Andolana originals

ರಿಂಗ್‌ ರಸ್ತೆಯಲ್ಲಿ ಕಣ್ಮುಚ್ಚಿದ ವಿದ್ಯುತ್‌ ದೀಪಗಳು

ಮೈಸೂರು: ನಗರದ ರಿಂಗ್ ರಸ್ತೆಯಲ್ಲಿ ರುವ ವಿದ್ಯುತ್ ಕಂಬಗಳ ಅಸಮರ್ಪಕ ನಿರ್ವಹಣೆಯಿಂದಾಗಿ ವಿದ್ಯುತ್‌ದೀಪಗಳು ಹಾಳಾಗಿದ್ದು, ಈ ಮಾರ್ಗದಲ್ಲಿ ರಾತ್ರಿ ವೇಳೆ ಸಂಚರಿಸುವ ವಾಹನ ಸವಾರರಿಗೆ ತೀವ್ರ ತೊಂದರೆಯಾಗಿದೆ.

ಕಿತ್ತು ಬಂದಿರುವ ಸ್ವಿಚ್‌ಗಳು: ನಗರದ ಹೆಬ್ಬಾಳದ ಮೊದಲ ಹಂತದ ಪೆಟ್ರೋಲ್ ಬಂಕ್ ಬಳಿಯಿಂದ ರಾಯಲ್ ಇನ್‌ವರೆಗಿನ ರಸ್ತೆಯಲ್ಲಿರುವ ಬಹುತೇಕ ವಿದ್ಯುತ್ ಕಂಬಗಳ ದೀಪಗಳ ಸ್ವಿಚ್‌ಗಳು ಹಾಳಾಗಿವೆ. ವಿದ್ಯುತ್ ಕಂಬಗಳಲ್ಲಿ ಅಳವಡಿಸಲಾಗಿರುವ ಕೆಲವೊಂದು ಸ್ವಿಚ್‌ಗಳು ಮುರಿದು ಬಿದ್ದಿದ್ದರೆ ಮತ್ತೆ ಕೆಲವು ಹೊರಬಂದಿವೆ. ಅಸಮರ್ಪಕ ನಿರ್ವಹಣೆಯಿಂದಾಗಿ ಈ ರೀತಿಯಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.

ರಾತ್ರಿ ವೇಳೆ ತಿರುಗಾಡುವುದು ಕಷ್ಟ ಹೆಬ್ಬಾಳದ ರಿಂಗ್ ರಸ್ತೆಯಲ್ಲಿ ರಾತ್ರಿ ಸಮಯದಲ್ಲಿ ವಾಹನಗಳ ಓಡಾಟ ಹೆಚ್ಚಾಗಿರುತ್ತದೆ. ವಿದ್ಯುತ್ ದೀಪಗಳು ಸರಿಯಾಗಿ ಕೆಲಸ ನಿರ್ವಹಿಸದೆ ಇರುವುದರಿಂದ ಸಣ್ಣ ವಾಹನಗಳು (ಬೈಕ್, ಆಟೋ) ರಸ್ತೆಯ ಒಂದು ಬದಿಯಿಂದ ಮತ್ತೊಂದು ಬದಿಗೆ ಚಲಿಸಲು ಕಷ್ಟವಾಗುತ್ತಿದೆ. ವಾಹನಗಳು ಎಗ್ಗಿಲ್ಲದೇ ನುಗ್ಗುವ ಈ ರಸ್ತೆಯಲ್ಲಿ ಸ್ಥಳೀಯರು ಒಂದು ಕಡೆಯಿಂದ ಮತ್ತೊಂದು ಕಡೆಗೆ ಹೋಗುವ ವೇಳೆ ಜೀವ ಕೈಯಲ್ಲಿ ಹಿಡಿದುಕೊಂಡು ಸಂಚರಿಸಬೇಕಾದ ಪರಿಸ್ಥಿತಿಯಿದೆ. ಹಲವು ತಿಂಗಳಿನಿಂದಲೂ ಈ ಸಮಸ್ಯೆ ಇದ್ದು, ತಕ್ಷಣ ಪರಿಹಾರ ಒದಗಿಸುವಂತೆ ಸ್ಥಳೀಯರು ಮನವಿ ಮಾಡಿದ್ದಾರೆ.

ಗುಂಡಿಬಿದ್ದ ರಸ್ತೆಗಳು: ರಿಂಗ್ ರಸ್ತೆಯ ಸರ್ವೀಸ್ ರಸ್ತೆಗಳಲ್ಲೂ ಗುಂಡಿಬಿದ್ದಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಬೀದಿ ದೀಪಗಳು ಹಾಳಾಗಿದ್ದು, ಮಳೆ ಬಂದ ವೇಳೆಯಲ್ಲಿ ರಸ್ತೆಯಲ್ಲಿರುವ ಗುಂಡಿಗಳಲ್ಲಿ ನೀರು ತುಂಬಿಕೊಳ್ಳುತ್ತಿದ್ದು , ದ್ವಿಚಕ್ರ ವಾಹನ ಸವಾರರು ಬಿದ್ದು ಗಾಯಗೊಳ್ಳುತ್ತಿದ್ದರೂ ಸಂಬಂಧಪಟ್ಟವರು ರಸ್ತೆ ಹಾಗೂ ಬೀದಿ ದೀಪಗಳ ದುರಸ್ತಿಗೆ ಗಮನ ಹರಿಸಿಲ್ಲ.

ವಿದ್ಯುತ್ ಕಂಬಗಳು ಹಾಳಾಗಿರುವ ಬಗ್ಗೆ ಮಾಹಿತಿ ಪಡೆಯಲಾಗಿದ್ದು, ತಕ್ಷಣವೇ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು. -ರಘು ನಂದನ್, ಮುಡಾ ಆಯುಕ್ತರು

ರಿಂಗ್ ರಸ್ತೆ ಹಾಗೂ ಸರ್ವೀಸ್ ರಸ್ತೆಯಲ್ಲಿ ಬೀದಿ ದೀಪಗಳು ಹಾಳಾಗಿರುವುದರಿಂದ ರಾತ್ರಿ ವೇಳೆ ಒಬ್ಬರೇ ಸುತ್ತಾಡಲು ಭಯಪಡುವಂತಾಗಿದೆ. ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸುವುದು ಅಗತ್ಯ. -ಮಾದೇವ್, ಹೆಬ್ಬಾಳ ನಿವಾಸಿ

 

 

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಸಾರ್ಥಕ ಬದುಕಿನ ಸಾಧಕ!

ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…

22 hours ago

ಓದುಗರ ಪತ್ರ: ಕಲಬೆರಕೆ ಮಾಫಿಯಾ: ಕ್ರಮ ಅಗತ್ಯ

ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…

22 hours ago

ಓದುಗರ ಪತ್ರ: ಉದ್ಯಾನವನಗಳಲ್ಲಿ ಸಂಗೀತ ವಾದ್ಯ ಜೋಡಣೆ: ಪಾಲಿಕೆ ಕ್ರಮ ಅಭಿನಂದನಾರ್ಹ

ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…

22 hours ago

ಮೀಸಲಾತಿ ವಿರೋಧಿ ದನಿಗೆ ಮೋದಿ ಮಣಿಯುವರೇ?

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…

22 hours ago

ಕುಕ್ಕರಿನ ಸೀಟಿ ಕೂಗಲು ಶುರುವಾಗಿದೆ!

ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…

22 hours ago

ಕೆಲವಷ್ಟು ಭರವಸೆಗಳು ಮತ್ತು ಹಲವಷ್ಟು ಆತಂಕಗಳು

ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…

22 hours ago