Andolana originals

ರಾಷ್ಟ್ರಿಯ ಹೆದ್ದಾರಿಯಲ್ಲಿ ಬಿಡಾಡಿ ದನಗಳ ಹಾವಳಿ

ಮಹೇಂದ್ರ ಹಸಗೂಲಿ

ಗುಂಡ್ಲುಪೇಟೆ: ಪಟ್ಟಣದ ಮೂಲಕ ಹಾದುಹೋಗಿರುವ ಮೈಸೂರು- ಕೋಯಿಕೋಡ್ (ಕೇರಳ) ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾರ್ವಜನಿಕ ಆಸ್ಪತ್ರೆಯಿಂದ ಬಸವ ಭವನದವರೆಗೆ ರಸ್ತೆಯ ಮಧ್ಯೆ ಬಿಡಾಡಿ ದನಗಳು ಓಡಾಡುತ್ತಾ, ಮಲಗುತ್ತಾ ಇರುವುದರಿಂದ ಸಂಚಾರಕ್ಕೆ ಅಡಚಣೆಯಾಗುತ್ತಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳು ವೇಗವಾಗಿ ಚಲಿಸುವಾಗ ಬಿಡಾಡಿ ದನಗಳಿಂದಾಗಿ ತಕ್ಷಣ ವಾಹನ ನಿಲ್ಲಿಸಿದಾಗ ಹಿಂಬದಿಯ ವಾಹನಗಳು ಬಂದು ಡಿಕ್ಕಿ ಹೊಡೆಯುವ ಸಾಧ್ಯತೆ ಇದೆ. ಆದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸುವಮುನ್ನ ಎಚ್ಚರಿಕೆ ವಹಿಸಬೇಕು. ರಸ್ತೆಗೆ ಬಿಡಾಡಿ ದನಗಳನ್ನು ಬಿಡುವವರ ವಿರುದ್ದ ಕ್ರಮವಹಿಸ ಬೇಕು ಎಂದು ವಾಹನ ಸವಾರರು ಪುರಸಭೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ರಸ್ತೆಗೆ ದನ, ಕುದುರೆಗಳನ್ನು ಬಿಡುವವರಿಗೆ ಪುರಸಭೆ ಎಚ್ಚರಿಕೆ ನೀಡಿ ದಂಡ ವಿಧಿಸಬೇಕು ಎಂದು ಸಾರ್ವಜನಿಕರು, ವಾಹನ ಸವಾರರು ಒತ್ತಾಯಿಸಿದ್ದಾರೆ.

” ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿಡಾಡಿ ದನಗಳ ಹಾವಳಿ ಹೆಚ್ಚಿರುವುದು ಅಪಘಾತ ಸಂಭವಿಸಲು ಕಾರಣವಾಗಿದೆ. ವಾಹನ ಸವಾರರುಓಡಾಡಲು ಕಿರಿಕಿರಿಯಾಗುತ್ತಿದೆ. ಇದನ್ನು ನಿಯಂತ್ರಿಸುವಲ್ಲಿ ಪುರಸಭೆ ಹಿಂದೇಟು ಹಾಕುತ್ತಿರುವುದರಿಂದ ರಸ್ತೆಗೆ ದನಗಳನ್ನು ಮತ್ತೆ ಬಿಡುತ್ತಿದ್ದಾರೆ. ಇನ್ನಾದರೂ ಸೂಕ್ತ ಕ್ರಮ ಕೈಗೊಂಡು ವಾಹನ  ಸವಾರರಿಗೆ ಆಗುತ್ತಿರುವ ಕಿರಿಕಿರಿ ತಪ್ಪಿಸಬೇಕು.”

-ಮಧುಶಂಕರ್, ತಾಪಂ ಮಾಜಿ ಅಧ್ಯಕ್ಷ 

” ಈ ವಿಚಾರವಾಗಿ ಜಾನುವಾರು ಮಾಲೀಕರಿಗೆ ಅನೇಕ ಬಾರಿ ದಂಡ ವಿಧಿಸಿದ್ದರೂ ಮಾಲೀಕರು ದನಗಳನ್ನು ರಸ್ತೆಗೆ ಬಿಡುತ್ತಿದ್ದು, ಈ ಕುರಿತು ಪ್ರಕಟಣೆಯನ್ನೂ ಹೊರಡಿಸಲಾಗಿದೆ. ಮತ್ತೆ ರಸ್ತೆಗೆ ಹಸು, ಕುದುರೆಗಳನ್ನು ಬಿಟ್ಟು ಸಂಚಾರಕ್ಕೆ ತೊಂದರೆ ಉಂಟುಮಾಡಿದಲ್ಲಿ ಪೊಲೀಸರಸಹಕಾರ ಪಡೆದು ಬಿಡಾಡಿ ದನಗಳು, ಕುದುರೆಗಳನ್ನು ವಶಕ್ಕೆ ಪಡೆಯಲಾಗುವುದು.”

-ಶರವಣ, ಮುಖ್ಯಾಧಿಕಾರಿ, ಪುರಸಭೆ.

ಆಂದೋಲನ ಡೆಸ್ಕ್

Recent Posts

32 ವರ್ಷಗಳ ನಂತರ ನಾಗರತ್ನಮ್ಮ ಸ್ಮಾರಕಕ್ಕೆ ಅಭಿವೃದ್ಧಿ ಭಾಗ್ಯ

ಸಿಎಂಗೆ ಶಾಸಕ ಗಣೇಶ್ ಪ್ರಸಾದ್ ಮನವಿ; ಸ್ಮಾರಕ ನಿರ್ಮಾಣಕ್ಕೆ 1 ಕೋಟಿ ರೂ. ಅನುದಾನ • ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ:…

18 mins ago

ದೇಶಾದ್ಯಂತ ಎಸ್ಮಾ ಜಾರಿ : ಗ್ಯಾಸ್‌ ಪೂರೈಕೆಯಲ್ಲಿ ವ್ಯತ್ಯಯವಾದ್ರೆ ಜೈಲು!

ಹೊಸದಿಲ್ಲಿ : ಜಾಗತಿಕ ರಾಜಕೀಯ ವಿದ್ಯಮಾನಗಳು ಮತ್ತು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಯುದ್ಧದ ಭೀತಿಯ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ದೇಶದ ಇಂಧನ…

27 mins ago

ಸಫಾರಿಗೆ ಮೊಬೈಲ್‌ ನಿಷೇಧ ; ಪ್ರವಾಸಿಗರ ಬೇಸರ

ವನ್ಯಜೀವಿ ಚಿತ್ರಗಳನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯುವ ಅವಕಾಶ ಇಲ್ಲದೆ ಪರಿತಾಪ; ನಿಷೇಧಕ್ಕೆ ಕೆಲವರ ಸಹಮತ • ಚಿರಂಜೀವಿ ಸಿ. ಹುಲ್ಲಹಳ್ಳಿ…

2 hours ago

ಓದುಗರ ಪತ್ರ | ಮೆಜೆಸ್ಟಿಕ್ ಸುಸ್ಥಿರ ನಗರದ ಹೊಸ ದಿಕ್ಕೂಚಿಯಾಗಲಿ

ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…

3 hours ago

ಓದುಗರ ಪತ್ರ | ಮೆಜೆಸ್ಟಿಕ್ ಸುಸ್ಥಿರ ನಗರದ ಹೊಸ ದಿಕ್ಕೂಚಿಯಾಗಲಿ

ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…

3 hours ago

ಓದುಗರ ಪತ್ರ | ಕೆ. ಜಿ. ಕೊಪ್ಪಲಿನಲ್ಲಿ ವಿದ್ಯುತ್ ಚಿತಾಗಾರ ನಿರ್ಮಿಸಿ

ಮೈಸೂರಿನ ಕನ್ನೇಗೌಡನ ಕೊಪ್ಪಲು (ಕೆ. ಜಿ. ಕೊಪ್ಪಲು) ಮತ್ತು ಜಯನಗರಕ್ಕೆ ಸೇರಿದ ಶತಮಾನಗಳಷ್ಟು ಹಳೆಯದಾದ, ಸಾರ್ವಜನಿಕ ಸ್ಮಶಾನದ ಸುಮಾರು ಹತ್ತು…

3 hours ago