Andolana originals

ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ

ಪರೀಕ್ಷೆ ಬರೆಯಲು ಒಟ್ಟು ೩೯,೧೦೩ ವಿದ್ಯಾರ್ಥಿಗಳ ನೋಂದಾವಣೆ

ಜಿಲ್ಲೆಯಲ್ಲಿ ೧೩೩ ಪರೀಕ್ಷಾ ಕೇಂದ್ರಗಳು

ಸಿಂಧುವಳ್ಳಿ ಸುಧೀರ
ಮೈಸೂರು: ಮಾ. ೨೧ರಿಂದ ಏ. ೪ರವರೆಗೆ ರಾಜ್ಯದಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಜಿಲ್ಲಾಡಳಿತ ಮತ್ತು ಶಾಲಾ ಶಿಕ್ಷಣ ಇಲಾಖೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.

ಜಿಲ್ಲೆಯಲ್ಲಿ ಒಟ್ಟು ೬೮೮ ಶಾಲೆಗಳಿದ್ದು, ಅವುಗಳಲ್ಲಿ ೨೭೬ ಸರ್ಕಾರಿ, ೧೨೪ ಅನುದಾನಿತ ಮತ್ತು ೨೮೮ ಅನುದಾನ ರಹಿತ ಶಾಲೆಗಳಿವೆ.

ಮೈಸೂರು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ೧೩೩ ಪರೀಕ್ಷಾ ಕೇಂದ್ರಗಳನ್ನು ಗೊತ್ತುಪಡಿಸಲಾಗಿದ್ದು, ನಗರದಲ್ಲಿ ೪೩, ಗ್ರಾಮೀಣ ಭಾಗದಲ್ಲಿ ೯೦ ಪರೀಕ್ಷಾ ಕೇಂದ್ರಗಳಿವೆ. ಅವುಗಳಲ್ಲಿ ೭೫ ಸರ್ಕಾರಿ, ೨೫ ಅನುದಾನಿತ, ೩೩ ಅನುದಾನ ರಹಿತ ಪರೀಕ್ಷಾ ಕೇಂದ್ರಗಳಿವೆ.

ಮೈಸೂರು ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ೩೯,೧೦೩ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಆ ಪೈಕಿ ೧೯,೯೮೯ ಬಾಲಕರು ಮತ್ತು ೧೯,೧೧೪ ಮಂದಿ ಬಾಲಕಿಯರಾಗಿದ್ದಾರೆ.

ಪರೀಕ್ಷೆಗೆ ನೋಂದಾಯಿಸಿಕೊಡಿರುವ ಒಟ್ಟು ವಿದ್ಯಾರ್ಥಿಗಳಲ್ಲಿ ೩೭,೯೦೪ ಶಾಲಾ ರೆಗ್ಯುಲರ್ ವಿದ್ಯಾರ್ಥಿಗಳಿದ್ದು, ಅವರಲ್ಲಿ ೧೯,೧೧೪ ಬಾಲಕರು ಮತ್ತು ೧೮,೯೭೦ ಬಾಲಕಿಯರು ಇದ್ದಾರೆ. ೬೦೯ ಶಾಲಾ ರೆಗ್ಯುಲರ್ ಪುನರಾವರ್ತಿತ ವಿದ್ಯಾರ್ಥಿಗಳಿದ್ದು, ಅವರಲ್ಲಿ ೪೯೪ ಬಾಲಕರು ಮತ್ತು ೧೧೫ ಬಾಲಕಿಯರಿದ್ದಾರೆ. ೪೬೫ ಖಾಸಗಿ ವಿದ್ಯಾರ್ಥಿಗಳಲ್ಲಿ ೨೯೭ ಬಾಲಕರು ಮತ್ತು ೧೬೮ ಬಾಲಕಿಯರಿದ್ದಾರೆ. ೧೨೫ ಖಾಸಗಿ ಪುನಾರಾವರ್ತಿತ ವಿದ್ಯಾರ್ಥಿಗಳಲ್ಲಿ ೮೪ ಬಾಲಕರು, ೪೧ ಬಾಲಕಿಯರಿದ್ದಾರೆ.

ಪರೀಕ್ಷಾ ಕೇಂದ್ರಗಳಿಗೆ ೧೩೩ ಮುಖ್ಯ ಅಧಿಕ್ಷಕರು, ೨೪ ಉಪ ಮುಖ್ಯ ಅಧಿಕ್ಷಕರು, ೫೪ ಮಾರ್ಗಾಧಿಕಾರಿಗಳು, ೧೩೩ ಪ್ರಶ್ನೆ ಪತ್ರಿಕೆ ಪಾಲಕರು, ೧೩೩ ಸ್ಥಾನಿಕ ಜಾಗೃತ ದಳದವರು, ೧೩೩ ಮೊಬೈಲ್ ಸ್ವಾಧೀನ ಅಧಿಕಾರಿಗಳು, ೧೮ ತಾಲ್ಲೂಕು ಹಂತದ ಜಾಗೃತ ದಳ, ೩ ಜಿಲ್ಲಾ ಹಂತದ ಜಾಗೃತದಳ, ೨ ಜಿಲ್ಲಾಽ ಕಾರಿಗಳು ಮತ್ತು ಮುಖ್ಯ ಕಾರ್ಯನಿರ್ವಾ ಹಕ ಅಧಿಕಾ ರಿಗಳು ಸೂಚಿಸಿದ ತಂಡವನ್ನು ನೇಮಕಗೊಳಿಸಲಾಗಿದೆ.

ʻವಿದ್ಯಾರ್ಥಿಗಳಿಗೆ ಸಕಲ ಅನುಕೂಲ’

ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿಯೂ ವಿದ್ಯಾರ್ಥಿಗಳು ಸುಗಮವಾಗಿ ಪರೀಕ್ಷೆ ಬರೆಯಲು ಸಕಲ ರೀತಿಯ ಅನುಕೂಲಗಳನ್ನೂ ಕಲ್ಪಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಪ್ರತಿಯೊಂದು ಕೊಠಡಿಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ, ಪರೀಕ್ಷಾ ಕೇಂದ್ರಗಳಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾದರೆ ಪ್ರಾಥಮಿಕ ಚಿಕಿತ್ಸೆ ಸೇರಿದಂತೆ ಎಲ್ಲ ಸಿದ್ಧತೆಗಳನ್ನೂ ಅಚ್ಚುಕಟ್ಟಾಗಿ ಮಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

18 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

18 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

18 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

18 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

18 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

18 hours ago