Andolana originals

ಕೊಳಚೆ ನೀರಿನ ತಾಣವಾದ ಶ್ರೀರಾಂಪುರ ತಗ್ಗು ಪ್ರದೇಶ

ದುರ್ನಾತ ಸಹಿಸಲಾಗದೆ ನಿವಾಸಿಗಳ ಪರಿತಾಪ; ಸಮಸ್ಯೆ ಬಗೆಹರಿಸಲು ಆಗ್ರಹ

ಕೆ. ಬಿ. ರಮೇಶನಾಯಕ

ಮೈಸೂರು: ಕಾವೇರಿ ನದಿಗೆ, ಮಳೆ ನೀರು ಚರಂಡಿಗೆ ಯುಜಿಡಿ ನೀರು ಸೇರಿದಂತೆ ತಡೆಯಲು ಒಂದು ಕಡೆ ಯೋಜನೆ ರೂಪಿಸುತ್ತಿದ್ದರೆ, ಮತ್ತೊಂದೆಡೆ ಶ್ರೀರಾಂಪುರ ರಿಂಗ್ ರಸ್ತೆಯ ತಗ್ಗು ಪ್ರದೇಶವು ಯುಜಿಡಿಯ ಕೆರೆಯಂತೆಯೇ ಆಗಿಬಿಟ್ಟಿದೆ.

ನಗರಪಾಲಿಕೆ ಹಾಗೂ ಶ್ರೀರಾಂಪುರಕ್ಕೆ ಹೊಂದಿಕೊಂಡಂತೆ ಇರುವ ರಿಂಗ್ ರಸ್ತೆಯ ಶಂಕರಲಿಂಗೇಗೌಡ ಬಡಾವಣೆಯ ನಿವಾಸಿಗಳು ಸಮೀಪದಲ್ಲೇ ಹೊರ ಬರುತ್ತಿರುವ ಕೊಳಚೆ ನೀರಿನ ದುರ್ವಾಸನೆಯನ್ನು ತಾಳಲಾಗದೆ ಪರಿತಪಿಸುತ್ತಿದ್ದಾರೆ. ನಗರದ ಹೊರವಲಯದ ರಮಾಬಾಯಿನಗರ, ಶಂಕರಲಿಂಗೇಗೌಡ ಬಡಾವಣೆಯಲ್ಲಿ ದಲಿತರು, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಜನರೇ ಹೆಚ್ಚಾಗಿ ವಾಸಿಸುತ್ತಿದ್ದಾರೆ. ಗುಡಿಸಲಿನಲ್ಲಿ ವಾಸ ಮಾಡುತ್ತಿದ್ದ ಈ ಜನರಿಗೆ ಎರಡು ದಶಕಗಳ ಹಿಂದೆ ವಾಸಿಸಲು ಮನೆ ಒದಗಿಸಿದ್ದನ್ನು ಬಿಟ್ಟರೆ, ಬೇರೇನೂ ಮೂಲ ಸೌಕರ್ಯಗಳನ್ನು ಕಲ್ಪಿಸಿಲ್ಲ.

ಮೈಸೂರಿನ ಜೆ. ಪಿ. ನಗರ, ಶ್ರೀರಾಂಪುರ, ಅರವಿಂದನಗರ ಇನ್ನಿತರೆ ಬಡಾವಣೆಗಳಿಂದ ಹರಿದು ಬರುತ್ತಿರುವ ಮಲಿನ ನೀರು ಈ ಬಡಾವಣೆಯ ಮೂಲಕವೇ ಪೈಪ್‌ಲೈನ್‌ನಲ್ಲಿ ಹಾದು ಹೋಗುತ್ತಿದೆ. ರಿಂಗ್ ರಸ್ತೆಯಿಂದ ಸಂಪರ್ಕ ಪಡೆದಿರುವ ಪೈಪ್‌ಲೈನ್‌ನಲ್ಲಿ ಹರಿದು ಹೋಗುವ ನೀರು ನೇರವಾಗಿ ರಾಯನಕೆರೆ ಮಲಿನ ನೀರು ಸಂಸ್ಕರಣಾ ಘಟಕಕ್ಕೆ ಸೇರ್ಪಡೆಯಾಗುತ್ತಿದೆ. ಆದರೆ, ಈ ಬಡಾವಣೆಯಲ್ಲಿ ಹರಿಯುವ ನೀರನ್ನು ಮುಖ್ಯ ಕೊಳವೆ ಮಾರ್ಗಕ್ಕೆ ಸಂಪರ್ಕ ಕಲ್ಪಿಸಲು ಪೈಪ್‌ಲೈನ್ ಅಳವಡಿಸದಿರುವ ಕಾರಣ ಬಹಿರಂಗವಾಗಿ ಹರಿಯುವುದಕ್ಕೆ ಕಾರಣವಾಗಿದೆ.

ಕೆರೆಯಂತಾದ ಪ್ರದೇಶ: ಶ್ರೀರಾಂಪುರ ರಿಂಗ್ ರಸ್ತೆಯ ನ್ಯಾಯಾಽಶರ ವಸತಿ ಬಡಾವಣೆಗೆ ಹತ್ತಿರವಿರುವ ತಗ್ಗು ಪ್ರದೇಶಗಳು ಕೆರೆಯಂತಾಗಿದೆ. ರಮಾಬಾಯಿನಗರ ಸೇರಿದಂತೆ ಅಕ್ಕಪಕ್ಕದ ಬಡಾವಣೆಗಳಿಂದ ಮೋರಿಯ ಮೂಲಕ ಹರಿದು ಬಂದು ಇಲ್ಲಿ ನಿಲ್ಲುತ್ತಿದೆ. ಈ ಜಾಗದಲ್ಲಿ ಈಗ ಕಲುಷಿತ ನೀರು ನಿಲ್ಲುತ್ತಿರುವ ಕಾರಣ ಮಲಿನ ಕೆರೆಯ ವಾತಾವರಣ ಕಾಣಿಸಿಕೊಂಡಿದೆ. ಇದಕ್ಕೆ ಹೊಂದಿಕೊಂಡಂತೆ ೨೦೦ ಮೀಟರ್ ಪ್ರದೇಶದಲ್ಲಿ ವಾಸಿಸುವ ನಿವಾಸಿಗಳು ವಾಸನೆ ತಾಳಲಾರದೆ ಪರದಾಡುತ್ತಿದ್ದಾರೆ.

ಬೆಳಿಗ್ಗೆ ಎದ್ದು ಕೂಲಿ ಕೆಲಸಕ್ಕೆ ಹೋಗಿ ಬೆವರು ಸುರಿಸುವ ಈ ಜನರು, ಸಂಜೆ ಮನೆಗೆ ಬಂದು ನೆಮ್ಮದಿಯಾಗಿ ಕಾಲ ಕಳೆಯದಂತಾಗಿದೆ. ಈ ಕೆಟ್ಟ ವಾಸನೆಯ ಪರಿಣಾಮವಾಗಿ ಅನೇಕರು ಮಧುಮೇಹ, ನೆಗಡಿ, ಶೀತ, ಜ್ವರ ಮೊದಲಾದ ಸಮಸ್ಯೆಗಳಿಗೆ ಸಿಲುಕಿ ನರಳುತ್ತಿದ್ದಾರೆ ಎಂದು ಹೇಳಲಾಗಿದೆ.

ಬಾತುಕೋಳಿಗಳ ವಿಹಾರ: ಕುಕ್ಕರಹಳ್ಳಿ, ದಳವಾಯಿ ಕೆರೆಗಳಲ್ಲಿ ನೆಲೆಸಿರುವಂತೆ ಈ ಜಾಗದಲ್ಲೂ ನೂರಾರು ಬಾತುಕೋಳಿಗಳು ವಾಸವಾಗಿದ್ದು, ಕಲುಷಿತ ನೀರು ಸೇವನೆಯಿಂದ ಈ ಪಕ್ಷಿಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಬಹುದು.

ಶೀಘ್ರದಲ್ಲೇ ಎಸ್‌ಟಿಪಿ ಘಟಕ: ರಿಂಗ್ ರಸ್ತೆಯ ಕೆಲವು ಪ್ರದೇಶಗಳಲ್ಲಿ ಯುಜಿಡಿ ನೀರು ಚರಂಡಿ ಮೂಲಕ ಹಾದು ಹೋಗದಂತೆ ತಡೆಯಲು ಎಸ್‌ಟಿಪಿ ಘಟಕ ನಿರ್ಮಾಣಕ್ಕೆ ಅನುಮೋದನೆ ನೀಡಿದೆ. ಗ್ರಾಪಂನಿಂದ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಿದ ಬಳಿಕ ಹಲವಾರು ಸಮಸ್ಯೆಗಳು ಕಂಡುಬರುತ್ತಿವೆ. ಒಂದೊಂದು ಸಮಸ್ಯೆಗಳನ್ನು ಕೈಗೆತ್ತಿಕೊಂಡು ಪರಿಹಾರ ಕಲ್ಪಿಸುವುದಕ್ಕೆ ಕ್ರಮಕೈಗೊಳ್ಳಲಾಗುತ್ತಿದೆ.

ರಮಾಬಾಯಿನಗರ, ಶಂಕರಲಿಂಗೇಗೌಡ ಬಡಾವಣೆ, ಗೌತಮನಗರ ಸೇರಿದಂತೆ ಎಸ್‌ಟಿಪಿ ಘಟಕ ನಿರ್ಮಾಣಕ್ಕೆ ಜಾಗ ಗುರುತಿಸಲಾಗಿದೆ. ಸರ್ಕಾರದಿಂದಲೂ ಅನುಮೋದನೆ ದೊರೆತಿದೆ. ಶೀಘ್ರದಲ್ಲೇ ಆಡಳಿತಾತ್ಮಕ ಅನುಮೋದನೆ ಪಡೆದುಕೊಂಡು ಮುಖ್ಯ ಪೈಪ್‌ಲೈನ್‌ಗೆ ಸೇರುವಂತೆ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಚ್. ಎಂ. ಸುರೇಶ್ ತಿಳಿಸಿದರು.

 

ಆಂದೋಲನ ಡೆಸ್ಕ್

Recent Posts

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

6 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

7 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

7 hours ago

PGCET| MBA, MCA ಪ್ರವೇಶ ಪರೀಕ್ಷೆ ಜೂನ್.‌4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…

8 hours ago

ಹನೂರು| ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…

8 hours ago

ಮಾರ್ಟಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಛತೆ: ಗ್ರಾಮಸ್ಥರ ಆಕ್ರೋಶ

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…

9 hours ago