Andolana originals

ಡಿಎಚ್‌ಒ ವರ್ಗಾವಣೆಯಲ್ಲಿ ಎಡವಟ್ಟು

ಕೆ.ಬಿ.ರಮೇಶನಾಯಕ

ಟಿಎಚ್‌ಒ ಹುದ್ದೆಗೆ ಡಿಎಚ್‌ಒ ವರ್ಗಾವಣೆ

ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ

ಮೈಸೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳನ್ನು ಆಮೂಲಾಗ್ರವಾಗಿ ರಾಜ್ಯಸರ್ಕಾರ ವರ್ಗಾವಣೆ ಮಾಡಿದ್ದು, ಡಿಎಚ್‌ಒ ಆಗಿ ಕಾರ್ಯ ನಿರ್ವಹಿಸುತ್ತಿದ್ದವರನ್ನು ತಾಲ್ಲೂಕು ಆರೋಗ್ಯಾಧಿಕಾರಿಗಳಾಗಿ ವರ್ಗಾಯಿಸಿ ಹೊರಡಿಸಿರುವ ಆದೇಶ ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿರುವ ಅಧಿಕಾರಿಗಳು ಈಗ ತಾಲ್ಲೂಕು ಮಟ್ಟದ ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸಬೇಕಾಗಿದೆ. ಇಲಾಖೆಯಲ್ಲಿ ಇದು ಸಾಮಾನ್ಯ ಪ್ರಕ್ರಿಯೆ ಎನ್ನುವ ಮಾತನ್ನು ಹೇಳಿದರೂ ಜಿಲ್ಲೆಗೆ ಮುಖ್ಯಸ್ಥರಾಗಿದ್ದ ಅಧಿಕಾರಿ ತಾಲ್ಲೂಕಿಗೆ ಸೀಮಿತವಾಗಬೇಕಿರುವುದರಿಂದ ಗೊಂದಲ ಮತ್ತು ಮುಜುಗರಕ್ಕೆ ಸಿಲುಕಿಸುವಂತೆ ಮಾಡಿದೆ. ಇದರಿಂದಾಗಿ ಕೆಲವರು ನ್ಯಾಯಾಲಯದ ಮೊರೆ ಹೋಗಿ ರಾಜ್ಯ ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ತಂದರೆ, ಹಲವರು ಕರ್ನಾಟಕ ಆಡಳಿತ ನ್ಯಾಯ ಮಂಡಳಿಯ ಕದ ತಟ್ಟಿದ್ದಾರೆ .

ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಪಿ.ಸಿ.ಕುಮಾರಸ್ವಾಮಿ ಅವರನ್ನು ತಿ.ನರಸೀಪುರ ತಾಲ್ಲೂಕು ಆರೋಗ್ಯಾಧಿಕಾರಿಯನ್ನಾಗಿ, ರಾಮನಗರ ಜಿಲ್ಲೆಯ ಸಿಎಂಒ ಡಾ. ಬಿ.ಜಿ.ಕುಮಾರಸ್ವಾಮಿ ಅವರನ್ನು ಮೈಸೂರು ತಾಲ್ಲೂಕು ಟಿಎಚ್‌ಒ ಆಗಿ ಹೀಗೆ ಅನೇಕರನ್ನು ವರ್ಗಾವಣೆ ಮಾಡಲಾಗಿದೆ. ಇದನ್ನು ಸಾರ್ವಜನಿಕರ ವಲಯದಲ್ಲಿ ಹಿಂಬಡ್ತಿ ಎಂದು ಹೇಳಲಾಗುತ್ತಿದೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಜಿಲ್ಲಾ ಆರ್‌ಸಿಎಚ್ ಅಧಿಕಾರಿಗಳು, ಮುಖ್ಯ ವೈದ್ಯಾಧಿಕಾರಿಗಳು, ಹಿರಿಯ ತಜ್ಞ ವೈದ್ಯರು, ಎಸ್‌ಎಂಒಗಳು, ಪತ್ರಾಂಕಿತ ಅಧಿಕಾರಿಗಳು, ಕಾರ್ಯಕ್ರಮ ಅಧಿಕಾರಿಗಳು, ತಾಲ್ಲೂಕು ಆರೋಗ್ಯಾಧಿಕಾರಿಗಳು ಸೇರಿದಂತೆ ಇನ್ನಿತರ ವೃಂದದ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಡಿ.೧೨ರಂದು ಆದೇಶ ಹೊರಡಿಸಿತ್ತು. ಸರ್ಕಾರ ಸೂಚಿಸಿದ ಸ್ಥಳಗಳಿಗೆ ತೆರಳಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ನೀಡಲಾಗಿತ್ತು.

ಆದರೆ, ಸರ್ಕಾರದಿಂದ ಆದೇಶ ಹೊರ ಬೀಳುತ್ತಿದ್ದಂತೆ ಇಲಾಖೆಯಲ್ಲಿ ದೊಡ್ಡ ಚರ್ಚೆ, ಅಸಮಾಧಾನಕ್ಕೂ ಕಾರಣವಾಗಿದೆ. ತುಮಕೂರಿನ ಕೆ.ಆರ್.ಮಂಜುನಾಥ್ ಮತ್ತು ಇತರರುಹೈಕೋರ್ಟ್ ಮೊರೆ ಹೋಗಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಸಿ  ಅಂಡ್ ಆರ್ ನಿಯಮ ಬದಿಗೊತ್ತಿ, ಸೇವಾ ಹಿರಿತನ, ಜೇಷ್ಠತೆಯನ್ನು ಬದಿಗೊತ್ತಿ ವರ್ಗಾವಣೆ ಮಾಡಲಾಗಿದೆ ಎಂದು ಅರ್ಜಿಯಲ್ಲಿ ಹೇಳಿದ್ದರು. ಇದನ್ನು ಪರಿಗಣಿಸಿದ ನ್ಯಾಯಾಲಯವು ಸರ್ಕಾರದ ಆದೇಶಕ್ಕೆ ತಡೆ ನೀಡಿರುವ ಜತೆಗೆ, ಮುಂದಿನ ವಿಚಾರಣೆಯನ್ನು ಜನವರಿ ೩೧ಕ್ಕೆ ಮುಂದೂಡಿದೆ.

ಅಧಿಕಾರಿಗಳಿಗೆ ಸಂಕಟ: ಆರೋಗ್ಯ ಮತ್ತು ಕುಟುಂಬ ಇಲಾಖೆಯಲ್ಲಿ ಜಂಟಿ ನಿರ್ದೇಶಕರ ಹುದ್ದೆಯ ನಂತರ ಮುಂಬಡ್ತಿ ಕೊಡುವುದನ್ನು ಹೊರತುಪಡಿಸಿದರೆ ತಾಲ್ಲೂಕು ಆರೋಗ್ಯಾಧಿಕಾರಿ, ಆರ್‌ಸಿಎಚ್, ಕಾರ್ಯಕ್ರಮ ಅಧಿಕಾರಿ, ಡಿಎಚ್‌ಒಗಳು ಒಂದೇ ಕೇಡರ್‌ನ ಅಧಿಕಾರಿಗಳಾಗಿದ್ದಾರೆ. ಡಿಎಚ್‌ಒ ಸರಿಸಮಾನವಾಗಿ ಟಿಎಚ್‌ಒ, ಮೆಡಿಕಲ್ ಆಫೀಸರ್ ಹುದ್ದೆ ಇಲಾಖೆಯ ಹಂತದಲ್ಲಿ ಸರಿಸಮಾನವಾಗಿದ್ದರೂ ಜಿಲ್ಲಾ ಆರೋಗ್ಯ ಮತ್ತುಕುಟುಂಬ ಕಲ್ಯಾಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದವರನ್ನು ಟಿಎಚ್‌ಒ ಆಗಿ ನೇಮಕ ಮಾಡುವುದು ಅಪರೂಪ. ಡಿಎಚ್‌ಒ ಆಗಿದ್ದವರು ಟಿಎಚ್‌ಒ ಆಗಿ ವರ್ಗಾವಣೆಯಾದರೆ ಅದೊಂದು ಹಿಂಬಡ್ತಿ ಎನ್ನಿಸಿಕೊಳ್ಳುವ ಕಾರಣ ಯಾರೂ ಸರಿಸಮಾನವಾದ ಹುದ್ದೆ ಎನ್ನುವುದನ್ನು ಮುಂದಿಟ್ಟುಕೊಂಡು ಹೋಗಲ್ಲ.

ಆದರೆ, ಸರ್ಕಾರ ಏಕಾಏಕೀ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಪಿ.ಸಿ.ಕುಮಾರಸ್ವಾಮಿ ಅವರನ್ನು ತಿ.ನರಸೀಪುರ ಟಿಎಚ್‌ಒ ಆಗಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆರ್‌ಸಿಎಚ್‌ಒ ಡಾ.ನದೀಮ್ ಅಹ್ಮದ್‌ಗೆ ಹೊಸಕೋಟೆ ಟಿಎಚ್‌ಒ, ಮಂಡ್ಯ ಜಿಲ್ಲೆಯ ಪ್ರಧಾನ ಜಿಲ್ಲಾ ತರಬೇತಿ ಕೇಂದ್ರದ ಡಾ.ಎಚ್.ಎಂ.ಮಮತ ಅವರನ್ನು ನಾಗಮಂಗಲ ತಾಲ್ಲೂಕು ಟಿಎಚ್‌ಒ ಆಗಿ ವರ್ಗಾವಣೆ ಮಾಡಿದೆ.

” ಸರ್ಕಾರ ಹೊಸದಾಗಿ ಪರಿಚಯಿಸಬೇಕೆಂಬ ಕಾರಣಕ್ಕಾಗಿ ಈ ರೀತಿ ಮಾಡಿದೆ. ಕೆಲವರಿಗೆ ವರ್ಗಾವಣೆ ಕೋರಿಕೆ ಮೇರೆಗೆ ಸ್ಥಳ ನಿಗದಿಪಡಿಸಲಾಗಿತ್ತು. ಸರ್ಕಾರದ ಆದೇಶವನ್ನು ಪ್ರಶ್ನಿಸಲಾಗದು. ಆದರೆ, ಕೆಲವರು ಇದನ್ನು ಒಪ್ಪದೆ ನ್ಯಾಯಾ ಲಯದ ಮೊರೆ ಹೋಗಿದ್ದರಿಂದ ತಡೆಯಾಜ್ಞೆ ಸಿಕ್ಕಿದೆ.”

ಹೆಸರು ಹೇಳಲು ಬಯಸದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಿರಿಯ ಅಧಿಕಾರಿ

ಆಂದೋಲನ ಡೆಸ್ಕ್

Recent Posts

ಉಪಸಭಾಪತಿಗೆ ಚಿತ್ರಹಿಂಸೆ ಆರೋಪ : ಐಪಿಎಸ್‌ ಅಧಿಕಾರಿ ಬಂಧನ

ಅಮರಾವತಿ : ಹಿಂದಿನ ವೈಎಸ್‍ಆರ್‍ಸಿಪಿ ಆಡಳಿತದ ಅವಧಿಯಲ್ಲಿ ಆಂಧ್ರ ವಿಧಾನಸಭೆಯ ಪ್ರಸ್ತುತ ಉಪಸಭಾಪತಿ ಕೆ. ರಘುರಾಮ ಕೃಷ್ಣ ರಾಜು ಅವರ…

4 hours ago

ಮಾರ್ಚ್‌ 11ರಿಂದ ವೈದ್ಯಾಧಿಕಾರಿಗಳ ಮುಷ್ಕರ : ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11ರಿಂದ…

4 hours ago

ಟ್ರಂಪ್‌ ಜಾಗತಿಕ ಸುಂಕ ರದ್ದು : ವರದಿ

ವಾಷಿಂಗ್ಟನ್ : ಕಾನೂನುಬಾಹಿರವಾಗಿ ಟ್ರಂಪ್ ವಿಧಿಸಿದ್ದ ಆಮದು ಸುಂಕ ಸಂಗ್ರಹವನ್ನ ಅಮೆರಿಕ ನಿಲ್ಲಿಸಲಿದೆ ಎಂದು ಯುಎಸ್ ಕಸ್ಟಮ್ಸ್ ಮತ್ತು ಗಡಿ…

5 hours ago

ಸಫಾರಿ ಆದಾಯದ ಶೇ.35 ಭಾಗ ಕಾಡಿನಂಚಿನ ಜನಕಲ್ಯಾಣಕ್ಕೆ ಬಳಕೆ : ಖಂಡ್ರೆ

ಬೆಂಗಳೂರು : ಸಫಾರಿಯಿಂದ ಬರುವ ಆದಾಯದಲ್ಲಿ ಶೇ.35ರಷ್ಟನ್ನು ಕಾಡಿನಂಚಿನ ಗ್ರಾಮದ ಜನರ ಕಲ್ಯಾಣಕ್ಕಾಗಿ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಗ್ರಾಮಗಳಲ್ಲಿ…

5 hours ago

ವನ್ಯಜೀವಿ ಸಂಚಾರ | ಕಾಡಂಚಿನ ಗ್ರಾಮದ ಮುಖಂಡರಿಗೆ ಮಾಹಿತಿ ರವಾನಿಸಲು ಖಂಡ್ರೆ ಸೂಚನೆ

ಬೆಂಗಳೂರು : ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ…

6 hours ago

ಮನರೇಗಾ ನಾಶ | ಜನರ ಅನ್ನ ಕಿತ್ತುಕೊಳ್ಳುತ್ತಿರುವ ಕೇಂದ್ರ ; ಸಿಎಂ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ : ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್…

6 hours ago