Andolana originals

ಏ.೧೦ರಿಂದ ವಸ್ತು ಪ್ರದರ್ಶನದಲ್ಲಿ ಬೇಸಿಗೆ ಮೇಳ

ದಿನೇಶ್‌ಕುಮಾರ್ ಹೆಚ್.ಎಸ್

ಮೈಸೂರು: ಶಾಲಾ-ಕಾಲೇಜುಗಳಿಗೆ ಬೇಸಿಗೆ ರಜೆ ಬರುತ್ತಿರುವ ಹಿನ್ನೆಲೆಯಲ್ಲಿ ಏ.೧೦ ರಿಂದ ಮೇ ೩೦ರವರೆಗೆ ೫೦ ದಿನಗಳ ಕಾಲ ನಗರದ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಬೇಸಿಗೆ ಮೇಳ ಆಯೋಜಿಸಲಾಗುತ್ತಿದೆ.

ವಸ್ತು ಪ್ರರ್ದಶನ ಎಂಬುದು ನಾಡಹಬ್ಬ ದಸರಾಗೆ ಸೀಮಿತವಾಗದೆ ವರ್ಷದಲ್ಲಿ ನಾಲ್ಕೈದು ಬಾರಿಯಾದರೂ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿ, ಜನರನ್ನು ಆಕರ್ಷಿಸಬೇಕು ಎಂಬುದು ಪ್ರಾಧಿಕಾರದ ಅಧ್ಯಕ್ಷ ಅಯೂಬ್‌ಖಾನ್ ಆಲೋಚನೆ.

ವಸ್ತು ಪ್ರದರ್ಶನ ಆವರಣದಲ್ಲಿ ಕೈಗಾರಿಕಾ ಮೇಳ ಆಯೋಜನೆ, ವಿವಿಧ ಸಮ್ಮೇಳನಗಳನ್ನು ನಡೆಸಲು ಅನುವು ಮಾಡಿಕೊಡಬೇಕು, ವಿವಾಹ ಸಮಾರಂಭಗಳಿಗೆ ಸ್ಥಳಾವಕಾಶ ಒದಗಿಸುವ ಮೂಲಕ ವರ್ಷಪೂರ್ತಿ ವಸ್ತು ಪ್ರದರ್ಶನ ಆವರಣ ಚಟುವಟಿಕೆಯಿಂದ ಕೂಡಿರುವಂತೆ ಮಾಡಲು ಯೋಜನೆ ರೂಪಿಸಲಾಗಿದೆ. ವಸ್ತುಪ್ರದರ್ಶನ ಆವರಣದಲ್ಲಿ ಕಳೆದ ೧೦ ವರ್ಷಗಳಿಂದಲೂ ಬೇಸಿಗೆ ಮೇಳೆ ನಡೆಯುತ್ತಿದೆ. ವರ್ಷದಿಂದ ವರ್ಷಕ್ಕೆ ಮೇಳದ ರೂಪುರೇಷೆ ಬದಲಾಗುತ್ತಿದೆ. ಅದರಂತೆ ಈ ಬಾರಿ ಕೂಡ ಮೇಳದಲ್ಲಿ ಹಲವು ವಿಶೇಷತೆಗಳಿವೆ.

೬೦ ಮಳಿಗೆಗಳು: ವಸ್ತುಪ್ರರ್ದಶನ ಆವರಣದಲ್ಲಿ ಬೇಸಿಗೆ ಮೇಳದ ವೇಳೆ ಸ್ಥಳೀಯ ಹಾಗೂ ರಾಜ್ಯದ ವಿವಿಧೆಡೆಗಳಿಂದ ಬರುವ ಸುಮಾರು ೬೦ ಮಂದಿ ಮಳಿಗೆಗಳನ್ನು ತೆರೆದು ವ್ಯಾಪಾರ ನಡೆಸಲಿದ್ದಾರೆ. ಮಹಿಳೆಯರ ಅಲಂಕಾರಿಕ ವಸ್ತುಗಳು, ಮಹಿಳೆಯರ ಹಾಗೂ ಪುರುಷರ ಬಟ್ಟೆಗಳು, ಗೃಹ ಬಳಕೆಯ ವಸ್ತುಗಳು, ಕೆತ್ತನೆಗಳು, ಮಕ್ಕಳ ಅಟಿಕೆಗಳು, ಸಿದ್ಧಪಡಿಸಿದ ಆಹಾರ ಪ್ಯಾಕೆಟ್ ಗಳು ಹೀಗೆ ಹಲವು ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮಾಡಲಾಗುತ್ತದೆ.

ಮನೋರಂಜನೆ: ಇನ್ನು ವಸ್ತುಪ್ರದರ್ಶನದ ಮುಖ್ಯದ್ವಾರದ ಸಮೀಪವೇ ಅಮ್ಯೂಸ್‌ಮೆಂಟ್ ಪಾರ್ಕ್ ಆರಂಭಿಸಲು ಉದ್ದೇಶಿಸಲಾಗಿದೆ. ವಸ್ತುಗಳ ಪ್ರದರ್ಶನ ಹಾಗೂ ಆಟೋಟಗಳು ಒಂದೆಡೆ ಇದ್ದು, ಜನರನ್ನು ಆಕರ್ಷಿಸಲು ಸಿದ್ಧವಾಗುತ್ತಿದೆ.

ಡ್ರ್ಯಾಗನ್ ಪಾಂಡ್: ವಸ್ತು ಪ್ರದರ್ಶನಕ್ಕೆ ಬರುವವರನ್ನು ಬಹು ಮುಖ್ಯವಾಗ ಆಕರ್ಷಿಸುವುದು ಡ್ರ್ಯಾಗನ್ ಪಾಂಡ್. ಅಲ್ಲಿನ ಆವರಣದಲ್ಲಿ ನಡೆಯುವ ಲೇಸರ್ ಷೋ ಜನಾಕರ್ಷಣೀಯವಾಗಲಿದೆ. ಇನ್ನು ಅಲ್ಲಿನ ಸಂಗೀತ ಕಾರಂಜಿ ಎಲ್ಲರ ಗಮನವನ್ನೂ ಸೆಳೆಯಲಿದೆ. ತಿಂಡಿ, ತಿನಿಸುಗಳು: ವಸ್ತುಪ್ರದರ್ಶನ ಆವರಣಕ್ಕೆ ಬರುವ ಮಕ್ಕಳು ಹಾಗೂ ಇತರರಿಗೆ ಅಲ್ಲಿ ಐಸ್‌ಕ್ರೀಂ, ಡೆಲ್ಲಿ ಹಪ್ಪಳ, ಚುರುಮುರಿ, ಮಲ್ಲಿಗೆ ಇಡ್ಲಿ, ಮೆಣಸಿನಕಾಯಿ ಬಜ್ಜಿ, ಗೋಬಿ ಮಂಚೂರಿ, ಮಸಾಲೆ ದೋಸೆ ಹೀಗೆ ನಾನಾತರದ ತಿಂಡಿ ತಿನಿಸುಗಳು ಪ್ರವಾಸಿಗರ ಜಿಹ್ವಾ ಚಾಪಲ್ಯವನ್ನು ನೀಗಿಸಲಿವೆ.

” ವಸ್ತುಪ್ರರ್ದಶನ ಆವರಣ ಸದಾ ಚಟುವಟಿಕೆಯಿಂದ ಕೂಡಿರಬೇಕು ಎಂಬ ಉದ್ದೇಶದಿಂದ ಹಲವು ಚಟುವಟಿಕೆಗಳನ್ನು ನಡೆಸಲು ಉದ್ದೇಶಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬೇಸಿಗೆ ಮೇಳ ಹಾಗೂ ಸೀರೆ ಮಾರಾಟ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಸೀರೆ ಮಾರಾಟ ಮೇಳದಲ್ಲಿ ಮಹಿಳಾ ವ್ಯಾಪಾರಸ್ಥರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಜನರಿಗೆ ಹೊರೆಯಾಗದ ರೀತಿಯಲ್ಲಿ ಪ್ರವೇಶ ಶುಲ್ಕವನ್ನು ನಿಗದಿಪಡಿಸಲಾಗಿದೆ.”

ಅಯೂಬ್‌ಖಾನ್, ಅಧ್ಯಕ್ಷರು, ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರ.

ಇಂದಿನಿಂದ ಸೀರೆ ಮೇಳ: 

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಇದೇ ಮೊದಲ ಬಾರಿಗೆ ವಸ್ತುಪ್ರದರ್ಶನ ಆವರಣದಲ್ಲಿ ೧೦ ದಿನಗಳ ಕಾಲ ಸೀರೆ ಮಾರಾಟ ಹಾಗೂ ಪ್ರದರ್ಶನ ಮೇಳವನ್ನು ಆಯೋಜಿಸಲಾಗಿದೆ. ಶನಿವಾರ ಮೇಳ ಆರಂಭವಾಗಲಿದ್ದು, ರಾಜ್ಯದ ವಿವಿಧೆಡೆಯಿಂದ ಸೀರೆ ವ್ಯಾಪಾರಸ್ಥರು ಮೈಸೂರಿಗೆ ಬರಲಿದ್ದಾರೆ. ಇದಕ್ಕಾಗಿ ಆವರಣದಲ್ಲಿ ೪೦ ಮಳಿಗೆಗಳನ್ನು ಮೀಸಲಿಡಲಾಗಿದೆ. ೧೫೦ ರೂ.ನಿಂದ ೧೦ ಸಾವಿರ ರೂ.ಗೂ ಹೆಚ್ಚು ಬೆಲೆಯ ಸೀರೆಗಳು ಮೇಳದಲ್ಲಿ ಲಭ್ಯವಾಗಲಿವೆ. ಜೊತೆಗೆ ಅಮ್ಯೂಸ್‌ಮೆಂಟ್ ಪಾರ್ಕ್ ಹಾಗೂ ಆಹಾರ ಮಾರಾಟ ಮಳಿಗೆಗಳೂ ತೆರೆಯಲಿವೆ. ಮಧ್ಯಾಹ್ನ ೩ ರಿಂದ ರಾತ್ರಿ ೧೦ ಗಂಟೆವರೆಗೆ ಮೇಳ ನಡೆಯಲಿದೆ. ೨೫ ರೂ. ಪ್ರದೇಶ ದರ ನಿಗದಿಪಡಿಸಲಾಗಿದೆ

 

 

ಆಂದೋಲನ ಡೆಸ್ಕ್

Recent Posts

ಪ್ರಯಾಣಿಕರಿಗೆ ಗುಡ್‌ನ್ಯೂಸ್‌ ಕೊಟ್ಟ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ಬಸ್‌ ಟಿಕೆಟ್‌ ದರವನ್ನು ಏರಿಕೆ ಮಾಡುವುದಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು…

22 mins ago

ಜೂಜಾಡುವ ವೇಳೆ ಪೊಲೀಸರ ದಾಳಿ: ಆಯತಪ್ಪಿ ಬಿದ್ದು ವ್ಯಕ್ತಿ ಸಾವು

ಹಾಸನ: ಜೂಜಾಡುವ ವೇಲೆ ಪೊಲೀಸರು ದಾಳಿ ನಡೆಸಿದ ಪರಿಣಾಮ ತಪ್ಪಿಸಿಕೊಂಡು ಓಡುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ…

23 mins ago

ಮೈಸೂರಿನಲ್ಲಿ ಸಂಭ್ರಮದಿಂದ ರಂಜಾನ್‌ ಹಬ್ಬ ಆಚರಣೆ

ಮೈಸೂರು: ನಾಡಿನಾದ್ಯಂತ ರಂಜಾನ್‌ ಹಬ್ಬದ ಸಂಭ್ರಮ ಮನೆಮಾಡಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ…

1 hour ago

ತೆಲುಗು ಚಿತ್ರರಂಗದ ಖ್ಯಾತ ನಟರ ವಿರುದ್ಧ ಪ್ರಕಾಶ್‌ ರಾಜ್‌ ಕಿಡಿ: ಕಾರಣ ಇಷ್ಟೇ

ಬೆಂಗಳೂರು: ಧುರಂಧರ್‌-2 ಚಿತ್ರವನ್ನು ಹಾಡಿ ಹೊಗಳಿರುವ ತೆಲುಗು ಚಿತ್ರರಂಗದ ಖ್ಯಾತ ನಟರ ವಿರುದ್ಧ ಪ್ರಕಾಶ್‌ ರಾಜ್‌ ಕಿಡಿಕಾರಿದ್ದಾರೆ. ತೆಲುಗಿನ ಖ್ಯಾತ…

1 hour ago

ರಾಜ್ಯದಲ್ಲಿ ಇದ್ದಕ್ಕಿದ್ದಂತೆ ಸುರಿದ ಮಳೆ: ಅಪಾರ ಪ್ರಮಾಣದ ಬೆಳೆ ಹಾನಿ

ಬೆಂಗಳೂರು: ರಾಜ್ಯದಲ್ಲಿ ಇದಕ್ಕಿದ್ದಂತೆ ಆಲಿಕಲ್ಲು ಸಹಿತ ವ್ಯಾಪಕ ಮಳೆ ದಾಖಲಾಗಿದ್ದರಿಂದ ಮತ್ತೆ ಅಪಾರ ಪ್ರಮಾಣದ ಬೆಳೆ ಹಾನಿ ಉಂಟಾಗಿದೆ. ಕೂಡಲೇ…

2 hours ago

ಕುಶಾಲನಗರ: ಮನೆ ಬಳಿ ನಿಲ್ಲಿಸಿದ್ದ ಆಟೋ ಜಖಂಗೊಳಿಸಿದ ಕಾಡಾನೆ

ಕುಶಾಲನಗರ: ಒಂಟಿಸಲಗವೊಂದು ಮನೆ ಬಳಿ ನಿಲ್ಲಿಸಿದ್ದ ಆಟೋ ರಿಕ್ಷಾದ ಮೇಲೆ ದಾಳಿ ನಡೆಸಿ ಜಖಂಗೊಳಿಸಿರುವ ಘಟನೆ ಕುಶಾಲನಗರದ ನೆಲ್ಲಿ ಹುದಿಕೇರಿ…

3 hours ago