Andolana originals

ಅಳಿವಿನಂಚಿನ ಪ್ರಾಣಿಗಳ ಪಾಲನೆ-ಪೋಷಣೆಯಲ್ಲಿ ಯಶಸ್ಸು

ಹೇಮಂತ್‌ಕುಮಾರ್

ಪಶು ವೈದ್ಯ ಎಚ್.ರಮೇಶ್ ಸಾಧನೆಗೆ ಮುಖ್ಯಮಂತ್ರಿ ಪದಕದ ಗೌರವ 

ಮಂಡ್ಯ: ನಾಗರಹೊಳೆ ಮತ್ತು ಬಂಡೀಪುರ ಅರಣ್ಯ ಇಲಾಖೆಯಲ್ಲಿ ವಿವಿಧ ಪ್ರಭೇದದ ಪ್ರಾಣಿಗಳ ಆರೋಗ್ಯ ತಪಾಸಣೆ, ಚಿಕಿತ್ಸೆ, ಪೋಷಣೆ ಮತ್ತು ಪಾಲನೆಯನ್ನು ಯಶಸ್ವಿಯಾಗಿ ನಿರ್ವಹಿಸಿದ ಹಿನ್ನೆಲೆಯಲ್ಲಿ ಮದ್ದೂರಿನ ಪಶು ವೈದ್ಯ ಡಾ.ಎಚ್.ರಮೇಶ್ ಅವರು ಮುಖ್ಯಮಂತ್ರಿಗಳ ಪದಕಕ್ಕೆ ಭಾಜನರಾಗಿದ್ದಾರೆ. ೭೧ನೇ ವನ್ಯಜೀವಿ ಸಪ್ತಾಹದ ಸಮಾರೋಪದ ಅಂಗವಾಗಿ ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ.ಎಚ್.ರಮೇಶ್ ಅವರಿಗೆ ಪದಕ ಪ್ರದಾನ ಮಾಡಿ ಅಭಿನಂದಿಸಿದರು.

ಮೂಲತಃ ಮದ್ದೂರು ತಾಲ್ಲೂಕಿನ ಚಿಕ್ಕಅರಸಿನಕೆರೆ ಹೋಬಳಿ ಛತ್ರದ ಹೊಸಹಳ್ಳಿಯ ಮಲವಮ್ಮ ಮತ್ತು ಹುಚ್ಚಯ್ಯ ದಂಪತಿಯ ಪುತ್ರರಾದ ಡಾ.ರಮೇಶ್ ಅವರು ಅರಣ್ಯ ಇಲಾಖೆಯ ಬಂಡೀಪುರ ಮತ್ತು ಬನ್ನೇರುಘಟ್ಟದಲ್ಲಿ ಮೂರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ರಮೇಶ್ ಸುಮಾರು ೧೦೦ ವಿವಿಧ ಜಾತಿಗಳ ೨ ಸಾವಿರಕ್ಕೂ ಹೆಚ್ಚು ಪ್ರಾಣಿಗಳ ಆರೋಗ್ಯ ನಿರ್ವಹಣೆ ಮತ್ತು ಪಾಲನೆ, ಪೋಷಣೆಯನ್ನು ಯಶಸ್ವಿಯಾಗಿ ನಿರ್ವಹಿಸಿ, ಅರಣ್ಯ ಇಲಾಖೆಯಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ.

ಡಾ.ಎಚ್.ರಮೇಶ್ ಅವರು ವಿಶೇಷವಾಗಿ ಆನೆ, ಹುಲಿ, ಸಿಂಹ, ಜೀಬ್ರಾಗಳಂತಹ ಪ್ರಮುಖ ಪ್ರಾಣಿಗಳಿಗೆ ಶಸ್ತ್ರಚಿಕಿತ್ಸೆ, ಲೇಸರ್ ಚಿಕಿತ್ಸೆ ಮತ್ತು ರೇಡಿಯೋ ಕಾಲರಿಂಗ್ ಹಾಗೂ ಹಲವು ಸಂಕೀರ್ಣ ಕಾರ್ಯಚಟುವಟಿಕೆಗಳನ್ನು ಯಶಸ್ವಿಯಾಗಿ ನಡೆಸಿರುವುದು ಇವರ ಹೆಗ್ಗಳಿಕೆ.

ಪ್ರಮುಖವಾಗಿ ಅಳಿವಿನಂಚಿನಲ್ಲಿರುವ ಕಾಡು ಪ್ರಾಣಿಗಳ ಸಂತಾನೋತ್ಪತ್ತಿ ಯನ್ನು ಯಶಸ್ವಿಯಾಗಿ ನಡೆಸಿರುವುದು ಪ್ರಮುಖ ಸಾಧನೆ. ಹಲವು ಕಾರಣಗಳಿಂದಾಗಿ ಮೃತಪಟ್ಟ ೫೧ ಆನೆಗಳು, ೨೦ ಹುಲಿಗಳು, ೨೦ ಚಿರತೆಗಳು ಹಾಗೂ ವಿವಿಧ ಪ್ರಾಣಿಗಳ ಮರಣೋತ್ತರ ಪರೀಕ್ಷೆ ನಡೆಸಿ ಇಲಾಖೆಗೆ ಈ ಪ್ರಾಣಿಗಳ ಸಾವಿನ ನಿಖರ ಕಾರಣ ತಿಳಿಸುವಲ್ಲಿ ಡಾ.ರಮೇಶ್ ನಿಪುಣರಾಗಿದ್ದಾರೆ. ಮುಖ್ಯಮಂತ್ರಿಗಳ ಪದಕಕ್ಕೆ ಭಾಜನರಾಗಿರುವ ಡಾ.ಎಚ್.ರಮೇಶ್ ಅವರಿಗೆ ಪಶ್ಚಿಮ ಘಟ್ಟಗಳ ಅರಣ್ಯ ಸಂರಕ್ಷಣಾ ಕಾರ್ಯಪಡೆ ಸಮಿತಿ ಮಾಜಿ ನಿರ್ದೇಶಕ ಲಿಂಗನದೊಡ್ಡಿ ರಾಮಕೃಷ್ಣ ಅಭಿನಂದಿಸಿದ್ದಾರೆ.

ಮಂಡ್ಯ ಜಿಲ್ಲೆಗೆ ಸಂದ ಗೌರವ….: 

ಮಾನವ ವನ್ಯಜೀವಿ ಸಂಘರ್ಷದ ಸಂದರ್ಭದಲ್ಲಿ ಒಟ್ಟು ೭೧ ಕಾಡಾನೆಗಳನ್ನು ಸೆರೆಹಿಡಿದು ಚಿಕಿತ್ಸೆ ನೀಡಿದ್ದಾರೆ. ಅದರಲ್ಲಿ ೩೦ ಆನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿ ಅರಣ್ಯಕ್ಕೆ ಬಿಟ್ಟಿದ್ದಾರೆ. ಜೊತೆಗೆ ೧೪ ಹುಲಿಗಳ ಸೆರೆ ಹಿಡಿದು ಚಿಕಿತ್ಸೆ ನೀಡಿ ರೇಡಿಯೋ ಕಾಲರ್ ಅಳವಡಿಸಿರುವ ಇವರ ವನ್ಯಜೀವಿ ಸಂರಕ್ಷಣೆಯ ಈ ಎಲ್ಲಾ ಕಾರ್ಯ ಸಾಧನೆಗಳನ್ನು ಗುರುತಿಸಿ, ಮೆಚ್ಚುಗೆ ವ್ಯಕ್ತಪಡಿಸಿರುವ ಸರ್ಕಾರ, ಅರಣ್ಯ ಇಲಾಖೆ ಶಿಫಾರಸಿನ ಮೇರೆಗೆ ಮುಖ್ಯಮಂತ್ರಿಗಳ ಪದಕ ನೀಡಿ ಗೌರವಿಸಿರುವುದು ಮಂಡ್ಯ ಜಿಲ್ಲೆಗೆ ಸಂದ ಗೌರವವೂ ಹೌದು.

ಆಂದೋಲನ ಡೆಸ್ಕ್

Recent Posts

ಪ್ರಧಾನ್‌ ರಾಜೀನಾಮೆ : ವಾಂಗ್ಚುಕ್‌ ಫಸ್ಟ್‌ ರಿಯಾಕ್ಷನ್‌

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮೊದಲ ಪ್ರತಿಕ್ರಿಯೆ…

9 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

18 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

18 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

18 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

18 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

18 hours ago