Andolana originals

ಕುಶಾಲನಗರ ನೀರಿನ ಸಮಸ್ಯೆ ಪರಿಹರಿಸಲು ಕ್ರಮ

40 ಕೋಟಿ ರೂ. ವೆಚ್ಚದಲ್ಲಿ ಯೋಜನೆ; ಪುರಸಭಾ ವ್ಯಾಪ್ತಿಯ ವಾರ್ಡ್‌ಗಳಿಗೆ ನೀರು ಪೂರೈಕೆಗೆ ಕ್ರಮ

-ಕೆ.ಬಿ. ಶಂಷುದ್ದೀನ್

ಕುಶಾಲನಗರ: ಪುರಸಭೆ ವ್ಯಾಪ್ತಿಯ ಕುಡಿಯುವ ನೀರಿನ ಕೊರತೆ ನೀಗಿಸುವ ನಿಟ್ಟಿನಲ್ಲಿ ಅಮೃತ್ 2.0 ಯೋಜನೆಯಡಿ 40 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದ್ದು, ಶೀಘ್ರದಲ್ಲೇ ಕುಶಾಲನಗರ ಪಟ್ಟಣದ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ.

ಕುಶಾಲನಗರ ಪುರಸಭೆಯ ವ್ಯಾಪ್ತಿಯ ಎಲ್ಲಾ ವಾರ್ಡ್‌ಗಳಿಗೆ ಹಂತಹಂತವಾಗಿ ಕುಡಿಯುವ ನೀರನ್ನು ಸರಬರಾಜು ವ್ಯವಸ್ಥೆ ಮಾಡಲು ಬೃಹತ್ ಪೈಪ್‌ಲೈನ್ ಕಾಮಗಾರಿ ಆರಂಭವಾಗಿದೆ. ಮಡಿಕೇರಿ ಕ್ಷೇತ್ರದ ಶಾಸಕಡಾ. ಮಂಥರ್ ಗೌಡ ಅವರ ಹೊಸ ಚಿಂತನೆಯೊಂದಿಗೆ ಕೂಡಿಗೆಯಲ್ಲಿ ಕಾವೇರಿ-ಹಾರಂಗಿ ನದಿ ಸಂಗಮವಾಗುವ ಸ್ಥಳದಿಂದ ನೂತನ, ತಂತ್ರಜ್ಞಾನದ ಯಂತ್ರಗಳ ಬಳಕೆ ಮೂಲಕ ನೀರನ್ನು ತೆಗೆದು ಕುಶಾಲನಗರ ಪುರಸಭೆ ವ್ಯಾಪ್ತಿಯ ಎಲ್ಲಾ ವಾರ್ಡ್‌ಗಳಿಗೆ ಕುಡಿಯುವ ನೀರನ್ನು ಒದಗಿಸುವ ಯೋಜನೆ ಇದಾಗಿದೆ.

ಕುಶಾಲನಗರ ಪಟ್ಟಣ ವ್ಯಾಪ್ತಿಯ ಕರ್ನಾಟಕ ನೀರು ಸರಬರಾಜು, ಒಳಚರಂಡಿ ಮಂಡಳಿಯ ವತಿಯಿಂದ ಅನೇಕ ವರ್ಷಗಳಿಂದಲೂ ನಗರಕ್ಕೆ ಕುಡಿಯುವ ನೀರಿನ ಸರಬರಾಜು ವ್ಯವಸ್ಥೆ ಮಾಡಲಾಗುತ್ತಿದೆ. ಆದರೆ ಬೇಸಿಗೆ ಸಂದರ್ಭ ಕಾವೇರಿ ನದಿಯ ನೀರು ಕಡಿಮೆಯಾಗಿ ಕುಡಿಯುವ ನೀರಿನ ಸಮಸ್ಯೆ ಆಗುತ್ತಿರುವುದನ್ನು ತಪ್ಪಿಸಲು ಈ ಯೋಜನೆ ರೂಪಿಸಲಾಗಿದೆ.

ಹಾರಂಗಿಯಿಂದ ಕುಶಾಲನಗರಕ್ಕೆ ಕುಡಿಯುವ ನೀರಿನ ಸರಬರಾಜು ಬಗ್ಗೆ ಅನೇಕ ಸಲಹೆಗಳು ಬಂದರೂ ಕುಶಾಲನಗರ ಪುರಸಭೆ ವ್ಯಾಪ್ತಿಗೆ ಹತ್ತಿರ ಮತ್ತು ವರ್ಷಪೂರ್ತಿ ನದಿಯಲ್ಲಿ ನೀರು ಇರುವ ಸ್ಥಳವಾಗಿರುವ ಕೂಡಿಗೆಯ ಸಂಗಮದಿಂದ ಕುಡಿಯುವ ನೀರನ್ನು ಸರಬರಾಜು ಮಾಡಲು ಚಿಂತನೆ ನಡೆಸಲಾಗಿದೆ.

ಈಗಾಗಲೇ ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮೂಲಕ ಸಂಬಂಧಿಸಿದ ಜಾಗದ ಪರಿಶೀಲನೆ, ಮತ್ತು ಅದಕ್ಕೆ ಸಂಬಂಧಿಸಿದ ಕ್ರಿಯಾ ಯೋಜನೆಯ ಅಂದಾಜು ಪಟ್ಟಿಯು 40 ಕೋಟಿ ರೂ. ವೆಚ್ಚದಲ್ಲಿ ಸಿದ್ಧವಾಗಿದೆ. ಟೆಂಡರ್ ಪ್ರಕ್ರಿಯೆ ಕೂಡ ಪೂರ್ಣಗೊಂಡಿದ್ದು, ಸಂಗಮದಿಂದ ಹಾಸನ-ಕೂಡಿಗೆ ಹೆದ್ದಾರಿ ಅಂಚಿನಲ್ಲಿ ಬೃಹತ್ ಗಾತ್ರದ ಪೈಪ್‌ಲೈನ್ ಅಳವಡಿಕೆ ಕಾಮಗಾರಿ ಆರಂಭಗೊಂಡಿದೆ.

ಕುಶಾಲನಗರದ ಜಲಗಾರದ ಶುದ್ಧೀಕರಣ ಕೇಂದ್ರದ ಆವರಣದಲ್ಲಿ ಈಗಾಗಲೇ 10 ಲಕ್ಷ ಲೀಟರ್ ನೀರು ಸಂಗ್ರಹಣಾ ಸಾಮರ್ಥ್ಯದ ಟ್ಯಾಂಕ್ ನಿರ್ಮಾಣ ಕಾರ್ಯವು ಪೂರ್ಣಗೊಂಡಿದ್ದು, ಮುಂದಿನ ಹಂತದ ಕಾಮಗಾರಿಯು ಭರದಿಂದ ಸಾಗುತ್ತಿದೆ.

ಅಮೃತ್ 2.0 ಯೋಜನೆಯ ಅಡಿಯಲ್ಲಿ ಶಾಶ್ವತ ಕುಡಿಯುವ ನೀರನ್ನು ಕಲ್ಪಿಸುವ ಯೋಜನೆ ರೂಪಿಸಲಾಗಿದೆ. ಕಾವೇರಿ-ಹಾರಂಗಿ ನದಿ ಸಂಗಮದಿಂದ ಕೂಡಿಗೆ, ಕೂಡುಮಂಗಳೂರು, ಕೂಡ್ಲೂರು, ಗುಮ್ಮನಕೊಲ್ಲಿ, ಮುಳ್ಳುಸೋಗೆ ಮಾರ್ಗದ ಮೂಲಕ ಪೈಪ್ ಜೋಡಣೆ ಮಾಡಲಾಗುತ್ತದೆ. ಗುಮ್ಮನಕೊಲ್ಲಿ ಗ್ರಾಮದ ಮೂಲಕ ಕುಶಾಲನಗರದ ಹೃದಯ ಭಾಗದಲ್ಲಿರುವ ಕರ್ನಾಟಕ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಬೃಹತ್ ಟ್ಯಾಂಕ್‌ಗೆ ನೀರನ್ನು ಸರಬರಾಜು ಮಾಡಲಾಗುತ್ತದೆ. ಟ್ಯಾಂಕ್‌ನಿಂದ ಪೈಪ್‌ಗಳ ಜೋಡಣೆ ಮೂಲಕ ಪುರಸಭೆಯ ಎಲ್ಲಾ ವಾರ್ಡ್‌ಗಳಿಗೆ ಸಮರ್ಪಕವಾಗಿ ನೀರನ್ನು ಸರಬರಾಜು ಮಾಡುವ ವ್ಯವಸ್ಥೆ ಮಾಡಲಾಗುತ್ತಿದೆ.

ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುತ್ತಿತ್ತು. ಇದೀಗ 40 ಕೋಟಿ ರೂ. ವೆಚ್ಚದಲ್ಲಿ ಶಾಶ್ವತ ಕುಡಿಯುವ ನೀರಿನ ಯೋಜನೆ ಪ್ರಗತಿಯಲ್ಲಿದೆ. ಎರಡು ವರ್ಷಗಳ ಒಳಗಾಗಿ ಕಾಮಗಾರಿ ಪೂರ್ಣಗೊಳ್ಳಲಿದ್ದು, ಕಾಮಗಾರಿ ಪೂರ್ಣಗೊಂಡ ನಂತರ ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವುದಿಲ್ಲ.

-ಜಯಲಕ್ಷ್ಮಿಚಂದ್ರು, ಅಧ್ಯಕ್ಷರು, ಕುಶಾಲನಗರ ಪುರಸಭೆ.

ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ 40 ಕೋಟಿ ರೂ. ವೆಚ್ಚದಲ್ಲಿ ಶಾಶ್ವತ ಕುಡಿಯುವ ನೀರಿನ ಕಾಮಗಾರಿ
ನಡೆಸಲಾಗುತ್ತಿದೆ. ಈಗಾಗಲೇ ಶೇ.40ರಷ್ಟು ಕಾಮಗಾರಿ ಮುಗಿದಿದೆ. 2026ರ ಒಳಗಾಗಿ ಕಾಮಗಾರಿ ಪೂರ್ಣಗೊಳಿಸಲಾಗುವುದು.

-ಅಭಿಷೇಕ್, ಸಹಾಯಕ ಅಭಿಯಂತರರು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ.

 

ಆಂದೋಲನ ಡೆಸ್ಕ್

Recent Posts

ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ಇಲ್ಲ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ…

2 mins ago

ಪೆಟ್ರೋಲ್‌ ಖಾಲಿ ವದಂತಿ: ಬಂಕ್‌ಗಳಿಗೆ ಮುಗಿಬಿದ್ದ ಜನತೆ

ಚಾಮರಾಜನಗರ: ಇರಾನ್‌-ಇಸ್ರೇಲ್‌ ನಡುವಿನ ಸಂಘರ್ಷ ಮುಂದುವರಿದಿದ್ದು, ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿರುವ ಪರಿಣಾಮ ಸೋಷಿಯಲ್‌ ಮೀಡಿಯಾದಲ್ಲಿ ಪೆಟ್ರೋಲ್‌, ಡೀಸೆಲ್‌…

19 mins ago

ನಂಜನಗೂಡು| ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ

ನಂಜನಗೂಡು: ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ನಂಜನಗೂಡು ತಾಲ್ಲೂಕಿನ ಹನುಮನಪುರ…

28 mins ago

ಇರಾನ್‌ ಜೊತೆ ಕದನ ವಿರಾಮ ಇಲ್ಲ: ಡೊನಾಲ್ಡ್‌ ಟ್ರಂಪ್‌ ಸ್ಪಷ್ಟನೆ

ವಾಷಿಂಗ್ಟನ್:‌ ಇರಾನ್‌ ಜೊತೆ ಕದನ ವಿರಾಮ್‌ ಮಾಡಿಕೊಳ್ಳಲು ಬಯಸಲ್ಲ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ. NATO ಮಿತ್ರರಾಷ್ಟ್ರಗಳನ್ನು…

1 hour ago

ಓದುಗರ ಪತ್ರ: ನಗುಮೊಗದ ಮೌನ ಸಾಧಕ!

ದಣಿವರಿಯದೆ ದುಡಿದಿರಿ ಆರೋಗ್ಯ ಶಿಕ್ಷಣ ಕ್ಷೇತ್ರಗಳಲಿ ಉಸಿರಾಗಿತ್ತು ನಿಮಗೆ ಸಮಾಜಸೇವೆ! ಧಿಕ್ಕರಿಸಿದಿರಿ ಮೌಢ್ಯಕಂದಾಚಾರಗಳ ಪ್ರೀತಿಸಿದಿರಿ ಎಲ್ಲರನೂ ಸಮಭಾವದಲಿ! ಮನಮಾಗಿದ ನಗುಮೊಗದ…

2 hours ago

ಓದುಗರ ಪತ್ರ: ಮಂಗನ ಕೈಗೆ ……….

ನಾರ್ತ್ ಅಟ್ಲಾಂಟಿಕ್ ಟ್ರೀಟಿ ಆರ್ಗನೈಸೇಶನ್ ( ನಾಟೋ) ದೇಶಗಳ ಗುಂಪಿಗೆ ಸೇರಿದ ಕೆನಡಾ, ಆಸ್ಟ್ರೇಲಿಯಾ, ಬ್ರಿಟನ್ ಮುಂತಾದ ದೇಶಗಳು ಇರಾನಿನ…

2 hours ago