ಓದುಗರ ಪತ್ರ
ಮೈಸೂರಿನ ಮಹಾರಾಜ ಕಾಲೇಜು ತನ್ನದೇ ಆದ ಇತಿಹಾಸ, ಗೌರವವನ್ನು ಹೊಂದಿದೆ. ಇಲ್ಲಿ ಪದವಿ ಪಡೆಯುವ ವಿದ್ಯಾರ್ಥಿಗಳಿಗೆ ಈ ಕಾಲೇಜು ಜೀವನವನ್ನು ರೂಪಿಸಿಕೊಳ್ಳಲು ಸಹಕಾರಿಯಾಗಿದೆ. ಆದರೆ ಇತ್ತೀಚೆಗೆ ಈ ಕಾಲೇಜಿನಲ್ಲಿ ಪದವಿ ಮುಗಿಸಿರುವ ವಿದ್ಯಾರ್ಥಿಗಳ ಗೋಳು ಹೇಳತೀರದಾಗಿದೆ.
ಕಾಲೇಜಿಗೆ ಸೇರುವ ಮುನ್ನ ವಿದ್ಯಾರ್ಥಿಗಳಿಂದ ಮೂಲ ದಾಖಲೆಗಳನ್ನು ಪಡೆದುಕೊಳ್ಳುತ್ತಾರೆ. ಪದವಿ ಮುಗಿದ ನಂತರ ವಿದ್ಯಾರ್ಥಿಗಳು ಆ ದಾಖಲೆಗಳನ್ನು ವಾಪಸ್ ಪಡೆದುಕೊಳ್ಳಬೇಕಾಗಿರುತ್ತದೆ. ಈ ಕಾಲೇಜಿನಲ್ಲಿ ಪದವಿ ಮುಗಿಸಿದ ವಿದ್ಯಾರ್ಥಿಗಳ ಉನ್ನತ ಶೈಕ್ಷಣಿಕ ವ್ಯಾಸಂಗಕ್ಕಾಗಿ, ಉದ್ಯೋಗಗಳಿಗಾಗಿ, ದಾಖಲೆಗಳು ಅತ್ಯವಶ್ಯಕವಾಗಿರುತ್ತವೆ. ಮೂಲ ದಾಖಲೆಗಳನ್ನು ಪಡೆಯಲು ಅರ್ಜಿ ಸಲ್ಲಿಸಿ ತಿಂಗಳುಗಳೇ ಕಳೆದರೂ ವಾಪಸ್ ನೀಡುತ್ತಿಲ್ಲ. ಸಂಬಂಧಪಟ್ಟವರಿಂದ ಸರಿಯಾದ ಮಾಹಿತಿಯೂ ದೊರಕುತ್ತಿಲ್ಲ. ನಾಳೆ ಬಾ, ಅವರನ್ನು ಕೇಳು, ಇವರನ್ನು ಕೇಳು ಎಂದು ಸಬೂಬು ಹೇಳಿ ವಿದ್ಯಾರ್ಥಿಗಳನ್ನು ಪ್ರತಿದಿನ ಅಲೆದಾಡಿಸುತ್ತಿದ್ದಾರೆ.
ಮಹಾರಾಜ ಕಾಲೇಜಿನಲ್ಲಿ ವ್ಯಾಸಂಗ ಮಾಡುವ ಬಹುತೇಕ ವಿದ್ಯಾರ್ಥಿಗಳು, ಬಡ ವಿದ್ಯಾರ್ಥಿಗಳು ಹಾಗೂ ದೂರದ ಹಳ್ಳಿಹಳ್ಳಿಗಳಿಂದ ಬರುವ ವಿದ್ಯಾರ್ಥಿಗಳಾಗಿರುತ್ತಾರೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಕೊಂಡು ವಿದ್ಯಾರ್ಥಿಗಳು ಭವಿಷ್ಯ ರೂಪಿಸಿಕೊಳ್ಳಲು ನೆರವಾಗಬೇಕು.
– ಅಭಿಷೇಕ್, ನೊಂದ ವಿದ್ಯಾರ್ಥಿ,ಕಲ್ಲಂಬಾಳು
ಮೈಸೂರಿನ ಶಾರದಾದೇವಿ ನಗರದ ಸರ್ಕಲ್ನಲ್ಲಿ ಒಂದು ವರ್ಷದ ಹಿಂದೆ ಲಕ್ಷಾಂತರ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಆದರೆ…
ರೈಲ್ವೆ ಇಲಾಖೆಯ ಕನ್ನಡ ವಿರೋಧಿ ನೀತಿ ಇನ್ನೊಮ್ಮೆ ಬಯಲಾಗಿದೆ. ನೇಮಕಾತಿ ಮತ್ತು ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಪರೀಕ್ಷೆ ನಡೆಸುವುದಾಗಿ ಭರವಸೆ…
ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದಲ್ಲಿ ಶ್ರೀಕಂಠೇಶ್ವರ ರಥೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಆದರೆ ಇದೇ ಮೊದಲ ಬಾರಿಗೆ…
ಅನಗತ್ಯವಾಗಿ ಮತ್ತು ಅಪ್ರಚೋದಿತವಾಗಿ ಇರಾನ್ ವಿರುದ್ಧ ಯುದ್ಧಕ್ಕಿಳಿದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಥಿತಿ ಈಗ ಮಹಾಭಾರತದ ಅಭಿಮನ್ಯುವಿನ ಪರಿಸ್ಥಿತಿಯಂತಾಗಿದೆ.…
೨೦೨೬ರ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಅಖಾಡ ಈಗ ಸಿದ್ಧವಾಗಿದೆ. ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಎನ್ಡಿಎ ಮೈತ್ರಿಕೂಟದ ಬಿಜೆಪಿ ಮತ್ತು…
ಅನಿಲ್ ಅಂತರಸಂತೆ ಹಳ್ಳಿ ಸೊಗಡಿನ ದೇಸಿ ಕಂಠಸಿರಿಯಲ್ಲಿ ಇವರ ಜಾನ ಪದ ಹಾಡುಗಳನ್ನು ಕೇಳುವುದೇ ಬಲು ಹಿತಕರ. ಮೂಲತಃ ಎಚ್.ಡಿ.ಕೋಟೆ…