Andolana originals

ಟಿಸಿ ಪಡೆದು ಬೇರೆ ಶಾಲೆಗೆ ಸೇರುತ್ತಿರುವ ವಿದ್ಯಾರ್ಥಿಗಳು

• ಮಂಜು ಕೋಟೆ

ಎಚ್.ಡಿ.ಕೋಟೆ: ಪಟ್ಟಣದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಉನ್ನತೀಕರಿಸಿದ ಮಾದರಿ ಶಾಲೆಯಲ್ಲಿ ಜಿಪಿಟ ಶಿಕ್ಷಕರುಗಳಿಲ್ಲದೆ ಸರಿಯಾಗಿ ಪಾಠ ನಡೆಯದೆ ಅನೇಕ ವಿದ್ಯಾರ್ಥಿಗಳು ಬೇರೆ ಶಾಲೆಗಳಿಗೆ ಸೇರ್ಪಡೆಗೊಳ್ಳುತ್ತಿದ್ದಾರೆ.

156 ವರ್ಷಗಳ ಹಿಂದೆ ಬ್ರಿಟಿಷರ ಕಾಲ ದಲ್ಲಿ ಪಟ್ಟಣದ ಒಂದನೇ ಮುಖ್ಯ ರಸ್ತೆಯಲ್ಲಿ ನಿರ್ಮಾಣಗೊಂಡಿರುವ ಬಾಲಕರ ಹಿರಿಯ ಪ್ರಾಥಮಿಕ ಮಾದರಿ ಶಾಲೆಯಲ್ಲಿ ಕೆಲವು ವರ್ಷಗಳ ಹಿಂದೆ 300ರಿಂದ 400 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಅನೇಕ ಖಾಸಗಿ ಶಾಲೆಗಳು ಮತ್ತು ಸರ್ಕಾರಿ ಶಾಲೆಗಳು ಹೆಚ್ಚಾಗಿ ಆರಂಭಗೊಂಡ ಹಿನ್ನೆಲೆಯಲ್ಲಿ ಪ್ರಸ್ತುತ ಈ ಶಾಲೆಯಲ್ಲಿ 70 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ

2012ರಲ್ಲಿ 7ನೇ ತರಗತಿಯವರೆಗಿದ್ದ ಈ ಶಾಲೆಯನ್ನು ಉನ್ನತೀಕರಿಸಿದ ಶಾಲೆಯಾಗಿ ಮಾರ್ಪಡಿಸಿ, 8ನೇ ತರಗತಿಯನ್ನು ಪ್ರಾರಂಭಿಸಲಾಯಿತು. ಅಂದಿನಿಂದ ಈ ಸಾಲಿನವರೆಗೂ 40 ರಿಂದ 50 ವಿದ್ಯಾರ್ಥಿ ಗಳು 8ನೇ ತರಗತಿಯಲ್ಲಿ ವಿದ್ಯಾಭ್ಯಾಸ ಪಡೆಯುತ್ತಿದ್ದಾರೆ.

ಆದರೆ, ಜನಪ್ರತಿನಿಧಿಗಳ ಮತ್ತು ಶಿಕ್ಷಣ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿಯಿಂದ ಈ ಶಾಲೆಯಲ್ಲಿ ಮೂಲಸೌಕರ್ಯಗಳು ಮತ್ತು ಸಮರ್ಪಕವಾಗಿ ಶಿಕ್ಷಕರುಗಳು ಇಲ್ಲ ದಿರುವುದರಿಂದ ವಿದ್ಯಾರ್ಥಿಗಳಿಗೆ ಅನೇಕ ವಿಷಯಗಳ ಬೋಧನೆಗೆ ಅಡ್ಡಿಯಾಗಿದೆ. ಹೀಗಾಗಿ ಈ ಸಾಲಿನಲ್ಲಿ 22 ವಿದ್ಯಾರ್ಥಿಗಳ ಪೈಕಿ ಈಗ 15 ವಿದ್ಯಾರ್ಥಿಗಳು ಮಾತ್ರ ಶಾಲೆಯಲ್ಲಿ ಉಳಿದುಕೊಂಡಿದ್ದಾರೆ. ಉಳಿದ 7 ಮಕ್ಕಳು ಟಿಸಿ ಪಡೆದುಕೊಂಡು ಬೇರೆ ಶಾಲೆಗೆ ಸೇರ್ಪಡೆಗೊಂಡಿದ್ದಾರೆ

ಈ ಸರ್ಕಾರಿ ಶಾಲೆಯಲ್ಲಿ ಮುಖ್ಯಶಿಕ್ಷಕರು ಸೇರಿ ಕೇವಲ ಮೂವರು ಶಿಕಕರು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ವಿದ್ಯಾರ್ಥಿ ಗಳ ಸಂಖ್ಯೆಗೆ ಅನುಗುಣವಾಗಿ 7 ಶಿಕ್ಷಕರು ಇರಬೇಕಾಗಿದೆ

ಎಂಟನೇ ತರಗತಿಗೆ ಪಾಠ ಮಾಡಬೇ ಕಾದರೆ ಜಿಪಿಟಿ ಶಿಕ್ಷಕರು ಆಗತ್ಯ. ಆದರೆ ಪಿಎಸ್‌ಟಿ ಶಿಕ್ಷಕರು ಮಾತ್ರ ಈ ಶಾಲೆಯ ಲ್ಲಿರುವುದರಿಂದ ವಿದ್ಯಾರ್ಥಿಗಳಿಗೆ ಸಮರ್ಪಕವಾದ ಶಿಕ್ಷಣ ದೊರೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ

ಇರುವ ಶಿಕ್ಷಕರನೂ ಬೇರೆ ಕಡೆಗೆ ವರ್ಗಾವಣೆ ಮಾಡಿರುವುದು ಹಾಗೂ ಮೂಲಸೌಕರ್ಯಗಳನ್ನು ನೀಡದೆ ಇರುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಕುಂಠಿತವಾಗುತ್ತಿದೆ ಎನ್ನುವುದು ಹಲವರ ಆರೋಪ. ಇದೇ ರೀತಿ ಮುಂದುವರಿದರೆ ಶಾಲೆ ಮುಚ್ಚುವ ಸ್ಥಿತಿ ಬರಬಹುದು ಎಂಬ ಆತಂಕ ಎದುರಾಗಿದೆ.

ಕೋಟ್ಸ್‌))

ಒಂದರಿಂದ ಏಳನೇ ತರಗತಿವರೆಗೆ ಈ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದೆ. 8ನೇ ತರಗತಿಯಲ್ಲಿ ಶಿಕ್ಷಕರಿಲ್ಲದೆ ಅನೇಕ ವಿಷಯಗಳಲ್ಲಿ ಪಾಠ ನಡೆಯದೆ ಇರುವುದರಿಂದ ಆತಂಕಗೊಂಡು ಟಿಸಿ ತೆಗೆದುಕೊಂಡು ಬೇರೆ ಶಾಲೆಗೆ ಸೇರ್ಪಡೆಗೊಂಡಿದ್ದೇನೆ.
-ಮಹಾದೇವಸ್ವಾಮಿ ಕಿಟ್ಟಿ, ವಿದ್ಯಾರ್ಥಿ

8ನೇ ತರಗತಿಯಲ್ಲಿ ಜಿಪಿಟಿ ಹುದ್ದೆಯ ಶಿಕ್ಷಕರು ಯಾರೂ ಇಲ್ಲದೆ ವಿದ್ಯಾರ್ಥಿಗಳಿಗೆ ಬೋಧನೆ ಮಾಡಲು ತೊಂದರೆಯಾಗುತ್ತಿದೆ. ಇರುವ ಶಿಕ್ಷಕರೇ ಆದಷ್ಟು ಪಾಠ ಮಾಡುತ್ತಿದ್ದಾರೆ. ಶಿಕ್ಷಕರ ಕೊರತೆ ಇದ್ದರೂ ಇಲ್ಲಿರುವ ಶಿಕ್ಷಕರನ್ನೇ ಬೇರೆ ಶಾಲೆಗೆ ವರ್ಗಾವಣೆ ಮಾಡಿರುವ ಬಗ್ಗೆ ಬಿಇಒ ಮಾರಯ್ಯ ಮತ್ತು ಸಿಆರ್‌ಪಿ ಕೃಷ್ಣಯ್ಯ ಅವರಿಗೆ ಮಾಹಿತಿ ನೀಡಲಾಗಿದೆ. ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಕೆಲ ವಿದ್ಯಾರ್ಥಿಗಳು ಟಿಸಿ ಪಡೆದುಕೊಂಡು ಬೇರೆ ಶಾಲೆಗಳಿಗೆ ಸೇರ್ಪಡೆಗೊಳ್ಳುತ್ತಿದ್ದಾರೆ.
-ರಾಮಚಂದ್ರ, ಮುಖ್ಯಶಿಕ್ಷಕರು

ಶಿಕ್ಷಕರ ಕೊರತೆಯಿಂದಾಗಿ ವಿದ್ಯಾರ್ಥಿಗಳು ಟಿಸಿ ಪಡೆದು ಬೇರೆ ಶಾಲೆಗೆ ಹೋಗುತ್ತಿರುವ ಕುರಿತು ಮಾಹಿತಿ ಇರಲಿಲ್ಲ. ಈ ಬಗ್ಗೆ ಬಿಇಒ ಅವರಿಂದ ಮಾಹಿತಿ ಪಡೆದು ಸೂಕ್ತ ಕ್ರಮ ಕೈಗೊಳ್ಳಲಾಗುವುದ.
-ಜವರೇಗೌಡ, ಡಿಡಿಪಿಐ

ಆಂದೋಲನ ಡೆಸ್ಕ್

Recent Posts

ವಾಹನ ಸವಾರರ ಗಮನಕ್ಕೆ ; ಏಪ್ರಿಲ್‌ 1 ರಿಂದ ಟೋಲ್‌ಗಳಲ್ಲಿ ಇಲ್ಲ ನಗದು ಪಾವತಿ

ಹೊಸದಿಲ್ಲಿ : ಮುಂಬರುವ ಏಪ್ರಿಲ್‌ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…

5 hours ago

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಗಂಭೀರ ; ಅರಣ್ಯ ಇಲಾಖೆ ಸಿಬ್ಬಂದಿಗೂ ಗಾಯ

ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…

6 hours ago

ಫೆ.28ರಿಂದ ಪಿಯುಸಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ

ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…

7 hours ago

ಚಿರತೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…

7 hours ago

ಸ್ನೇಹಮಯಿ ಕೃಷ್ಣ ಮನೆಯಲ್ಲಿ ಸಿಸಿಬಿ ಪೊಲೀಸರಿಂದ ತಲಾಶ್‌ ; ಮಹತ್ವದ ದಾಖಲೆ ಲಭ್ಯ

ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…

7 hours ago

ಹುಲಿ ಕಳೇಬರ ಪತ್ತೆ ಪ್ರಕರಣ : ಓರ್ವ ಬಂಧನ

ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…

7 hours ago