Andolana originals

ಕಬಿನಿ ಹಿನ್ನೀರು ವ್ಯಾಪ್ತಿಯಲ್ಲಿ ಮನೆಗಳ ಮುಳುಗಡೆ

ಎಡೆಬಿಡದೆ ಸುರಿಯುತ್ತಿರುವ ಮಳೆ, ನದಿ ಪಾತ್ರದ ಜನರಿಗೆ ಕಾಳಜಿ ಕೇಂದ್ರ

     ಮಂಜು ಕೋಟೆ

ಎಚ್.ಡಿ.ಕೋಟೆ: ಕೇರಳದ ಗಡಿಯಲ್ಲಿ ಮತ್ತು ತಾಲ್ಲೂಕಿನಲ್ಲಿ ಭಾರಿ ಮಳೆಯ ಆರ್ಭಟ ದಿಂದ ಕಬಿನಿ ಜಲಾಶಯದ ಹಿನ್ನೀರಿನ ಮತ್ತು ನದಿಯಿಂದ ಮದ್ದೂರು ವ್ಯಾಪ್ತಿಯ ಅನೇಕ ಮನೆಗಳು, ಸೇತುವೆಗಳು, ಮುಳುಗಡೆ ಗೊಂಡು ಜನಸಾಮಾನ್ಯರು ಕಂಗಲಾಗಿದ್ದಾರೆ.

ಒಂದು ವಾರದಿಂದ ಸುರಿಯುತ್ತಿದ್ದ ಮಳೆಗಿಂತ ಬುಧವಾರ ಮತ್ತು ಗುರುವಾರ ಸುರಿದ ಭಾರಿ ಮಳೆ ಹಿನ್ನೆಲೆಯಲ್ಲಿ ಕಬಿನಿ ಜಲಾ ಶಯಕ್ಕೆ ಒಳಹರಿವಿನ ಪ್ರಮಾಣ ಕ್ಷಣ ಕ್ಷಣಕ್ಕೂ ಹೆಚ್ಚಳವಾಗುತ್ತಿರುವುದರಿಂದ ಕಬಿನಿ ಜಲಾಶಯದ ಹಿನ್ನೀರು ಪ್ರದೇಶ ವ್ಯಾಪ್ತಿಯಲ್ಲಿ ರುವ ಡಿ.ಬಿ.ಕುಪ್ಪೆ ಗ್ರಾಮ ಪಂಚಾಯಿತಿಯ ಮತ್ತೂರು, ಆನೆಮಾಳ, ತಿಮ್ಮನಹೊಸಳ್ಳಿ ಸೇರಿದಂತೆ ನದಿ ಪಾತ್ರದಲ್ಲಿರುವ ಗ್ರಾಮಗಳಲ್ಲಿ ಪ್ರವಾಹದ ಭೀತಿ ಎದುರಾಗಿದ್ದು, ಸುಮಾರು 15ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿವೆ.

ಹಿನ್ನೀರು ವ್ಯಾಪ್ತಿಯಲ್ಲಿ ನದಿಯಿಂದ 70,000 ಕ್ಯೂಸೆಕ್ಸ್ ನೀರು ಹೊರ ಹೋಗು ತಿರುವುದರಿಂದ ಜಲಾಶಯದ ಮುಂಭಾ ಗದ ವ್ಯಾಪ್ತಿಯಲ್ಲಿರುವ ಮಾದಾ ಪುರ ಮತ್ತು ಹೊಂಬರಗಳಿ ಸಮೀಪದ ಕಬಿನಿ ಸೇತುವೆಗಳು ಮುಳುಗಡೆಗೊಂಡಿವೆ.

ಡಿ.ಬಿ.ಕುಪ್ಪೆ ಗ್ರಾಪಂ ವ್ಯಾಪ್ತಿ ಯಲ್ಲಿ ಜಲಾ ವೃತಗೊಂಡಿರುವ ಗ್ರಾಮಗಳಿಗೆ ತಹಸಿಲ್ದಾ‌ ಶ್ರೀನಿವಾಸ್‌ ಅವರ ಜೊತೆಗೂಡಿ ಅಧಿಕಾರಿ ಗಳ ತಂಡ ಗುರುವಾರ ಭೇಟಿ ನೀಡಿ ಜನರು ಸುರಕ್ಷಿತವಾದ ಸ್ಥಳಕ್ಕೆ ತೆರಳುವಂತೆ ಸೂಚಿಸಿದ್ದಾರೆ. ಈ ಭಾಗದಲ್ಲಿ ಗಂಜಿ ಕೇಂದ್ರವನ್ನು ತೆರೆಯಲಾಗಿದೆ. ಸಾರ್ವ ಜನಿಕರು ಇದನ್ನು ಸದುಪಯೋಗಪಡಿಸಿ ಕೊಳ್ಳಬೇಕು, ಯಾರು ನದಿಯ ಬಳಿ ಹೋಗ ಬಾರದೆಂದು ಮನವಿ ಮಾಡಿದ್ದಾರೆ.

ಇದೇ ಸಂದರ್ಭದಲ್ಲಿ ಪರಿಶಿಷ್ಟ ಪಂಗಡದ ಕಲ್ಯಾಣ ಅಧಿಕಾರಿ ಮಹೇಶ್, ಕಂದಾಯ ಅಧಿಕಾರಿ ಗಳಾದ ಯೋಗೇಂದ್ರಕುಮಾ‌ ಮುಳಗಾವಿ, ಗೌಸ್ ಮಹಮದ್‌ ಉಪಸ್ಥಿತರಿದ್ದರು.

ಕಬಿನಿ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು ಹರಿದುಬರುತ್ತಿದ್ದು, ಆದಷ್ಟು ನೀರನ್ನು ಹೊರ ಬಿಡಲಾಗುತ್ತಿದೆ. ನದಿ ಭಾಗದ ಅನೇಕ ಸೇತುವೆಗಳು ಮುಳುಗಡೆಗೊಂಡಿವೆ. ಹಿನ್ನೀರಿನ ವ್ಯಾಪ್ತಿಯಲ್ಲಿ ಅನೇಕ ಮನೆಗಳು ಮುಳುಗಡೆಗೊಂಡಿದ್ದು, ಸಾರ್ವಜನಿಕರು ನದಿಯ ಬಳಿ ಹೋಗಬಾರದು, ಸುರಕ್ಷಿತವಾದ ಸ್ಥಳಕ್ಕೆ ತೆರಳಬೇಕು. ಯಾವ ಕ್ಷಣದಲ್ಲಾದರೂ ಮತ್ತಷ್ಟು ನೀರು ಬರುವ ಸಾಧ್ಯತೆಗಳಿದೆ.
-ಚಂದ್ರಶೇಖರ್, ಇಇ, ಕಬಿನಿ ಜಲಾಶಯ

ಎಚ್.ಡಿ.ಕೋಟೆ ತಾಲ್ಲೂಕಿನ ಗಡಿಭಾಗದಲ್ಲಿ ಭಾರಿ ಮಳೆ ಆಗುತ್ತಿರುವುದರಿಂದ ಜಲಾಶಯದ ಹಿನ್ನೀರಿನ ಭಾಗದಲ್ಲಿ ಅನೇಕ ಮನೆಗಳು ಜಲಾವೃತಗೊಂಡಿವೆ. ಅಲ್ಲಿಗೆ ಈಗಾಗಲೇ ಭೇಟಿ ನೀಡಿ ಯಾವುದೇ ಸಮಸ್ಯೆಗಳು ಎದುರಾಗದಂತೆ ಕ್ರಮ ಕೈಗೊಳ್ಳಲಾಗಿದ್ದು, ಗಂಜಿ ಕೇಂದ್ರವನ್ನು ತೆರೆಯಲಾಗಿದೆ. ಜನರನ್ನು ಸುರಕ್ಷಿತವಾದ ಸ್ಥಳಕ್ಕೆ ಹೋಗುವಂತೆ ತಿಳಿಸಲಾಗಿದೆ. ಅಧಿಕಾರಿಗಳ ತಂಡ ವಾಸ್ತವ್ಯ ಹೂಡಿದೆ.

-ಶ್ರೀನಿವಾಸ್‌, ತಹಸಿಲ್ದಾ‌ರ್

ಆಂದೋಲನ ಡೆಸ್ಕ್

Recent Posts

ಮೈಸೂರಿನ ಸಮಗ್ರ ಅಭಿವೃದ್ಧಿಗೆ ಆದ್ಯತೆ

ನಗರಪಾಲಿಕೆಯಲ್ಲಿ 2026-27ನೇ ಸಾಲಿನ ಆಯವ್ಯಯ ಮಂಡನೆ ಮೈಸೂರು : ರಾಜಧಾನಿ ಬೆಂಗಳೂರು ನಂತರ ವೇಗವಾಗಿ ಬೆಳೆಯುತ್ತಿರುವ ಸಾಂಸ್ಕೃತಿಕ ನಗರಿಯ ಸಮಗ್ರ…

26 mins ago

ಹೈಕಮಾಂಡ್ ಹೇಳುವವರೆಗೂ ನಾನೇ ಸಿಎಂ‌ : ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದ ಎಲ್ಲ 224 ಮಂದಿ ಶಾಸಕರೂ ಮುಖ್ಯ ಮಂತ್ರಿಯಾಗಲು ಅರ್ಹರಿದ್ದಾರೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ…

47 mins ago

ಸರ್ಕಾರದ ಆದೇಶ ಕಡೆಗಣಿಸಿ ಏಕಾತ್ಮ ಮಾನವ ದರ್ಶನ ಸಮ್ಮೇಳನ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಆಯೋಜಿಸಿದ್ದ ಮೂರು ದಿನಗಳ 'ಏಕಾತ್ಮ ಮಾನವ ದರ್ಶನ: ಭಾರತದ ವಿಶ್ವದೃಷ್ಟಿ' ಎಂಬ…

56 mins ago

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

14 hours ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

14 hours ago

ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ : ಸಚಿವ ಖಂಡ್ರೆ ಭರವಸೆ

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…

15 hours ago