Andolana originals

ಸುಭದ್ರಮನ ಪುಟ್ಟ ಟೀ ಅಂಗಡಿ

ಮೈಸೂರಿನ ಸರಸ್ವತಿಪುರಂನಲ್ಲಿರುವ ವಿಶ್ವಮಾನವ ಜೋಡಿ ರಸ್ತೆಯಲ್ಲಿ ಪುಟ್ಟದಾಗಿ ಟೀ ಅಂಗಡಿ ಇಟ್ಟುಕೊಂಡ ಸುಭದ್ರಮ್ಮ ಅವರು ನಿಜದ ಗಟ್ಟಿಗಿತ್ತಿ. ವರ್ಷ ಅರವತ್ತೈದನ್ನು ದಾಟುತ್ತಿದ್ದರೂ ಇವರ ಬದುಕಿನ ಉತ್ಸಾಹವನ್ನು ಕಾಣುವಾಗೆಲ್ಲ ಸೋಜಿಗ ಖಾಲಿ ಕೂತು ತಿನ್ನಬಾರದು, ಮನುಷ್ಯ ದುಡಿದು ತಿನ್ನಬೇಕು ಎನ್ನುವುದು ಕಾಯಕ ತತ್ವ. ಮದುವೆಯಾಗಿ ಗಂಡನ ಮನೆ ಸೇರಿದ ಮೇಲೆ ಸಂಸಾರದ ಜವಾಬ್ದಾರಿ ಹೆಗಲಿಗೆ ಬಿತ್ತು. ನಿಭಾಯಿಸಿಕೊಂಡು ಹೋಗುವುದು ಅನಿವಾರ್ಯವಾಯಿತು. ಸ್ವಾವಲಂಬಿ ಆಗಬೇಕಿದ್ದರೆ ಕೆಲಸ ಮಾಡಬೇಕೆಂಬ ಪಾಠವನ್ನು ಮಗಳಿಗೂ ಬೋಧಿಸಿದ್ದರು. ಮಗಳು ಕೈ ಹಾಕಿದ ಕಾರ್ಯದಲ್ಲಿ ನಷ್ಟವಾದ್ದರಿಂದ ತನ್ನ ದುಡಿಮೆಯೂ ಮನೆಗೆ ಅವಶ್ಯವಾಯಿತೆಂಬ ಬದುಕಿನ ಸತ್ಯವನ್ನು ತೆರೆದಿಡುತ್ತಾರೆ.

ಬೆಳಿಗ್ಗೆ ಹತ್ತು ಗಂಟೆಗೆ ತೆರೆದ ಅಂಗಡಿ, ಮುಚ್ಚುವುದು ರಾತ್ರಿ ಒಂಬತ್ತರ ಹೊತ್ತಿಗೆ, ಗೂಡಂಗಡಿಯೊಳಗೆ ಟೀ ಮಾಡುತ್ತಾ, ಕುರುಕಲು ತಿಂಡಿ, ಚಾಕಲೇಟ್ ಮಾರುತ್ತಾರೆ. ಪುಟ್ಟ ಗೂಡಿನಂತಿರುವ ಅಂಗಡಿಯೊಳಗೆ ದಿನವಿಡೀ ಕೂತುಕೊಂಡೇ ಇರುತ್ತಾರೆ. ಒಂದೇ ಭಂಗಿಯಲ್ಲಿ ಎಷ್ಟು ಹೊತ್ತು ಕೂರಲಾದೀತು? ಕಷ್ಟದ ಬಗ್ಗೆ ಕೇಳಹೊರಟರೆ, ‘ನೋಡಿ, ಕೂತ್ಕಂಡ್ ಮಾಡೋ ಕೆಲ್ಸ. ಆರಾಮವಾಗಿ ಕೆಲ್ಸ ಮಾಡೋ ಯೋಗ ಸಿಕ್ಕಿದೆ’ ಎಂಬ ಇವರ ನಗುವಿನಲ್ಲಿ ಬದುಕಿನ ಅಸಹಾಯಕತೆಯೂ ಇದ್ದಂತಿತ್ತು. ಸುಭದ್ರಮ್ಮನಿಗೆ ಏನಾದರೂ ಆಯಿತೆಂದಾಗ ತನ್ನನ್ನು ನೋಡುತ್ತಾ, ಶಕ್ತಿ ತುಂಬುವ ದೇವರು ತನ್ನ ಜೊತೆಗಿದ್ದಾರೆ ಎಂಬುದೇ ಭರವಸೆ.

ಆಂದೋಲನ ಡೆಸ್ಕ್

Recent Posts

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

24 mins ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

29 mins ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

39 mins ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

1 hour ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

2 hours ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 hours ago