Andolana originals

ರಿಂಗ್‌ ರಸ್ತೆಯಲ್ಲಿ ಕಣ್ಮುಚ್ಚಿದ ವಿದ್ಯುತ್‌ ದೀಪಗಳು

ಮೈಸೂರು: ನಗರದ ರಿಂಗ್ ರಸ್ತೆಯಲ್ಲಿ ರುವ ವಿದ್ಯುತ್ ಕಂಬಗಳ ಅಸಮರ್ಪಕ ನಿರ್ವಹಣೆಯಿಂದಾಗಿ ವಿದ್ಯುತ್‌ದೀಪಗಳು ಹಾಳಾಗಿದ್ದು, ಈ ಮಾರ್ಗದಲ್ಲಿ ರಾತ್ರಿ ವೇಳೆ ಸಂಚರಿಸುವ ವಾಹನ ಸವಾರರಿಗೆ ತೀವ್ರ ತೊಂದರೆಯಾಗಿದೆ.

ಕಿತ್ತು ಬಂದಿರುವ ಸ್ವಿಚ್‌ಗಳು: ನಗರದ ಹೆಬ್ಬಾಳದ ಮೊದಲ ಹಂತದ ಪೆಟ್ರೋಲ್ ಬಂಕ್ ಬಳಿಯಿಂದ ರಾಯಲ್ ಇನ್‌ವರೆಗಿನ ರಸ್ತೆಯಲ್ಲಿರುವ ಬಹುತೇಕ ವಿದ್ಯುತ್ ಕಂಬಗಳ ದೀಪಗಳ ಸ್ವಿಚ್‌ಗಳು ಹಾಳಾಗಿವೆ. ವಿದ್ಯುತ್ ಕಂಬಗಳಲ್ಲಿ ಅಳವಡಿಸಲಾಗಿರುವ ಕೆಲವೊಂದು ಸ್ವಿಚ್‌ಗಳು ಮುರಿದು ಬಿದ್ದಿದ್ದರೆ ಮತ್ತೆ ಕೆಲವು ಹೊರಬಂದಿವೆ. ಅಸಮರ್ಪಕ ನಿರ್ವಹಣೆಯಿಂದಾಗಿ ಈ ರೀತಿಯಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.

ರಾತ್ರಿ ವೇಳೆ ತಿರುಗಾಡುವುದು ಕಷ್ಟ ಹೆಬ್ಬಾಳದ ರಿಂಗ್ ರಸ್ತೆಯಲ್ಲಿ ರಾತ್ರಿ ಸಮಯದಲ್ಲಿ ವಾಹನಗಳ ಓಡಾಟ ಹೆಚ್ಚಾಗಿರುತ್ತದೆ. ವಿದ್ಯುತ್ ದೀಪಗಳು ಸರಿಯಾಗಿ ಕೆಲಸ ನಿರ್ವಹಿಸದೆ ಇರುವುದರಿಂದ ಸಣ್ಣ ವಾಹನಗಳು (ಬೈಕ್, ಆಟೋ) ರಸ್ತೆಯ ಒಂದು ಬದಿಯಿಂದ ಮತ್ತೊಂದು ಬದಿಗೆ ಚಲಿಸಲು ಕಷ್ಟವಾಗುತ್ತಿದೆ. ವಾಹನಗಳು ಎಗ್ಗಿಲ್ಲದೇ ನುಗ್ಗುವ ಈ ರಸ್ತೆಯಲ್ಲಿ ಸ್ಥಳೀಯರು ಒಂದು ಕಡೆಯಿಂದ ಮತ್ತೊಂದು ಕಡೆಗೆ ಹೋಗುವ ವೇಳೆ ಜೀವ ಕೈಯಲ್ಲಿ ಹಿಡಿದುಕೊಂಡು ಸಂಚರಿಸಬೇಕಾದ ಪರಿಸ್ಥಿತಿಯಿದೆ. ಹಲವು ತಿಂಗಳಿನಿಂದಲೂ ಈ ಸಮಸ್ಯೆ ಇದ್ದು, ತಕ್ಷಣ ಪರಿಹಾರ ಒದಗಿಸುವಂತೆ ಸ್ಥಳೀಯರು ಮನವಿ ಮಾಡಿದ್ದಾರೆ.

ಗುಂಡಿಬಿದ್ದ ರಸ್ತೆಗಳು: ರಿಂಗ್ ರಸ್ತೆಯ ಸರ್ವೀಸ್ ರಸ್ತೆಗಳಲ್ಲೂ ಗುಂಡಿಬಿದ್ದಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಬೀದಿ ದೀಪಗಳು ಹಾಳಾಗಿದ್ದು, ಮಳೆ ಬಂದ ವೇಳೆಯಲ್ಲಿ ರಸ್ತೆಯಲ್ಲಿರುವ ಗುಂಡಿಗಳಲ್ಲಿ ನೀರು ತುಂಬಿಕೊಳ್ಳುತ್ತಿದ್ದು , ದ್ವಿಚಕ್ರ ವಾಹನ ಸವಾರರು ಬಿದ್ದು ಗಾಯಗೊಳ್ಳುತ್ತಿದ್ದರೂ ಸಂಬಂಧಪಟ್ಟವರು ರಸ್ತೆ ಹಾಗೂ ಬೀದಿ ದೀಪಗಳ ದುರಸ್ತಿಗೆ ಗಮನ ಹರಿಸಿಲ್ಲ.

ವಿದ್ಯುತ್ ಕಂಬಗಳು ಹಾಳಾಗಿರುವ ಬಗ್ಗೆ ಮಾಹಿತಿ ಪಡೆಯಲಾಗಿದ್ದು, ತಕ್ಷಣವೇ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು. -ರಘು ನಂದನ್, ಮುಡಾ ಆಯುಕ್ತರು

ರಿಂಗ್ ರಸ್ತೆ ಹಾಗೂ ಸರ್ವೀಸ್ ರಸ್ತೆಯಲ್ಲಿ ಬೀದಿ ದೀಪಗಳು ಹಾಳಾಗಿರುವುದರಿಂದ ರಾತ್ರಿ ವೇಳೆ ಒಬ್ಬರೇ ಸುತ್ತಾಡಲು ಭಯಪಡುವಂತಾಗಿದೆ. ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸುವುದು ಅಗತ್ಯ. -ಮಾದೇವ್, ಹೆಬ್ಬಾಳ ನಿವಾಸಿ

 

 

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಉಪಸಭಾಪತಿಗೆ ಚಿತ್ರಹಿಂಸೆ ಆರೋಪ : ಐಪಿಎಸ್‌ ಅಧಿಕಾರಿ ಬಂಧನ

ಅಮರಾವತಿ : ಹಿಂದಿನ ವೈಎಸ್‍ಆರ್‍ಸಿಪಿ ಆಡಳಿತದ ಅವಧಿಯಲ್ಲಿ ಆಂಧ್ರ ವಿಧಾನಸಭೆಯ ಪ್ರಸ್ತುತ ಉಪಸಭಾಪತಿ ಕೆ. ರಘುರಾಮ ಕೃಷ್ಣ ರಾಜು ಅವರ…

8 hours ago

ಮಾರ್ಚ್‌ 11ರಿಂದ ವೈದ್ಯಾಧಿಕಾರಿಗಳ ಮುಷ್ಕರ : ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11ರಿಂದ…

8 hours ago

ಟ್ರಂಪ್‌ ಜಾಗತಿಕ ಸುಂಕ ರದ್ದು : ವರದಿ

ವಾಷಿಂಗ್ಟನ್ : ಕಾನೂನುಬಾಹಿರವಾಗಿ ಟ್ರಂಪ್ ವಿಧಿಸಿದ್ದ ಆಮದು ಸುಂಕ ಸಂಗ್ರಹವನ್ನ ಅಮೆರಿಕ ನಿಲ್ಲಿಸಲಿದೆ ಎಂದು ಯುಎಸ್ ಕಸ್ಟಮ್ಸ್ ಮತ್ತು ಗಡಿ…

9 hours ago

ಸಫಾರಿ ಆದಾಯದ ಶೇ.35 ಭಾಗ ಕಾಡಿನಂಚಿನ ಜನಕಲ್ಯಾಣಕ್ಕೆ ಬಳಕೆ : ಖಂಡ್ರೆ

ಬೆಂಗಳೂರು : ಸಫಾರಿಯಿಂದ ಬರುವ ಆದಾಯದಲ್ಲಿ ಶೇ.35ರಷ್ಟನ್ನು ಕಾಡಿನಂಚಿನ ಗ್ರಾಮದ ಜನರ ಕಲ್ಯಾಣಕ್ಕಾಗಿ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಗ್ರಾಮಗಳಲ್ಲಿ…

9 hours ago

ವನ್ಯಜೀವಿ ಸಂಚಾರ | ಕಾಡಂಚಿನ ಗ್ರಾಮದ ಮುಖಂಡರಿಗೆ ಮಾಹಿತಿ ರವಾನಿಸಲು ಖಂಡ್ರೆ ಸೂಚನೆ

ಬೆಂಗಳೂರು : ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ…

9 hours ago

ಮನರೇಗಾ ನಾಶ | ಜನರ ಅನ್ನ ಕಿತ್ತುಕೊಳ್ಳುತ್ತಿರುವ ಕೇಂದ್ರ ; ಸಿಎಂ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ : ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್…

10 hours ago