Andolana originals

ಕುಶಾಲನಗರ ನೀರಿನ ಸಮಸ್ಯೆ ಪರಿಹರಿಸಲು ಕ್ರಮ

40 ಕೋಟಿ ರೂ. ವೆಚ್ಚದಲ್ಲಿ ಯೋಜನೆ; ಪುರಸಭಾ ವ್ಯಾಪ್ತಿಯ ವಾರ್ಡ್‌ಗಳಿಗೆ ನೀರು ಪೂರೈಕೆಗೆ ಕ್ರಮ

-ಕೆ.ಬಿ. ಶಂಷುದ್ದೀನ್

ಕುಶಾಲನಗರ: ಪುರಸಭೆ ವ್ಯಾಪ್ತಿಯ ಕುಡಿಯುವ ನೀರಿನ ಕೊರತೆ ನೀಗಿಸುವ ನಿಟ್ಟಿನಲ್ಲಿ ಅಮೃತ್ 2.0 ಯೋಜನೆಯಡಿ 40 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದ್ದು, ಶೀಘ್ರದಲ್ಲೇ ಕುಶಾಲನಗರ ಪಟ್ಟಣದ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ.

ಕುಶಾಲನಗರ ಪುರಸಭೆಯ ವ್ಯಾಪ್ತಿಯ ಎಲ್ಲಾ ವಾರ್ಡ್‌ಗಳಿಗೆ ಹಂತಹಂತವಾಗಿ ಕುಡಿಯುವ ನೀರನ್ನು ಸರಬರಾಜು ವ್ಯವಸ್ಥೆ ಮಾಡಲು ಬೃಹತ್ ಪೈಪ್‌ಲೈನ್ ಕಾಮಗಾರಿ ಆರಂಭವಾಗಿದೆ. ಮಡಿಕೇರಿ ಕ್ಷೇತ್ರದ ಶಾಸಕಡಾ. ಮಂಥರ್ ಗೌಡ ಅವರ ಹೊಸ ಚಿಂತನೆಯೊಂದಿಗೆ ಕೂಡಿಗೆಯಲ್ಲಿ ಕಾವೇರಿ-ಹಾರಂಗಿ ನದಿ ಸಂಗಮವಾಗುವ ಸ್ಥಳದಿಂದ ನೂತನ, ತಂತ್ರಜ್ಞಾನದ ಯಂತ್ರಗಳ ಬಳಕೆ ಮೂಲಕ ನೀರನ್ನು ತೆಗೆದು ಕುಶಾಲನಗರ ಪುರಸಭೆ ವ್ಯಾಪ್ತಿಯ ಎಲ್ಲಾ ವಾರ್ಡ್‌ಗಳಿಗೆ ಕುಡಿಯುವ ನೀರನ್ನು ಒದಗಿಸುವ ಯೋಜನೆ ಇದಾಗಿದೆ.

ಕುಶಾಲನಗರ ಪಟ್ಟಣ ವ್ಯಾಪ್ತಿಯ ಕರ್ನಾಟಕ ನೀರು ಸರಬರಾಜು, ಒಳಚರಂಡಿ ಮಂಡಳಿಯ ವತಿಯಿಂದ ಅನೇಕ ವರ್ಷಗಳಿಂದಲೂ ನಗರಕ್ಕೆ ಕುಡಿಯುವ ನೀರಿನ ಸರಬರಾಜು ವ್ಯವಸ್ಥೆ ಮಾಡಲಾಗುತ್ತಿದೆ. ಆದರೆ ಬೇಸಿಗೆ ಸಂದರ್ಭ ಕಾವೇರಿ ನದಿಯ ನೀರು ಕಡಿಮೆಯಾಗಿ ಕುಡಿಯುವ ನೀರಿನ ಸಮಸ್ಯೆ ಆಗುತ್ತಿರುವುದನ್ನು ತಪ್ಪಿಸಲು ಈ ಯೋಜನೆ ರೂಪಿಸಲಾಗಿದೆ.

ಹಾರಂಗಿಯಿಂದ ಕುಶಾಲನಗರಕ್ಕೆ ಕುಡಿಯುವ ನೀರಿನ ಸರಬರಾಜು ಬಗ್ಗೆ ಅನೇಕ ಸಲಹೆಗಳು ಬಂದರೂ ಕುಶಾಲನಗರ ಪುರಸಭೆ ವ್ಯಾಪ್ತಿಗೆ ಹತ್ತಿರ ಮತ್ತು ವರ್ಷಪೂರ್ತಿ ನದಿಯಲ್ಲಿ ನೀರು ಇರುವ ಸ್ಥಳವಾಗಿರುವ ಕೂಡಿಗೆಯ ಸಂಗಮದಿಂದ ಕುಡಿಯುವ ನೀರನ್ನು ಸರಬರಾಜು ಮಾಡಲು ಚಿಂತನೆ ನಡೆಸಲಾಗಿದೆ.

ಈಗಾಗಲೇ ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮೂಲಕ ಸಂಬಂಧಿಸಿದ ಜಾಗದ ಪರಿಶೀಲನೆ, ಮತ್ತು ಅದಕ್ಕೆ ಸಂಬಂಧಿಸಿದ ಕ್ರಿಯಾ ಯೋಜನೆಯ ಅಂದಾಜು ಪಟ್ಟಿಯು 40 ಕೋಟಿ ರೂ. ವೆಚ್ಚದಲ್ಲಿ ಸಿದ್ಧವಾಗಿದೆ. ಟೆಂಡರ್ ಪ್ರಕ್ರಿಯೆ ಕೂಡ ಪೂರ್ಣಗೊಂಡಿದ್ದು, ಸಂಗಮದಿಂದ ಹಾಸನ-ಕೂಡಿಗೆ ಹೆದ್ದಾರಿ ಅಂಚಿನಲ್ಲಿ ಬೃಹತ್ ಗಾತ್ರದ ಪೈಪ್‌ಲೈನ್ ಅಳವಡಿಕೆ ಕಾಮಗಾರಿ ಆರಂಭಗೊಂಡಿದೆ.

ಕುಶಾಲನಗರದ ಜಲಗಾರದ ಶುದ್ಧೀಕರಣ ಕೇಂದ್ರದ ಆವರಣದಲ್ಲಿ ಈಗಾಗಲೇ 10 ಲಕ್ಷ ಲೀಟರ್ ನೀರು ಸಂಗ್ರಹಣಾ ಸಾಮರ್ಥ್ಯದ ಟ್ಯಾಂಕ್ ನಿರ್ಮಾಣ ಕಾರ್ಯವು ಪೂರ್ಣಗೊಂಡಿದ್ದು, ಮುಂದಿನ ಹಂತದ ಕಾಮಗಾರಿಯು ಭರದಿಂದ ಸಾಗುತ್ತಿದೆ.

ಅಮೃತ್ 2.0 ಯೋಜನೆಯ ಅಡಿಯಲ್ಲಿ ಶಾಶ್ವತ ಕುಡಿಯುವ ನೀರನ್ನು ಕಲ್ಪಿಸುವ ಯೋಜನೆ ರೂಪಿಸಲಾಗಿದೆ. ಕಾವೇರಿ-ಹಾರಂಗಿ ನದಿ ಸಂಗಮದಿಂದ ಕೂಡಿಗೆ, ಕೂಡುಮಂಗಳೂರು, ಕೂಡ್ಲೂರು, ಗುಮ್ಮನಕೊಲ್ಲಿ, ಮುಳ್ಳುಸೋಗೆ ಮಾರ್ಗದ ಮೂಲಕ ಪೈಪ್ ಜೋಡಣೆ ಮಾಡಲಾಗುತ್ತದೆ. ಗುಮ್ಮನಕೊಲ್ಲಿ ಗ್ರಾಮದ ಮೂಲಕ ಕುಶಾಲನಗರದ ಹೃದಯ ಭಾಗದಲ್ಲಿರುವ ಕರ್ನಾಟಕ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಬೃಹತ್ ಟ್ಯಾಂಕ್‌ಗೆ ನೀರನ್ನು ಸರಬರಾಜು ಮಾಡಲಾಗುತ್ತದೆ. ಟ್ಯಾಂಕ್‌ನಿಂದ ಪೈಪ್‌ಗಳ ಜೋಡಣೆ ಮೂಲಕ ಪುರಸಭೆಯ ಎಲ್ಲಾ ವಾರ್ಡ್‌ಗಳಿಗೆ ಸಮರ್ಪಕವಾಗಿ ನೀರನ್ನು ಸರಬರಾಜು ಮಾಡುವ ವ್ಯವಸ್ಥೆ ಮಾಡಲಾಗುತ್ತಿದೆ.

ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುತ್ತಿತ್ತು. ಇದೀಗ 40 ಕೋಟಿ ರೂ. ವೆಚ್ಚದಲ್ಲಿ ಶಾಶ್ವತ ಕುಡಿಯುವ ನೀರಿನ ಯೋಜನೆ ಪ್ರಗತಿಯಲ್ಲಿದೆ. ಎರಡು ವರ್ಷಗಳ ಒಳಗಾಗಿ ಕಾಮಗಾರಿ ಪೂರ್ಣಗೊಳ್ಳಲಿದ್ದು, ಕಾಮಗಾರಿ ಪೂರ್ಣಗೊಂಡ ನಂತರ ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವುದಿಲ್ಲ.

-ಜಯಲಕ್ಷ್ಮಿಚಂದ್ರು, ಅಧ್ಯಕ್ಷರು, ಕುಶಾಲನಗರ ಪುರಸಭೆ.

ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ 40 ಕೋಟಿ ರೂ. ವೆಚ್ಚದಲ್ಲಿ ಶಾಶ್ವತ ಕುಡಿಯುವ ನೀರಿನ ಕಾಮಗಾರಿ
ನಡೆಸಲಾಗುತ್ತಿದೆ. ಈಗಾಗಲೇ ಶೇ.40ರಷ್ಟು ಕಾಮಗಾರಿ ಮುಗಿದಿದೆ. 2026ರ ಒಳಗಾಗಿ ಕಾಮಗಾರಿ ಪೂರ್ಣಗೊಳಿಸಲಾಗುವುದು.

-ಅಭಿಷೇಕ್, ಸಹಾಯಕ ಅಭಿಯಂತರರು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ.

 

ಆಂದೋಲನ ಡೆಸ್ಕ್

Recent Posts

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

43 mins ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

4 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

4 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

4 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

4 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

4 hours ago