ಇತ್ತೀಚೆಗೆ ಸರ್ಕಾರಿ ಇಲಾಖೆಗಳಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಕಂದಾಯ ಇಲಾಖೆಯಲ್ಲಿ ಲಂಚವಿಲ್ಲದೆ ಯಾವುದೇ ಕಡತಗಳೂ ವಿಲೇವಾರಿಯಾಗುವುದಿಲ್ಲ ಎನ್ನುವಂತಾಗಿದೆ. ಜಾತಿ ಮತ್ತು ಆದಾಯ ಪ್ರಮಾಣಪತ್ರ ಮಾಡಿಸಬೇಕಾದರೂ, ಪೌತಿ ಖಾತೆ, ಖಾತೆ ಬದಲಾವಣೆ, ಭೂಮಿ ಸರ್ವೆ, ಪಹಣಿ ತಿದ್ದುಪಡಿಯಂತಹ ಭೂ ದಾಖಲೆಯ ಸೇವೆಗಳು, ಸಾಮಾಜಿಕ ಭದ್ರತಾ ಯೋಜನೆ ಸೇರಿದಂತೆ ಇನ್ನಿತರ ಯಾವುದೇ ಸಾರ್ವಜನಿಕ ಸೇವೆಗಳನ್ನು ಸಕಾಲದಲ್ಲಿ ಪಡೆಯಬೇಕಾದರೂ ಲಂಚ ಕೊಡಲೇ ಬೇಕಾದ ದುಸ್ಥಿತಿ ನಿರ್ಮಾಣವಾಗಿದೆ.
ರಾಜ್ಯ ಕಂದಾಯ ಸಚಿವರು ಲಂಚ ಪಡೆಯುವ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಿ ಇಲಾಖೆಯಲ್ಲಿನ ಭ್ರಷ್ಟಾ ಚಾರಕ್ಕೆ ಕಡಿವಾಣ ಹಾಕಬೇಕು. ನಿಗದಿತ ಶುಲ್ಕಕ್ಕಿಂತ ಹೆಚ್ಚು ಹಣ ಪಡೆಯದೇ ಬಡ ಮತ್ತು ಮಧ್ಯಮ ವರ್ಗದ ಜನರ ಕೆಲಸಗಳನ್ನು ವಿಳಂಬ ನೀತಿ ಅನುಸರಿಸದೆ ಮಾಡಿಕೊಡುವಂತೆ ಅಧಿಕಾರಿಗಳಿಗೆ ಸೂಚಿಸಬೇಕಿದೆ.
– ಎಂ. ಪಿ . ದರ್ಶನ್ ಚಂದ್ರ, ಮುಕ್ಕಡಹಳ್ಳಿ, ಚಾಮರಾಜನಗರ ತಾ.



