ಮೈಸೂರು: ಮಗಳನ್ನು ಚೆನ್ನಾಗಿ ಓದಿಸಬೇಕೆಂಬ ಹಂಬಲ ಅಪ್ಪನದು. ಅಪ್ಪ-ಅಮ್ಮನ ಕನಸನ್ನು ನೆರವೇರಿಸಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಬೇಕೆಂದು ಹಗಲಿರುಳು ಓದಿದ ಫಲವಾಗಿ ಎಸ್.ಜಾಹ್ನವಿ ಜಿಲ್ಲೆಗೆ ಮೊದಲ ಸ್ಥಾನವನ್ನು ಹಂಚಿಕೊಂಡಿದ್ದಾರೆ.
ಈಕೆ ಜೆಎಸ್ ಎಸ್ ಮೆಡಿಕಲ್ ಕಾಲೇಜಿನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿರುವ ಹೆಬ್ಬಾಳು ಎರಡನೇ ಹಂತದ ನಿವಾಸಿ ಶಿವಕುಮಾರ್ ಅವರ ಪುತ್ರಿಯಾಗಿದ್ದು, ಮುಂದೆ ಪಿಯುಸಿಯಲ್ಲೂ ಉತ್ತಮ ಅಂಕ ಪಡೆಯುವ ಅಭಿಲಾಷೆ ಹೊಂದಿದ್ದಾಳೆ.
ವಿಜಯನಗರದ ಐಶ್ವರ್ಯ ಪೆಟ್ರೋಲ್ ಬಂಕ್ ಸಮೀಪವಿರುವ ಭಾರತೀಯ ವಿದ್ಯಾಭವನದ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡಿದ ಎಸ್.ಜಾಹ್ನವಿ ಎಸ್ಎಸ್ ಎಲ್ಸಿ ಪರೀಕ್ಷೆಯಲ್ಲಿ 625ಕ್ಕೆ 623 ಅಂಕಗಳನ್ನು ಪಡೆದುಕೊಂಡು ಪ್ರಥಮ ಸ್ಥಾನವನ್ನು ಹಂಚಿಕೊಂಡಿದ್ದಾರೆ. ವಿಜಯನಗರದ ಸದ್ವಿದ್ಯಾ ಶಾಲೆಯ ಡಿ.ಎಸ್.ಧನ್ವಿ ಕೂಡ 625ಕ್ಕೆ 623 ಅಂಕ ಪಡೆದಿರುವ ಕಾರಣ ಇಬ್ಬರೂ ಜಿಲ್ಲೆಗೆ ಪ್ರಥಮರಾಗಿದ್ದಾರೆ.
ಕೆಆರ್ಎಸ್ ರಸ್ತೆಯಲ್ಲಿರುವ ಫಾಲ್ಕನ್ ಟೈರ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಶಿವಕುಮಾರ್ ತಮ್ಮ ಮಗಳನ್ನು ಚೆನ್ನಾಗಿ ಓದಿಸುವ ಕನಸು ಹೊತ್ತಿದ್ದರು. ಆದರೆ, ಸ್ಥಗಿತಗೊಂಡ ಮೇಲೆ ಕುಟುಂಬ ನಿರ್ವಹಣೆಯ ಜತೆಗೆ ಮಗಳನ್ನು ಓದಿಸಬೇಕೆಂಬ ತುಡಿತದಿಂದಾಗಿ ಸೆಕ್ಯೂರಿಟಿ ಗಾರ್ಡ್ ಕೆಲಸಕ್ಕೆ ಸೇರಿಕೊಂಡಿದ್ದರು. ದೂರದ ಹೆಬ್ಬಾಳುವಿನಿಂದ ಬೆಂಗಳೂರು ರಸ್ತೆಯ ಜೆಎಸ್ಎಸ್ ಮೆಡಿಕಲ್ ಕಾಲೇಜಿಗೆ ಬಂದು ಕಾರ್ಯ ನಿರ್ವಹಿಸುತ್ತಿದ್ದರೂ ಮಗಳ ಓದಿನ ಹಿಂದೆ ನಿಂತಿದ್ದರು.
ಮಗಳು ಚೆನ್ನಾಗಿ ಓದಬೇಕೆಂದು ರಾತ್ರಿ 11 ಗಂಟೆ ತನಕ ಮತ್ತು ಬೆಳಿಗ್ಗೆ 5 ರಿಂದ ಎದ್ದು ಓದುವಂತೆ ನೋಡಿಕೊಳ್ಳುತ್ತಿದ್ದರು.ಅದೇ ರೀತಿ ಜಾಹ್ನವಿ ಕೂಡ ಸಮಯಕ್ಕೆ ಸರಿಯಾಗಿ ಓದುತ್ತಿದ್ದರು. ಈ ವೇಳೆ ಪ್ರಥಮ ಸ್ಥಾನ ಬಂದಿದ್ದಕ್ಕೆ ಖುಷಿ ಹಂಚಿಕೊಂಡ ಎಸ್.ಜಾಹ್ನವಿ, ಶಾಲೆಯಲ್ಲಿ ಶಿಕ್ಷಕರು ತುಂಬಾ ಹೋಮ್ ವರ್ಕ್ ಮಾಡಿಸುತ್ತಿದ್ದರು. ಟಾಪ್ ಸ್ಟೂಡೆಂಟ್ಗಳನ್ನು ಗುರುತಿಸಿ ವಿಶೇಷ ತರಗತಿಗಳನ್ನು ಮಾಡುತ್ತಿದ್ದರಿಂದ ತುಂಬಾ ನೆರವಾಯಿತು. ಅಪ್ಪ, ಅಮ್ಮ ಕೂಡ ಸಹಕಾರ ನೀಡಿದ್ದರಿಂದ ಇಷ್ಟೊಂದು ಅಂಕ ಬರಲು ಕಾರಣವಾಯಿತು. ಕಷ್ಟಪಟ್ಟು ಓದಿದ್ದಕ್ಕೆ 623 ಅಂಕಗಳು ಬಂದಿದೆ, ದ್ವಿತೀಯ ಪಿಯುಸಿಯಲ್ಲೂ ಇದೇ ರೀತಿ ಟಾಪ್ ಆಗಿ ಬರುವ ಕನಸು ಹೊತ್ತಿದ್ದೇನೆ ಎಂದು ಹೇಳಿದರು. ಮಗಳನ್ನು ಓದಿಸಬೇಕೆಂದು ಸೆಕ್ಯೂರಿಟಿ ಗಾರ್ಡ್ ಆಗಿದ್ದರೂ ಶ್ರಮಿಸಿದ್ದೇನೆ. ಮಗಳು ಜಿಲ್ಲೆಗೆ ಮೊದಲಿಗರಾಗಿ ಬಂದಿದ್ದು ಸಂತೋಷ. ನಾನು ಫಾಲ್ಕನ್ ಟೈರ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದಾಗ ‘ಆಂದೋಲನ’ ದಿನಪತ್ರಿಕೆ ಸಂಸ್ಥಾಪಕ ಸಂಪಾದಕರಾದ ರಾಜಶೇಖರ ಕೋಟಿ ಅವರು ತುಂಬಾ ಸಹಾಯ ಮಾಡಿದ್ದಾರೆ ಎಂದು ಸ್ಮರಿಸಿದರು.
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…