Andolana originals

ಕೊಡಗಿನಲ್ಲಿಯೂ ಹೆಚ್ಚಿದ ಬಿಸಿಲಿನ ತಾಪಮಾನ

ಫ್ರೆಬ್ರವರಿಯಲ್ಲಿಯೆ 32 ಡಿಗ್ರಿ ಸೆಲ್ಸಿಯಸ್‌ ದಾಖಲು ; ಅಗತ್ಯ ಮುನ್ನೆಚ್ಚರಿಕೆಗೆ ತಜ್ಞರ ಸಲಹೆ 

ನವೀನ್ ಡಿಸೋಜ

ಮಡಿಕೇರಿ: ಬೇಸಿಗೆ ಆರಂಭಕ್ಕೂ ಮೊದಲೇ ಮಂಜಿನ ನಗರಿ ಮಡಿಕೇರಿಯಲ್ಲಿ ತಾಪಮಾನ ಏರಿಕೆ ಕಂಡಬರುತ್ತಿದೆ. ಫೆಬ್ರವರಿ ತಿಂಗಳ ೩ನೇ ವಾರದಲ್ಲಿಯೇ ಜಿಲ್ಲೆಯಲ್ಲಿ ೩೨ ಡಿಗ್ರಿ ಸೆಲ್ಸಿಯಸ್ ಗಿಂತ ಹೆಚ್ಚಿನ ತಾಪಮಾನ ದಾಖಲಾಗುತ್ತಿದ್ದು, ಮುಂದಿನ ದಿನಗಳ ಬಗ್ಗೆ ಆತಂಕ ಮೂಡಿಸಿದೆ.

ಮಡಿಕೇರಿ ಸೇರಿದಂತೆ ಜಿಲ್ಲೆಯ ಬಹುತೇಕ ಕಡೆ ಸಾಮಾನ್ಯವಾಗಿ ಫೆಬ್ರವರಿ ಅಂತ್ಯದವರೆಗೆ ತಂಪಾದ ವಾತಾವರಣವಿದ್ದು, ಮಾರ್ಚ್ ಬಳಿಕ ಬಿಸಿಲು ಹೆಚ್ಚಾಗುತ್ತಾ ಹೋಗುತ್ತಿತ್ತು. ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೆಚ್ಚಿನ ಧಗೆ ಕಂಡುಬರುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಫೆಬ್ರವರಿ ತಿಂಗಳಿನಿಂದಲೇ ಸುಡುವ ಬಿಸಿಲು ಕಾಣಿಸಿಕೊಳ್ಳುತ್ತಿದ್ದು, ಈ ಬಾರಿ ತಾಪಮಾನ ಈಗಾಗಲೇ ಗರಿಷ್ಠ ೩೨-೩೩ ಡಿಗ್ರಿ ಸೆಲ್ಸಿಯಸ್ ದಾಖಲಾಗುತ್ತಿದೆ.

ಕಳೆದ ಮುಂಗಾರು ಉತ್ತಮವಾಗಿತ್ತು ಮತ್ತು ದೀರ್ಘ ಕಾಲದ ಮಳೆಯಾಗಿತ್ತು. ಮುಂಗಾರಿನ ಬಳಿಕವೂ ಕೆಲವು ಚಂಡಮಾರುತ, ವಾಯು ಭಾರ ಕುಸಿತಗಳ ಪರಿಣಾಮ ಡಿಸೆಂಬರ್ ತಿಂಗಳವರೆಗೂ ಆಗೊಮ್ಮೆ ಈಗೊಮ್ಮೆ ಮಳೆಯಾಗುತ್ತಲೇ ಇತ್ತು. ಆದರೆ ಡಿಸೆಂಬರ್ ತಿಂಗಳಿನಲ್ಲಿ ಸೆಂಗಾಲ್ ಚಂಡಮಾರುತದ ಬಳಿಕ ಜಿಲ್ಲೆಯಲ್ಲಿ ಮಳೆ ಸುರಿಯಲಿಲ್ಲ. ಹೀಗಾಗಿ ಭೂಮಿಯಲ್ಲಿ ತೇವಾಂಶ ಕಡಿಮೆಯಾಗುತ್ತಿದ್ದು, ಹೆಚ್ಚಿನ ಶಾಖ ಕಂಡುಬರುತ್ತಿದೆ. ಜತೆಗೆ ಹವಾಮಾನ ವೈಪರೀತ್ಯದ ಪರಿಣಾಮದಿಂದಲೂ ಹೆಚ್ಚಿನ ಬಿಸಿಲು ಕಾಣಿಸಿಕೊಳ್ಳುತ್ತಿದ್ದು, ತಾಪಮಾನ ಏರಿಕೆಗೆ ಕಾರಣವಾಗುತ್ತಿದೆ ಎಂಬುದು ಹವಾಮಾನ ಇಲಾಖೆಯ ವಿಜ್ಞಾನಿಗಳ ಅಭಿಪ್ರಾಯವಾಗಿದೆ.

ಈ ಬಾರಿ ಪೂರ್ವ ಮುಂಗಾರು ಬೇಗನೆ ಆರಂಭವಾಗುವ ಸಾಧ್ಯತೆಯಿದ್ದು, ಮಾರ್ಚ್ ತಿಂಗಳಲ್ಲಿ ಒಂದೆರಡು ಮಳೆಯಾದರೆ ತಾಪಮಾನ ಕಡಿಮೆಯಾಗಲು ಸಹಕಾರಿಯಾಗಲಿದೆ. ಸೂಕ್ತ ಸಮಯಕ್ಕೆ ಮಳೆಯಾಗದಿದ್ದಲ್ಲಿ ಮುಂದಿನ ದಿನಗಳಲ್ಲಿ ಭೂಮಿಯಲ್ಲಿನ ತೇವಾಂಶ ಮತ್ತಷ್ಟು ಕಡಿಮೆಯಾಗುವ ಪರಿಣಾಮ ಹೆಚ್ಚಿನ ತಾಪಮಾನ ಕಂಡುಬರಬಹುದು ಎಂದು ಅಂದಾಜಿಸಲಾಗುತ್ತಿದೆ. ಮಡಿಕೇರಿಯ ಮಟ್ಟಿಗೆ ೩೩ ಡಿಗ್ರಿಗಿಂತಲೂ ಹೆಚ್ಚಿನ ತಾಪಮಾನ ಅಪಾಯಕಾರಿಯಾಗಿದ್ದು, ಜನರು ತಮ್ಮ ಮತ್ತು ಬೆಳೆಗಳ ರಕ್ಷಣೆಗೆ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ.

೨೦೨೪ರ ಏಪ್ರಿಲ್ ೪ರಂದು ಮಡಿಕೇರಿಯಲ್ಲಿ ಅತಿ ಹೆಚ್ಚು ತಾಪಮಾನ ದಾಖಲಾಗಿತ್ತು. ಅಂದು ದಾಖಲಾದ ೩೫. ೨ ಡಿಗ್ರಿ ಸೆಲ್ಸಿಯಸ್ ತಾಪಮಾನ ಮಡಿಕೇರಿಯಲ್ಲಿ ದಾಖಲಾದ ಅತಿ ಹೆಚ್ಚಿನ ತಾಪಮಾನ ಎನಿಸಿಕೊಂಡಿದೆ. ಫೆಬ್ರವರಿ ತಿಂಗಳಲ್ಲಿ ಈ ಬಾರಿ ೩೩. ೪ ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಈ ಹಿಂದೆ ೧೯೮೧ ಮತ್ತು ೨೦೧೦ರಲ್ಲಿ ಫೆಬ್ರವರಿ ತಿಂಗಳಲ್ಲಿ ೩೫ ಡಿಗ್ರಿ ತಾಪಮಾನ ದಾಖಲಾಗಿತ್ತು.

ತಾಪಮಾನ ಹೆಚ್ಚಿರುವ ಸಂದರ್ಭ ಮಕ್ಕಳಲ್ಲಿ ವಾಂತಿ, ಅತಿಸಾರದಂತಹ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಹಿರಿಯರಿಗೂ ತಾಪಮಾನ ಹೆಚ್ಚಳದಿಂದ ತೊಂದರೆಯಾಗುವ ಸಾಧ್ಯತೆಯಿದೆ. ಹೀಗಾಗಿ ಕೆಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದು ಉತ್ತಮ ಎಂಬುದು ತಜ್ಞರ ಸಲಹೆಯಾಗಿದೆ.

ಬಿಸಿಲಿಗೆ ಹೀಗೆ ಮಾಡಿ
ಹೆಚ್ಚು ನೀರು ಕುಡಿಯುವುದು, ಒಆರ್‌ಎಸ್, ನಿಂಬೆ ಪಾನೀಯ, ಫ್ರೆಶ್ ಜ್ಯೂಸ್ ಕುಡಿಯುವುದು ಪ್ರಯಾಣದ ವೇಳೆ ನೀರು ಜತೆಗಿರಲಿ. ಹೆಚ್ಚು ಹಣ್ಣಿನ ಸೇವನೆ, ಹೆಚ್ಚಾಗಿ ಮನೆ ಒಳಗೆಯೇ(ಗಾಳಿ ಸಂಚಾರ ಹೆಚ್ಚಿರುವ ಕಡೆ) ಇರುವುದು, ತಿಳಿ ಬಣ್ಣದ, ಹತ್ತಿ ಬಟ್ಟೆಧರಿಸುವುದು, ಬಿಸಿಲಿನಿಂದ ತಲೆ ಭಾಗವನ್ನು ರಕ್ಷಿಸಿ (ಕೊಡೆ, ಟೋಪಿ ಬಳಸಿ) ಕಾಲಿಗೆ ಪಾದರಕ್ಷೆಗಳನ್ನು ಬಳಸಿ.

ಅತಿಯಾದ ಶಾಖದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳು
ತಲೆ ಸುತ್ತುವುದು, ಪ್ರಜ್ಞೆ ತಪ್ಪುವುದು, ವಾಕರಿಕೆ ಅಥವಾ ವಾಂತಿಯಾಗುವುದು, ತಲೆ ನೋವು, ಅತಿಯಾದ ಬಾಯಾರಿಕೆ, ಏರುಗತಿಯ ಉಸಿರಾಟ ಮತ್ತು ಹೃದಯ ಬಡಿತ

ಈ ಬಾರಿ ಫೆಬ್ರವರಿ ತಿಂಗಳಿನಲ್ಲಿಯೇ ಹೆಚ್ಚಿನ ಬಿಸಿಲು ಕಾಣಿಸಿಕೊಂಡಿದೆ. ಮುಂದಿನ ದಿನಗಳಲ್ಲಿ ಒಂದೆರಡು ಬಾರಿ ಮಳೆಯಾಗದ ಹೊರತು ತಾಪಮಾನ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಕೊಡಗಿನಲ್ಲಿ ಕಾಫಿ, ಅಡಕೆ, ಬಾಳೆಯಂತಹ ಬೆಳೆಗಳಿಗೆ ತುಂತುರು ನೀರಾವರಿ ಮತ್ತು ಬುಡವನ್ನು ತೇವವಾಗಿರುವಂತೆ ನೋಡಿಕೊಳ್ಳಲು ಕ್ರಮಗಳನ್ನು ಕೈಗೊಳ್ಳುವುದು ಉತ್ತಮ. -ಡಾ. ಸುಮಂತ್ ಕುಮಾರ್ ಜಿ. ವಿ. , ತಾಂತ್ರಿಕ ಅಧಿಕಾರಿ, ಹವಾಮಾನ ವಿಭಾಗ, ನಾಗನಹಳ್ಳಿ.

 

ಆಂದೋಲನ ಡೆಸ್ಕ್

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

3 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

5 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

14 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

14 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

14 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

14 hours ago