ಓದುಗರ ಪತ್ರ
ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನರು ತೀವ್ರವಾಗಿ ತೊಂದರೆಗೊಳಗಾಗಿದ್ದಾರೆ. ಆದರೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು ಬೆಂಗಳೂರಿನ ಬೀದಿ ನಾಯಿಗಳಿಗೆ ನಿತ್ಯ ಬಾಡೂಟ ಬಡಿಸಲು ನಾಲ್ಕು ವಲಯವಾರು ೨ ಕೋಟಿ ರೂ. ಟೆಂಡರ್ ಕರೆದಿರುವುದು ಹಾಸ್ಯಾಸ್ಪದವಾಗಿದೆ,
ರಾಜ್ಯದಲ್ಲಿ ಎಷ್ಟೋ ಜನರು ಒಂದು ಹೊತ್ತಿನ ಊಟಕ್ಕಾಗಿ ಹಗಲು ರಾತ್ರಿ ಕಷ್ಟಪಡುತ್ತಿದ್ದಾರೆ, ಜನರಿಗೆ ಊಟ ಇಲ್ಲದಿದ್ದರೂ ಬೀದಿ ನಾಯಿಗಳಿಗೆ ಬಿರಿಯಾನಿ ಬಡಿಸಲು ಹೊರಟಿರುವ ಬಿಬಿಎಂಪಿ ಅಧಿಕಾರಿಗಳ ನಿಲುವು ಖಂಡನೀಯ. ಬೀದಿನಾಯಿಗಳಿಗೆ ಬಿರಿಯಾನಿ ಹಾಕುವ ಯೋಜನೆಯನ್ನು ಕೈಬಿಟ್ಟು ಹಸಿದವರ ಹೊಟ್ಟೆ ತುಂಬಿಸಲು ಬಿಬಿಎಂಪಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕಾಗಿದೆ.
–ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಎಚ್.ಡಿ.ಕೋಟೆ ತಾ.
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…