Andolana originals

48 ಮರಗಳನ್ನು ಕಡಿಯುವುದಕ್ಕೆ ತೀವ್ರ ವಿರೋಧ

ರಾಷ್ಟ್ರೀಯ ಹೆದ್ದಾರಿ ೨೭೫ರಲ್ಲಿ ಮರಗಳನ್ನು ಕಡಿಯುವ ವಿಚಾರಕ್ಕೆ ನಡೆದ ಅಹವಾಲು ಸಭೆಯಲ್ಲಿ ಸಾರ್ವಜನಿಕರ ಆಕ್ರೋಶ

ನಂಜನಗೂಡು: ರಾಷ್ಟ್ರೀಯ ಹೆದ್ದಾರಿ ಸಂಖ್ಯೆ ೨೭೫ರಲ್ಲಿ ದೇವಲಾಪುರ ಕ್ರಾಸ್ ಹತ್ತಿರ ೪೮ ಮರಗಳನ್ನು ಕಡಿಯುವ ವಿಷಯಕ್ಕೆ ಸಂಬಂಧಿಸಿದಂತೆ ಮಂಗಳವಾರ ನಡೆದ ಸಾರ್ವಜನಿಕ ಅಹವಾಲು ಸಭೆಯಲ್ಲಿ ಮರಗಳನ್ನು ಕಡಿಯುವುದಕ್ಕೆ ತೀವ್ರ ವಿರೋಧ ವ್ಯಕ್ತವಾಯಿತು.

ಸಭೆಯಲ್ಲಿ ಹಾಜರಿದ್ದ ‘ಪರಿಸರಕ್ಕಾಗಿ ನಾವು’ ಸಂಘಟನೆಯ ಸದಸ್ಯರು ಮತ್ತು ಸಮೀಪದ ಹೊಸಹುಂಡಿ ಗ್ರಾಮದ ಜನರು ಇಲ್ಲಿ ಸಂಭವಿಸುವ ರಸ್ತೆ ಅಪಘಾತಗಳನ್ನು ತಡೆಯಲು ಮರಗಳನ್ನು ಕಡಿದು ಮೇಲ್ಸೇತುವೆ ಕಟ್ಟುವ ಬದಲಿಗೆ ಸಿಗ್ನಲ್ ವ್ಯವಸ್ಥೆ, ರಸ್ತೆ ಉಬ್ಬುಗಳ ನಿರ್ಮಾಣ, ಸಂಚಾರ ಚಿಹ್ನೆಗಳ ಅಳವಡಿಕೆ ಮಾಡಬೇಕು ಎಂದು ಬಲವಾಗಿ ಪ್ರತಿಪಾದಿಸಿದರು. ‘ಪರಿಸರಕ್ಕಾಗಿ ನಾವು’ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಪರಶುರಾಮೇಗೌಡ ಮಾತನಾಡಿ, ಮರಗಳನ್ನು ಕಡಿದು ಮೇಲ್ಸೇತುವೆ ಕಟ್ಟುವುದು ಕಡೆಯ ಆಯ್ಕೆ ಆಗಲಿ. ಮೊದಲು ಪರ್ಯಾಯ ಮಾರ್ಗಗಳ ಬಗ್ಗೆ ಯೋಚಿಸಬೇಕು ಎಂದು ಆಗ್ರಹಿಸಿದರು.

ಸಂಘಟನೆಯ ಕಾರ್ಯಕರ್ತರಾದ ಶೈಲಜೇಶ್ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಮೇಲ್ಸೇತುವೆ ಕಟ್ಟಲು ಟೆಂಡರ್ ಕರೆದು ಎಲ್ಲಾ ಪ್ರಕ್ರಿಯೆಗಳನ್ನು ಮುಗಿಸಿ ಕೊನೆಯ ಹಂತದಲ್ಲಿ ಕಾಟಾಚಾರಕ್ಕೆ ಈ ಸಭೆ ಕರೆದಿದ್ದಾರೆ. ಅಪಘಾತಗಳನ್ನು ತಪ್ಪಿಸುವ ಯಾವುದೇ ಪ್ರಯತ್ನಗಳನ್ನು ಮಾಡಿಲ್ಲ ಎಂದು ದೂರಿದರು.

ತುಂಬಾ ಕಡಿಮೆ ಖರ್ಚಿನಲ್ಲಿ ನಿರ್ವಹಣೆ ಮಾಡುವ ಪ್ರಯತ್ನ ಮಾಡದೆ ವಿಪರೀತ ಹಣ ಖರ್ಚು ಮಾಡಿ ಹೊಸ ಹೊಸ ನಿರ್ಮಾಣಗಳ ಬಗ್ಗೆ ಸರ್ಕಾರಿ ಇಲಾಖೆಗಳು ಆಸಕ್ತಿ ವಹಿಸುವುದು ಶೇ.೪೦ ಕಮಿಷನ್‌ಗಾಗಿ ಎಂಬ ಅನುಮಾನಗಳಿವೆ ಎಂದರು. ಲೀಲಾ ಶಿವಕುಮಾರ್ ಅವರು ಮಾತನಾಡಿ, ಅಭಿವೃದ್ಧಿ ಕೆಲಸಗಳಿಗೆ ಎಲ್ಲೆಲ್ಲಿ ಮರಗಳನ್ನು ಕಡಿಯುತ್ತಾರೋ ಅಲ್ಲಿಗೆಲ್ಲ ಹೋಗಿ ಮರಗಳನ್ನು ಕಡಿಯುವುದನ್ನು ತಡೆಯುವುದು ನಮ್ಮ ಸಂಘಟನೆಯ ಕೆಲಸವಲ್ಲ. ಮರಗಳನ್ನು ಉಳಿಸಿಕೊಂಡು ಪರಿಸರ ಸ್ನೇಹಿ ಅಭಿವೃದ್ಧಿ ಕೆಲಸಗಳನ್ನು ಮಾಡಿ ಎಂದು ಒತ್ತಾಯಿಸಿದರು. ಸ್ಥಳೀಯರಾದ ಕೃಷ್ಣ ಮಾತನಾಡಿ, ಇಲ್ಲಿ ಮರಗಳನ್ನು ಕಡಿದು ಮೇಲ್ಸೇತುವೆ ಕಟ್ಟುವ ಅಗತ್ಯವಿಲ್ಲ. ಒಂದೇ ಒಂದು ಮರವನ್ನು ಕಡಿಯಲು ಇಲ್ಲಿನ ಸ್ಥಳೀಯರು ಬಿಡುವುದಿಲ್ಲ ಎಂದು ಘೋಷಿಸಿದರು.

ಮರಗಳನ್ನು ಕಡಿಯಲು ಸಭೆಯಲ್ಲಿ ವ್ಯಕ್ತವಾದ ಒಕ್ಕೊರಲಿನ ವಿರೋಧಕ್ಕೆ ಮಣಿದ ಉಪ ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್ ಅವರು, ಮರಗಳನ್ನು ಕಡಿಯುವುದು ನಮ್ಮ ಆದ್ಯತೆ ಅಲ್ಲ. ಮರಗಳನ್ನು ಉಳಿಸುವುದು ತಮ್ಮ ಇಲಾಖೆಯ ಆದ್ಯತೆ. ಇಂದಿನ ಸಭೆಯಲ್ಲಿ ಮೂಡಿಬಂದ ಅಭಿಪ್ರಾಯ ಗಳನ್ನು ಮೇಲಿನ ಅಧಿಕಾರಿಗಳಿಗೆ ತಿಳಿಸಲಾಗುವುದು ಮತ್ತು ಮರಗಳನ್ನು ಉಳಿಸಲು ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.

ಸಭೆಯಲ್ಲಿ ಆರ್‌ಎಫ್‌ಒ ಸಂತೋಷ್ ಹೂಗಾರ್, ಅಹವಾಲು ಸಭೆಯಲ್ಲಿ ‘ಪರಿಸರಕ್ಕಾಗಿ ನಾವು’ ಸಂಘಟನೆಯ ಜಿಲ್ಲಾ ಅಧ್ಯಕ್ಷರಾದ ಲೀಲಾ ವೆಂಕಟೇಶ್, ಕಾರ್ಯಕರ್ತರಾದ ಸುಬ್ಬರಾವ್, ಗಂಟಯ್ಯ, ಭಾಗ್ಯ, ಭಾನುಪ್ರಶಾಂತ್, ಅಂಜನಾ, ಪ್ರಭಾ, ಗಾಯತ್ರಿ, ಗುರುಸ್ವಾಮಿ, ವಿಶ್ವನಾಥ್, ಸುಗುಣ, ಸುಶೀಲಾ, ಮಧುಶ್ರೀ, ಜಯಲಕ್ಷ್ಮಿ, ಪ್ರಭಾಕರ್, ಅಕ್ಬರ್, ರವಿಕೀರ್ತಿ, ಗಣೇಶ್, ಸಾರ್ಥಕ್, ಮುಂತಾದವರು ಭಾಗವಹಿಸಿದ್ದರು

” ಅಪಘಾತಗಳನ್ನು ತಪ್ಪಿಸಲು ಸಭೆಯಲ್ಲಿ ಸೂಚಿಸಿದ ಪರ್ಯಾಯ ಮಾರ್ಗಗಳನ್ನು ಕಾರ್ಯಗತಗೊಳಿಸಲು ಮೇಲಿನ ಅಧಿಕಾರಿಗಳಿಗೆ ತಿಳಿಸಿ, ಮೇಲ್ಸೇತುವೆ ಕಟ್ಟುವ ಯೋಜನೆ ರದ್ದುಪಡಿಸುವಂತೆ ಶಿಫಾರಸು ಮಾಡಲಾಗುತ್ತದೆ.”

ಎಚ್.ಆರ್.ರೂಪ, ಎಇಇ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

ಆಂದೋಲನ ಡೆಸ್ಕ್

Recent Posts

ಎಲ್‌ಪಿಜಿ ಸಿಲಿಂಡರ್‌ ಸಿಗುತ್ತದೆ, ಜನರಲ್ಲಿ ಭೀತಿ ಬೇಡ : ಕೇಂದ್ರ

ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…

3 hours ago

IPL 2026 | ಮಾ.28ರಿಂದ ಪಂದ್ಯ ಆರಂಭ, ಬೆಂಗಳೂರಿನಲ್ಲಿ ಉದ್ಘಾಟನೆ, ಹೀಗಿದೆ ವೇಳಾಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…

3 hours ago

“ಸಂಶೋಧನೆಗೆ AI ನಿಂದಲ್ಲ, ಸ್ವಂತಿಕೆಯಿಂದ ಕೂಡಿರಲಿ” : ಕುಲಪತಿ ಶರಣಪ್ಪ ಹಲಸೆ ಸಲಹೆ

ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…

3 hours ago

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…

3 hours ago

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

4 hours ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

4 hours ago