Andolana originals

ಸಿದ್ದಾಪುರ ರಸ್ತೆಯ ಅವೈಜ್ಞಾನಿಕ ಕಾಮಗಾರಿಯಿಂದ ಕೆಸರಿನಲ್ಲಿ ಒದ್ದಾಟ

ಸಿದ್ದಾಪುರ: ಕೊಣನೂರು-ಮಾಕುಟ್ಟ ರಾಜ್ಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಯ ಭಾಗವಾಗಿ ಸಿದ್ದಾಪುರ ಮುಖ್ಯರಸ್ತೆಯಲ್ಲಿ ನಡೆಯುತ್ತಿರುವ ೧ ಕಿಲೋಮೀಟರ್ ರಸ್ತೆ ಅಗಲೀಕರಣ ಕಾಮಗಾರಿಯನ್ನು ಅವೈಜ್ಞಾನಿಕವಾಗಿ ನಡೆಸಿದ್ದರಿಂದ ಸಾರ್ವಜನಿಕರು ಶುಕ್ರವಾರ ಕೆಸರಿನಲ್ಲಿ ಪರಿತಪಿಸಿದ ಘಟನೆ ನಡೆದಿದೆ.

ಇಲ್ಲಿನ ೧ ಕಿ.ಮೀ. ರಸ್ತೆ ಅಭಿವೃದ್ಧಿ ಮಾಡಲು ೧೧ ತಿಂಗಳುಗಳಿಂದ ಕಾಮಗಾರಿ ನಡೆಸಲಾಗುತ್ತಿದೆ. ಕಳೆದೆರಡು ದಿನಗಳಿಂದ ಮತ್ತೆ ಕಾಮಗಾರಿ ಪ್ರಾರಂಭಿಸಲಾಗಿತ್ತು. ಆದರೆ ಗುರುವಾರ ರಾತ್ರಿ ಸುರಿದ ಮಳೆಯಿಂದ ರಸ್ತೆ ಉದ್ದಕ್ಕೂ ಕೆಸರುಮಯವಾಗಿತ್ತು. ಇದರಿಂದ ಸಿದ್ದಾಪುರ ಮಾರ್ಗವಾಗಿ ಸಂಚರಿಸುವ ಸಾವಿರಾರು ವಾಹನಗಳು ಸಾಲುಗಟ್ಟಿ ನಿಂತು ಇಡೀ ಗ್ರಾಮದ ರಸ್ತೆಗಳು ಟ್ರಾಫಿಕ್ ಜಾಮ್‌ನಿಂದ ಕೂಡಿದ್ದವು.

ಈ ನಡುವೆ ಕೆಸರಿನಲ್ಲಿ ಸಿಲುಕಿದ ನಾಲ್ಕು ಬಸ್‌ಗಳು ಸಂಚರಿಸಲು ಸಾಧ್ಯವಾಗದೆ ಸಿಲುಕಿಕೊಂಡವು. ನಂತರ ಜೆಸಿಬಿ, ಕ್ರೇನ್‌ಗಳನ್ನು ತರಿಸಿ ಬಸ್‌ಗಳಿಗೆ ಹಗ್ಗ ಕಟ್ಟಿ ಎಳೆದು ಸಂಚರಿಸಲು ಅನುವು ಮಾಡಿಕೊಡಲಾಯಿತು. ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳು ಕೆಸರು ತುಂಬಿದ ರಸ್ತೆಯಲ್ಲಿ ಸಿಲುಕಿ ಧರಿಸಿದ ಬಟ್ಟೆ ಹಾಗೂ ಶೂ ಸಂಪೂರ್ಣ ಕೆಸರುಮಯವಾದ ಚಿತ್ರಣ ಕಂಡುಬಂದಿತು. ಈ ನಡುವೆ ಪೋಷಕರು ಮಕ್ಕಳನ್ನು ಬೈಕಿನಲ್ಲಿ ಕರತರುವ ವೇಳೆ ಜಾರಿ ಬಿದ್ದು ಗಾಯಗೊಂಡಿರುವ ಘಟನೆಯೂ ನಡೆಯಿತು. ಘಟನೆಯಲ್ಲಿ ಮಹಿಳೆಯೊಬ್ಬರು ಬಿದ್ದು ಗಂಭೀರವಾಗಿ ಗಾಯಗೊಂಡು ಸಿದ್ದಾಪುರ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಶಾಲಾ ವಾಹನದಲ್ಲಿ ತೆರಳುತ್ತಿದ್ದ ವಿದ್ಯಾರ್ಥಿಗಳು ಟ್ರಾಫಿಕ್  ಜಾಮಿನಲ್ಲಿ ಸಿಲುಕಿದ ಪರಿಣಾಮ ರಸ್ತೆಯಲ್ಲಿ ನಡೆದು ಶಾಲೆಗೆ ತೆರಳಿದರು.

ಕೆಸರಿನಲ್ಲಿ ನಡೆದು ಬಂದ ವಿದ್ಯಾರ್ಥಿಗಳಿಗೆ ಸಂತ ಅನ್ನಮ್ಮ ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳ ಕಾಲುಗಳನ್ನು ಸ್ವಚ್ಛಗೊಳಿಸಿ ತರಗತಿಗೆ ಬರಮಾಡಿಕೊಂಡರು. ಕೂಲಿ ಕೆಲಸಕ್ಕೆ ತೆರಳುವ ಕಾರ್ಮಿಕರು ವಾಹನಗಳಲ್ಲಿ ಕೆಲಸಕ್ಕೆ ತೆರಳಲು ಸಾಧ್ಯವಾಗದೆ ಮನೆಗೆ ಹಿಂತಿರುಗಿದರು. ಟ್ರಾಫಿಕ್ ಜಾಮಿನಲ್ಲಿ ಸಿಲುಕಿದ್ದ ಆಂಬ್ಯುಲೆನ್ಸ್ ವಾಹನವೊಂದು ಕೆಲಕಾಲ ಹರಸಾಹಸಪಟ್ಟು ನಂತರ ಸಂಚರಿಸಿತು.

ಕಾಮಗಾರಿ ವಿಳಂಬದ ವಿರುದ್ಧ ಸ್ಥಳೀಯರು ಆಕ್ರೋಶಗೊಂಡು ಕ್ಷೇತ್ರದ ಶಾಸಕ ಪೊನ್ನಣ್ಣ ಅವರ ಗಮನಕ್ಕೂ ತಂದಿದ್ದರು. ಸಿದ್ದಾಪುರಕ್ಕೆ ಬಂದ ಶಾಸಕರು ಗುತ್ತಿಗೆದಾರನನ್ನು ತರಾಟೆಗೆ ತೆಗೆದುಕೊಂಡು ಕಾಮಗಾರಿಯನ್ನು ಪೂರ್ಣಗೊಳಿಸಬೇಕೆಂದು ಖಡಕ್ ಸೂಚನೆ ನೀಡಿದ್ದರು. ನಂತರ ದಿನಗಳಲ್ಲಿ ಶುರುವಾದ ಮಳೆಯಿಂದ ಕಾಮಗಾರಿಯನ್ನು ಮುಂದುವರಿಸದೆ ಸ್ಥಗಿತಗೊಳಿಸ ಲಾಗಿತ್ತು. ಇದೀಗ ಮತ್ತೆ ಕಾಮಗಾರಿ ಪ್ರಾರಂಭಿಸಿರುವುದರಿಂದ ವಾಹನ ಸವಾರರು, ಸ್ಥಳೀಯರು ಸಮಸ್ಯೆ ಎದುರಿಸುವಂತಹ ಪರಿಸ್ಥಿತಿ ನಿರ್ಮಾಣವಾಯಿತು. ವಾಹನ ಸಂಚಾರ ಸುಗಮಗೊಂಡ ನಂತರ ಕೆಸರು ರಸ್ತೆಗೆ ವೆಟ್ ಮಿಕ್ಸ್ ಜಲ್ಲಿಯನ್ನು ಹಾಕಿ ಸಮತಟ್ಟು ಮಾಡಿದರು. ಸಿದ್ದಾಪುರ ಪೊಲೀಸರು ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಲು ಹರಸಹಾಸ ಪಡುವಂತಾಯಿತು.

” ಕಳೆದ ನವೆಂಬರ್‌ನಿಂದ ಈ ರಸ್ತೆ ಕಾಮಗಾರಿ ನಡೆಸಲಾಗುತ್ತಿದ್ದು,ಇದುವರೆಗೆ ಪೂರ್ಣಗೊಂಡಿಲ್ಲ.ಇದರಿಂದ ನಿತ್ಯ ಇಲ್ಲಿನ ನಿವಾಸಿಗಳು ಸಮಸ್ಯೆ ಎದುರಿಸುವಂತಾಗಿದೆ. ರಸ್ತೆಗೆ ಮಣ್ಣು ತಂದು ಹಾಕಿರುವುದರಿಂದ ಇಲ್ಲಿ ಸಂಚರಿಸಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆದಷ್ಟು ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು.”

-ರೀಶಾ ಸುರೇಂದ್ರನ್, ಸ್ಥಳೀಯ ನಿವಾಸಿ

” ಸಿದ್ದಾಪುರ ಭಾಗದ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿವೆ. ತಂತ್ರಜ್ಞಾನ ಯುಗದಲ್ಲಿ ಒಂದು ಕಿ.ಮೀ. ರಸ್ತೆಯನ್ನು ಒಂದು ದಿನದಲ್ಲೇ ಡಾಂಬರೀಕರಣ ಮಾಡಬಹುದು. ಆದರೆ, ಒಂದು ವರ್ಷವಾಗುತ್ತಾ ಬಂದರೂ ಕಾಮಗಾರಿ ಪೂರ್ಣ ಗೊಂಡಿಲ್ಲ. ಅಭಿವೃದ್ಧಿ ಏನು ಎಂಬುದನ್ನು ಈಗ ಎಲ್ಲರೂ ನೋಡುವಂತಾಗಿದೆ.”

-ರೂಪೇಶ್, ಬಿಜೆಪಿ ಶಕ್ತಿಕೇಂದ್ರ ಅಧ್ಯಕ್ಷ, ಸಿದ್ದಾಪುರ

ಆಂದೋಲನ ಡೆಸ್ಕ್

Recent Posts

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

1 hour ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

1 hour ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

2 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

5 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

5 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

5 hours ago