ಮೈಸೂರು: ನಗರದ ರಿಂಗ್ ರಸ್ತೆಯಲ್ಲಿ ರುವ ವಿದ್ಯುತ್ ಕಂಬಗಳ ಅಸಮರ್ಪಕ ನಿರ್ವಹಣೆಯಿಂದಾಗಿ ವಿದ್ಯುತ್ದೀಪಗಳು ಹಾಳಾಗಿದ್ದು, ಈ ಮಾರ್ಗದಲ್ಲಿ ರಾತ್ರಿ ವೇಳೆ ಸಂಚರಿಸುವ ವಾಹನ ಸವಾರರಿಗೆ ತೀವ್ರ ತೊಂದರೆಯಾಗಿದೆ.
ಕಿತ್ತು ಬಂದಿರುವ ಸ್ವಿಚ್ಗಳು: ನಗರದ ಹೆಬ್ಬಾಳದ ಮೊದಲ ಹಂತದ ಪೆಟ್ರೋಲ್ ಬಂಕ್ ಬಳಿಯಿಂದ ರಾಯಲ್ ಇನ್ವರೆಗಿನ ರಸ್ತೆಯಲ್ಲಿರುವ ಬಹುತೇಕ ವಿದ್ಯುತ್ ಕಂಬಗಳ ದೀಪಗಳ ಸ್ವಿಚ್ಗಳು ಹಾಳಾಗಿವೆ. ವಿದ್ಯುತ್ ಕಂಬಗಳಲ್ಲಿ ಅಳವಡಿಸಲಾಗಿರುವ ಕೆಲವೊಂದು ಸ್ವಿಚ್ಗಳು ಮುರಿದು ಬಿದ್ದಿದ್ದರೆ ಮತ್ತೆ ಕೆಲವು ಹೊರಬಂದಿವೆ. ಅಸಮರ್ಪಕ ನಿರ್ವಹಣೆಯಿಂದಾಗಿ ಈ ರೀತಿಯಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.
ರಾತ್ರಿ ವೇಳೆ ತಿರುಗಾಡುವುದು ಕಷ್ಟ ಹೆಬ್ಬಾಳದ ರಿಂಗ್ ರಸ್ತೆಯಲ್ಲಿ ರಾತ್ರಿ ಸಮಯದಲ್ಲಿ ವಾಹನಗಳ ಓಡಾಟ ಹೆಚ್ಚಾಗಿರುತ್ತದೆ. ವಿದ್ಯುತ್ ದೀಪಗಳು ಸರಿಯಾಗಿ ಕೆಲಸ ನಿರ್ವಹಿಸದೆ ಇರುವುದರಿಂದ ಸಣ್ಣ ವಾಹನಗಳು (ಬೈಕ್, ಆಟೋ) ರಸ್ತೆಯ ಒಂದು ಬದಿಯಿಂದ ಮತ್ತೊಂದು ಬದಿಗೆ ಚಲಿಸಲು ಕಷ್ಟವಾಗುತ್ತಿದೆ. ವಾಹನಗಳು ಎಗ್ಗಿಲ್ಲದೇ ನುಗ್ಗುವ ಈ ರಸ್ತೆಯಲ್ಲಿ ಸ್ಥಳೀಯರು ಒಂದು ಕಡೆಯಿಂದ ಮತ್ತೊಂದು ಕಡೆಗೆ ಹೋಗುವ ವೇಳೆ ಜೀವ ಕೈಯಲ್ಲಿ ಹಿಡಿದುಕೊಂಡು ಸಂಚರಿಸಬೇಕಾದ ಪರಿಸ್ಥಿತಿಯಿದೆ. ಹಲವು ತಿಂಗಳಿನಿಂದಲೂ ಈ ಸಮಸ್ಯೆ ಇದ್ದು, ತಕ್ಷಣ ಪರಿಹಾರ ಒದಗಿಸುವಂತೆ ಸ್ಥಳೀಯರು ಮನವಿ ಮಾಡಿದ್ದಾರೆ.
ಗುಂಡಿಬಿದ್ದ ರಸ್ತೆಗಳು: ರಿಂಗ್ ರಸ್ತೆಯ ಸರ್ವೀಸ್ ರಸ್ತೆಗಳಲ್ಲೂ ಗುಂಡಿಬಿದ್ದಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಬೀದಿ ದೀಪಗಳು ಹಾಳಾಗಿದ್ದು, ಮಳೆ ಬಂದ ವೇಳೆಯಲ್ಲಿ ರಸ್ತೆಯಲ್ಲಿರುವ ಗುಂಡಿಗಳಲ್ಲಿ ನೀರು ತುಂಬಿಕೊಳ್ಳುತ್ತಿದ್ದು , ದ್ವಿಚಕ್ರ ವಾಹನ ಸವಾರರು ಬಿದ್ದು ಗಾಯಗೊಳ್ಳುತ್ತಿದ್ದರೂ ಸಂಬಂಧಪಟ್ಟವರು ರಸ್ತೆ ಹಾಗೂ ಬೀದಿ ದೀಪಗಳ ದುರಸ್ತಿಗೆ ಗಮನ ಹರಿಸಿಲ್ಲ.
ವಿದ್ಯುತ್ ಕಂಬಗಳು ಹಾಳಾಗಿರುವ ಬಗ್ಗೆ ಮಾಹಿತಿ ಪಡೆಯಲಾಗಿದ್ದು, ತಕ್ಷಣವೇ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು. -ರಘು ನಂದನ್, ಮುಡಾ ಆಯುಕ್ತರು
ರಿಂಗ್ ರಸ್ತೆ ಹಾಗೂ ಸರ್ವೀಸ್ ರಸ್ತೆಯಲ್ಲಿ ಬೀದಿ ದೀಪಗಳು ಹಾಳಾಗಿರುವುದರಿಂದ ರಾತ್ರಿ ವೇಳೆ ಒಬ್ಬರೇ ಸುತ್ತಾಡಲು ಭಯಪಡುವಂತಾಗಿದೆ. ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸುವುದು ಅಗತ್ಯ. -ಮಾದೇವ್, ಹೆಬ್ಬಾಳ ನಿವಾಸಿ
ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…