Andolana originals

ಶ್ರೀರಂಗಪಟ್ಟಣ ದಸರೆಗೆ ‘ಮಹೇಂದ್ರ’ ಸಾರಥಿ

• ಎರಡನೇ ತಂಡದಲ್ಲಿ ಬಂದರೂ ಮಹೇಂದ್ರನ ಮೇಲೆ ಹೆಚ್ಚಿದ ವಿಶ್ವಾಸ
• ಮೃದು ಸ್ವಭಾವದಿಂದಲೇ ಗಮನ ಸೆಳೆಯುತ್ತಿರುವ ಮಹೇಂದ್ರ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆಯುವ ದಸರಾದಲ್ಲಿ ಅಂಬಾರಿ ಹೊರುವ ಮೂಲಕ ಮಹೇಂದ್ರ ಆನೆ ಹ್ಯಾಟ್ರಿಕ್ ಸಾಧನೆ ಮಾಡಲಿದೆ.

ಎರಡನೇ ತಂಡದಲ್ಲಿ ಅರಮನೆಗೆ ಆಗಮಿಸಿದ್ದರೂ ಮಹೇಂದ್ರ ಅಧಿಕಾರಿಗಳ ಮನಗೆದ್ದಿ ದ್ದಾನೆ. ಈ ಹಿನ್ನೆಲೆಯಲ್ಲಿಯೇ ಶ್ರೀರಂಗಪಟ್ಟಣದ ದಸರೆಯ ಜವಾಬ್ದಾರಿಯನ್ನು ತನ್ನ
ಹೆಗಲಿಗೇರಿಸಿಕೊಳ್ಳಲಿದ್ದಾನೆ.

ಸತತ ಮೂರನೇ ವರ್ಷ ದಸರಾ ಮಹೋತ ವದಲ್ಲಿ ಭಾಗವಹಿಸುತ್ತಿರುವ ಮಹೇಂದ್ರ ಜಂಬೂಸವಾರಿಯಲ್ಲಿ ಪ್ರಮುಖ ಪಾತ್ರ ನಿಭಾಯಿಸುವ ಸಾಮರ್ಥ್ಯ ಹೊಂದಿದ್ದಾನೆ. 41 ವರ್ಷದ ಮಹೇಂದ್ರ 2022 ಮತ್ತು 2023ರಲ್ಲಿ ಮೊದಲ ತಂಡದಲ್ಲಿಯೇ ಮೈಸೂರಿಗೆ ಆಗಮಿಸಿ ಅರಮನೆ ಆವರಣದ ಬಿಡಾರ ಸೇರಿತ್ತು. ಆದರೆ, ಈ ಬಾರಿ ಕೆಲ ಗೊಂದಲ ಹಾಗೂ ತಪ್ಪು ನಿರ್ಧಾರದಿಂದಾಗಿ ಎರಡನೇ ತಂಡದಲ್ಲಿ ಆಗಮಿಸಿದ್ದು, ಈಗಾಗಲೇ ಮೊದಲ ತಂಡದ ಗಜಪಡೆಯೊಂದಿಗೆ ತಾಲೀಮಿನಲ್ಲಿ ಪಾಲ್ಗೊಂಡಿದೆ.

ಹ್ಯಾಟ್ರಿಕ್ ಸಾಧನೆ: ಮೈಸೂರು ದಸರಾ ಮಾದರಿಯಲ್ಲಿಯೇ ಶ್ರೀರಂಗಪಟ್ಟಣದಲ್ಲೂ ದಸರಾ ಆಚರಿಸುವ ಪದ್ಧತಿಯಿದ್ದು, ಅಲ್ಲಿ ಆನೆ ಮೇಲೆ ನಾಡದೇವಿ ಚಾಮುಂಡೇಶ್ವರಿಯ ಉತ್ಸವ ಮೂರ್ತಿಯುಳ್ಳ ಮರದ ಅಂಬಾರಿ ಇಟ್ಟು ಮೆರವಣಿಗೆ ಮಾಡಲಾಗುತ್ತದೆ. ಈ ಬಾರಿ ನವರಾತ್ರಿ ಆರಂಭದ ಮರುದಿನವೇ ಅ.4ರಂದು ಶ್ರೀರಂಗಪಟ್ಟಣ ದಸರಾ ಆಚರಿಸಲು ಉದ್ದೇಶಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮೈಸೂರಿನಿಂದ ಯಾವ ಆನೆ ಕಳುಹಿಸಬೇಕು ಎಂದು ಚರ್ಚಿಸಿ ಕಳೆದ ಎರಡು ಬಾರಿ ಶ್ರೀರಂಗಪಟ್ಟಣ ದಸರಾದಲ್ಲಿ ಪಾಲ್ಗೊಂಡು ಎನಿಸಿಕೊಂಡಿರುವ ಮಹೇಂದ್ರನನ್ನೇ ಈ ಬಾರಿಯೂ ಶ್ರೀರಂಗಪಟ್ಟಣಕ್ಕೆ ಕಳುಹಿಸಲು ನಿರ್ಧರಿಸಲಾಗಿದೆ.

ಸುಮಾರು 300ರಿಂದ 400 ಕೆಜಿ ತೂಕದ ಮರದ ಅಂಬಾರಿಯನ್ನು ಕ್ರೇನ್ ಮೂಲಕ ಆನೆ ಮೇಲಿಟ್ಟು ಕಟ್ಟುವ ಪದ್ಧತಿಯಿದೆ. ನಾಲ್ಕು ವರ್ಷಗಳ ಹಿಂದೆ ಪಟಾಕಿ ಶಬ್ದಕ್ಕೆ ಅಂಬಾರಿ ಹೊತ್ತಿದ್ದ ಹೆದರಿದ ಗೋಪಾಲಸ್ವಾಮಿ ಶ್ರೀರಂಗಪಟ್ಟಣ ದಸರೆಯಲ್ಲಿ ಹಿಮ್ಮುಖವಾಗಿ ವೇಗವಾಗಿ ತಿರುಗಿ ಆತಂಕದ ವಾತಾವರಣ ಸೃಷ್ಟಿಸಿತ್ತು. ಮರು ವರ್ಷವೇ ಮೊದಲ ಬಾರಿಗೆ ಪಾಲ್ಗೊಂಡಿದ್ದ ಮಹೇಂದ್ರನಿಗೆ ಶ್ರೀರಂಗಪಟ್ಟಣ ದಸರೆಯ ಜವಾಬ್ದಾರಿ ವಹಿಸಲಾಗಿತ್ತು. ಮೊದಲ ವರ್ಷವೇ ಅತ್ಯುತ್ತಮವಾಗಿ ವರ್ತಿಸಿದ್ದ ಮಹೇಂದ್ರ ತನ್ನ ಮೇಲೆ ಇಟ್ಟಿದ್ದ ವಿಶ್ವಾಸವನ್ನು ಉಳಿಸಿಕೊಂಡಿತ್ತು. ಇದೀಗ ಸತತ ಮೂರನೇ ಬಾರಿಯೂ ಅಂಬಾರಿ ಹೊರುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಲು ಸಜ್ಜಾಗಿದೆ. ಈ ಹಿಂದೆ ಕ್ಯಾಪ್ಟನ್ ಅಭಿಮನ್ಯು ಶ್ರೀರಂಗಪಟ್ಟಣ ದಸರೆಯಲ್ಲಿ ಅಂಬಾರಿ ಹೊತ್ತು ಹ್ಯಾಟ್ರಿಕ್ ಸಾಧನೆ ಮಾಡಿತ್ತು.

ಸತತ ಮೂರನೇ ಬಾರಿ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವುದರೊಂದಿಗೆ ಮೂರು ಬಾರಿಯೂ ಶ್ರೀರಂಗಪಟ್ಟಣದ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊರುವ ಜವಾಬ್ದಾರಿ ನಿಭಾಯಿಸಲಿದ್ದಾನೆ. ಮಹೇಂದ್ರ ಆನೆ ಸೌಮ್ಯ ಸ್ವಭಾವಿಯಾಗಿದ್ದು, ಜವಾಬ್ದಾರಿ ನಿಭಾಯಿಸಬಲ್ಲ ಸಾಮರ್ಥ್ಯ ಹೊಂದಿದ್ದಾನೆ.

-ಡಾ.ಐ.ಬಿ.ಪ್ರಭುಗೌಡ, ಡಿಸಿಎಫ್‌

 

ಆಂದೋಲನ ಡೆಸ್ಕ್

Recent Posts

ಅರಮನೆ ಫಲಪುಷ್ಪ ಪ್ರದರ್ಶನ | ಸಂಗೀತ ಸಂಜೆಯಲ್ಲಿ ಪ್ರೇಕ್ಷಕರು ತಲ್ಲೀನ

ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…

16 mins ago

ಎತ್ತಿನ ಗಾಡಿಗೆ ಸಾರಿಗೆ ಬಸ್‌ ಡಿಕ್ಕಿ : ಎತ್ತು ಸಾವು

ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…

22 mins ago

ಮುತ್ತತ್ತಿ : ಕಾವೇರಿ ನದಿ ಸೆಳೆತಕ್ಕೆ ಸಿಲುಕಿ ಯುವಕ ಸಾವು

ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…

24 mins ago

ಪೊಲೀಸ್‌ ಭದ್ರತೆಯಲ್ಲಿ ದೇಗುಲ ಪ್ರವೇಶಿಸಿದ ದಲಿತರು : ಶಾಂತಿ ಸಭೆಯಲ್ಲಿ ಪಂಚ ಬೇಡಿಕೆ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…

26 mins ago

ಅಕ್ರಮ ವಿದ್ಯುತ್‌ ಸಂಪರ್ಕ: 31 ಪ್ರಕರಣ ದಾಖಲು, 2.17 ಲಕ್ಷ ರೂ. ದಂಡ

ಮೈಸೂರು : ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…

36 mins ago

ಚಿನ್ನಸ್ವಾಮಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯ : ಸಮಿತಿ ರಚನೆ

ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಸುವ ಕುರಿತಂತೆ ಪರಿಶೀಲಿಸಲು ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವರಾದ…

53 mins ago