Andolana originals

ರಾಷ್ಟ್ರಿಯ ಹೆದ್ದಾರಿಯಲ್ಲಿ ಬಿಡಾಡಿ ದನಗಳ ಹಾವಳಿ

ಮಹೇಂದ್ರ ಹಸಗೂಲಿ

ಗುಂಡ್ಲುಪೇಟೆ: ಪಟ್ಟಣದ ಮೂಲಕ ಹಾದುಹೋಗಿರುವ ಮೈಸೂರು- ಕೋಯಿಕೋಡ್ (ಕೇರಳ) ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾರ್ವಜನಿಕ ಆಸ್ಪತ್ರೆಯಿಂದ ಬಸವ ಭವನದವರೆಗೆ ರಸ್ತೆಯ ಮಧ್ಯೆ ಬಿಡಾಡಿ ದನಗಳು ಓಡಾಡುತ್ತಾ, ಮಲಗುತ್ತಾ ಇರುವುದರಿಂದ ಸಂಚಾರಕ್ಕೆ ಅಡಚಣೆಯಾಗುತ್ತಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳು ವೇಗವಾಗಿ ಚಲಿಸುವಾಗ ಬಿಡಾಡಿ ದನಗಳಿಂದಾಗಿ ತಕ್ಷಣ ವಾಹನ ನಿಲ್ಲಿಸಿದಾಗ ಹಿಂಬದಿಯ ವಾಹನಗಳು ಬಂದು ಡಿಕ್ಕಿ ಹೊಡೆಯುವ ಸಾಧ್ಯತೆ ಇದೆ. ಆದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸುವಮುನ್ನ ಎಚ್ಚರಿಕೆ ವಹಿಸಬೇಕು. ರಸ್ತೆಗೆ ಬಿಡಾಡಿ ದನಗಳನ್ನು ಬಿಡುವವರ ವಿರುದ್ದ ಕ್ರಮವಹಿಸ ಬೇಕು ಎಂದು ವಾಹನ ಸವಾರರು ಪುರಸಭೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ರಸ್ತೆಗೆ ದನ, ಕುದುರೆಗಳನ್ನು ಬಿಡುವವರಿಗೆ ಪುರಸಭೆ ಎಚ್ಚರಿಕೆ ನೀಡಿ ದಂಡ ವಿಧಿಸಬೇಕು ಎಂದು ಸಾರ್ವಜನಿಕರು, ವಾಹನ ಸವಾರರು ಒತ್ತಾಯಿಸಿದ್ದಾರೆ.

” ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿಡಾಡಿ ದನಗಳ ಹಾವಳಿ ಹೆಚ್ಚಿರುವುದು ಅಪಘಾತ ಸಂಭವಿಸಲು ಕಾರಣವಾಗಿದೆ. ವಾಹನ ಸವಾರರುಓಡಾಡಲು ಕಿರಿಕಿರಿಯಾಗುತ್ತಿದೆ. ಇದನ್ನು ನಿಯಂತ್ರಿಸುವಲ್ಲಿ ಪುರಸಭೆ ಹಿಂದೇಟು ಹಾಕುತ್ತಿರುವುದರಿಂದ ರಸ್ತೆಗೆ ದನಗಳನ್ನು ಮತ್ತೆ ಬಿಡುತ್ತಿದ್ದಾರೆ. ಇನ್ನಾದರೂ ಸೂಕ್ತ ಕ್ರಮ ಕೈಗೊಂಡು ವಾಹನ  ಸವಾರರಿಗೆ ಆಗುತ್ತಿರುವ ಕಿರಿಕಿರಿ ತಪ್ಪಿಸಬೇಕು.”

-ಮಧುಶಂಕರ್, ತಾಪಂ ಮಾಜಿ ಅಧ್ಯಕ್ಷ 

” ಈ ವಿಚಾರವಾಗಿ ಜಾನುವಾರು ಮಾಲೀಕರಿಗೆ ಅನೇಕ ಬಾರಿ ದಂಡ ವಿಧಿಸಿದ್ದರೂ ಮಾಲೀಕರು ದನಗಳನ್ನು ರಸ್ತೆಗೆ ಬಿಡುತ್ತಿದ್ದು, ಈ ಕುರಿತು ಪ್ರಕಟಣೆಯನ್ನೂ ಹೊರಡಿಸಲಾಗಿದೆ. ಮತ್ತೆ ರಸ್ತೆಗೆ ಹಸು, ಕುದುರೆಗಳನ್ನು ಬಿಟ್ಟು ಸಂಚಾರಕ್ಕೆ ತೊಂದರೆ ಉಂಟುಮಾಡಿದಲ್ಲಿ ಪೊಲೀಸರಸಹಕಾರ ಪಡೆದು ಬಿಡಾಡಿ ದನಗಳು, ಕುದುರೆಗಳನ್ನು ವಶಕ್ಕೆ ಪಡೆಯಲಾಗುವುದು.”

-ಶರವಣ, ಮುಖ್ಯಾಧಿಕಾರಿ, ಪುರಸಭೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

15 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

15 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

15 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

15 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

15 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

15 hours ago