Andolana originals

ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ

ಪರೀಕ್ಷೆ ಬರೆಯಲು ಒಟ್ಟು ೩೯,೧೦೩ ವಿದ್ಯಾರ್ಥಿಗಳ ನೋಂದಾವಣೆ

ಜಿಲ್ಲೆಯಲ್ಲಿ ೧೩೩ ಪರೀಕ್ಷಾ ಕೇಂದ್ರಗಳು

ಸಿಂಧುವಳ್ಳಿ ಸುಧೀರ
ಮೈಸೂರು: ಮಾ. ೨೧ರಿಂದ ಏ. ೪ರವರೆಗೆ ರಾಜ್ಯದಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಜಿಲ್ಲಾಡಳಿತ ಮತ್ತು ಶಾಲಾ ಶಿಕ್ಷಣ ಇಲಾಖೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.

ಜಿಲ್ಲೆಯಲ್ಲಿ ಒಟ್ಟು ೬೮೮ ಶಾಲೆಗಳಿದ್ದು, ಅವುಗಳಲ್ಲಿ ೨೭೬ ಸರ್ಕಾರಿ, ೧೨೪ ಅನುದಾನಿತ ಮತ್ತು ೨೮೮ ಅನುದಾನ ರಹಿತ ಶಾಲೆಗಳಿವೆ.

ಮೈಸೂರು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ೧೩೩ ಪರೀಕ್ಷಾ ಕೇಂದ್ರಗಳನ್ನು ಗೊತ್ತುಪಡಿಸಲಾಗಿದ್ದು, ನಗರದಲ್ಲಿ ೪೩, ಗ್ರಾಮೀಣ ಭಾಗದಲ್ಲಿ ೯೦ ಪರೀಕ್ಷಾ ಕೇಂದ್ರಗಳಿವೆ. ಅವುಗಳಲ್ಲಿ ೭೫ ಸರ್ಕಾರಿ, ೨೫ ಅನುದಾನಿತ, ೩೩ ಅನುದಾನ ರಹಿತ ಪರೀಕ್ಷಾ ಕೇಂದ್ರಗಳಿವೆ.

ಮೈಸೂರು ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ೩೯,೧೦೩ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಆ ಪೈಕಿ ೧೯,೯೮೯ ಬಾಲಕರು ಮತ್ತು ೧೯,೧೧೪ ಮಂದಿ ಬಾಲಕಿಯರಾಗಿದ್ದಾರೆ.

ಪರೀಕ್ಷೆಗೆ ನೋಂದಾಯಿಸಿಕೊಡಿರುವ ಒಟ್ಟು ವಿದ್ಯಾರ್ಥಿಗಳಲ್ಲಿ ೩೭,೯೦೪ ಶಾಲಾ ರೆಗ್ಯುಲರ್ ವಿದ್ಯಾರ್ಥಿಗಳಿದ್ದು, ಅವರಲ್ಲಿ ೧೯,೧೧೪ ಬಾಲಕರು ಮತ್ತು ೧೮,೯೭೦ ಬಾಲಕಿಯರು ಇದ್ದಾರೆ. ೬೦೯ ಶಾಲಾ ರೆಗ್ಯುಲರ್ ಪುನರಾವರ್ತಿತ ವಿದ್ಯಾರ್ಥಿಗಳಿದ್ದು, ಅವರಲ್ಲಿ ೪೯೪ ಬಾಲಕರು ಮತ್ತು ೧೧೫ ಬಾಲಕಿಯರಿದ್ದಾರೆ. ೪೬೫ ಖಾಸಗಿ ವಿದ್ಯಾರ್ಥಿಗಳಲ್ಲಿ ೨೯೭ ಬಾಲಕರು ಮತ್ತು ೧೬೮ ಬಾಲಕಿಯರಿದ್ದಾರೆ. ೧೨೫ ಖಾಸಗಿ ಪುನಾರಾವರ್ತಿತ ವಿದ್ಯಾರ್ಥಿಗಳಲ್ಲಿ ೮೪ ಬಾಲಕರು, ೪೧ ಬಾಲಕಿಯರಿದ್ದಾರೆ.

ಪರೀಕ್ಷಾ ಕೇಂದ್ರಗಳಿಗೆ ೧೩೩ ಮುಖ್ಯ ಅಧಿಕ್ಷಕರು, ೨೪ ಉಪ ಮುಖ್ಯ ಅಧಿಕ್ಷಕರು, ೫೪ ಮಾರ್ಗಾಧಿಕಾರಿಗಳು, ೧೩೩ ಪ್ರಶ್ನೆ ಪತ್ರಿಕೆ ಪಾಲಕರು, ೧೩೩ ಸ್ಥಾನಿಕ ಜಾಗೃತ ದಳದವರು, ೧೩೩ ಮೊಬೈಲ್ ಸ್ವಾಧೀನ ಅಧಿಕಾರಿಗಳು, ೧೮ ತಾಲ್ಲೂಕು ಹಂತದ ಜಾಗೃತ ದಳ, ೩ ಜಿಲ್ಲಾ ಹಂತದ ಜಾಗೃತದಳ, ೨ ಜಿಲ್ಲಾಽ ಕಾರಿಗಳು ಮತ್ತು ಮುಖ್ಯ ಕಾರ್ಯನಿರ್ವಾ ಹಕ ಅಧಿಕಾ ರಿಗಳು ಸೂಚಿಸಿದ ತಂಡವನ್ನು ನೇಮಕಗೊಳಿಸಲಾಗಿದೆ.

ʻವಿದ್ಯಾರ್ಥಿಗಳಿಗೆ ಸಕಲ ಅನುಕೂಲ’

ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿಯೂ ವಿದ್ಯಾರ್ಥಿಗಳು ಸುಗಮವಾಗಿ ಪರೀಕ್ಷೆ ಬರೆಯಲು ಸಕಲ ರೀತಿಯ ಅನುಕೂಲಗಳನ್ನೂ ಕಲ್ಪಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಪ್ರತಿಯೊಂದು ಕೊಠಡಿಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ, ಪರೀಕ್ಷಾ ಕೇಂದ್ರಗಳಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾದರೆ ಪ್ರಾಥಮಿಕ ಚಿಕಿತ್ಸೆ ಸೇರಿದಂತೆ ಎಲ್ಲ ಸಿದ್ಧತೆಗಳನ್ನೂ ಅಚ್ಚುಕಟ್ಟಾಗಿ ಮಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಇಂದು ಪೋಲೀಯೋ ಲಸಿಕಾ ಅಭಿಯಾನ

ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…

3 hours ago

ಮರುಳಯ್ಯನ ಕೊಪ್ಪಲು ಕೊಂತನಾಯಕರಿಗೆ ಬೇಡರ ಕಣ್ಣಪ್ಪನೇ ದೇವರು

ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…

3 hours ago

ಮೈಸೂರಲ್ಲಿ ಎಸ್.ಎಲ್. ಭೈರಪ್ಪನವರ ಸ್ಮಾರಕ ಹೇಗಿರಬೇಕು?

ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…

3 hours ago

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

12 hours ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

12 hours ago