Andolana originals

ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿಗೆ ಪರದಾಟ

ಪ್ರಶಾಂತ್ ಎಸ್.

ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ

ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ

ಮೈಸೂರು: ನಗರದ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು,  ನಾನಾ ಕಡೆಗಳಿಂದ ಮೈಸೂರಿಗೆ ಬಂದು ಹೋಗುವ ಪ್ರಯಾಣಿಕರಿಗೆ ಕುಡಿಯುವ ನೀರಿನ ಬವಣೆಯ ಬಿಸಿ ತಟ್ಟಿದೆ.

ಚಾಮರಾಜನಗರ, ಗುಂಡ್ಲುಪೇಟೆ, ಗೋಣಿಕೊಪ್ಪ, ವಿರಾಜಪೇಟೆ, ಮಡಿಕೇರಿ, ಎಚ್.ಡಿ.ಕೋಟೆ, ಸರಗೂರು, ಹಾಸನ, ಬೆಂಗಳೂರು, ಕೆ.ಆರ್.ಪೇಟೆ ಸೇರಿದಂತೆ ರಾಜ್ಯದ ಹಲವೆಡೆ ಹೋಗಲು ಪ್ರತಿ ನಿತ್ಯ ಸಾವಿರಾರು ಪ್ರಯಾಣಿಕರು ಬಸ್ ನಿಲ್ದಾಣಕ್ಕೆ ಆಗಮಿಸುತ್ತಾರೆ. ಆದರೆ, ಇಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲವಾಗಿದೆ.

ಇದ್ದರೂ ಇಲ್ಲದಂತಿರುವ ನೀರಿನ ಘಟಕ: ಶುದ್ಧ ಕುಡಿಯುವ ನೀರಿನ ಘಟಕ ಇದ್ದರೂ ಅದು ಸ್ಥಗಿತವಾಗಿ ತಿಂಗಳುಗಳೇ ಕಳೆದಿವೆ. ಆದರೆ ಕೆಎಸ್‌ಆರ್ಟಿಸಿ ಸಂಸ್ಥೆ ಮಾತ್ರ ಅದನ್ನು ದುರಸ್ತಿಪಡಿಸಿ ಪ್ರಯಾಣಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡದಿರುವುದು ಅಧಿಕಾರಿಗಳ ನಿರ್ಲಕ್ಷ್ಯವನ್ನು ಎತ್ತಿ ತೋರಿಸುತ್ತದೆ. ನಗರಕ್ಕೆ ಬರುವ ಪ್ರಯಾಣಿಕರು ಅನಿವಾರ್ಯವಾಗಿ ಹೊರಗೆ ದುಡ್ಡು ಕೊಟ್ಟು ಮಿನರಲ್ ವಾಟರ್‌ಗಳನ್ನು ತೆಗೆದುಕೊಳ್ಳಬೇಕಿದೆ.

ಹೋಟೆಲ್‌ಗಳಲ್ಲಿ ನೀರು ಕುಡಿಯಲು ಹೋದರೆ ಹೋಟೆಲ್ ಅವರು ಕೊಡುವುದಿಲ್ಲ. ನೀರು ಪಡೆಯ ಬೇಕಾದರೆ ಅಲ್ಲಿ ಏನಾದರೂ ತಿನ್ನಬೇಕು. ಟೀ ಮತ್ತು ಕಾಫಿ ಕುಡಿಯಬೇಕು. ಇದು ಪ್ರಯಾಣಿಕರಿಗೆ ಹೊರೆಯಾಗಿ ಪರಿಣಮಿಸಿದೆ.

ಇಂದು, ನಾಳೆ ಮಾಡಿಸೋಣ ಎಂದು ಕಾಲ ಕಳೆದು ಪ್ರಯಾಣಿಕರಿಗೆ ನೀರಿನ ಸಮಸ್ಯೆ ನೀಗಿಸಲು ಹಿಂದೇಟು ಹಾಕುತ್ತಿರುವ ಸಾರಿಗೆ ನಿಗಮದ ಅಧಿಕಾರಿಗಳು ಬಸ್ ನಿಲ್ದಾಣದಲ್ಲಿ ಆಗಿರುವ ಸಮಸ್ಯೆಗೆ ನಿರ್ಲಕ್ಷ್ಯ ತೋರುತ್ತಿದ್ದಾರೆ.

” ಹಣವಂತರು ಮಿನರಲ್ ವಾಟರ್ ಬಾಟಲಿಗಳನ್ನು ಖರೀದಿಸುತ್ತಾರೆ. ಬಡ ಪ್ರಯಾಣಿಕರು ಏನು ಮಾಡಬೇಕು? ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್ಟಿಸಿಯವರು ತುರ್ತಾಗಿ ನೀರಿನ ಸೌಲಭ್ಯ ಕಲ್ಪಿಸಬೇಕು.”

ದೇವರಾಜು, ವಿರಾಜಪೇಟೆ

” ಶುದ್ಧ ಕುಡಿಯುವ ನೀರಿನ ಘಟಕದ ಸಮಸ್ಯೆ ಬಗ್ಗೆ ನನ್ನ ಗಮನಕ್ಕೆ ಬಂದಿದೆ. ಕೂಡಲೇ ಪರಿಶೀಲಿಸಿ ಅದನ್ನು  ದುರಸ್ತಿಗೊಳಿಸಿ ಪ್ರಯಾಣಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುವುದು.”

ಶ್ರೀನಿವಾಸ್, ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ

ಆಂದೋಲನ ಡೆಸ್ಕ್

Recent Posts

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

3 hours ago

ಭಾನುವಾರದ ಹಾಡುಪಾಡು | ಶಾಲೆಯೆಂಬ ಕಟ್ಟಡಗಳಿಗೆ ಜೀವ ಬರುವ ಹೊತ್ತು…..

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…

3 hours ago

ಭಾನುವಾರದ ಹಾಡುಪಾಡು | ಜೂನ್ ಬಂತು ಎಂದರೆ ಶಿಕ್ಷಕರಿಗೆ ಸುಗ್ಗಿ ಕಾಲ

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌| ಮೇ 31 ಭಾನುವಾರ

3 hours ago

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

16 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

18 hours ago