Andolana originals

48 ಮರಗಳನ್ನು ಕಡಿಯುವುದಕ್ಕೆ ತೀವ್ರ ವಿರೋಧ

ರಾಷ್ಟ್ರೀಯ ಹೆದ್ದಾರಿ ೨೭೫ರಲ್ಲಿ ಮರಗಳನ್ನು ಕಡಿಯುವ ವಿಚಾರಕ್ಕೆ ನಡೆದ ಅಹವಾಲು ಸಭೆಯಲ್ಲಿ ಸಾರ್ವಜನಿಕರ ಆಕ್ರೋಶ

ನಂಜನಗೂಡು: ರಾಷ್ಟ್ರೀಯ ಹೆದ್ದಾರಿ ಸಂಖ್ಯೆ ೨೭೫ರಲ್ಲಿ ದೇವಲಾಪುರ ಕ್ರಾಸ್ ಹತ್ತಿರ ೪೮ ಮರಗಳನ್ನು ಕಡಿಯುವ ವಿಷಯಕ್ಕೆ ಸಂಬಂಧಿಸಿದಂತೆ ಮಂಗಳವಾರ ನಡೆದ ಸಾರ್ವಜನಿಕ ಅಹವಾಲು ಸಭೆಯಲ್ಲಿ ಮರಗಳನ್ನು ಕಡಿಯುವುದಕ್ಕೆ ತೀವ್ರ ವಿರೋಧ ವ್ಯಕ್ತವಾಯಿತು.

ಸಭೆಯಲ್ಲಿ ಹಾಜರಿದ್ದ ‘ಪರಿಸರಕ್ಕಾಗಿ ನಾವು’ ಸಂಘಟನೆಯ ಸದಸ್ಯರು ಮತ್ತು ಸಮೀಪದ ಹೊಸಹುಂಡಿ ಗ್ರಾಮದ ಜನರು ಇಲ್ಲಿ ಸಂಭವಿಸುವ ರಸ್ತೆ ಅಪಘಾತಗಳನ್ನು ತಡೆಯಲು ಮರಗಳನ್ನು ಕಡಿದು ಮೇಲ್ಸೇತುವೆ ಕಟ್ಟುವ ಬದಲಿಗೆ ಸಿಗ್ನಲ್ ವ್ಯವಸ್ಥೆ, ರಸ್ತೆ ಉಬ್ಬುಗಳ ನಿರ್ಮಾಣ, ಸಂಚಾರ ಚಿಹ್ನೆಗಳ ಅಳವಡಿಕೆ ಮಾಡಬೇಕು ಎಂದು ಬಲವಾಗಿ ಪ್ರತಿಪಾದಿಸಿದರು. ‘ಪರಿಸರಕ್ಕಾಗಿ ನಾವು’ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಪರಶುರಾಮೇಗೌಡ ಮಾತನಾಡಿ, ಮರಗಳನ್ನು ಕಡಿದು ಮೇಲ್ಸೇತುವೆ ಕಟ್ಟುವುದು ಕಡೆಯ ಆಯ್ಕೆ ಆಗಲಿ. ಮೊದಲು ಪರ್ಯಾಯ ಮಾರ್ಗಗಳ ಬಗ್ಗೆ ಯೋಚಿಸಬೇಕು ಎಂದು ಆಗ್ರಹಿಸಿದರು.

ಸಂಘಟನೆಯ ಕಾರ್ಯಕರ್ತರಾದ ಶೈಲಜೇಶ್ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಮೇಲ್ಸೇತುವೆ ಕಟ್ಟಲು ಟೆಂಡರ್ ಕರೆದು ಎಲ್ಲಾ ಪ್ರಕ್ರಿಯೆಗಳನ್ನು ಮುಗಿಸಿ ಕೊನೆಯ ಹಂತದಲ್ಲಿ ಕಾಟಾಚಾರಕ್ಕೆ ಈ ಸಭೆ ಕರೆದಿದ್ದಾರೆ. ಅಪಘಾತಗಳನ್ನು ತಪ್ಪಿಸುವ ಯಾವುದೇ ಪ್ರಯತ್ನಗಳನ್ನು ಮಾಡಿಲ್ಲ ಎಂದು ದೂರಿದರು.

ತುಂಬಾ ಕಡಿಮೆ ಖರ್ಚಿನಲ್ಲಿ ನಿರ್ವಹಣೆ ಮಾಡುವ ಪ್ರಯತ್ನ ಮಾಡದೆ ವಿಪರೀತ ಹಣ ಖರ್ಚು ಮಾಡಿ ಹೊಸ ಹೊಸ ನಿರ್ಮಾಣಗಳ ಬಗ್ಗೆ ಸರ್ಕಾರಿ ಇಲಾಖೆಗಳು ಆಸಕ್ತಿ ವಹಿಸುವುದು ಶೇ.೪೦ ಕಮಿಷನ್‌ಗಾಗಿ ಎಂಬ ಅನುಮಾನಗಳಿವೆ ಎಂದರು. ಲೀಲಾ ಶಿವಕುಮಾರ್ ಅವರು ಮಾತನಾಡಿ, ಅಭಿವೃದ್ಧಿ ಕೆಲಸಗಳಿಗೆ ಎಲ್ಲೆಲ್ಲಿ ಮರಗಳನ್ನು ಕಡಿಯುತ್ತಾರೋ ಅಲ್ಲಿಗೆಲ್ಲ ಹೋಗಿ ಮರಗಳನ್ನು ಕಡಿಯುವುದನ್ನು ತಡೆಯುವುದು ನಮ್ಮ ಸಂಘಟನೆಯ ಕೆಲಸವಲ್ಲ. ಮರಗಳನ್ನು ಉಳಿಸಿಕೊಂಡು ಪರಿಸರ ಸ್ನೇಹಿ ಅಭಿವೃದ್ಧಿ ಕೆಲಸಗಳನ್ನು ಮಾಡಿ ಎಂದು ಒತ್ತಾಯಿಸಿದರು. ಸ್ಥಳೀಯರಾದ ಕೃಷ್ಣ ಮಾತನಾಡಿ, ಇಲ್ಲಿ ಮರಗಳನ್ನು ಕಡಿದು ಮೇಲ್ಸೇತುವೆ ಕಟ್ಟುವ ಅಗತ್ಯವಿಲ್ಲ. ಒಂದೇ ಒಂದು ಮರವನ್ನು ಕಡಿಯಲು ಇಲ್ಲಿನ ಸ್ಥಳೀಯರು ಬಿಡುವುದಿಲ್ಲ ಎಂದು ಘೋಷಿಸಿದರು.

ಮರಗಳನ್ನು ಕಡಿಯಲು ಸಭೆಯಲ್ಲಿ ವ್ಯಕ್ತವಾದ ಒಕ್ಕೊರಲಿನ ವಿರೋಧಕ್ಕೆ ಮಣಿದ ಉಪ ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್ ಅವರು, ಮರಗಳನ್ನು ಕಡಿಯುವುದು ನಮ್ಮ ಆದ್ಯತೆ ಅಲ್ಲ. ಮರಗಳನ್ನು ಉಳಿಸುವುದು ತಮ್ಮ ಇಲಾಖೆಯ ಆದ್ಯತೆ. ಇಂದಿನ ಸಭೆಯಲ್ಲಿ ಮೂಡಿಬಂದ ಅಭಿಪ್ರಾಯ ಗಳನ್ನು ಮೇಲಿನ ಅಧಿಕಾರಿಗಳಿಗೆ ತಿಳಿಸಲಾಗುವುದು ಮತ್ತು ಮರಗಳನ್ನು ಉಳಿಸಲು ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.

ಸಭೆಯಲ್ಲಿ ಆರ್‌ಎಫ್‌ಒ ಸಂತೋಷ್ ಹೂಗಾರ್, ಅಹವಾಲು ಸಭೆಯಲ್ಲಿ ‘ಪರಿಸರಕ್ಕಾಗಿ ನಾವು’ ಸಂಘಟನೆಯ ಜಿಲ್ಲಾ ಅಧ್ಯಕ್ಷರಾದ ಲೀಲಾ ವೆಂಕಟೇಶ್, ಕಾರ್ಯಕರ್ತರಾದ ಸುಬ್ಬರಾವ್, ಗಂಟಯ್ಯ, ಭಾಗ್ಯ, ಭಾನುಪ್ರಶಾಂತ್, ಅಂಜನಾ, ಪ್ರಭಾ, ಗಾಯತ್ರಿ, ಗುರುಸ್ವಾಮಿ, ವಿಶ್ವನಾಥ್, ಸುಗುಣ, ಸುಶೀಲಾ, ಮಧುಶ್ರೀ, ಜಯಲಕ್ಷ್ಮಿ, ಪ್ರಭಾಕರ್, ಅಕ್ಬರ್, ರವಿಕೀರ್ತಿ, ಗಣೇಶ್, ಸಾರ್ಥಕ್, ಮುಂತಾದವರು ಭಾಗವಹಿಸಿದ್ದರು

” ಅಪಘಾತಗಳನ್ನು ತಪ್ಪಿಸಲು ಸಭೆಯಲ್ಲಿ ಸೂಚಿಸಿದ ಪರ್ಯಾಯ ಮಾರ್ಗಗಳನ್ನು ಕಾರ್ಯಗತಗೊಳಿಸಲು ಮೇಲಿನ ಅಧಿಕಾರಿಗಳಿಗೆ ತಿಳಿಸಿ, ಮೇಲ್ಸೇತುವೆ ಕಟ್ಟುವ ಯೋಜನೆ ರದ್ದುಪಡಿಸುವಂತೆ ಶಿಫಾರಸು ಮಾಡಲಾಗುತ್ತದೆ.”

ಎಚ್.ಆರ್.ರೂಪ, ಎಇಇ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

ಆಂದೋಲನ ಡೆಸ್ಕ್

Recent Posts

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

2 hours ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

2 hours ago

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

3 hours ago

ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಸಿಎಂ ಆಗೋದು ಫಿಕ್ಸ್‌: ಇಕ್ಬಾಲ್‌ ಹುಸೇನ್‌

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

3 hours ago

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

4 hours ago

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

4 hours ago