Andolana originals

ಗಬ್ಬೆದ್ದು ನಾರುತ್ತಿರುವ ಚರಂಡಿಗಳು, ಸಾಂಕ್ರಾಮಿಕ ರೋಗದ ಭೀತಿ

ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ ಪಂಚಾಯಿತಿಯ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಂಜನಗೂಡು ತಾಲ್ಲೂಕಿನ ದೊಡ್ಡ ಕವಲಂದೆ ಗ್ರಾಮದಲ್ಲಿ ಚರಂಡಿಗಳು ಕಸ ಕಡ್ಡಿಗಳಿಂದ ತುಂಬಿ ದುರ್ನಾತ ಬೀರುತ್ತಿವೆ. ನಾಲ್ಕು ತಿಂಗಳಿಂದ ದೊಡ್ಡ ಕವಲಂದೆ ಗ್ರಾಪಂ ವ್ಯಾಪ್ತಿಯಲ್ಲಿ ಕಸ ವಿಲೇವಾರಿಯಾಗಿಲ್ಲ ಮತ್ತು ಚರಂಡಿಯನ್ನು ಸ್ಚಚ್ಛತೆ ಮಾಡಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಾದ ದೊಡ್ಡಕವಲಂದೆ, ಗಟ್ಟವಾಡಿ, ಗಟ್ಟವಾಡಿಪುರ, ಹರಗನಪುರ, ಹೆಳವರ ಹುಂಡಿ, ಕೃಷ್ಣಾರಾಜಪುರ ಗ್ರಾಮಗಳಲ್ಲಿ ಕೂಡ ಚರಂಡಿಗಳನ್ನು ಸ್ವಚ್ಛಗೊಳಿಸದೆ ಇರುವುದರಿಂದ ಚರಂಡಿಗಳೆಲ್ಲವೂ ತುಂಬಿ ಹೋಗಿವೆ. ಕೊಳಚೆ ಚರಂಡಿ ನೀರಿನ ದುರ್ವಾಸನೆಯಿಂದ ಸಾಂಕ್ರಾಮಿಕ ರೋಗಗಳು ಹರಡುತ್ತಿದ್ದು, ಗ್ರಾಮಸ್ಥರು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರಾತ್ರಿಯಾದರೆ ಸೊಳ್ಳೆಗಳ ಕಾಟ ಹೆಚ್ಚಾಗಿದೆ.

ನಮಗೆ ಕಸ ವಿಲೇವಾರಿ ಘಟಕ ಮಾಡಲು ಸರ್ಕಾರಿ ಜಾಗವನ್ನು ನೀಡದಿರುವುದೇ ಈ ಸಮಸ್ಯೆಗೆ ಕಾರಣವಾಗಿದೆ. ಕೂಡಲೇ ಕಸ ವಿಲೇವಾರಿ ಘಟಕ ನಿರ್ಮಾಣ ಮಾಡಲು ಜಾಗ ನೀಡಬೇಕು. ಒತ್ತುವರಿಯಾಗಿರುವ ಜಮೀನನ್ನು ತೆರವು ಕಾರ್ಯಾಚರಣೆ ಮಾಡಬೇಕು. ಇಲ್ಲವಾದಲ್ಲಿ ತಾಲ್ಲೂಕು ಆಡಳಿತ ಭವನದ ಮುಂಭಾಗದಲ್ಲಿ ಕಸ ಸುರಿದು ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ:-ಸರಗೂರಿನಲ್ಲಿ ಬೀದಿ ನಾಯಿಗಳ ಹಾವಳಿ : ತತ್ತರಿಸಿದ ಜನತೆ

ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಚರಂಡಿಗಳನ್ನು ಸ್ವಚ್ಛತೆ ಮಾಡಿದ್ದೇವೆ. ಆದರೆ ಕವಲಂದೆ ಗ್ರಾಮ ದಲ್ಲಿ ಕಸ ವಿಲೇವಾರಿ ಘಟಕ ನಿರ್ಮಾಣಕೆ ಜಾಗದ ಸಮಸ್ಯೆ ಇರುವುದರಿಂದ ಸ್ವಚ್ಛತೆ
ಸಾಧ್ಯವಾಗಿಲ್ಲ. ಶೀಘ್ರದಲ್ಲಿಯೇ ಚರಂಡಿ ಗಳನ್ನು ಸ್ವಚ್ಛ ಮಾಡಲಾಗುವುದು. – ನಿರ್ಮಲಾ, ಪಿಡಿಒ, ದೊಡ್ಡ ಕವಲಂದೆ ಗ್ರಾಪಂ

ಸ್ವಚ್ಛತೆ ಮಾಡಲು ನಾವು ಸಿದ್ಧರಿದ್ದೇವೆ. ಆದರೆ, ನಮಗೆ ಕಸ ವಿಲೇವಾರಿ ಮಾಡಲು ಜಾಗದ ಸಮಸ್ಯೆ ಇದ್ದು, ಕವಲಂದೆ ಗ್ರಾಮದ ಸರ್ವೆ ನಂ. ೨೩೭ರಲ್ಲಿ ೪. ೩೧ ಗುಂಟೆ ಸರ್ಕಾರಿ ಜಮೀನು ಇದೆ. ಈ ಜಮೀನನ್ನು ಅಕ್ಕ ಪಕ್ಕದ ಜಮೀನಿನವರು ಒತ್ತುವರಿ ಮಾಡಿಕೊಂಡಿದ್ದಾರೆ. ಆದ ರಿಂದ ಒತ್ತುವರಿ ಯಾಗಿರುವ ಸರ್ಕಾರಿ ಜಮೀನನ್ನು ತೆರವುಗೊಳಿಸಿ, ಕಸ ವಿಲೇವಾರಿ ಘಟಕ ಮಾಡಲು ಅನುಕೂಲ ಮಾಡಿಕೊಡ ಬೇಕು. ಒಂದು ವಾರದಲ್ಲಿ ಸಮಸ್ಯೆಯನ್ನು ಬಗೆಹರಿಸದಿದ್ದರೆ ತಾಲ್ಲೂಕು ಆಡಳಿತ ಭವನದ ಮುಂಭಾಗದಲ್ಲಿ ಕಸ ಸುರಿದು ಪ್ರತಿಭಟನೆ ನಡೆಸಬೇಕಾಗುತ್ತದೆ. – ಪರ್ಹೀನ ಬೇಗಂ, ದೊಡ ಕವಲಂದೆ ಗ್ರಾ. ಪಂ ಅಧ್ಯಕ್ಷರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

14 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

14 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

14 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

14 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

14 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

14 hours ago