Andolana originals

ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ

ಪರೀಕ್ಷೆ ಬರೆಯಲು ಒಟ್ಟು ೩೯,೧೦೩ ವಿದ್ಯಾರ್ಥಿಗಳ ನೋಂದಾವಣೆ

ಜಿಲ್ಲೆಯಲ್ಲಿ ೧೩೩ ಪರೀಕ್ಷಾ ಕೇಂದ್ರಗಳು

ಸಿಂಧುವಳ್ಳಿ ಸುಧೀರ
ಮೈಸೂರು: ಮಾ. ೨೧ರಿಂದ ಏ. ೪ರವರೆಗೆ ರಾಜ್ಯದಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಜಿಲ್ಲಾಡಳಿತ ಮತ್ತು ಶಾಲಾ ಶಿಕ್ಷಣ ಇಲಾಖೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.

ಜಿಲ್ಲೆಯಲ್ಲಿ ಒಟ್ಟು ೬೮೮ ಶಾಲೆಗಳಿದ್ದು, ಅವುಗಳಲ್ಲಿ ೨೭೬ ಸರ್ಕಾರಿ, ೧೨೪ ಅನುದಾನಿತ ಮತ್ತು ೨೮೮ ಅನುದಾನ ರಹಿತ ಶಾಲೆಗಳಿವೆ.

ಮೈಸೂರು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ೧೩೩ ಪರೀಕ್ಷಾ ಕೇಂದ್ರಗಳನ್ನು ಗೊತ್ತುಪಡಿಸಲಾಗಿದ್ದು, ನಗರದಲ್ಲಿ ೪೩, ಗ್ರಾಮೀಣ ಭಾಗದಲ್ಲಿ ೯೦ ಪರೀಕ್ಷಾ ಕೇಂದ್ರಗಳಿವೆ. ಅವುಗಳಲ್ಲಿ ೭೫ ಸರ್ಕಾರಿ, ೨೫ ಅನುದಾನಿತ, ೩೩ ಅನುದಾನ ರಹಿತ ಪರೀಕ್ಷಾ ಕೇಂದ್ರಗಳಿವೆ.

ಮೈಸೂರು ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ೩೯,೧೦೩ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಆ ಪೈಕಿ ೧೯,೯೮೯ ಬಾಲಕರು ಮತ್ತು ೧೯,೧೧೪ ಮಂದಿ ಬಾಲಕಿಯರಾಗಿದ್ದಾರೆ.

ಪರೀಕ್ಷೆಗೆ ನೋಂದಾಯಿಸಿಕೊಡಿರುವ ಒಟ್ಟು ವಿದ್ಯಾರ್ಥಿಗಳಲ್ಲಿ ೩೭,೯೦೪ ಶಾಲಾ ರೆಗ್ಯುಲರ್ ವಿದ್ಯಾರ್ಥಿಗಳಿದ್ದು, ಅವರಲ್ಲಿ ೧೯,೧೧೪ ಬಾಲಕರು ಮತ್ತು ೧೮,೯೭೦ ಬಾಲಕಿಯರು ಇದ್ದಾರೆ. ೬೦೯ ಶಾಲಾ ರೆಗ್ಯುಲರ್ ಪುನರಾವರ್ತಿತ ವಿದ್ಯಾರ್ಥಿಗಳಿದ್ದು, ಅವರಲ್ಲಿ ೪೯೪ ಬಾಲಕರು ಮತ್ತು ೧೧೫ ಬಾಲಕಿಯರಿದ್ದಾರೆ. ೪೬೫ ಖಾಸಗಿ ವಿದ್ಯಾರ್ಥಿಗಳಲ್ಲಿ ೨೯೭ ಬಾಲಕರು ಮತ್ತು ೧೬೮ ಬಾಲಕಿಯರಿದ್ದಾರೆ. ೧೨೫ ಖಾಸಗಿ ಪುನಾರಾವರ್ತಿತ ವಿದ್ಯಾರ್ಥಿಗಳಲ್ಲಿ ೮೪ ಬಾಲಕರು, ೪೧ ಬಾಲಕಿಯರಿದ್ದಾರೆ.

ಪರೀಕ್ಷಾ ಕೇಂದ್ರಗಳಿಗೆ ೧೩೩ ಮುಖ್ಯ ಅಧಿಕ್ಷಕರು, ೨೪ ಉಪ ಮುಖ್ಯ ಅಧಿಕ್ಷಕರು, ೫೪ ಮಾರ್ಗಾಧಿಕಾರಿಗಳು, ೧೩೩ ಪ್ರಶ್ನೆ ಪತ್ರಿಕೆ ಪಾಲಕರು, ೧೩೩ ಸ್ಥಾನಿಕ ಜಾಗೃತ ದಳದವರು, ೧೩೩ ಮೊಬೈಲ್ ಸ್ವಾಧೀನ ಅಧಿಕಾರಿಗಳು, ೧೮ ತಾಲ್ಲೂಕು ಹಂತದ ಜಾಗೃತ ದಳ, ೩ ಜಿಲ್ಲಾ ಹಂತದ ಜಾಗೃತದಳ, ೨ ಜಿಲ್ಲಾಽ ಕಾರಿಗಳು ಮತ್ತು ಮುಖ್ಯ ಕಾರ್ಯನಿರ್ವಾ ಹಕ ಅಧಿಕಾ ರಿಗಳು ಸೂಚಿಸಿದ ತಂಡವನ್ನು ನೇಮಕಗೊಳಿಸಲಾಗಿದೆ.

ʻವಿದ್ಯಾರ್ಥಿಗಳಿಗೆ ಸಕಲ ಅನುಕೂಲ’

ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿಯೂ ವಿದ್ಯಾರ್ಥಿಗಳು ಸುಗಮವಾಗಿ ಪರೀಕ್ಷೆ ಬರೆಯಲು ಸಕಲ ರೀತಿಯ ಅನುಕೂಲಗಳನ್ನೂ ಕಲ್ಪಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಪ್ರತಿಯೊಂದು ಕೊಠಡಿಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ, ಪರೀಕ್ಷಾ ಕೇಂದ್ರಗಳಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾದರೆ ಪ್ರಾಥಮಿಕ ಚಿಕಿತ್ಸೆ ಸೇರಿದಂತೆ ಎಲ್ಲ ಸಿದ್ಧತೆಗಳನ್ನೂ ಅಚ್ಚುಕಟ್ಟಾಗಿ ಮಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಕೇದಾರನಾಥ ಧಾಮದಲ್ಲಿ ಯಾತ್ರಾರ್ಥಿಗಳಿಗೆ 24 ಗಂಟೆ ಬಿಸಿನೀರು: ಸಿಎಂ ಪುಷ್ಕರ್‌ ಸಿಂಗ್‌ ಧಾಮಿ ಘೋಷಣೆ

ಡೆಹರಾಡೂನ್:‌ ಕೇದಾರನಾಥ ಧಾಮಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಶೀಘ್ರದಲ್ಲೇ ತಣ್ಣೀರಿನ ಬದಲಿಗೆ 24 ಗಂಟೆಗಳ ಬಿಸಿನೀರಿನ ಪೂರೈಕೆಯನ್ನು ಒದಗಿಸಲಾಗುವುದು ಎಂದು…

1 hour ago

ರಣ ಬಿಸಿಲ ನಡುವೆಯೇ ಕೆಲ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.…

1 hour ago

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಗೆ ಚಟ್ಟ ಕಟ್ಟಿದ ಪತ್ನಿ

ಸರಗೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಪತ್ನಿಯೇ ತನ್ನ ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆ…

2 hours ago

ದೇವನೂರಿಗೆ ಆಗಮಿಸಿದ ಪಂಪ

ಅರ್ಧ ಶತಮಾನಕ್ಕೂ ಹಿಂದಿನ ಕಾಲದ ಚಿತ್ರಗಳು  ಓ.ಎಲ್.ನಾಗಭೂಷಣ ಸ್ವಾಮಿ ದೇವನೂರ ಮಹಾದೇವ ಕನ್ನಡಿಗರ ಮನಸಿನಲ್ಲಿ ಮನೆ ಮಾಡಿರುವವರು. ಒಬ್ಬೊಬ್ಬರೂ ಮಹಾದೇವರ…

2 hours ago

ದೇವನೂರಿಗೆ ಆಗಮಿಸಿದ ಪಂಪ

ದೇಮ ಎಂಬ ನೈತಿಕ ಕೈಮರ  ಸುರೇಶ ಕಂಜರ್ಪಣೆ ಅಂದಕಾಲತ್ತಿಲೇ ನಾನು ಅರಕಲಗೂಡಲ್ಲಿ ಪಾಠ ಮಾಡುತ್ತಿದ್ದಾಗ ಅಲ್ಲಿನ ದೇವಸ್ಥಾನದಲ್ಲಿ ಶಿವರಾತ್ರಿಯಂದು ನಡೆದ…

2 hours ago

ಚೆಕ್‌ಡ್ಯಾಂ ತಡೆಗೋಡೆ ಒಡೆದು ಹಾಕಿದ ಕಿಡಿಗೇಡಿಗಳು: ಕಠಿಣ ಕ್ರಮಕ್ಕೆ ಪ್ರಜ್ಞಾವಂತ ನಾಗರಿಕರ ಆಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅಂತರ್ಜಲ ಮಟ್ಟ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಮಳೆಯ ನೀರು ಸಂಗ್ರಹಿಸಲು…

2 hours ago