Andolana originals

ಎಸ್‌ಎಸ್‌ಎಲ್‌ಸಿ ಫಲಿತಾಂಶ; ಕೊಡಗಿಗೆ 8ನೇ ಸ್ಥಾನ

ನವೀನ್ ಡಿಸೋಜ

ಮಡಿಕೇರಿ: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಕಳೆದ ಬಾರಿ ನಾಲ್ಕನೇ ಸ್ಥಾನದಲ್ಲಿದ್ದ ಕೊಡಗು ಈ ಬಾರಿ ೮ನೇ ಸ್ಥಾನಕ್ಕೆ ಕುಸಿದಿದೆ. ಆದರೆ, ಕಳೆದ ಸಲಕ್ಕಿಂತ ಈ ಬಾರಿ ೧೪.೫ರಷ್ಟು ಹೆಚ್ಚಿನ ಫಲಿತಾಂಶ ಪಡೆದುಕೊಂಡಿದೆ.

ಜಿಲ್ಲೆಯಲ್ಲಿ ಪರೀಕ್ಷೆ ಬರೆದಿದ್ದ ೫,೯೪೮ ವಿದ್ಯಾರ್ಥಿಗಳಲ್ಲಿ ೫,೭೪೨ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.೯೬.೫೪ ರಷ್ಟು ಫಲಿತಾಂಶ ಬಂದಿದೆ. ಈ ಬಾರಿ ಶೈಕ್ಷಣಿಕ ವರ್ಷಾರಂಭದಿಂದಲೇ ಶಾಲಾ ಶಿಕ್ಷಣ ಇಲಾಖೆ ಫಲಿತಾಂಶ ವೃದ್ಧಿಸುವನಿಟ್ಟಿನಲ್ಲಿ ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿತ್ತು. ಮಳೆಗಾಲದಲ್ಲಿ ಧಾರಾಕಾರ ಮಳೆ ಯಿಂದಾಗಿ ಈಬಾರಿ ಹೆಚ್ಚು ರಜೆಗಳನ್ನು ನೀಡ ಲಾಗಿತ್ತಾದರೂ ಶನಿವಾರಗಳಂದು ಪೂರ್ಣ ತರಗತಿಗಳನ್ನು ನಡೆಸುವ ಮೂಲಕ ಅದನ್ನು ಸರಿದೂಗಿಸಿಕೊಳ್ಳಲಾಗಿತ್ತು.

೨ ಬಾರಿ ಪ್ರಿಪರೇಟರಿ, ಕಲಿಕಾ ಆಧಾರದ ಮೇಲೆ ಹೆಚ್ಚಿನ ಒತ್ತು ನೀಡಿ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಅಣಿಗೊಳಿಸಿದ ಪರಿಣಾಮ ಜಿಲ್ಲೆ ಈ ಬಾರಿ ಕಳೆದ ಸಲಕ್ಕಿಂತ ಹೆಚ್ಚಿನ ಫಲಿತಾಂಶ ಪಡೆದುಕೊಂಡಿದೆ. ಕಳೆದ ಬಾರಿ ಶೇ.೮೨ರಷ್ಟು ಫಲಿತಾಂಶ ಪಡೆದು ರಾಜ್ಯದಲ್ಲಿ ೪ನೇ ಸ್ಥಾನ ಪಡೆದಿದ್ದ ಜಿಲ್ಲೆ ಈಬಾರಿ ಶೇ.೧೪.೫೪ರಷ್ಟು ಫಲಿತಾಂಶ ವೃದ್ಧಿಸಿಕೊಂಡಿದೆ.

ಆದರೆ ಇತರೆ ಜಿಲ್ಲೆಗಳಲ್ಲಿ ಇನ್ನೂ ಹೆಚ್ಚಿನ ಫಲಿತಾಂಶ ಸಿಕ್ಕಿರುವ ಹಿನ್ನೆಲೆಯಲ್ಲಿ ಜಿಲ್ಲೆಗೆ ೮ನೇ ಸ್ಥಾನ ಲಭಿಸಿದೆ. ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿದ್ದ ೨,೯೦೪ ವಿದ್ಯಾರ್ಥಿಗಳಲ್ಲಿ ೨,೭೭೬ ಮಂದಿ ಉತ್ತೀರ್ಣರಾಗಿ ಶೇ.೯೫.೫೯ ಫಲಿತಾಂಶ ಪಡೆದಿದ್ದಾರೆ. ಪರೀಕ್ಷೆ ಬರೆದಿದ್ದ ಒಟ್ಟು ೩,೦೪೪ ವಿದ್ಯಾರ್ಥಿನಿಯರಲ್ಲಿ ೨,೯೬೬ ಮಂದಿ ಉತ್ತೀರ್ಣರಾಗಿ ಶೇ.೯೭.೪೪ ರಷ್ಟು ಫಲಿತಾಂಶ ಪಡೆದಿದ್ದಾರೆ. ಶೈಕ್ಷಣಿಕ ತಾಲ್ಲೂಕುವಾರು ಫಲಿತಾಂಶ ಗಮನಿಸಿದರೆ ಸೋಮವಾರಪೇಟೆ ತಾಲ್ಲೂಕಿಗೆ ಅತಿ ಹೆಚ್ಚು ಫಲಿತಾಂಶ ಬಂದಿದೆ. ಮಡಿಕೇರಿ ತಾಲ್ಲೂಕು ಶೇ.೯೫.೩೫, ಸೋಮವಾರಪೇಟೆ ಶೇ.೯೭.೫೦, ವಿರಾಜಪೇಟೆ ಶೇ.೯೬.೨೫ ರಷ್ಟು ಫಲಿತಾಂಶ ಪಡೆದುಕೊಂಡಿದೆ.

” ಎಸ್ಸೆಸ್ಸೆಲ್ಸಿ ಪರೀಕ್ಷೆಯ ಒಟ್ಟು ೬೨೫ ಅಂಕಗಳಿಗೆ ೬೨೧ ಅಂಕಗಳನ್ನು ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರು ಗಳಿಸಿ, ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ನಗರದ ಸಂತ ಜೋಸೆಫರ ಸಂಯುಕ್ತ ಪ್ರೌಢ ಶಾಲೆಯ ಟಿ.ಟಿ.ಲಿನ್ಸಿ ದೇಚಮ್ಮ ಅವರು ೬೨೧ ಹಾಗೂ ಕೊಡಗರಹಳ್ಳಿಯ ಶಾಂತಿನಿಕೇತನ ಪ್ರೌಢ ಶಾಲೆಯ ಕೆ.ಐ.ಸಿಂಚನ ೬೨೧ ಅಂಕ ಪಡೆದಿದ್ದಾರೆ.ಉಳಿದಂತೆ ವಿರಾಜಪೇಟೆ ಸಂತ ಅನ್ನಮ್ಮ ಪ್ರೌಢ ಶಾಲೆಯ ಡೀನ್ ಸೆಲ್ವ ಡಿಸೋಜ ೬೨೦, ಸೋಮವಾರಪೇಟೆಯ ವಿಶ್ವಮಾನವ ಕುವೆಂಪು ಪ್ರೌಢ ಶಾಲೆಯ ಶಿವಾನಿ ಶಾರದಮಣಿ, ವಿರಾಜಪೇಟೆಯ ಕಾವೇರಿ ಪ್ರೌಢಶಾಲೆಯ ಯು.ಎಸ್.ಶ್ರೀವತ್ಸ, ಗೋಣಿಕೊಪ್ಪ ಕಳತ್ಮಾಡುವಿನ ಲಯನ್ಸ್ ಪ್ರೌಢಶಾಲೆಯ ಸಿದ್ಧಾರ್ಥ ಕಾವೇರಪ್ಪ ಇವರು ೬೧೯ ಅಂಕಪಡೆದಿದ್ದಾರೆ. ನಗರದ ಸಂತ ಜೋಸೆಫರ ಸಂಯುಕ್ತ ಪ್ರೌಢಶಾಲೆಯ ಕೆ.ಇ.ಸೋನಶ್ರೀ, ಗೋಣಿಕೊಪ್ಪ ಸೇಂಟ್ ಥಾಮಸ್ ಪ್ರೌಢಶಾಲೆಯ ನಮನ. ಈ ಇಬ್ಬರೂ ೬೧೮ ಅಂಕಪಡೆದಿದ್ದಾರೆ. ಸೋಮವಾರಪೇಟೆಯ ಅವರ್ ಲೇಡಿ ಆಫ್ ವಿಕ್ಟೋರಿಯಸ್ ಪ್ರೌಢಶಾಲೆಯ ತಾನ್ವಿ, ವಿರಾಜಪೇಟೆಯ ಶ್ರೀ ಕಾವೇರಿ ಪ್ರೌಢಶಾಲೆಯ ಮೊಹಮ್ಮದ್ ಶಿಫಾನ್, ಕೊಡಗರಳ್ಳಿಯ ಶಾಂತಿನಿಕೇತನ ಪ್ರೌಢಶಾಲೆಯ ರೆನಿತ್ ಈ ಮೂವರು ೬೧೭ ಅಂಕ ಪಡೆದಿದ್ದಾರೆ”

೮೪ ಪ್ರೌಢಶಾಲೆಗಳಿಗೆ ಶೇ.೧೦೦ ಫಲಿತಾಂಶ..!: 

ಜಿಲ್ಲೆಯ ೧೪೦ ಪ್ರೌಢಶಾಲೆಗಳಲ್ಲಿ ೮೪ ಶಾಲೆಗಳು ಶೇ.೧೦೦ ಫಲಿತಾಂಶ ಪಡೆದಿರುವುದು ವಿಶೇಷವಾಗಿದೆ. ಇದರಲ್ಲಿ ೪೭ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ೩೭ ಪ್ರೌಢ ಶಾಲೆಗಳು ಶೇ.೧೦೦ಫಲಿತಾಂಶ, ಅನು ದಾನಿತ ೪೦ ಪ್ರೌಢಶಾಲೆಗಳಲ್ಲಿ ೧೦ ಶಾಲೆಗಳು ಶೇ.೧೦೦ರಷ್ಟು, ಅನುದಾನ ರಹಿತ ೫೩ ಪ್ರೌಢ ಶಾಲೆಯಲ್ಲಿ ೩೭ ಪ್ರೌಢಶಾಲೆಗಳು ಶೇ.೧೦೦ರಷ್ಟು ಫಲಿತಾಂಶ ಪಡೆದಿವೆ.

” ನನಗಿಂತ ಹೆಚ್ಚು ಶಿಕ್ಷಕರು ಶ್ರಮಪಟ್ಟಿದ್ದಾರೆ. ನಾನು ಶಿಕ್ಷಕರು ಹೇಳಿದಂತೆ ಕೇಳಿ ನಡೆದುಕೊಂಡಿರುವೆ ಅಷ್ಟೇ. ರಿವಿಷನ್ ಸಮಯದಲ್ಲಿ ಸ್ವಲ್ಪ ಹೆಚ್ಚು ಓದಿದ್ದೆ. ಸೋಷಿಯಲ್ ಮೀಡಿಯಾದಿಂದ ದೂರ ಉಳಿದಿದ್ದೇನೆ. ಮಾಹಿತಿ ಮತ್ತು ಮನರಂಜನೆಗೆ ಯೂಟ್ಯೂಬ್ ನೋಡುತ್ತೇನೆ ಅಷ್ಟೇ.

-ಕೆ.ಐ.ಸಿಂಚನಾ, ಶಾಂತಿನಿಕೇತನ ಪ್ರೌಢಶಾಲೆ, ಕೊಡಗರಹಳ್ಳಿ 

” ಕಳೆದ ಬಾರಿ ಶೇ.೮೨ ರಷ್ಟು ಫಲಿತಾಂಶ ಪಡೆದು ಕೊಡಗು ಜಿಲ್ಲೆ ರಾಜ್ಯದಲ್ಲಿ ೪ನೇ ಸ್ಥಾನ ಪಡೆದಿತ್ತು. ಈ ಬಾರಿ ಸ್ಥಾನದಲ್ಲಿ ಬದಲಾವಣೆ ಕಂಡುಬಂದಿದ್ದರೂ ಕಳೆದಬಾರಿಗಿಂತ ಈ ಬಾರಿ ಶೇ.೧೪.೫೪ ರಷ್ಟು ಫಲಿತಾಂಶ ವೃದ್ಧಿಯಾಗಿದೆ.”

-ಬಸವರಾಜು, ಉಪನಿರ್ದೇಶಕ, ಶಾಲಾ ಶಿಕ್ಷಣ ಇಲಾಖೆ 

 

 

ಆಂದೋಲನ ಡೆಸ್ಕ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

51 mins ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

3 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

4 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

4 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

7 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

8 hours ago