Andolana originals

ಶ್ರೀರಂಗಪಟ್ಟಣ ದಸರೆಗೆ ‘ಮಹೇಂದ್ರ’ ಸಾರಥಿ

• ಎರಡನೇ ತಂಡದಲ್ಲಿ ಬಂದರೂ ಮಹೇಂದ್ರನ ಮೇಲೆ ಹೆಚ್ಚಿದ ವಿಶ್ವಾಸ
• ಮೃದು ಸ್ವಭಾವದಿಂದಲೇ ಗಮನ ಸೆಳೆಯುತ್ತಿರುವ ಮಹೇಂದ್ರ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆಯುವ ದಸರಾದಲ್ಲಿ ಅಂಬಾರಿ ಹೊರುವ ಮೂಲಕ ಮಹೇಂದ್ರ ಆನೆ ಹ್ಯಾಟ್ರಿಕ್ ಸಾಧನೆ ಮಾಡಲಿದೆ.

ಎರಡನೇ ತಂಡದಲ್ಲಿ ಅರಮನೆಗೆ ಆಗಮಿಸಿದ್ದರೂ ಮಹೇಂದ್ರ ಅಧಿಕಾರಿಗಳ ಮನಗೆದ್ದಿ ದ್ದಾನೆ. ಈ ಹಿನ್ನೆಲೆಯಲ್ಲಿಯೇ ಶ್ರೀರಂಗಪಟ್ಟಣದ ದಸರೆಯ ಜವಾಬ್ದಾರಿಯನ್ನು ತನ್ನ
ಹೆಗಲಿಗೇರಿಸಿಕೊಳ್ಳಲಿದ್ದಾನೆ.

ಸತತ ಮೂರನೇ ವರ್ಷ ದಸರಾ ಮಹೋತ ವದಲ್ಲಿ ಭಾಗವಹಿಸುತ್ತಿರುವ ಮಹೇಂದ್ರ ಜಂಬೂಸವಾರಿಯಲ್ಲಿ ಪ್ರಮುಖ ಪಾತ್ರ ನಿಭಾಯಿಸುವ ಸಾಮರ್ಥ್ಯ ಹೊಂದಿದ್ದಾನೆ. 41 ವರ್ಷದ ಮಹೇಂದ್ರ 2022 ಮತ್ತು 2023ರಲ್ಲಿ ಮೊದಲ ತಂಡದಲ್ಲಿಯೇ ಮೈಸೂರಿಗೆ ಆಗಮಿಸಿ ಅರಮನೆ ಆವರಣದ ಬಿಡಾರ ಸೇರಿತ್ತು. ಆದರೆ, ಈ ಬಾರಿ ಕೆಲ ಗೊಂದಲ ಹಾಗೂ ತಪ್ಪು ನಿರ್ಧಾರದಿಂದಾಗಿ ಎರಡನೇ ತಂಡದಲ್ಲಿ ಆಗಮಿಸಿದ್ದು, ಈಗಾಗಲೇ ಮೊದಲ ತಂಡದ ಗಜಪಡೆಯೊಂದಿಗೆ ತಾಲೀಮಿನಲ್ಲಿ ಪಾಲ್ಗೊಂಡಿದೆ.

ಹ್ಯಾಟ್ರಿಕ್ ಸಾಧನೆ: ಮೈಸೂರು ದಸರಾ ಮಾದರಿಯಲ್ಲಿಯೇ ಶ್ರೀರಂಗಪಟ್ಟಣದಲ್ಲೂ ದಸರಾ ಆಚರಿಸುವ ಪದ್ಧತಿಯಿದ್ದು, ಅಲ್ಲಿ ಆನೆ ಮೇಲೆ ನಾಡದೇವಿ ಚಾಮುಂಡೇಶ್ವರಿಯ ಉತ್ಸವ ಮೂರ್ತಿಯುಳ್ಳ ಮರದ ಅಂಬಾರಿ ಇಟ್ಟು ಮೆರವಣಿಗೆ ಮಾಡಲಾಗುತ್ತದೆ. ಈ ಬಾರಿ ನವರಾತ್ರಿ ಆರಂಭದ ಮರುದಿನವೇ ಅ.4ರಂದು ಶ್ರೀರಂಗಪಟ್ಟಣ ದಸರಾ ಆಚರಿಸಲು ಉದ್ದೇಶಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮೈಸೂರಿನಿಂದ ಯಾವ ಆನೆ ಕಳುಹಿಸಬೇಕು ಎಂದು ಚರ್ಚಿಸಿ ಕಳೆದ ಎರಡು ಬಾರಿ ಶ್ರೀರಂಗಪಟ್ಟಣ ದಸರಾದಲ್ಲಿ ಪಾಲ್ಗೊಂಡು ಎನಿಸಿಕೊಂಡಿರುವ ಮಹೇಂದ್ರನನ್ನೇ ಈ ಬಾರಿಯೂ ಶ್ರೀರಂಗಪಟ್ಟಣಕ್ಕೆ ಕಳುಹಿಸಲು ನಿರ್ಧರಿಸಲಾಗಿದೆ.

ಸುಮಾರು 300ರಿಂದ 400 ಕೆಜಿ ತೂಕದ ಮರದ ಅಂಬಾರಿಯನ್ನು ಕ್ರೇನ್ ಮೂಲಕ ಆನೆ ಮೇಲಿಟ್ಟು ಕಟ್ಟುವ ಪದ್ಧತಿಯಿದೆ. ನಾಲ್ಕು ವರ್ಷಗಳ ಹಿಂದೆ ಪಟಾಕಿ ಶಬ್ದಕ್ಕೆ ಅಂಬಾರಿ ಹೊತ್ತಿದ್ದ ಹೆದರಿದ ಗೋಪಾಲಸ್ವಾಮಿ ಶ್ರೀರಂಗಪಟ್ಟಣ ದಸರೆಯಲ್ಲಿ ಹಿಮ್ಮುಖವಾಗಿ ವೇಗವಾಗಿ ತಿರುಗಿ ಆತಂಕದ ವಾತಾವರಣ ಸೃಷ್ಟಿಸಿತ್ತು. ಮರು ವರ್ಷವೇ ಮೊದಲ ಬಾರಿಗೆ ಪಾಲ್ಗೊಂಡಿದ್ದ ಮಹೇಂದ್ರನಿಗೆ ಶ್ರೀರಂಗಪಟ್ಟಣ ದಸರೆಯ ಜವಾಬ್ದಾರಿ ವಹಿಸಲಾಗಿತ್ತು. ಮೊದಲ ವರ್ಷವೇ ಅತ್ಯುತ್ತಮವಾಗಿ ವರ್ತಿಸಿದ್ದ ಮಹೇಂದ್ರ ತನ್ನ ಮೇಲೆ ಇಟ್ಟಿದ್ದ ವಿಶ್ವಾಸವನ್ನು ಉಳಿಸಿಕೊಂಡಿತ್ತು. ಇದೀಗ ಸತತ ಮೂರನೇ ಬಾರಿಯೂ ಅಂಬಾರಿ ಹೊರುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಲು ಸಜ್ಜಾಗಿದೆ. ಈ ಹಿಂದೆ ಕ್ಯಾಪ್ಟನ್ ಅಭಿಮನ್ಯು ಶ್ರೀರಂಗಪಟ್ಟಣ ದಸರೆಯಲ್ಲಿ ಅಂಬಾರಿ ಹೊತ್ತು ಹ್ಯಾಟ್ರಿಕ್ ಸಾಧನೆ ಮಾಡಿತ್ತು.

ಸತತ ಮೂರನೇ ಬಾರಿ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವುದರೊಂದಿಗೆ ಮೂರು ಬಾರಿಯೂ ಶ್ರೀರಂಗಪಟ್ಟಣದ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊರುವ ಜವಾಬ್ದಾರಿ ನಿಭಾಯಿಸಲಿದ್ದಾನೆ. ಮಹೇಂದ್ರ ಆನೆ ಸೌಮ್ಯ ಸ್ವಭಾವಿಯಾಗಿದ್ದು, ಜವಾಬ್ದಾರಿ ನಿಭಾಯಿಸಬಲ್ಲ ಸಾಮರ್ಥ್ಯ ಹೊಂದಿದ್ದಾನೆ.

-ಡಾ.ಐ.ಬಿ.ಪ್ರಭುಗೌಡ, ಡಿಸಿಎಫ್‌

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಿದ್ಯುತ್ ದರ ಏರಿಕೆ ಜನಸಾಮಾನ್ಯರಿಗೆ ಶಾಕ್

ರಾಜ್ಯದ ಐದು ಎಸ್ಕಾಂಗಳು ಸುಮಾರು ರೂ.೪,೫೦೦ ಕೋಟಿ ನಷ್ಟದ ನೆಪವೊಡ್ಡಿ ಪ್ರತಿ ಯೂನಿಟ್‌ಗೆ ೯೯ ಪೈಸೆಯವರೆಗೆ ದರ ಏರಿಕೆಗೆ ಪ್ರಸ್ತಾವನೆ…

31 mins ago

ಓದುಗರ ಪತ್ರ: ಬೃಂದಾವನ: ಟಿಕೆಟ್ ಹಣ ವಾಪಸ್ ನೀಡಿ

ವಿಶ್ವವಿಖ್ಯಾತ ಕೆ ಆರ್‌ಎಸ್‌ನ ಬೃಂದಾವನ ಗಾರ್ಡನ್‌ನಲ್ಲಿ ಫೆ.೨೨ರ ಸಂಜೆ ಸಂಗೀತ ನೃತ್ಯ ಕಾರಂಜಿ ತಾಂತ್ರಿಕ ಕಾರಣದಿಂದ ಚಾಲನೆಗೊಳ್ಳದ ಕಾರಣ ಅಲ್ಲಿ…

33 mins ago

ಓದುಗರ ಪತ್ರ: ಇರ್ವಿನ್ ರಸ್ತೆ ಫುಟ್‌ಪಾತ್ ಒತ್ತುವರಿ ತೆರವುಗೊಳಿಸಿ

ಮೈಸೂರು ನಗರದ ಇರ್ವಿನ್ ರಸ್ತೆಯಲ್ಲಿ ಸಾಲು-ಸಾಲಾಗಿ ಫರ್ನಿಚರ್ಸ್ ಅಂಗಡಿಯವರು ತಮ್ಮ ಅಂಗಡಿಯ ಫರ್ನಿಚರ್ಸ್‌ಗಳನ್ನು ಫುಟ್‌ಪಾತ್‌ಗಳ ಮೇಲೆ ಜೋಡಿಸಿರುವುದರಿಂದ ಪಾದಚಾರಿಗಳಿಗೆ ತೀವ್ರ…

38 mins ago

ಹೂ ಮಳೆಗಾಗಿ ಕಾದಿರುವ ಕಾಫಿ ಬೆಳೆಗಾರರು

ನವೀನ್ ಡಿಸೋಜ ಕೆಲವೆಡೆ ಸ್ಪಿಂಕ್ಲರ್ ಮೊರೆ ಹೋದ ಕೃಷಿಕರು; ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…

3 hours ago

ಫೆ.26, 27ಕ್ಕೆ ಕಡಬೂರಿನಲ್ಲಿ ಶಿವ, ಗಣೇಶ ದೇವಸ್ಥಾನ ಲೋಕಾರ್ಪಣೆ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಕಡಬೂರು ಗ್ರಾಮದಲ್ಲಿ ಫೆ.೨೬ ಮತ್ತು ೨೭ರಂದು ನೂತನವಾಗಿ ನಿರ್ಮಾಣವಾಗಿರುವ ಶಿವ ಮತ್ತು ಗಣೇಶ ದೇವಾಲಯದ…

3 hours ago

ಅವ್ಯವಸ್ಥೆಯಿಂದ ಕೂಡಿದ ಚರಂಡಿ ಕಾಮಗಾರಿ: ಆರೋಪ

ಮಂಜು ಕೋಟೆ ಕೋಟೆ: ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಸಾರ್ವಜನಿಕರ ಆಕ್ರೋಶ ಎಚ್.ಡಿ.ಕೋಟೆ: ಅಧಿಕಾರಿಗಳ ಬೇಜವಾಬ್ದಾರಿ, ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಲಕ್ಷಾಂತರ ರೂ.…

4 hours ago