Andolana originals

ಕೇರಳಕ್ಕೆ ನೂರಾರು ಟಿಪ್ಪರ್‌ಗಳಲ್ಲಿ ರಾಜ್ಯದ ಸಂಪತ್ತು ಸಾಗಣೆ

ಮಹೇಂದ್ರ ಹಸಗೂಲಿ

ಕಡಿವಾಣ ಹಾಕದಿದ್ದರೆ ರೈತಸಂಘ, ಕನ್ನಡಪರ ಸಂಘಟನೆಗಳು, ಜನಸಾಮಾನ್ಯರಿಂದ ಉಗ್ರ ಹೋರಾಟದ ಎಚ್ಚರಿಕೆ 

ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಕೇರಳ ನೋಂದಣಿಯ ಟಿಪ್ಪರ್‌ಗಳ ಸಂಚಾರ ಹೆಚ್ಚಿದ್ದು ಗಣಿಗಾರಿಕೆಯಲ್ಲಿ ಕೇರಳಿಗರ ಹಸ್ತಕ್ಷೇಪ ಹೆಚ್ಚಾಗುವ ಜತೆಗೆ ಬೆಳಿಗ್ಗೆಯಿಂದ ರಾತ್ರಿಯವರೆಗೂ ರಾಜಾರೋಷವಾಗಿ ಗುಂಡ್ಲುಪೇಟೆಯಿಂದ ಬಿಳಿಕಲ್ಲು, ಕರಿಕಲ್ಲು, ಕೆಂಪುಮಣ್ಣು ಸಾಗಣೆಯಾಗುತ್ತಿದ್ದರೂ ಗಣಿ ಇಲಾಖೆ, ಆರ್‌ಟಿಒ, ಪೊಲೀಸ್ ಇಲಾಖೆಗಳು ಕಣ್ಣುಮುಚ್ಚಿ ಕುಳಿತಿವೆ ಎಂಬ ಆರೋಪ ಕೇಳಿಬರುತ್ತಿದೆ.

ತಾಲ್ಲೂಕಿನ ಕೂತನೂರು ಗುಡ್ಡ, ಹಿರಿಕಾಟಿ, ರಂಗೂಪುರ, ಅರೇಪುರ, ತೆರಕಣಾಂಬಿ, ಮಡಹಳ್ಳಿ ಸುತ್ತಮುತ್ತ ಗಣಿಗಾರಿಕೆ ಎಗ್ಗಿಲ್ಲದೆ ನಡೆಯುತ್ತಿದೆ. ಕೇರಳ ಮೂಲದ ೧೮, ೨೦ ಚಕ್ರಗಳ ಟಿಪ್ಪರ್, ಕಂಟೇನರ್‌ನಂತಹ ವಾಹನಗಳ ಸಂಚಾರದಿಂದ ತಾಲ್ಲೂಕಿನ ಸ್ಥಳೀಯ ಟಿಪ್ಪರ್ ಮಾಲೀಕರಿಗೆ ಅವಕಾಶವಿಲ್ಲವಾಗಿದೆ. ಚಿಕ್ಕ ಟಿಪ್ಪರ್‌ನಲ್ಲಿ ಮೂರು ಬಾರಿ ಸಂಚರಿಸುವ ಬದಲು ಒಮ್ಮೆ ಇಪ್ಪತ್ತು ಚಕ್ರಗಳ ಲಾರಿಯಲ್ಲಿ ಸಾಗಿಸಬಹುದು ಎಂಬ ದುರಾಸೆ ಗಣಿ ಮಾಲೀಕರಲ್ಲಿ ತುಂಬಿದೆ ಎಂಬುದು ಸಾರ್ವಜನಿಕರ ಆರೋಪ.

ಗಣಿಗಾರಿಕೆ ಅವ್ಯಾಹತವಾಗಿ ನಡೆಯುತ್ತಿದ್ದರೂ ಎಷ್ಟು ಪ್ರಮಾಣದಲ್ಲಿ ರಾಜಧನ ಕಟ್ಟುತ್ತಾರೆ? ಎಷ್ಟು ವಂಚಿಸುತ್ತಿದ್ದಾರೆ? ಯಾವ ರೀತಿಯ ಸುರಕ್ಷತಾ ಕ್ರಮ ಕೈಗೊಂಡಿದ್ದಾರೆ ಎಂಬ ಬಗ್ಗೆ ಗಣಿ ಇಲಾಖೆ ಕ್ರಮ ವಹಿಸದೆ ಮೌನವಾಗಿದೆ ಎನ್ನುವುದು ಹಲವರ ಆರೋಪ.

ರಾಜಾರೋಷವಾಗಿ ಕೇರಳಕ್ಕೆ ಕಂಟೇನರ್, ಟಿಪ್ಪರ್‌ಗಳಲ್ಲಿ ಕಲ್ಲು, ಮಣ್ಣು ಸಾಗಣೆಯಾಗುವುದರ ಹಿಂದೆ ಕೇರಳ ರಾಜಕಾರಣಿಗಳ ಕೈವಾಡವಿರಬಹುದು. ಅಧಿಕಾರಿಗಳ ಮೇಲೆ ಒತ್ತಡ ಹಾಕುವ ಮೂಲಕ ತಾಲ್ಲೂಕಿನಿಂದ ಕಲ್ಲು, ಮಣ್ಣು ಸಾಗಣೆ ಮಾಡಲಾಗುತ್ತಿದೆ ಎಂದು ರೈತ ಮುಖಂಡ ಹೊನ್ನೂರು ಪ್ರಕಾಶ್ ಆರೋಪಿಸಿದ್ದಾರೆ.

”  ಗಣಿಗಾರಿಕೆಯಿಂದ ಬೆಟ್ಟಗುಡ್ಡ ಸಂಪೂರ್ಣ ನಾಶವಾಗುತ್ತಿದ್ದು, ನಮ್ಮ ರಾಜ್ಯದ ಸಂಪತ್ತನ್ನು ರಕ್ಷಿಸಿಕೊಳ್ಳುವ ಹಕ್ಕು ನಮ್ಮೆಲ್ಲರ ಮೇಲಿದೆ. ಜನರೇ ರೊಚ್ಚಿಗೆದ್ದು ಅಕ್ರಮ ದಂಧೆಕೋರರಿಗೆ ಬುದ್ಧಿ ಕಲಿಸಬೇಕಿದೆ. ಕೇರಳಕ್ಕೆ ನಮ್ಮ ಸಂಪತ್ತು ಲೂಟಿಯಾಗುತ್ತಿದ್ದು, ನಮ್ಮವರೇ ಕೇರಳದವರೊಡನೆ ಶಾಮೀಲಾಗಿ ಮಾರಿಕೊಳ್ಳುತ್ತಿದ್ದಾರೆ. ಇದರ ವಿರುದ್ಧ ಶೀಘ್ರವೇ ಉಗ್ರ ಹೋರಾಟ ಕೈಗೊಳ್ಳಲಾಗುವುದು.”

-ಹೊನ್ನೂರು ಪ್ರಕಾಶ್, ರೈತ ಮುಖಂಡ 

” ಈ ಬಗ್ಗೆ ಆರ್‌ಟಿಒ ಅಧಿಕಾರಿಗಳು ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಡಿಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಮಾತನಾಡುತ್ತೇನೆ. ಅಕ್ರಮವಾಗಿ ಹಾಗೂ ದಾಖಲಾತಿ ಇಲ್ಲದೆ ಓವರ್ ಲೋಡ್ ಹಾಗೂ ವ್ಯಾಪ್ತಿಗೆ ಒಳಪಡದ ರಸ್ತೆಯಲ್ಲಿ ಸಂಚರಿಸಿದರೆ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚಿಸಲಾಗುವುದು.”

ಶ್ರೀರೂಪ, ಜಿಲ್ಲಾಧಿಕಾರಿ

” ಗುಂಡ್ಲುಪೇಟೆಯಲ್ಲಿ ಟ್ರಾಫಿಕ್ ಪೊಲೀಸ್ ಠಾಣೆ ತೆರೆದರೆ ಇದಕ್ಕೆ ಕಡಿವಾಣ ಬೀಳಲಿದೆ. ಆದರೂ ಈ ವಿಚಾರದಲ್ಲಿ ಆರ್‌ಟಿಇಒ, ಗಣಿ, ಭೂ ವಿಜ್ಞಾನ ಇಲಾಖೆಯವರು ಕ್ರಮ ಕೈಗೊಳ್ಳಬೇಕು. ನಾವು ನಂಬರ್‌ಪ್ಲೇಟ್ ಇಲ್ಲದಿದ್ದರೆ ಹಾಗೂ ಅತಿ ವೇಗದ ಚಾಲನೆ ಮಾಡಿದರೆ ಮಾತ್ರ ಕ್ರಮ ಕೈಗೊಳ್ಳಬಹುದು.”

ಮುತ್ತುರಾಜ್, ಡಿವೈಎಸ್‌ಪಿ

 

 

ಆಂದೋಲನ ಡೆಸ್ಕ್

Recent Posts

ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳಿಗೆ ವಾಹನ ಚಾಲನೆ ಅಪಾಯ

ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ ೧೮ರ ಬುಧವಾರ ಆರಂಭವಾಗಿದೆ. ಅಂದು ಬಹುತೇಕ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸಮವಸ್ತ್ರ…

2 hours ago

ಯುಗಾದಿ; ಹೊನ್ನೇರು ಕಟ್ಟಿ ಸಂಭ್ರಮಿಸಿದ ರೈತರು

ಭೇರ್ಯ ಮಹೇಶ್ ಕೆ.ಆರ್.ನಗರ: ಯುಗಾದಿ ಹಬ್ಬದ ಅಂಗವಾಗಿ ಕೆ.ಆರ್.ನಗರ ಮತ್ತು ಸಾಲಿ ಗ್ರಾಮ ಅವಳಿ ತಾಲ್ಲೂಕುಗಳ ಹಲವೆಡೆ ರೈತರು ಸಂಭ್ರಮದಿಂದ…

2 hours ago

ರಸ್ತೆಯ ಮೇಲೆ ಹರಿಯುವ ಒಳಚರಂಡಿ ನೀರಿಂದ ಅನೈರ್ಮಲ್ಯ

ಎಂ.ನಾರಾಯಣ ತಿ.ನರಸೀಪುರ: ಪುರಸಭಾ ಅಧಿಕಾರಿಗಳ ನಿರ್ಲಕ್ಷ್ಯದಿಂದ ಒಳಚರಂಡಿಯ ನೀರು ರಸ್ತೆಯ ಮೇಲೆ ಹರಿದು ಮನೆ ಮುಂಭಾಗ ದುರ್ನಾತ ಬೀರುತ್ತಾ ಅನೈರ್ಮಲ್ಯ…

2 hours ago

ಏ.೧೦ರಿಂದ ವಸ್ತು ಪ್ರದರ್ಶನದಲ್ಲಿ ಬೇಸಿಗೆ ಮೇಳ

ದಿನೇಶ್‌ಕುಮಾರ್ ಹೆಚ್.ಎಸ್ ಮೈಸೂರು: ಶಾಲಾ-ಕಾಲೇಜುಗಳಿಗೆ ಬೇಸಿಗೆ ರಜೆ ಬರುತ್ತಿರುವ ಹಿನ್ನೆಲೆಯಲ್ಲಿ ಏ.೧೦ ರಿಂದ ಮೇ ೩೦ರವರೆಗೆ ೫೦ ದಿನಗಳ ಕಾಲ…

2 hours ago

ಪಾಳು ಬಿದ್ದ ಪಾರ್ಕ್.. ಶುಚಿ ಇಲ್ಲದ ಶೌಚಾಲಯ..

ಕಸ, ಕೊಳಚೆ ಮತ್ತು ಕಟ್ಟಡ ತ್ಯಾಜ್ಯದಿಂದ ವಾಯುವಿಹಾರಿಗಳಿಗೆ ತೊಂದರೆ  ಮೈಸೂರು: ನಗರದ ಸರಸ್ವತಿಪುರಂನ ವಾರ್ಡ್ ಸಂಖ್ಯೆ ೨೧ರಲ್ಲಿ ಇರುವ ಪಾರ್ಕ್…

2 hours ago

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ಇಬ್ಬರ ರಕ್ಷಣೆ

ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…

15 hours ago