Andolana originals

ರಾಷ್ಟ್ರಿಯ ಹೆದ್ದಾರಿಯಲ್ಲಿ ಬಿಡಾಡಿ ದನಗಳ ಹಾವಳಿ

ಮಹೇಂದ್ರ ಹಸಗೂಲಿ

ಗುಂಡ್ಲುಪೇಟೆ: ಪಟ್ಟಣದ ಮೂಲಕ ಹಾದುಹೋಗಿರುವ ಮೈಸೂರು- ಕೋಯಿಕೋಡ್ (ಕೇರಳ) ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾರ್ವಜನಿಕ ಆಸ್ಪತ್ರೆಯಿಂದ ಬಸವ ಭವನದವರೆಗೆ ರಸ್ತೆಯ ಮಧ್ಯೆ ಬಿಡಾಡಿ ದನಗಳು ಓಡಾಡುತ್ತಾ, ಮಲಗುತ್ತಾ ಇರುವುದರಿಂದ ಸಂಚಾರಕ್ಕೆ ಅಡಚಣೆಯಾಗುತ್ತಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳು ವೇಗವಾಗಿ ಚಲಿಸುವಾಗ ಬಿಡಾಡಿ ದನಗಳಿಂದಾಗಿ ತಕ್ಷಣ ವಾಹನ ನಿಲ್ಲಿಸಿದಾಗ ಹಿಂಬದಿಯ ವಾಹನಗಳು ಬಂದು ಡಿಕ್ಕಿ ಹೊಡೆಯುವ ಸಾಧ್ಯತೆ ಇದೆ. ಆದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸುವಮುನ್ನ ಎಚ್ಚರಿಕೆ ವಹಿಸಬೇಕು. ರಸ್ತೆಗೆ ಬಿಡಾಡಿ ದನಗಳನ್ನು ಬಿಡುವವರ ವಿರುದ್ದ ಕ್ರಮವಹಿಸ ಬೇಕು ಎಂದು ವಾಹನ ಸವಾರರು ಪುರಸಭೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ರಸ್ತೆಗೆ ದನ, ಕುದುರೆಗಳನ್ನು ಬಿಡುವವರಿಗೆ ಪುರಸಭೆ ಎಚ್ಚರಿಕೆ ನೀಡಿ ದಂಡ ವಿಧಿಸಬೇಕು ಎಂದು ಸಾರ್ವಜನಿಕರು, ವಾಹನ ಸವಾರರು ಒತ್ತಾಯಿಸಿದ್ದಾರೆ.

” ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿಡಾಡಿ ದನಗಳ ಹಾವಳಿ ಹೆಚ್ಚಿರುವುದು ಅಪಘಾತ ಸಂಭವಿಸಲು ಕಾರಣವಾಗಿದೆ. ವಾಹನ ಸವಾರರುಓಡಾಡಲು ಕಿರಿಕಿರಿಯಾಗುತ್ತಿದೆ. ಇದನ್ನು ನಿಯಂತ್ರಿಸುವಲ್ಲಿ ಪುರಸಭೆ ಹಿಂದೇಟು ಹಾಕುತ್ತಿರುವುದರಿಂದ ರಸ್ತೆಗೆ ದನಗಳನ್ನು ಮತ್ತೆ ಬಿಡುತ್ತಿದ್ದಾರೆ. ಇನ್ನಾದರೂ ಸೂಕ್ತ ಕ್ರಮ ಕೈಗೊಂಡು ವಾಹನ  ಸವಾರರಿಗೆ ಆಗುತ್ತಿರುವ ಕಿರಿಕಿರಿ ತಪ್ಪಿಸಬೇಕು.”

-ಮಧುಶಂಕರ್, ತಾಪಂ ಮಾಜಿ ಅಧ್ಯಕ್ಷ 

” ಈ ವಿಚಾರವಾಗಿ ಜಾನುವಾರು ಮಾಲೀಕರಿಗೆ ಅನೇಕ ಬಾರಿ ದಂಡ ವಿಧಿಸಿದ್ದರೂ ಮಾಲೀಕರು ದನಗಳನ್ನು ರಸ್ತೆಗೆ ಬಿಡುತ್ತಿದ್ದು, ಈ ಕುರಿತು ಪ್ರಕಟಣೆಯನ್ನೂ ಹೊರಡಿಸಲಾಗಿದೆ. ಮತ್ತೆ ರಸ್ತೆಗೆ ಹಸು, ಕುದುರೆಗಳನ್ನು ಬಿಟ್ಟು ಸಂಚಾರಕ್ಕೆ ತೊಂದರೆ ಉಂಟುಮಾಡಿದಲ್ಲಿ ಪೊಲೀಸರಸಹಕಾರ ಪಡೆದು ಬಿಡಾಡಿ ದನಗಳು, ಕುದುರೆಗಳನ್ನು ವಶಕ್ಕೆ ಪಡೆಯಲಾಗುವುದು.”

-ಶರವಣ, ಮುಖ್ಯಾಧಿಕಾರಿ, ಪುರಸಭೆ.

ಆಂದೋಲನ ಡೆಸ್ಕ್

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

5 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

6 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

6 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

6 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

7 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

7 hours ago