Andolana originals

ಕೆಟ್ಟುನಿಂತ ಬೀದಿ ದೀಪಗಳು ; ಕಗ್ಗತ್ತಲಲ್ಲಿ ರಸ್ತೆಗಳು

ಪ್ರಶಾಂತ್‌ ಎಸ್.‌

ಮೈಸೂರು : ಅಪಘಾತ,ಅನಾಹುತ ಸಂಭವಿಸದಿರಲಿ ಮತ್ತು ನಾಗರಿಕರ ಸಂಚಾರಕ್ಕೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ನಗರದ ಮುಖ್ಯ ರಸ್ತೆಗಳಲ್ಲಿ ಬೀದಿ ದೀಪಗಳು ರಾತ್ರಿ ವೇಳೆ ಉರಿಯುವಂತೆ ನಿರ್ವಹಣೆ ಮಾಡಲಾಗುತ್ತದೆ. ಆದರೆ, ಮೈಸೂರು ನಗರಕ್ಕೆ ಹೊಂದಿಕೊಂಡಂತಿರುವ ನಾಚನಹಳ್ಳಿ ಪಾಳ್ಯದ ಸಮೀಪವಿರುವ ಟೋಲ್ ಗೇಟ್, ಶ್ರೀರಾಂಪುರ, ಶಿವಪುರ, ದೇವಯ್ಯ ನಹುಂಡಿ ರಸ್ತೆಗಳಲ್ಲಿ ವಿದ್ಯುತ್ ಕಂಬಗಳು ಇದ್ದರೂ ವಿದ್ಯುತ್ ಮಾತ್ರ ಇರುವುದಿಲ್ಲ. ಆಗಾಗೆ ಬೀದಿ ದೀಪಗಳು ಕೆಟ್ಟು ಹೋಗಿ ಸಾರ್ವಜನಿಕರಿಗೆ ತೊಂದರೆ ಯಾಗುತ್ತಿದೆ. ಜತೆಗೆ ರಾತ್ರಿ ವೇಳೆ ಸಂಚರಿಸಲು ಜನರು ಭಯ ಪಡುವಂತಾಗಿದೆ.

ಬೀದಿ ದೀಪಗಳಿಲ್ಲದೇ ಅಪಘಾತ ಹೆಚ್ಚಳ! :
ಇದು ಇಂದಿನ ಸಮಸ್ಯೆಯಲ್ಲ. ತಿಂಗಳುಗಳಿಂದಲೇ ಈ ಭಾಗದ ರಸ್ತೆಗಳ ಬದಿಯಲ್ಲಿರುವ ವಿದ್ಯುತ್ ಕಂಬಗಳಿಗೆ ಅಳವಡಿಸಿರುವ ದೀಪಗಳು ಸರಿಯಾಗಿ ಉರಿಯುತ್ತಿಲ್ಲ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಬೀದಿ ದೀಪಗಳು ಉರಿಯದ ಕಾರಣ ರಾತ್ರಿ ವೇಳೆ ರಸ್ತೆ ಬದಿಯ ಅಂಗಡಿಗಳಲ್ಲಿ ಕಳ್ಳತನ ಹೆಚ್ಚುತ್ತಿದೆ. ಆಗಾಗ್ಗೆ ಅಪಘಾತಗಳು, ಅನಾಹುತಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ಅಳಲು ತೋಡಿಕೊಂಡಿದ್ದಾರೆ.

ಆಗಾಗ್ಗೆ ಕೆಡುವ ಬೀದಿ ದೀಪಗಳು
ಪ್ರತಿದಿನ ಸಾವಿರಾರು ಜನ ಈ ರಸ್ತೆಗಳಲ್ಲಿ ಸಂಚರಿಸುತ್ತಾರೆ. ಕತ್ತಲಾಗುತ್ತಿದ್ದಂತೆ ಈ ಭಾಗದಲ್ಲಿ, ಅದರಲ್ಲೂ ಶ್ರೀರಾಂಪುರ ವರ್ತುಲ ರಸ್ತೆಯಿಂದ ಲಿಂಗಾಂಬುಧಿಪಾಳ್ಯ, ವಿವಿ ಬಡಾವಣೆ ಹಾಗೂ ದಟ್ಟಗಳ್ಳಿಯವರೆಗೂ ಬೀದಿ ದೀಪಗಳು ಉರಿಯದ ಕಾರಣ ಸಮಸ್ಯೆ ಎದುರಾಗಿದೆ. ಬೀದಿ ಬದಿಗಳಲ್ಲಿ ಇಂಡಕ್ಷನ್ ದೀಪಗಳನ್ನು ಅಳವಡಿಸಲಾಗಿದ್ದು, ಇದಕ್ಕಾಗಿ ಕೇಬಲ್‌ಗಳನ್ನು ಎಳೆದು ಸಂಪರ್ಕ ಕಲ್ಪಿಸಲಾಗಿದೆ. ದೂರವಾಣಿ ಕೇಬಲ್ ಅಳವಡಿಸುವವರು, ಒಳಚರಂಡಿ ದುರಸ್ತಿ ಮಾಡುವವರು ಪದೇ ಪದೇ ರಸ್ತೆಯನ್ನು ಅಗೆಯುವ ಸಂದರ್ಭದಲ್ಲಿ ಈ ಕೇಬಲ್ ಗಳು ತುಂಡಾಗಿ ಸಂಪರ್ಕ ಕಡಿತಗೊಳ್ಳುತ್ತಿವೆ.

ಕತ್ತಲಲ್ಲಿ ಓಡಾಡಲು ಭಯ
ಬೀದಿ ದೀಪಗಳಿಲ್ಲದ ಕಾರಣ ಸಾರ್ವಜನಿಕರು ಈ ಭಾಗದಲ್ಲಿ ಓಡಾಡಲು ಭಯಪಡುತ್ತಿದ್ದಾರೆ. ಇದು ಸರಗಳ್ಳತನ ಮೊದಲಾದ ದುಷ್ಕೃತ್ಯಗಳಿಗೆ ಎಡೆಮಾಡಿಕೊಡುತ್ತಿದೆ. ಕೆಲ ವಾರಗಳ ಹಿಂದೆ ನಗರಪಾಲಿಕೆ ಅಳವಡಿಸಿದ್ದ ಬೀದಿ ದೀಪಗಳನ್ನು ದುಷ್ಕರ್ಮಿಗಳು ಕದ್ದೊಯ್ದಿದ್ದಾರೆ. ಈ ಭಾಗದಲ್ಲಿರುವ ಒಟ್ಟು ದೀಪಗಳಲ್ಲಿ ಎಷ್ಟು ಉರಿಯುತ್ತಿವೆ? ಎಷ್ಟು ಹಾಳಾಗಿವೆ? ಎಂಬುದು ಲೆಕ್ಕೆಕೆ ಸಿಗದಂತಾಗಿದೆ. ಈ ಬಗ್ಗೆ ಅಧಿಕಾರಿಗಳು ಗಮನಹರಿಸಬೇಕು. ಕೂಡಲೇ ಬೀದಿ ದೀಪದ ವ್ಯವಸ್ಥೆ ಕಲ್ಪಿಸಿಕೊಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ನಗರಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ದೀಪಗಳ ನಿರ್ವಹಣೆ ಸರಿಯಾಗಿದೆ. ಒಂದೆರಡು ದೀಪಗಳು ಕೆಟ್ಟಿರಬಹುದು. ಅದನ್ನು ಕೂಡಲೇ ಸರಿಪಡಿಸಲಾಗುವುದು. ಬೇರೆ ಸಂಪರ್ಕಗಳನ್ನು ಸರಿಪಡಿಸುವ ಸಂದರ್ಭದಲ್ಲಿ ಬಹುಶಃ ವಿದ್ಯುತ್ ತಂತಿ ತುಂಡಾಗಿ ಈ ಸಮಸ್ಯೆ ಆಗಿರಬಹುದು. ಕೂಡಲೇ ಅದರ ಬಗ್ಗೆ ಗಮನಹರಿಸಲಾಗುವುದು. ಶೇಖ್ ತನ್ವೀರ್ ಆಸಿಫ್, ಆಯುಕ್ತ, ನಗರಪಾಲಿಕೆ

ಆಂದೋಲನ ಡೆಸ್ಕ್

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

3 hours ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

4 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

5 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

5 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

6 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

7 hours ago