Andolana originals

ಶ್ರೀರಂಗಪಟ್ಟಣ ದಸರೆಗೆ ‘ಮಹೇಂದ್ರ’ ಸಾರಥಿ

• ಎರಡನೇ ತಂಡದಲ್ಲಿ ಬಂದರೂ ಮಹೇಂದ್ರನ ಮೇಲೆ ಹೆಚ್ಚಿದ ವಿಶ್ವಾಸ
• ಮೃದು ಸ್ವಭಾವದಿಂದಲೇ ಗಮನ ಸೆಳೆಯುತ್ತಿರುವ ಮಹೇಂದ್ರ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆಯುವ ದಸರಾದಲ್ಲಿ ಅಂಬಾರಿ ಹೊರುವ ಮೂಲಕ ಮಹೇಂದ್ರ ಆನೆ ಹ್ಯಾಟ್ರಿಕ್ ಸಾಧನೆ ಮಾಡಲಿದೆ.

ಎರಡನೇ ತಂಡದಲ್ಲಿ ಅರಮನೆಗೆ ಆಗಮಿಸಿದ್ದರೂ ಮಹೇಂದ್ರ ಅಧಿಕಾರಿಗಳ ಮನಗೆದ್ದಿ ದ್ದಾನೆ. ಈ ಹಿನ್ನೆಲೆಯಲ್ಲಿಯೇ ಶ್ರೀರಂಗಪಟ್ಟಣದ ದಸರೆಯ ಜವಾಬ್ದಾರಿಯನ್ನು ತನ್ನ
ಹೆಗಲಿಗೇರಿಸಿಕೊಳ್ಳಲಿದ್ದಾನೆ.

ಸತತ ಮೂರನೇ ವರ್ಷ ದಸರಾ ಮಹೋತ ವದಲ್ಲಿ ಭಾಗವಹಿಸುತ್ತಿರುವ ಮಹೇಂದ್ರ ಜಂಬೂಸವಾರಿಯಲ್ಲಿ ಪ್ರಮುಖ ಪಾತ್ರ ನಿಭಾಯಿಸುವ ಸಾಮರ್ಥ್ಯ ಹೊಂದಿದ್ದಾನೆ. 41 ವರ್ಷದ ಮಹೇಂದ್ರ 2022 ಮತ್ತು 2023ರಲ್ಲಿ ಮೊದಲ ತಂಡದಲ್ಲಿಯೇ ಮೈಸೂರಿಗೆ ಆಗಮಿಸಿ ಅರಮನೆ ಆವರಣದ ಬಿಡಾರ ಸೇರಿತ್ತು. ಆದರೆ, ಈ ಬಾರಿ ಕೆಲ ಗೊಂದಲ ಹಾಗೂ ತಪ್ಪು ನಿರ್ಧಾರದಿಂದಾಗಿ ಎರಡನೇ ತಂಡದಲ್ಲಿ ಆಗಮಿಸಿದ್ದು, ಈಗಾಗಲೇ ಮೊದಲ ತಂಡದ ಗಜಪಡೆಯೊಂದಿಗೆ ತಾಲೀಮಿನಲ್ಲಿ ಪಾಲ್ಗೊಂಡಿದೆ.

ಹ್ಯಾಟ್ರಿಕ್ ಸಾಧನೆ: ಮೈಸೂರು ದಸರಾ ಮಾದರಿಯಲ್ಲಿಯೇ ಶ್ರೀರಂಗಪಟ್ಟಣದಲ್ಲೂ ದಸರಾ ಆಚರಿಸುವ ಪದ್ಧತಿಯಿದ್ದು, ಅಲ್ಲಿ ಆನೆ ಮೇಲೆ ನಾಡದೇವಿ ಚಾಮುಂಡೇಶ್ವರಿಯ ಉತ್ಸವ ಮೂರ್ತಿಯುಳ್ಳ ಮರದ ಅಂಬಾರಿ ಇಟ್ಟು ಮೆರವಣಿಗೆ ಮಾಡಲಾಗುತ್ತದೆ. ಈ ಬಾರಿ ನವರಾತ್ರಿ ಆರಂಭದ ಮರುದಿನವೇ ಅ.4ರಂದು ಶ್ರೀರಂಗಪಟ್ಟಣ ದಸರಾ ಆಚರಿಸಲು ಉದ್ದೇಶಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮೈಸೂರಿನಿಂದ ಯಾವ ಆನೆ ಕಳುಹಿಸಬೇಕು ಎಂದು ಚರ್ಚಿಸಿ ಕಳೆದ ಎರಡು ಬಾರಿ ಶ್ರೀರಂಗಪಟ್ಟಣ ದಸರಾದಲ್ಲಿ ಪಾಲ್ಗೊಂಡು ಎನಿಸಿಕೊಂಡಿರುವ ಮಹೇಂದ್ರನನ್ನೇ ಈ ಬಾರಿಯೂ ಶ್ರೀರಂಗಪಟ್ಟಣಕ್ಕೆ ಕಳುಹಿಸಲು ನಿರ್ಧರಿಸಲಾಗಿದೆ.

ಸುಮಾರು 300ರಿಂದ 400 ಕೆಜಿ ತೂಕದ ಮರದ ಅಂಬಾರಿಯನ್ನು ಕ್ರೇನ್ ಮೂಲಕ ಆನೆ ಮೇಲಿಟ್ಟು ಕಟ್ಟುವ ಪದ್ಧತಿಯಿದೆ. ನಾಲ್ಕು ವರ್ಷಗಳ ಹಿಂದೆ ಪಟಾಕಿ ಶಬ್ದಕ್ಕೆ ಅಂಬಾರಿ ಹೊತ್ತಿದ್ದ ಹೆದರಿದ ಗೋಪಾಲಸ್ವಾಮಿ ಶ್ರೀರಂಗಪಟ್ಟಣ ದಸರೆಯಲ್ಲಿ ಹಿಮ್ಮುಖವಾಗಿ ವೇಗವಾಗಿ ತಿರುಗಿ ಆತಂಕದ ವಾತಾವರಣ ಸೃಷ್ಟಿಸಿತ್ತು. ಮರು ವರ್ಷವೇ ಮೊದಲ ಬಾರಿಗೆ ಪಾಲ್ಗೊಂಡಿದ್ದ ಮಹೇಂದ್ರನಿಗೆ ಶ್ರೀರಂಗಪಟ್ಟಣ ದಸರೆಯ ಜವಾಬ್ದಾರಿ ವಹಿಸಲಾಗಿತ್ತು. ಮೊದಲ ವರ್ಷವೇ ಅತ್ಯುತ್ತಮವಾಗಿ ವರ್ತಿಸಿದ್ದ ಮಹೇಂದ್ರ ತನ್ನ ಮೇಲೆ ಇಟ್ಟಿದ್ದ ವಿಶ್ವಾಸವನ್ನು ಉಳಿಸಿಕೊಂಡಿತ್ತು. ಇದೀಗ ಸತತ ಮೂರನೇ ಬಾರಿಯೂ ಅಂಬಾರಿ ಹೊರುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಲು ಸಜ್ಜಾಗಿದೆ. ಈ ಹಿಂದೆ ಕ್ಯಾಪ್ಟನ್ ಅಭಿಮನ್ಯು ಶ್ರೀರಂಗಪಟ್ಟಣ ದಸರೆಯಲ್ಲಿ ಅಂಬಾರಿ ಹೊತ್ತು ಹ್ಯಾಟ್ರಿಕ್ ಸಾಧನೆ ಮಾಡಿತ್ತು.

ಸತತ ಮೂರನೇ ಬಾರಿ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವುದರೊಂದಿಗೆ ಮೂರು ಬಾರಿಯೂ ಶ್ರೀರಂಗಪಟ್ಟಣದ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊರುವ ಜವಾಬ್ದಾರಿ ನಿಭಾಯಿಸಲಿದ್ದಾನೆ. ಮಹೇಂದ್ರ ಆನೆ ಸೌಮ್ಯ ಸ್ವಭಾವಿಯಾಗಿದ್ದು, ಜವಾಬ್ದಾರಿ ನಿಭಾಯಿಸಬಲ್ಲ ಸಾಮರ್ಥ್ಯ ಹೊಂದಿದ್ದಾನೆ.

-ಡಾ.ಐ.ಬಿ.ಪ್ರಭುಗೌಡ, ಡಿಸಿಎಫ್‌

 

ಆಂದೋಲನ ಡೆಸ್ಕ್

Recent Posts

ಕೊಡಗಿನಲ್ಲಿ ಮುಂದುವರೆದ ಕಾಡಾನೆ ಸೆರೆ ಕಾರ್ಯಾಚರಣೆ

ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…

2 hours ago

ಅಲಯನ್ಸ್ ಸ್ಕ್ವೇರ್ ಪ್ರಾಪರ್ಟೀಸ್‌ಗೆ 20ನೇ ವರ್ಷದ ಸಂಭ್ರಮ

ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…

3 hours ago

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

6 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

6 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

6 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

6 hours ago