ಮಕ್ಕಳ ಸುರಕ್ಷತೆ ಮತ್ತು ಶಾಲಾ ಪ್ರಯಾಣ ಸುಗಮಗೊಳಿಸುವ ಉದ್ದೇಶ
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸು
೧೨ ನೇ ತರಗತಿವರೆಗೆ ಗಂಡು ಮಕ್ಕಳಿಗೂ ಉಚಿತ ಪ್ರಯಾಣಕ್ಕೆ ಸಲಹೆ
ಸಾರಿಗೆ ರೂಪುರೇಷೆ:
* ಶಾಲಾ-ಕಾಲೇಜು ಸಮಯಕ್ಕೆ ಅಗತ್ಯ ಹೆಚ್ಚುವರಿ ವಿಶೇಷ ಬಸ್ ಸೌಲಭ್ಯ
* ಎಲ್ಲಾ ಬಸ್ಗಳಲ್ಲಿ ಸಿಸಿಟಿವಿ ಕಡ್ಡಾಯ, ಜಿಪಿಎಸ್ ನಿಗಾ, ತುರ್ತು ಪ್ಯಾನಿಕ್ ಬಟನ್ ಅಳವಡಿಕೆ
* ಮಕ್ಕಳ ಸಹಾಯವಾಣಿ ೧೦೯೮ ಪ್ರದರ್ಶಿಸುವುದು ಕಡ್ಡಾಯ
* ಬಸ್ ಸೇವೆಯಲ್ಲಿ ಮಾರ್ಗ ಮತ್ತು ಸಮಯ ಪಾಲನೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು
* ಬಸ್ ಚಾಲಕರು, ಸಿಬ್ಬಂದಿಗೆ ಮಕ್ಕಳ ಹಕ್ಕು ಕುರಿತು ತರಬೇತಿ, ಪ್ರತಿವರ್ಷ ರಿಫ್ರೆಶರ್ ಕೋರ್ಸ್ ಕಡ್ಡಾಯ
* ಹೆಚ್ಚಿನ ವಿದ್ಯಾರ್ಥಿನಿಯರು ಇರುವ ರೂಟ್ಗಳಲ್ಲಿ ಮಹಿಳಾ ಕಂಡಕ್ಟರ್ ಕಡ್ಡಾಯ
ಬೆಂಗಳೂರು: ಶಾಲಾ ಸಮಯದಲ್ಲಿ ಬಸ್ಗಳು ಸಮಯಕ್ಕೆ ಸರಿಯಾಗಿ ಬಾರದಿರುವುದು, ಹೆಚ್ಚಿದ ಒತ್ತಡ, ಬಸ್ಗಳ ಕೊರತೆಯ ಹಿನ್ನೆಲೆಯಲ್ಲಿ ಮಕ್ಕಳು ಅನುಭವಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ರೂಪಿಸಲು ಸರ್ಕಾರ ಮುಂದಾಗಿದೆ.
ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಜಾರಿಯಾದ ನಂತರ ಬಸ್ಗಳ ಸಮಸ್ಯೆ ಹೆಚ್ಚಾಗಿ ವಿದ್ಯಾರ್ಥಿಗಳು ಪರಿಪಾಟಲು ಪಡುವಂತಾಗಿದೆ. ಈ ವಿಷಯ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಬಾಗಿಲು ತಟ್ಟಿತ್ತು. ಇದನ್ನು ಸಮಗ್ರವಾಗಿ ಅಧ್ಯಯನ ಮಾಡಿದ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಕ್ಕಳಿಗೆ ಸುರಕ್ಷತೆ ಹಾಗೂ ವಿಶ್ವಾಸಾರ್ಹ ಸಾರಿಗೆ ಸೌಲಭ್ಯ ಒದಗಿಸಲು ವಿದ್ಯಾರ್ಥಿ ಸ್ನೇಹಿ ಸಾರಿಗೆ ವ್ಯವಸ್ಥೆ ಅನುಷ್ಠಾನ ಮಾಡುವಂತೆ ಕರ್ನಾಟಕ ಸರ್ಕಾರಕ್ಕೆ ಶಿಫಾರಸು ಮಾಡಿತ್ತು.
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರ ಸೂಚನೆ ಮೇರೆಗೆ ಈ ಶಿಫಾರಸನ್ನು ಪರಿಶೀಲಿಸಿ ಕ್ರಮ ವಹಿಸುವಂತೆ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿನ ಕಾರ್ಯದರ್ಶಿ (ಸಾರಿಗೆ ಇಲಾಖೆ), ಕೆಎಸ್ಆರ್ಟಿಸಿ, ಬಿಎಂಟಿಸಿ, ವಾಯವ್ಯ ಕರ್ನಾಟಕ ಸಾರಿಗೆ ನಿಗಮ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕರಿಗೆ ನಿರ್ದೇಶಿಸಿದ್ದಾರೆ.
ರಾಜ್ಯದಲ್ಲಿ ಗ್ರಾಮೀಣ ಮತ್ತು ಹಿಂದುಳಿದ ವರ್ಗಗಳ ಮಕ್ಕಳು ಹೆಚ್ಚಾಗಿ ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ಸಾರ್ವಜನಿಕ ಸಾರಿಗೆಯನ್ನೇ ಅವಲಂಬಿಸಿದ್ದು, ಮಕ್ಕಳು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಬಸ್ಗಳಿಂದ ಬಿದ್ದು ಗಾಯಗೊಂಡಿರುವ ಪ್ರಕರಣಗಳೂ ಇವೆ. ಇದನ್ನು ತಪ್ಪಿಸಲು ವಿದ್ಯಾರ್ಥಿ ಸ್ನೇಹಿ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು ಎಂದು ಕರ್ನಾಟಕ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸರ್ಕಾರಕ್ಕೆ ಶಿಫಾರಸು ಮಾಡಿದೆ.
ಈಗಾಗಲೇ ಹೆಣ್ಣು ಮಕ್ಕಳ ಉಚಿತ ಪ್ರಯಾಣಕ್ಕೆ ಅವಕಾಶವಿದೆ. ಉಚಿತ ಪ್ರಯಾಣದ ಅವಕಾಶವನ್ನು ೧೨ ನೇ ತರಗತಿವರೆಗೆ ಗಂಡು ಮಕ್ಕಳಿಗೂ ವಿಸ್ತರಿಸಬೇಕು. ಪ್ರತಿ, ಶಾಲೆ-ಕಾಲೇಜು ಮಾರ್ಗದಲ್ಲಿ ಓದುತ್ತಿರುವ ಮಕ್ಕಳ ನಿಖರ ದತ್ತಾಂಶ ಸಂಗ್ರಹಿಸಿ ರೂಟ್ ಪ್ಲಾನಿಂಗ್ ಮಾಡಬೇಕು. ಸಾರಿಗೆ ವ್ಯವಸ್ಥೆ ಶಿಕ್ಷಣಕ್ಕೆ ಅಡ್ಡಿಯಾಗಬಾರದು ಎಂದು ಸೂಚಿಸಿದೆ. ಗ್ರಾಮೀಣ ಮಾರ್ಗಗಳಲ್ಲಿ ವಿಶೇಷ ಶಾಲಾ ಮತ್ತು ಕಾಲೇಜು ಬಸ್ ಗಳನ್ನು ಕಾರ್ಯಾಚರಿಸಬೇಕು , ತರಗತಿ ಸಮಯಕ್ಕೆ ತಕ್ಕಂತೆ ಬೆಳಿಗ್ಗೆ ಮತ್ತು ಸಂಜೆ ಹೆಚ್ಚುವರಿ ಟ್ರಿಪ್ಗಳನ್ನು ಜಾರಿಗೊಳಿಸಬೇಕು ಎಂದು ಶಿಫಾರಸು ಮಾಡಿದೆ.
ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…
ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…
ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…
ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…