ಮೈಸೂರಿನ ಸರಸ್ವತಿಪುರಂನಲ್ಲಿರುವ ವಿಶ್ವಮಾನವ ಜೋಡಿ ರಸ್ತೆಯಲ್ಲಿ ಪುಟ್ಟದಾಗಿ ಟೀ ಅಂಗಡಿ ಇಟ್ಟುಕೊಂಡ ಸುಭದ್ರಮ್ಮ ಅವರು ನಿಜದ ಗಟ್ಟಿಗಿತ್ತಿ. ವರ್ಷ ಅರವತ್ತೈದನ್ನು ದಾಟುತ್ತಿದ್ದರೂ ಇವರ ಬದುಕಿನ ಉತ್ಸಾಹವನ್ನು ಕಾಣುವಾಗೆಲ್ಲ ಸೋಜಿಗ ಖಾಲಿ ಕೂತು ತಿನ್ನಬಾರದು, ಮನುಷ್ಯ ದುಡಿದು ತಿನ್ನಬೇಕು ಎನ್ನುವುದು ಕಾಯಕ ತತ್ವ. ಮದುವೆಯಾಗಿ ಗಂಡನ ಮನೆ ಸೇರಿದ ಮೇಲೆ ಸಂಸಾರದ ಜವಾಬ್ದಾರಿ ಹೆಗಲಿಗೆ ಬಿತ್ತು. ನಿಭಾಯಿಸಿಕೊಂಡು ಹೋಗುವುದು ಅನಿವಾರ್ಯವಾಯಿತು. ಸ್ವಾವಲಂಬಿ ಆಗಬೇಕಿದ್ದರೆ ಕೆಲಸ ಮಾಡಬೇಕೆಂಬ ಪಾಠವನ್ನು ಮಗಳಿಗೂ ಬೋಧಿಸಿದ್ದರು. ಮಗಳು ಕೈ ಹಾಕಿದ ಕಾರ್ಯದಲ್ಲಿ ನಷ್ಟವಾದ್ದರಿಂದ ತನ್ನ ದುಡಿಮೆಯೂ ಮನೆಗೆ ಅವಶ್ಯವಾಯಿತೆಂಬ ಬದುಕಿನ ಸತ್ಯವನ್ನು ತೆರೆದಿಡುತ್ತಾರೆ.
ಬೆಳಿಗ್ಗೆ ಹತ್ತು ಗಂಟೆಗೆ ತೆರೆದ ಅಂಗಡಿ, ಮುಚ್ಚುವುದು ರಾತ್ರಿ ಒಂಬತ್ತರ ಹೊತ್ತಿಗೆ, ಗೂಡಂಗಡಿಯೊಳಗೆ ಟೀ ಮಾಡುತ್ತಾ, ಕುರುಕಲು ತಿಂಡಿ, ಚಾಕಲೇಟ್ ಮಾರುತ್ತಾರೆ. ಪುಟ್ಟ ಗೂಡಿನಂತಿರುವ ಅಂಗಡಿಯೊಳಗೆ ದಿನವಿಡೀ ಕೂತುಕೊಂಡೇ ಇರುತ್ತಾರೆ. ಒಂದೇ ಭಂಗಿಯಲ್ಲಿ ಎಷ್ಟು ಹೊತ್ತು ಕೂರಲಾದೀತು? ಕಷ್ಟದ ಬಗ್ಗೆ ಕೇಳಹೊರಟರೆ, ‘ನೋಡಿ, ಕೂತ್ಕಂಡ್ ಮಾಡೋ ಕೆಲ್ಸ. ಆರಾಮವಾಗಿ ಕೆಲ್ಸ ಮಾಡೋ ಯೋಗ ಸಿಕ್ಕಿದೆ’ ಎಂಬ ಇವರ ನಗುವಿನಲ್ಲಿ ಬದುಕಿನ ಅಸಹಾಯಕತೆಯೂ ಇದ್ದಂತಿತ್ತು. ಸುಭದ್ರಮ್ಮನಿಗೆ ಏನಾದರೂ ಆಯಿತೆಂದಾಗ ತನ್ನನ್ನು ನೋಡುತ್ತಾ, ಶಕ್ತಿ ತುಂಬುವ ದೇವರು ತನ್ನ ಜೊತೆಗಿದ್ದಾರೆ ಎಂಬುದೇ ಭರವಸೆ.
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…