Andolana originals

ಕೇರಳಕ್ಕೆ ನೂರಾರು ಟಿಪ್ಪರ್‌ಗಳಲ್ಲಿ ರಾಜ್ಯದ ಸಂಪತ್ತು ಸಾಗಣೆ

ಮಹೇಂದ್ರ ಹಸಗೂಲಿ

ಕಡಿವಾಣ ಹಾಕದಿದ್ದರೆ ರೈತಸಂಘ, ಕನ್ನಡಪರ ಸಂಘಟನೆಗಳು, ಜನಸಾಮಾನ್ಯರಿಂದ ಉಗ್ರ ಹೋರಾಟದ ಎಚ್ಚರಿಕೆ 

ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಕೇರಳ ನೋಂದಣಿಯ ಟಿಪ್ಪರ್‌ಗಳ ಸಂಚಾರ ಹೆಚ್ಚಿದ್ದು ಗಣಿಗಾರಿಕೆಯಲ್ಲಿ ಕೇರಳಿಗರ ಹಸ್ತಕ್ಷೇಪ ಹೆಚ್ಚಾಗುವ ಜತೆಗೆ ಬೆಳಿಗ್ಗೆಯಿಂದ ರಾತ್ರಿಯವರೆಗೂ ರಾಜಾರೋಷವಾಗಿ ಗುಂಡ್ಲುಪೇಟೆಯಿಂದ ಬಿಳಿಕಲ್ಲು, ಕರಿಕಲ್ಲು, ಕೆಂಪುಮಣ್ಣು ಸಾಗಣೆಯಾಗುತ್ತಿದ್ದರೂ ಗಣಿ ಇಲಾಖೆ, ಆರ್‌ಟಿಒ, ಪೊಲೀಸ್ ಇಲಾಖೆಗಳು ಕಣ್ಣುಮುಚ್ಚಿ ಕುಳಿತಿವೆ ಎಂಬ ಆರೋಪ ಕೇಳಿಬರುತ್ತಿದೆ.

ತಾಲ್ಲೂಕಿನ ಕೂತನೂರು ಗುಡ್ಡ, ಹಿರಿಕಾಟಿ, ರಂಗೂಪುರ, ಅರೇಪುರ, ತೆರಕಣಾಂಬಿ, ಮಡಹಳ್ಳಿ ಸುತ್ತಮುತ್ತ ಗಣಿಗಾರಿಕೆ ಎಗ್ಗಿಲ್ಲದೆ ನಡೆಯುತ್ತಿದೆ. ಕೇರಳ ಮೂಲದ ೧೮, ೨೦ ಚಕ್ರಗಳ ಟಿಪ್ಪರ್, ಕಂಟೇನರ್‌ನಂತಹ ವಾಹನಗಳ ಸಂಚಾರದಿಂದ ತಾಲ್ಲೂಕಿನ ಸ್ಥಳೀಯ ಟಿಪ್ಪರ್ ಮಾಲೀಕರಿಗೆ ಅವಕಾಶವಿಲ್ಲವಾಗಿದೆ. ಚಿಕ್ಕ ಟಿಪ್ಪರ್‌ನಲ್ಲಿ ಮೂರು ಬಾರಿ ಸಂಚರಿಸುವ ಬದಲು ಒಮ್ಮೆ ಇಪ್ಪತ್ತು ಚಕ್ರಗಳ ಲಾರಿಯಲ್ಲಿ ಸಾಗಿಸಬಹುದು ಎಂಬ ದುರಾಸೆ ಗಣಿ ಮಾಲೀಕರಲ್ಲಿ ತುಂಬಿದೆ ಎಂಬುದು ಸಾರ್ವಜನಿಕರ ಆರೋಪ.

ಗಣಿಗಾರಿಕೆ ಅವ್ಯಾಹತವಾಗಿ ನಡೆಯುತ್ತಿದ್ದರೂ ಎಷ್ಟು ಪ್ರಮಾಣದಲ್ಲಿ ರಾಜಧನ ಕಟ್ಟುತ್ತಾರೆ? ಎಷ್ಟು ವಂಚಿಸುತ್ತಿದ್ದಾರೆ? ಯಾವ ರೀತಿಯ ಸುರಕ್ಷತಾ ಕ್ರಮ ಕೈಗೊಂಡಿದ್ದಾರೆ ಎಂಬ ಬಗ್ಗೆ ಗಣಿ ಇಲಾಖೆ ಕ್ರಮ ವಹಿಸದೆ ಮೌನವಾಗಿದೆ ಎನ್ನುವುದು ಹಲವರ ಆರೋಪ.

ರಾಜಾರೋಷವಾಗಿ ಕೇರಳಕ್ಕೆ ಕಂಟೇನರ್, ಟಿಪ್ಪರ್‌ಗಳಲ್ಲಿ ಕಲ್ಲು, ಮಣ್ಣು ಸಾಗಣೆಯಾಗುವುದರ ಹಿಂದೆ ಕೇರಳ ರಾಜಕಾರಣಿಗಳ ಕೈವಾಡವಿರಬಹುದು. ಅಧಿಕಾರಿಗಳ ಮೇಲೆ ಒತ್ತಡ ಹಾಕುವ ಮೂಲಕ ತಾಲ್ಲೂಕಿನಿಂದ ಕಲ್ಲು, ಮಣ್ಣು ಸಾಗಣೆ ಮಾಡಲಾಗುತ್ತಿದೆ ಎಂದು ರೈತ ಮುಖಂಡ ಹೊನ್ನೂರು ಪ್ರಕಾಶ್ ಆರೋಪಿಸಿದ್ದಾರೆ.

”  ಗಣಿಗಾರಿಕೆಯಿಂದ ಬೆಟ್ಟಗುಡ್ಡ ಸಂಪೂರ್ಣ ನಾಶವಾಗುತ್ತಿದ್ದು, ನಮ್ಮ ರಾಜ್ಯದ ಸಂಪತ್ತನ್ನು ರಕ್ಷಿಸಿಕೊಳ್ಳುವ ಹಕ್ಕು ನಮ್ಮೆಲ್ಲರ ಮೇಲಿದೆ. ಜನರೇ ರೊಚ್ಚಿಗೆದ್ದು ಅಕ್ರಮ ದಂಧೆಕೋರರಿಗೆ ಬುದ್ಧಿ ಕಲಿಸಬೇಕಿದೆ. ಕೇರಳಕ್ಕೆ ನಮ್ಮ ಸಂಪತ್ತು ಲೂಟಿಯಾಗುತ್ತಿದ್ದು, ನಮ್ಮವರೇ ಕೇರಳದವರೊಡನೆ ಶಾಮೀಲಾಗಿ ಮಾರಿಕೊಳ್ಳುತ್ತಿದ್ದಾರೆ. ಇದರ ವಿರುದ್ಧ ಶೀಘ್ರವೇ ಉಗ್ರ ಹೋರಾಟ ಕೈಗೊಳ್ಳಲಾಗುವುದು.”

-ಹೊನ್ನೂರು ಪ್ರಕಾಶ್, ರೈತ ಮುಖಂಡ 

” ಈ ಬಗ್ಗೆ ಆರ್‌ಟಿಒ ಅಧಿಕಾರಿಗಳು ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಡಿಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಮಾತನಾಡುತ್ತೇನೆ. ಅಕ್ರಮವಾಗಿ ಹಾಗೂ ದಾಖಲಾತಿ ಇಲ್ಲದೆ ಓವರ್ ಲೋಡ್ ಹಾಗೂ ವ್ಯಾಪ್ತಿಗೆ ಒಳಪಡದ ರಸ್ತೆಯಲ್ಲಿ ಸಂಚರಿಸಿದರೆ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚಿಸಲಾಗುವುದು.”

ಶ್ರೀರೂಪ, ಜಿಲ್ಲಾಧಿಕಾರಿ

” ಗುಂಡ್ಲುಪೇಟೆಯಲ್ಲಿ ಟ್ರಾಫಿಕ್ ಪೊಲೀಸ್ ಠಾಣೆ ತೆರೆದರೆ ಇದಕ್ಕೆ ಕಡಿವಾಣ ಬೀಳಲಿದೆ. ಆದರೂ ಈ ವಿಚಾರದಲ್ಲಿ ಆರ್‌ಟಿಇಒ, ಗಣಿ, ಭೂ ವಿಜ್ಞಾನ ಇಲಾಖೆಯವರು ಕ್ರಮ ಕೈಗೊಳ್ಳಬೇಕು. ನಾವು ನಂಬರ್‌ಪ್ಲೇಟ್ ಇಲ್ಲದಿದ್ದರೆ ಹಾಗೂ ಅತಿ ವೇಗದ ಚಾಲನೆ ಮಾಡಿದರೆ ಮಾತ್ರ ಕ್ರಮ ಕೈಗೊಳ್ಳಬಹುದು.”

ಮುತ್ತುರಾಜ್, ಡಿವೈಎಸ್‌ಪಿ

 

 

ಆಂದೋಲನ ಡೆಸ್ಕ್

Recent Posts

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

2 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

2 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

2 hours ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

2 hours ago

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

11 hours ago