Andolana originals

ಕಬಿನಿ ಹಿನ್ನೀರು ವ್ಯಾಪ್ತಿಯಲ್ಲಿ ಮನೆಗಳ ಮುಳುಗಡೆ

ಎಡೆಬಿಡದೆ ಸುರಿಯುತ್ತಿರುವ ಮಳೆ, ನದಿ ಪಾತ್ರದ ಜನರಿಗೆ ಕಾಳಜಿ ಕೇಂದ್ರ

     ಮಂಜು ಕೋಟೆ

ಎಚ್.ಡಿ.ಕೋಟೆ: ಕೇರಳದ ಗಡಿಯಲ್ಲಿ ಮತ್ತು ತಾಲ್ಲೂಕಿನಲ್ಲಿ ಭಾರಿ ಮಳೆಯ ಆರ್ಭಟ ದಿಂದ ಕಬಿನಿ ಜಲಾಶಯದ ಹಿನ್ನೀರಿನ ಮತ್ತು ನದಿಯಿಂದ ಮದ್ದೂರು ವ್ಯಾಪ್ತಿಯ ಅನೇಕ ಮನೆಗಳು, ಸೇತುವೆಗಳು, ಮುಳುಗಡೆ ಗೊಂಡು ಜನಸಾಮಾನ್ಯರು ಕಂಗಲಾಗಿದ್ದಾರೆ.

ಒಂದು ವಾರದಿಂದ ಸುರಿಯುತ್ತಿದ್ದ ಮಳೆಗಿಂತ ಬುಧವಾರ ಮತ್ತು ಗುರುವಾರ ಸುರಿದ ಭಾರಿ ಮಳೆ ಹಿನ್ನೆಲೆಯಲ್ಲಿ ಕಬಿನಿ ಜಲಾ ಶಯಕ್ಕೆ ಒಳಹರಿವಿನ ಪ್ರಮಾಣ ಕ್ಷಣ ಕ್ಷಣಕ್ಕೂ ಹೆಚ್ಚಳವಾಗುತ್ತಿರುವುದರಿಂದ ಕಬಿನಿ ಜಲಾಶಯದ ಹಿನ್ನೀರು ಪ್ರದೇಶ ವ್ಯಾಪ್ತಿಯಲ್ಲಿ ರುವ ಡಿ.ಬಿ.ಕುಪ್ಪೆ ಗ್ರಾಮ ಪಂಚಾಯಿತಿಯ ಮತ್ತೂರು, ಆನೆಮಾಳ, ತಿಮ್ಮನಹೊಸಳ್ಳಿ ಸೇರಿದಂತೆ ನದಿ ಪಾತ್ರದಲ್ಲಿರುವ ಗ್ರಾಮಗಳಲ್ಲಿ ಪ್ರವಾಹದ ಭೀತಿ ಎದುರಾಗಿದ್ದು, ಸುಮಾರು 15ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿವೆ.

ಹಿನ್ನೀರು ವ್ಯಾಪ್ತಿಯಲ್ಲಿ ನದಿಯಿಂದ 70,000 ಕ್ಯೂಸೆಕ್ಸ್ ನೀರು ಹೊರ ಹೋಗು ತಿರುವುದರಿಂದ ಜಲಾಶಯದ ಮುಂಭಾ ಗದ ವ್ಯಾಪ್ತಿಯಲ್ಲಿರುವ ಮಾದಾ ಪುರ ಮತ್ತು ಹೊಂಬರಗಳಿ ಸಮೀಪದ ಕಬಿನಿ ಸೇತುವೆಗಳು ಮುಳುಗಡೆಗೊಂಡಿವೆ.

ಡಿ.ಬಿ.ಕುಪ್ಪೆ ಗ್ರಾಪಂ ವ್ಯಾಪ್ತಿ ಯಲ್ಲಿ ಜಲಾ ವೃತಗೊಂಡಿರುವ ಗ್ರಾಮಗಳಿಗೆ ತಹಸಿಲ್ದಾ‌ ಶ್ರೀನಿವಾಸ್‌ ಅವರ ಜೊತೆಗೂಡಿ ಅಧಿಕಾರಿ ಗಳ ತಂಡ ಗುರುವಾರ ಭೇಟಿ ನೀಡಿ ಜನರು ಸುರಕ್ಷಿತವಾದ ಸ್ಥಳಕ್ಕೆ ತೆರಳುವಂತೆ ಸೂಚಿಸಿದ್ದಾರೆ. ಈ ಭಾಗದಲ್ಲಿ ಗಂಜಿ ಕೇಂದ್ರವನ್ನು ತೆರೆಯಲಾಗಿದೆ. ಸಾರ್ವ ಜನಿಕರು ಇದನ್ನು ಸದುಪಯೋಗಪಡಿಸಿ ಕೊಳ್ಳಬೇಕು, ಯಾರು ನದಿಯ ಬಳಿ ಹೋಗ ಬಾರದೆಂದು ಮನವಿ ಮಾಡಿದ್ದಾರೆ.

ಇದೇ ಸಂದರ್ಭದಲ್ಲಿ ಪರಿಶಿಷ್ಟ ಪಂಗಡದ ಕಲ್ಯಾಣ ಅಧಿಕಾರಿ ಮಹೇಶ್, ಕಂದಾಯ ಅಧಿಕಾರಿ ಗಳಾದ ಯೋಗೇಂದ್ರಕುಮಾ‌ ಮುಳಗಾವಿ, ಗೌಸ್ ಮಹಮದ್‌ ಉಪಸ್ಥಿತರಿದ್ದರು.

ಕಬಿನಿ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು ಹರಿದುಬರುತ್ತಿದ್ದು, ಆದಷ್ಟು ನೀರನ್ನು ಹೊರ ಬಿಡಲಾಗುತ್ತಿದೆ. ನದಿ ಭಾಗದ ಅನೇಕ ಸೇತುವೆಗಳು ಮುಳುಗಡೆಗೊಂಡಿವೆ. ಹಿನ್ನೀರಿನ ವ್ಯಾಪ್ತಿಯಲ್ಲಿ ಅನೇಕ ಮನೆಗಳು ಮುಳುಗಡೆಗೊಂಡಿದ್ದು, ಸಾರ್ವಜನಿಕರು ನದಿಯ ಬಳಿ ಹೋಗಬಾರದು, ಸುರಕ್ಷಿತವಾದ ಸ್ಥಳಕ್ಕೆ ತೆರಳಬೇಕು. ಯಾವ ಕ್ಷಣದಲ್ಲಾದರೂ ಮತ್ತಷ್ಟು ನೀರು ಬರುವ ಸಾಧ್ಯತೆಗಳಿದೆ.
-ಚಂದ್ರಶೇಖರ್, ಇಇ, ಕಬಿನಿ ಜಲಾಶಯ

ಎಚ್.ಡಿ.ಕೋಟೆ ತಾಲ್ಲೂಕಿನ ಗಡಿಭಾಗದಲ್ಲಿ ಭಾರಿ ಮಳೆ ಆಗುತ್ತಿರುವುದರಿಂದ ಜಲಾಶಯದ ಹಿನ್ನೀರಿನ ಭಾಗದಲ್ಲಿ ಅನೇಕ ಮನೆಗಳು ಜಲಾವೃತಗೊಂಡಿವೆ. ಅಲ್ಲಿಗೆ ಈಗಾಗಲೇ ಭೇಟಿ ನೀಡಿ ಯಾವುದೇ ಸಮಸ್ಯೆಗಳು ಎದುರಾಗದಂತೆ ಕ್ರಮ ಕೈಗೊಳ್ಳಲಾಗಿದ್ದು, ಗಂಜಿ ಕೇಂದ್ರವನ್ನು ತೆರೆಯಲಾಗಿದೆ. ಜನರನ್ನು ಸುರಕ್ಷಿತವಾದ ಸ್ಥಳಕ್ಕೆ ಹೋಗುವಂತೆ ತಿಳಿಸಲಾಗಿದೆ. ಅಧಿಕಾರಿಗಳ ತಂಡ ವಾಸ್ತವ್ಯ ಹೂಡಿದೆ.

-ಶ್ರೀನಿವಾಸ್‌, ತಹಸಿಲ್ದಾ‌ರ್

ಆಂದೋಲನ ಡೆಸ್ಕ್

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

5 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

5 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

7 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

7 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

7 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

15 hours ago