• ಎರಡನೇ ತಂಡದಲ್ಲಿ ಬಂದರೂ ಮಹೇಂದ್ರನ ಮೇಲೆ ಹೆಚ್ಚಿದ ವಿಶ್ವಾಸ
• ಮೃದು ಸ್ವಭಾವದಿಂದಲೇ ಗಮನ ಸೆಳೆಯುತ್ತಿರುವ ಮಹೇಂದ್ರ
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆಯುವ ದಸರಾದಲ್ಲಿ ಅಂಬಾರಿ ಹೊರುವ ಮೂಲಕ ಮಹೇಂದ್ರ ಆನೆ ಹ್ಯಾಟ್ರಿಕ್ ಸಾಧನೆ ಮಾಡಲಿದೆ.
ಎರಡನೇ ತಂಡದಲ್ಲಿ ಅರಮನೆಗೆ ಆಗಮಿಸಿದ್ದರೂ ಮಹೇಂದ್ರ ಅಧಿಕಾರಿಗಳ ಮನಗೆದ್ದಿ ದ್ದಾನೆ. ಈ ಹಿನ್ನೆಲೆಯಲ್ಲಿಯೇ ಶ್ರೀರಂಗಪಟ್ಟಣದ ದಸರೆಯ ಜವಾಬ್ದಾರಿಯನ್ನು ತನ್ನ
ಹೆಗಲಿಗೇರಿಸಿಕೊಳ್ಳಲಿದ್ದಾನೆ.
ಸತತ ಮೂರನೇ ವರ್ಷ ದಸರಾ ಮಹೋತ ವದಲ್ಲಿ ಭಾಗವಹಿಸುತ್ತಿರುವ ಮಹೇಂದ್ರ ಜಂಬೂಸವಾರಿಯಲ್ಲಿ ಪ್ರಮುಖ ಪಾತ್ರ ನಿಭಾಯಿಸುವ ಸಾಮರ್ಥ್ಯ ಹೊಂದಿದ್ದಾನೆ. 41 ವರ್ಷದ ಮಹೇಂದ್ರ 2022 ಮತ್ತು 2023ರಲ್ಲಿ ಮೊದಲ ತಂಡದಲ್ಲಿಯೇ ಮೈಸೂರಿಗೆ ಆಗಮಿಸಿ ಅರಮನೆ ಆವರಣದ ಬಿಡಾರ ಸೇರಿತ್ತು. ಆದರೆ, ಈ ಬಾರಿ ಕೆಲ ಗೊಂದಲ ಹಾಗೂ ತಪ್ಪು ನಿರ್ಧಾರದಿಂದಾಗಿ ಎರಡನೇ ತಂಡದಲ್ಲಿ ಆಗಮಿಸಿದ್ದು, ಈಗಾಗಲೇ ಮೊದಲ ತಂಡದ ಗಜಪಡೆಯೊಂದಿಗೆ ತಾಲೀಮಿನಲ್ಲಿ ಪಾಲ್ಗೊಂಡಿದೆ.
ಹ್ಯಾಟ್ರಿಕ್ ಸಾಧನೆ: ಮೈಸೂರು ದಸರಾ ಮಾದರಿಯಲ್ಲಿಯೇ ಶ್ರೀರಂಗಪಟ್ಟಣದಲ್ಲೂ ದಸರಾ ಆಚರಿಸುವ ಪದ್ಧತಿಯಿದ್ದು, ಅಲ್ಲಿ ಆನೆ ಮೇಲೆ ನಾಡದೇವಿ ಚಾಮುಂಡೇಶ್ವರಿಯ ಉತ್ಸವ ಮೂರ್ತಿಯುಳ್ಳ ಮರದ ಅಂಬಾರಿ ಇಟ್ಟು ಮೆರವಣಿಗೆ ಮಾಡಲಾಗುತ್ತದೆ. ಈ ಬಾರಿ ನವರಾತ್ರಿ ಆರಂಭದ ಮರುದಿನವೇ ಅ.4ರಂದು ಶ್ರೀರಂಗಪಟ್ಟಣ ದಸರಾ ಆಚರಿಸಲು ಉದ್ದೇಶಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮೈಸೂರಿನಿಂದ ಯಾವ ಆನೆ ಕಳುಹಿಸಬೇಕು ಎಂದು ಚರ್ಚಿಸಿ ಕಳೆದ ಎರಡು ಬಾರಿ ಶ್ರೀರಂಗಪಟ್ಟಣ ದಸರಾದಲ್ಲಿ ಪಾಲ್ಗೊಂಡು ಎನಿಸಿಕೊಂಡಿರುವ ಮಹೇಂದ್ರನನ್ನೇ ಈ ಬಾರಿಯೂ ಶ್ರೀರಂಗಪಟ್ಟಣಕ್ಕೆ ಕಳುಹಿಸಲು ನಿರ್ಧರಿಸಲಾಗಿದೆ.
ಸುಮಾರು 300ರಿಂದ 400 ಕೆಜಿ ತೂಕದ ಮರದ ಅಂಬಾರಿಯನ್ನು ಕ್ರೇನ್ ಮೂಲಕ ಆನೆ ಮೇಲಿಟ್ಟು ಕಟ್ಟುವ ಪದ್ಧತಿಯಿದೆ. ನಾಲ್ಕು ವರ್ಷಗಳ ಹಿಂದೆ ಪಟಾಕಿ ಶಬ್ದಕ್ಕೆ ಅಂಬಾರಿ ಹೊತ್ತಿದ್ದ ಹೆದರಿದ ಗೋಪಾಲಸ್ವಾಮಿ ಶ್ರೀರಂಗಪಟ್ಟಣ ದಸರೆಯಲ್ಲಿ ಹಿಮ್ಮುಖವಾಗಿ ವೇಗವಾಗಿ ತಿರುಗಿ ಆತಂಕದ ವಾತಾವರಣ ಸೃಷ್ಟಿಸಿತ್ತು. ಮರು ವರ್ಷವೇ ಮೊದಲ ಬಾರಿಗೆ ಪಾಲ್ಗೊಂಡಿದ್ದ ಮಹೇಂದ್ರನಿಗೆ ಶ್ರೀರಂಗಪಟ್ಟಣ ದಸರೆಯ ಜವಾಬ್ದಾರಿ ವಹಿಸಲಾಗಿತ್ತು. ಮೊದಲ ವರ್ಷವೇ ಅತ್ಯುತ್ತಮವಾಗಿ ವರ್ತಿಸಿದ್ದ ಮಹೇಂದ್ರ ತನ್ನ ಮೇಲೆ ಇಟ್ಟಿದ್ದ ವಿಶ್ವಾಸವನ್ನು ಉಳಿಸಿಕೊಂಡಿತ್ತು. ಇದೀಗ ಸತತ ಮೂರನೇ ಬಾರಿಯೂ ಅಂಬಾರಿ ಹೊರುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಲು ಸಜ್ಜಾಗಿದೆ. ಈ ಹಿಂದೆ ಕ್ಯಾಪ್ಟನ್ ಅಭಿಮನ್ಯು ಶ್ರೀರಂಗಪಟ್ಟಣ ದಸರೆಯಲ್ಲಿ ಅಂಬಾರಿ ಹೊತ್ತು ಹ್ಯಾಟ್ರಿಕ್ ಸಾಧನೆ ಮಾಡಿತ್ತು.
ಸತತ ಮೂರನೇ ಬಾರಿ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವುದರೊಂದಿಗೆ ಮೂರು ಬಾರಿಯೂ ಶ್ರೀರಂಗಪಟ್ಟಣದ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊರುವ ಜವಾಬ್ದಾರಿ ನಿಭಾಯಿಸಲಿದ್ದಾನೆ. ಮಹೇಂದ್ರ ಆನೆ ಸೌಮ್ಯ ಸ್ವಭಾವಿಯಾಗಿದ್ದು, ಜವಾಬ್ದಾರಿ ನಿಭಾಯಿಸಬಲ್ಲ ಸಾಮರ್ಥ್ಯ ಹೊಂದಿದ್ದಾನೆ.
-ಡಾ.ಐ.ಬಿ.ಪ್ರಭುಗೌಡ, ಡಿಸಿಎಫ್
ಮಾದರಿಯ ನಡೆ! ಮೊನ್ನೆ ಹುಣಸೂರಿನಲ್ಲಿ ನಡೆದ ದಲಿತರ ದೇವಸ್ಥಾನ ಪ್ರವೇಶ ಸಹಪಂಕ್ತಿ ಭೋಜನ ಮಾದರಿ ನಡೆಯಾಗಿದೆ ನಾಡು-ದೇಶಕೆ! ಪ್ರೇರಣೆಯಾಗಿದೆ ಮೇಲ್ಪಂಕ್ತಿಯಾಗಿದೆ…
ಮೈಸೂರಿನ ಅರಮನೆ ವೀಕ್ಷಣೆಗೆ ಪ್ರತಿನಿತ್ಯ ಸಾವಿರಾರು ಜನ ಪ್ರವಾಸಿಗರು ಆಗಮಿಸುತ್ತಾರೆ. ಅರಮನೆಯ ಸುತ್ತಲೂ ನಿರ್ಮಾಣವಾಗಿರುವ ಪಾದಚಾರಿ ಮಾರ್ಗದಲ್ಲಿ ಅಳವಡಿಸಿರುವ ಚಪ್ಪಡಿ…
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ, ಬೂಕನಕೆರೆ ಹೋಬಳಿಯ ಬಹುಪಾಲು ಪ್ರದೇಶಗಳಲ್ಲಿ ಈ ವರ್ಷ ಪೂರ್ವ ಮುಂಗಾರು ಮಳೆ ಆಗದೆ, ಬೆಳೆ…
ಖಾಸಗಿ ಶಾಲೆಗಳು ೬ನೇ ತರಗತಿಯಿಂದಲೇ ಐಐಟಿ ಮತ್ತು ನೀಟ್ ತರಬೇತಿಯನ್ನು ಕಡ್ಡಾಯಗೊಳಿಸಿವೆ. ೧೧-೧೨ ವರ್ಷದ ಪುಟ್ಟ ಮಕ್ಕಳ ಮೇಲೆ ಸ್ಪರ್ಧಾತ್ಮಕ…
ಎನ್.ಹರೀಶ್ ಕುಮಾರ್ ಆರೋಗ್ಯ ಕ್ಷೇತ್ರದಲ್ಲಿ ಪ್ರಮುಖವಾಗಿ ಮುಂಚೂಣಿಯಲ್ಲಿ ಬರುವ ಹೆಸರೆಂದರೆ ಅದು ವೈದ್ಯ ವೃತ್ತಿ. ಆದರೆ ಒಬ್ಬ ರೋಗಿಯು ಗುಣಮುಖ…
ಲಕ್ಷ್ಮೀಕಾಂತ್ ಕೊಮಾರಪ್ಪ ಉತ್ತಮ ಪ್ರದರ್ಶನ ನೀಡಿದ ಎಜಿಒಆರ್ಸಿ ತಂಡ ಚಾಂಪಿಯನ್; ಸದರ್ನ್ ಕಮಾಂಡ್ ತಂಡಕ್ಕೆ ದ್ವಿತೀಯ ಬಹುಮಾನ ಸೋಮವಾರಪೇಟೆ: ಸುಮಾರು…