೈಪ್ಲೈನ್ಗೆ ಸೇರುವಂತೆ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಚ್. ಎಂ. ಸುರೇಶ್ ತಿಳಿಸಿದರು.
ಬೆಂಗಳೂರು: ಜೆಡಿಎಸ್ ಪಕ್ಷ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ತಯಾರಿ ನಡೆಸುತ್ತಿದ್ದು, ಜಿಬಿಎಗೆ ಪಕ್ಷದ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ…
ಗುಂಡ್ಲುಪೇಟೆ: ಪಂಚ ಗ್ಯಾರಂಟಿಗಳ ಘೋಷಣೆಯೊಂದಿಗೆ ಅಧಿಕಾರಕ್ಕೇರಿದ ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಅಭಿವೃದ್ಧಿ ಸಂಪೂರ್ಣವಾಗಿ ಕುಸಿದಿದೆ. ಈ ನಡುವೆ ಗ್ಯಾರಂಟಿಗಳಿಂದ ಸರ್ಕಾರಕ್ಕೆ…
ಇಸ್ರೇಲ್: ಭಾರತ ಮತ್ತು ಇಸ್ರೇಲ್ ನಡುವಿನ ಕಾರ್ಯತಂತ್ರದ ಸಂಬಂಧಗಳನ್ನು ಬಲಪಡಿಸುವಲ್ಲಿ ಅಸಾಧಾರಣ ಕೊಡುಗೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬುಧವಾರ…
ಉದಯಪುರ: ಉದಯಪುರದ ಅರಮನೆಯಲ್ಲಿ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರು ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಂದು ಬೆಳಿಗ್ಗೆ…
ಮೈಸೂರು: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ…
ಬಜೆಟ್ ಪೂರ್ವ ಸಭೆಯಲ್ಲಿ ಪ್ರಸ್ತಾಪಗೊಂಡ ಹಸಿರು ಗೋಡೆ ಯೋಜನೆ ರಾಜ್ಯದ ಪರಿಸರ ರಕ್ಷಣೆಗೆ ಆಪದ್ಬಾಂಧವನಂತಿದೆ. ಉತ್ತರ ಕರ್ನಾಟಕದಲ್ಲಿ ಮರುಭೂಮೀಕರಣ ತಡೆಗಟ್ಟಲು…