Andolana originals

ಕೊಳಚೆ ನೀರಿನ ತಾಣವಾದ ಶ್ರೀರಾಂಪುರ ತಗ್ಗು ಪ್ರದೇಶ

ದುರ್ನಾತ ಸಹಿಸಲಾಗದೆ ನಿವಾಸಿಗಳ ಪರಿತಾಪ; ಸಮಸ್ಯೆ ಬಗೆಹರಿಸಲು ಆಗ್ರಹ

ಕೆ. ಬಿ. ರಮೇಶನಾಯಕ

ಮೈಸೂರು: ಕಾವೇರಿ ನದಿಗೆ, ಮಳೆ ನೀರು ಚರಂಡಿಗೆ ಯುಜಿಡಿ ನೀರು ಸೇರಿದಂತೆ ತಡೆಯಲು ಒಂದು ಕಡೆ ಯೋಜನೆ ರೂಪಿಸುತ್ತಿದ್ದರೆ, ಮತ್ತೊಂದೆಡೆ ಶ್ರೀರಾಂಪುರ ರಿಂಗ್ ರಸ್ತೆಯ ತಗ್ಗು ಪ್ರದೇಶವು ಯುಜಿಡಿಯ ಕೆರೆಯಂತೆಯೇ ಆಗಿಬಿಟ್ಟಿದೆ.

ನಗರಪಾಲಿಕೆ ಹಾಗೂ ಶ್ರೀರಾಂಪುರಕ್ಕೆ ಹೊಂದಿಕೊಂಡಂತೆ ಇರುವ ರಿಂಗ್ ರಸ್ತೆಯ ಶಂಕರಲಿಂಗೇಗೌಡ ಬಡಾವಣೆಯ ನಿವಾಸಿಗಳು ಸಮೀಪದಲ್ಲೇ ಹೊರ ಬರುತ್ತಿರುವ ಕೊಳಚೆ ನೀರಿನ ದುರ್ವಾಸನೆಯನ್ನು ತಾಳಲಾಗದೆ ಪರಿತಪಿಸುತ್ತಿದ್ದಾರೆ. ನಗರದ ಹೊರವಲಯದ ರಮಾಬಾಯಿನಗರ, ಶಂಕರಲಿಂಗೇಗೌಡ ಬಡಾವಣೆಯಲ್ಲಿ ದಲಿತರು, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಜನರೇ ಹೆಚ್ಚಾಗಿ ವಾಸಿಸುತ್ತಿದ್ದಾರೆ. ಗುಡಿಸಲಿನಲ್ಲಿ ವಾಸ ಮಾಡುತ್ತಿದ್ದ ಈ ಜನರಿಗೆ ಎರಡು ದಶಕಗಳ ಹಿಂದೆ ವಾಸಿಸಲು ಮನೆ ಒದಗಿಸಿದ್ದನ್ನು ಬಿಟ್ಟರೆ, ಬೇರೇನೂ ಮೂಲ ಸೌಕರ್ಯಗಳನ್ನು ಕಲ್ಪಿಸಿಲ್ಲ.

ಮೈಸೂರಿನ ಜೆ. ಪಿ. ನಗರ, ಶ್ರೀರಾಂಪುರ, ಅರವಿಂದನಗರ ಇನ್ನಿತರೆ ಬಡಾವಣೆಗಳಿಂದ ಹರಿದು ಬರುತ್ತಿರುವ ಮಲಿನ ನೀರು ಈ ಬಡಾವಣೆಯ ಮೂಲಕವೇ ಪೈಪ್‌ಲೈನ್‌ನಲ್ಲಿ ಹಾದು ಹೋಗುತ್ತಿದೆ. ರಿಂಗ್ ರಸ್ತೆಯಿಂದ ಸಂಪರ್ಕ ಪಡೆದಿರುವ ಪೈಪ್‌ಲೈನ್‌ನಲ್ಲಿ ಹರಿದು ಹೋಗುವ ನೀರು ನೇರವಾಗಿ ರಾಯನಕೆರೆ ಮಲಿನ ನೀರು ಸಂಸ್ಕರಣಾ ಘಟಕಕ್ಕೆ ಸೇರ್ಪಡೆಯಾಗುತ್ತಿದೆ. ಆದರೆ, ಈ ಬಡಾವಣೆಯಲ್ಲಿ ಹರಿಯುವ ನೀರನ್ನು ಮುಖ್ಯ ಕೊಳವೆ ಮಾರ್ಗಕ್ಕೆ ಸಂಪರ್ಕ ಕಲ್ಪಿಸಲು ಪೈಪ್‌ಲೈನ್ ಅಳವಡಿಸದಿರುವ ಕಾರಣ ಬಹಿರಂಗವಾಗಿ ಹರಿಯುವುದಕ್ಕೆ ಕಾರಣವಾಗಿದೆ.

ಕೆರೆಯಂತಾದ ಪ್ರದೇಶ: ಶ್ರೀರಾಂಪುರ ರಿಂಗ್ ರಸ್ತೆಯ ನ್ಯಾಯಾಽಶರ ವಸತಿ ಬಡಾವಣೆಗೆ ಹತ್ತಿರವಿರುವ ತಗ್ಗು ಪ್ರದೇಶಗಳು ಕೆರೆಯಂತಾಗಿದೆ. ರಮಾಬಾಯಿನಗರ ಸೇರಿದಂತೆ ಅಕ್ಕಪಕ್ಕದ ಬಡಾವಣೆಗಳಿಂದ ಮೋರಿಯ ಮೂಲಕ ಹರಿದು ಬಂದು ಇಲ್ಲಿ ನಿಲ್ಲುತ್ತಿದೆ. ಈ ಜಾಗದಲ್ಲಿ ಈಗ ಕಲುಷಿತ ನೀರು ನಿಲ್ಲುತ್ತಿರುವ ಕಾರಣ ಮಲಿನ ಕೆರೆಯ ವಾತಾವರಣ ಕಾಣಿಸಿಕೊಂಡಿದೆ. ಇದಕ್ಕೆ ಹೊಂದಿಕೊಂಡಂತೆ ೨೦೦ ಮೀಟರ್ ಪ್ರದೇಶದಲ್ಲಿ ವಾಸಿಸುವ ನಿವಾಸಿಗಳು ವಾಸನೆ ತಾಳಲಾರದೆ ಪರದಾಡುತ್ತಿದ್ದಾರೆ.

ಬೆಳಿಗ್ಗೆ ಎದ್ದು ಕೂಲಿ ಕೆಲಸಕ್ಕೆ ಹೋಗಿ ಬೆವರು ಸುರಿಸುವ ಈ ಜನರು, ಸಂಜೆ ಮನೆಗೆ ಬಂದು ನೆಮ್ಮದಿಯಾಗಿ ಕಾಲ ಕಳೆಯದಂತಾಗಿದೆ. ಈ ಕೆಟ್ಟ ವಾಸನೆಯ ಪರಿಣಾಮವಾಗಿ ಅನೇಕರು ಮಧುಮೇಹ, ನೆಗಡಿ, ಶೀತ, ಜ್ವರ ಮೊದಲಾದ ಸಮಸ್ಯೆಗಳಿಗೆ ಸಿಲುಕಿ ನರಳುತ್ತಿದ್ದಾರೆ ಎಂದು ಹೇಳಲಾಗಿದೆ.

ಬಾತುಕೋಳಿಗಳ ವಿಹಾರ: ಕುಕ್ಕರಹಳ್ಳಿ, ದಳವಾಯಿ ಕೆರೆಗಳಲ್ಲಿ ನೆಲೆಸಿರುವಂತೆ ಈ ಜಾಗದಲ್ಲೂ ನೂರಾರು ಬಾತುಕೋಳಿಗಳು ವಾಸವಾಗಿದ್ದು, ಕಲುಷಿತ ನೀರು ಸೇವನೆಯಿಂದ ಈ ಪಕ್ಷಿಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಬಹುದು.

ಶೀಘ್ರದಲ್ಲೇ ಎಸ್‌ಟಿಪಿ ಘಟಕ: ರಿಂಗ್ ರಸ್ತೆಯ ಕೆಲವು ಪ್ರದೇಶಗಳಲ್ಲಿ ಯುಜಿಡಿ ನೀರು ಚರಂಡಿ ಮೂಲಕ ಹಾದು ಹೋಗದಂತೆ ತಡೆಯಲು ಎಸ್‌ಟಿಪಿ ಘಟಕ ನಿರ್ಮಾಣಕ್ಕೆ ಅನುಮೋದನೆ ನೀಡಿದೆ. ಗ್ರಾಪಂನಿಂದ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಿದ ಬಳಿಕ ಹಲವಾರು ಸಮಸ್ಯೆಗಳು ಕಂಡುಬರುತ್ತಿವೆ. ಒಂದೊಂದು ಸಮಸ್ಯೆಗಳನ್ನು ಕೈಗೆತ್ತಿಕೊಂಡು ಪರಿಹಾರ ಕಲ್ಪಿಸುವುದಕ್ಕೆ ಕ್ರಮಕೈಗೊಳ್ಳಲಾಗುತ್ತಿದೆ.

ರಮಾಬಾಯಿನಗರ, ಶಂಕರಲಿಂಗೇಗೌಡ ಬಡಾವಣೆ, ಗೌತಮನಗರ ಸೇರಿದಂತೆ ಎಸ್‌ಟಿಪಿ ಘಟಕ ನಿರ್ಮಾಣಕ್ಕೆ ಜಾಗ ಗುರುತಿಸಲಾಗಿದೆ. ಸರ್ಕಾರದಿಂದಲೂ ಅನುಮೋದನೆ ದೊರೆತಿದೆ. ಶೀಘ್ರದಲ್ಲೇ ಆಡಳಿತಾತ್ಮಕ ಅನುಮೋದನೆ ಪಡೆದುಕೊಂಡು ಮುಖ್ಯ ಪೈಪ್‌ಲೈನ್‌ಗೆ ಸೇರುವಂತೆ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಚ್. ಎಂ. ಸುರೇಶ್ ತಿಳಿಸಿದರು.

 

ಆಂದೋಲನ ಡೆಸ್ಕ್

Recent Posts

ಟಿಎಪಿಸಿಎಂಎಸ್ ಅಧಿಕಾರ ಹಿಡಿಯಲು ತಂತ್ರ-ಪ್ರತಿತಂತ್ರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಚುನಾವಣೆ ಗುರುವಾರ (ಆ.೨೦) ನಡೆಯಲಿದ್ದು, ಅಧಿಕಾರ…

2 mins ago

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

14 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

14 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

15 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

15 hours ago