Andolana originals

ಸುಭದ್ರಮನ ಪುಟ್ಟ ಟೀ ಅಂಗಡಿ

ಮೈಸೂರಿನ ಸರಸ್ವತಿಪುರಂನಲ್ಲಿರುವ ವಿಶ್ವಮಾನವ ಜೋಡಿ ರಸ್ತೆಯಲ್ಲಿ ಪುಟ್ಟದಾಗಿ ಟೀ ಅಂಗಡಿ ಇಟ್ಟುಕೊಂಡ ಸುಭದ್ರಮ್ಮ ಅವರು ನಿಜದ ಗಟ್ಟಿಗಿತ್ತಿ. ವರ್ಷ ಅರವತ್ತೈದನ್ನು ದಾಟುತ್ತಿದ್ದರೂ ಇವರ ಬದುಕಿನ ಉತ್ಸಾಹವನ್ನು ಕಾಣುವಾಗೆಲ್ಲ ಸೋಜಿಗ ಖಾಲಿ ಕೂತು ತಿನ್ನಬಾರದು, ಮನುಷ್ಯ ದುಡಿದು ತಿನ್ನಬೇಕು ಎನ್ನುವುದು ಕಾಯಕ ತತ್ವ. ಮದುವೆಯಾಗಿ ಗಂಡನ ಮನೆ ಸೇರಿದ ಮೇಲೆ ಸಂಸಾರದ ಜವಾಬ್ದಾರಿ ಹೆಗಲಿಗೆ ಬಿತ್ತು. ನಿಭಾಯಿಸಿಕೊಂಡು ಹೋಗುವುದು ಅನಿವಾರ್ಯವಾಯಿತು. ಸ್ವಾವಲಂಬಿ ಆಗಬೇಕಿದ್ದರೆ ಕೆಲಸ ಮಾಡಬೇಕೆಂಬ ಪಾಠವನ್ನು ಮಗಳಿಗೂ ಬೋಧಿಸಿದ್ದರು. ಮಗಳು ಕೈ ಹಾಕಿದ ಕಾರ್ಯದಲ್ಲಿ ನಷ್ಟವಾದ್ದರಿಂದ ತನ್ನ ದುಡಿಮೆಯೂ ಮನೆಗೆ ಅವಶ್ಯವಾಯಿತೆಂಬ ಬದುಕಿನ ಸತ್ಯವನ್ನು ತೆರೆದಿಡುತ್ತಾರೆ.

ಬೆಳಿಗ್ಗೆ ಹತ್ತು ಗಂಟೆಗೆ ತೆರೆದ ಅಂಗಡಿ, ಮುಚ್ಚುವುದು ರಾತ್ರಿ ಒಂಬತ್ತರ ಹೊತ್ತಿಗೆ, ಗೂಡಂಗಡಿಯೊಳಗೆ ಟೀ ಮಾಡುತ್ತಾ, ಕುರುಕಲು ತಿಂಡಿ, ಚಾಕಲೇಟ್ ಮಾರುತ್ತಾರೆ. ಪುಟ್ಟ ಗೂಡಿನಂತಿರುವ ಅಂಗಡಿಯೊಳಗೆ ದಿನವಿಡೀ ಕೂತುಕೊಂಡೇ ಇರುತ್ತಾರೆ. ಒಂದೇ ಭಂಗಿಯಲ್ಲಿ ಎಷ್ಟು ಹೊತ್ತು ಕೂರಲಾದೀತು? ಕಷ್ಟದ ಬಗ್ಗೆ ಕೇಳಹೊರಟರೆ, ‘ನೋಡಿ, ಕೂತ್ಕಂಡ್ ಮಾಡೋ ಕೆಲ್ಸ. ಆರಾಮವಾಗಿ ಕೆಲ್ಸ ಮಾಡೋ ಯೋಗ ಸಿಕ್ಕಿದೆ’ ಎಂಬ ಇವರ ನಗುವಿನಲ್ಲಿ ಬದುಕಿನ ಅಸಹಾಯಕತೆಯೂ ಇದ್ದಂತಿತ್ತು. ಸುಭದ್ರಮ್ಮನಿಗೆ ಏನಾದರೂ ಆಯಿತೆಂದಾಗ ತನ್ನನ್ನು ನೋಡುತ್ತಾ, ಶಕ್ತಿ ತುಂಬುವ ದೇವರು ತನ್ನ ಜೊತೆಗಿದ್ದಾರೆ ಎಂಬುದೇ ಭರವಸೆ.

ಆಂದೋಲನ ಡೆಸ್ಕ್

Recent Posts

IPL 2026 | ಕಂಗೆಟ್ಟ ಕ್ಯಾಪಿಟಲ್ಸ್‌ ; ಡೆಲ್ಲಿ ವಿರುದ್ಧ ಆರ್‌ಸಿಬಿಗೆ ಸುಲಭ ಜಯ

ನವದೆಹಲಿ : ಹ್ಯಾಜಲ್‌ವುಡ್‌, ಭುವನೇಶ್ವರ್ ಬೌಲಿಂಗ್‌ ಅಬ್ಬರ, ಸಂಘಟಿತ ಫೀಲ್ಡಿಂಗ್‌ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು…

4 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಮೈಸೂರು : ಕೆ-ಸೆಟ್‌ ಮತ್ತು ಯುಜಿಸಿ-ನೆಟ್‌, ಜೆಆರ್‌ಎಫ್‌ ಅರ್ಹತಾ ಪರೀಕ್ಷೆ ಬರೆಯುವವರಿಗೆ 45 ದಿನಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ…

6 hours ago

ಹಾಸನ | ಮೆದುಳಿನಲ್ಲಿ ತೀವ್ರ ರಕ್ತಸ್ರಾವ ; 25 ವರ್ಷದ ಸಾಫ್ಟ್‌ವೇರ್‌ ಇಂಜಿನಿಯರ್‌ ಯುವತಿ ಸಾವು

ಹಾಸನ : ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಯುವತಿ ಚಿಕಿತ್ಸೆ ಫಲಿಸದೆ…

6 hours ago

ಚೆಲುವಾಂಬ ಆಸ್ಪತ್ರೆ | 15 ತಿಂಗಳಲ್ಲಿ 421 ಶಿಶು ಮರಣ ; ದಾಖಲೆ ಬಿಡುಗಡೆ ಮಾಡಿದ ಮಾಜಿ ಶಾಸಕ ನಾಗೇಂದ್ರ

ಮೈಸೂರು : ಮೈಸೂರು ಪ್ರಾಂತ್ಯದಲ್ಲೇ ಪ್ರಸೂತಿ, ಸ್ತ್ರೀರೋಗ ಮತ್ತು ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಹೆಸರುವಾಸಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಯ…

6 hours ago

ಪಶ್ಚಿಮ ಬಂಗಾಳ ಎರಡನೇ ಹಂತದ ಚುನಾವಣೆ : ಏ.29ರಂದು ಮತದಾನ ; ಭಾರೀ ಬಿಗಿ ಭದ್ರತೆ

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು,…

7 hours ago

ಅರಳುಮರಳು ಮಾತು, ಕ್ಷಮಿಸಿಬಿಡೋಣ : ಎಚ್.ವಿಶ್ವನಾಥ್ ಹೇಳಿಕೆಗೆ ಸಚಿವ ಮಧು ಬಂಗಾರಪ್ಪ ತಿರುಗೇಟು

ಶಿವಮೊಗ್ಗ : ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್‌ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…

8 hours ago