Andolana originals

ಸುಭದ್ರಮನ ಪುಟ್ಟ ಟೀ ಅಂಗಡಿ

ಮೈಸೂರಿನ ಸರಸ್ವತಿಪುರಂನಲ್ಲಿರುವ ವಿಶ್ವಮಾನವ ಜೋಡಿ ರಸ್ತೆಯಲ್ಲಿ ಪುಟ್ಟದಾಗಿ ಟೀ ಅಂಗಡಿ ಇಟ್ಟುಕೊಂಡ ಸುಭದ್ರಮ್ಮ ಅವರು ನಿಜದ ಗಟ್ಟಿಗಿತ್ತಿ. ವರ್ಷ ಅರವತ್ತೈದನ್ನು ದಾಟುತ್ತಿದ್ದರೂ ಇವರ ಬದುಕಿನ ಉತ್ಸಾಹವನ್ನು ಕಾಣುವಾಗೆಲ್ಲ ಸೋಜಿಗ ಖಾಲಿ ಕೂತು ತಿನ್ನಬಾರದು, ಮನುಷ್ಯ ದುಡಿದು ತಿನ್ನಬೇಕು ಎನ್ನುವುದು ಕಾಯಕ ತತ್ವ. ಮದುವೆಯಾಗಿ ಗಂಡನ ಮನೆ ಸೇರಿದ ಮೇಲೆ ಸಂಸಾರದ ಜವಾಬ್ದಾರಿ ಹೆಗಲಿಗೆ ಬಿತ್ತು. ನಿಭಾಯಿಸಿಕೊಂಡು ಹೋಗುವುದು ಅನಿವಾರ್ಯವಾಯಿತು. ಸ್ವಾವಲಂಬಿ ಆಗಬೇಕಿದ್ದರೆ ಕೆಲಸ ಮಾಡಬೇಕೆಂಬ ಪಾಠವನ್ನು ಮಗಳಿಗೂ ಬೋಧಿಸಿದ್ದರು. ಮಗಳು ಕೈ ಹಾಕಿದ ಕಾರ್ಯದಲ್ಲಿ ನಷ್ಟವಾದ್ದರಿಂದ ತನ್ನ ದುಡಿಮೆಯೂ ಮನೆಗೆ ಅವಶ್ಯವಾಯಿತೆಂಬ ಬದುಕಿನ ಸತ್ಯವನ್ನು ತೆರೆದಿಡುತ್ತಾರೆ.

ಬೆಳಿಗ್ಗೆ ಹತ್ತು ಗಂಟೆಗೆ ತೆರೆದ ಅಂಗಡಿ, ಮುಚ್ಚುವುದು ರಾತ್ರಿ ಒಂಬತ್ತರ ಹೊತ್ತಿಗೆ, ಗೂಡಂಗಡಿಯೊಳಗೆ ಟೀ ಮಾಡುತ್ತಾ, ಕುರುಕಲು ತಿಂಡಿ, ಚಾಕಲೇಟ್ ಮಾರುತ್ತಾರೆ. ಪುಟ್ಟ ಗೂಡಿನಂತಿರುವ ಅಂಗಡಿಯೊಳಗೆ ದಿನವಿಡೀ ಕೂತುಕೊಂಡೇ ಇರುತ್ತಾರೆ. ಒಂದೇ ಭಂಗಿಯಲ್ಲಿ ಎಷ್ಟು ಹೊತ್ತು ಕೂರಲಾದೀತು? ಕಷ್ಟದ ಬಗ್ಗೆ ಕೇಳಹೊರಟರೆ, ‘ನೋಡಿ, ಕೂತ್ಕಂಡ್ ಮಾಡೋ ಕೆಲ್ಸ. ಆರಾಮವಾಗಿ ಕೆಲ್ಸ ಮಾಡೋ ಯೋಗ ಸಿಕ್ಕಿದೆ’ ಎಂಬ ಇವರ ನಗುವಿನಲ್ಲಿ ಬದುಕಿನ ಅಸಹಾಯಕತೆಯೂ ಇದ್ದಂತಿತ್ತು. ಸುಭದ್ರಮ್ಮನಿಗೆ ಏನಾದರೂ ಆಯಿತೆಂದಾಗ ತನ್ನನ್ನು ನೋಡುತ್ತಾ, ಶಕ್ತಿ ತುಂಬುವ ದೇವರು ತನ್ನ ಜೊತೆಗಿದ್ದಾರೆ ಎಂಬುದೇ ಭರವಸೆ.

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

52 mins ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

4 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

4 hours ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

4 hours ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

4 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸೋಲಿನಿಂದ ಸೊರಗಿದ ದೀದಿಯನ್ನು ಕೈಬಿಟ್ಟ ಆಪ್ತರು

ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…

5 hours ago