Andolana originals

ಪಾಂಡವಪುರ ಪಟ್ಟಣ ಜನತೆಗೆ ಅಶುದ್ಧ ನೀರು ಪೂರೈಕೆ

ಎಸ್.ನಾಗಸುಂದರ್

ಪುರಸಭೆ ಆಡಳಿತ,ಅಧಿಕಾರಿಗಳ ವಿರುದ್ಧ ನಾಗರಿಕರ ಆಕ್ರೋಶ ಕುಡಿಯಲು ಶುದ್ಧೀಕರಿಸಿದ ನೀರು ಸರಬರಾಜು ಮಾಡಲು ಆಗ್ರಹ

ಪಾಂಡವಪುರ: ಮನುಷ್ಯ ಆರೋಗ್ಯವಂತನಾಗಿರಲು ಶುದ್ಧ ನೀರು, ಗಾಳಿ ಹಾಗೂ ಪೌಷ್ಟಿಕ ಆಹಾರ ಬಹುಮುಖ್ಯ. ಅದರಲ್ಲೂ, ಕುಡಿಯುವ ನೀರು ಶುದ್ಧವಾಗಿರಬೇಕು. ಇಲ್ಲವಾದರೆ ಸಾಂಕ್ರಾಮಿಕ ರೋಗಗಳು ಹರಡುವುದು ನಿಶ್ಚಿತ ಎಂಬುದು ಪುರಸಭೆ ಅಧಿಕಾರಿಗಳಿಗೆ ತಿಳಿದಿದ್ದರೂ ಪಟ್ಟಣದ ನಾಗರೀಕರಿಗೆ ಕುಡಿಯಲು ಶುದ್ಧೀಕರಿಸಿದ ನೀರನ್ನು ಪೂರೈಕೆ ಮಾಡದೆ, ಹಾಗೇ ಸರಬರಾಜು ಮಾಡುವ ಮೂಲಕ ಬೇಜವಾಬ್ದಾರಿ ತೋರುತ್ತಿದ್ದಾರೆ.

ಪಟ್ಟಣ ವ್ಯಾಪ್ತಿಯ ಎಲ್ಲಾ ಬಡಾವಣೆಗಳಿಗೆ ಕುಡಿಯುವ ನೀರು ಪೂರೈಕೆ ಮಾಡಲು ವಿವಿಧೆಡೆ ಓವರ್ ಹೆಡ್ ಟ್ಯಾಂಕ್ಗಳನ್ನು ನಿರ್ಮಿಸಲಾಗಿದೆ. ಶ್ರೀರಂಗಪಟ್ಟಣ ಬಳಿಯ ಕಾವೇರಿ ನದಿ,ವಿಶ್ವೇಶ್ವರಯ್ಯ ಕಾಲುವೆಯಿಂದ ಓವರ್ ಟ್ಯಾಂಕ್‌ಗಳಿಗೆ ನೀರು ಪೂರೈಕೆ ಮಾಡಿಕೊಂಡು ಅದನ್ನು ಫಿಲ್ಟರ್ ಮಾಡದೆ ನೇರವಾಗಿ ಮನೆಗಳಿಗೆ ಸರಬರಾಜು ಮಾಡಲಾಗುತ್ತಿದೆ. ಜತೆಗೆ ಕೆಲ ಬಡಾವಣೆಗಳಿಗೆ ಬೋರ್ ವೆಲ್ ನೀರು ಪೂರೈಕೆಯಾಗುತ್ತಿದೆ. ಶ್ರೀರಂಗಪಟ್ಟಣದ ಕಿರಂಗೂರು ಸಮೀಪದ ಕಾವೇರಿ ನದಿಯಿಂದ ಲಿಫ್ಟ್ ಮಾಡುವ ನೀರನ್ನು ಕೂಡಲಕುಪ್ಪೆ ಗೇಟ್ ಬಳಿ ಫಿಲ್ಟರ್ ಮಾಡಲಾಗುತ್ತಿದೆ. ಆದರೆ, ಉಳಿದಂತೆ ಕಾಲುವೆ ಮತ್ತು ಬೋರ್‌ವೆಲ್ ನೀರನ್ನು ಶುದ್ಧೀಕರಣ ಮಾಡಲಾಗುತ್ತಿಲ್ಲ.

ಅಶುದ್ಧ ನೀರು ಸೇವನೆ ಡೆಂಗ್ಯು,ಮಲೇರಿಯ, ಹಕ್ಕಿ ಜ್ವರ, ವಾಂತಿ, ಭೇದಿ ಮುಂತಾದ ಹಲವು ಸಾಂಕ್ರಾಮಿಕ ರೋಗಗಗಳನ್ನು ತಂದೊಡ್ಡಬಹುದು. ಶುದ್ಧ ನೀರನ್ನಾದರೂ ಕುಡಿಯೋಣ ಎಂದುಕೊಂಡರೆ ಅಧಿಕಾರಿಗಳ ನಿರ್ಲಕ್ಷ ದಿಂದ ಅದು ಸಾಧ್ಯವಾಗುತ್ತಿಲ್ಲ ಎಂದು ಪಟ್ಟಣದ ಜನತೆ ಆರೋಪಿಸಿದ್ದಾರೆ.

೧೯೯೯-೨೦೦೦ನೇ ಇಸವಿಯಲ್ಲಿ ಪಾಂಡವಪುರ ಪಟ್ಟಣಕ್ಕೆ ಶುದ್ಧ ಕುಡಿಯುವ ನೀರು ಒದಗಿಸಲು ಸರ್ಕಾರದ ವಿಶೇಷ ಅನುದಾನದಲ್ಲಿ ಶ್ರೀರಂಗಪಟ್ಟಣ ತಾಲ್ಲೂಕಿನ ಕಿರಂಗೂರು ಬಳಿ ಕಾವೇರಿ ನದಿಯಿಂದ ಜಾಕ್‌ವೆಲ್ ಮೂಲಕ ನೀರನ್ನು ಎತ್ತಿ ಕೂಡಲಕುಪ್ಪೆ ಗೇಟ್ ಬಳಿ ನಿರ್ಮಾಣ ಮಾಡಲಾಗಿರುವ ಪಂಪ್‌ಹೌಸ್ ಮೂಲಕ ಪಟ್ಟಣದ ಕೃಷ್ಣಾನಗರದಲ್ಲಿರುವ ಓವರ್ ಟ್ಯಾಂಕ್‌ಗಳಿಗೆ ತುಂಬಿಸಿ ಅಲ್ಲಿಂದ ಪಟ್ಟಣದ ಎಲ್ಲ ಮನೆಗಳಿಗೂ ನೀರು ಒದಗಿಸಲಾಗುತ್ತದೆ. ನದಿಯಿಂದ ಲಿಫ್ಟ್ ಮಾಡಲಾಗುವ ಈ ನೀರನ್ನು ವಿವಿಧ ಹಂತಗಳಲ್ಲಿ ಶುದ್ಧೀಕರಣ ಮಾಡಬೇಕಿದೆ. ಕ್ಲೋರಿನೇಷನ್ ಕೂಡ ನೀರನ್ನು ಶುದ್ಧೀಕರಣ ಮಾಡುವ ಪ್ರಮುಖ ಘಟ್ಟವಾಗಿದೆ. ಆದರೆ, ಕೃಷ್ಣಾ ನಗರದಲ್ಲಿರುವ ನೀರು ಶುದ್ಧೀಕರಣ ಘಟಕದಲ್ಲಿ ಕ್ಲೋರಿನೇಷನ್ ಮಾಡುವ ಘಟಕ ಕೆಟ್ಟು ಹೋಗಿರುವ ಕಾರಣ ಹಲವು ವರ್ಷಗಳಿಂದ ನೀರು ಕ್ಲೋರಿನೇಷನ್ ಆಗುತ್ತಿಲ್ಲ. ಕ್ಲೋರಿನ್ ಪ್ರಯೋಗಿಸುವಿಕೆ ಘಟಕವನ್ನು ದುರಸ್ತಿ ಮಾಡಿಸಿ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವಲ್ಲಿ ಪುರಸಭೆ ಅಧಿಕಾರಿಗಳು ವಿಫಲರಾಗಿದ್ದಾರೆ. ಹೀಗಾಗಿ ನದಿಯಿಂದ ಹೊರ ತೆಗೆಯುವ ಅಶುದ್ಧ ನೀರನ್ನೇ ಕುಡಿಯಬೇಕಾಗಿರುವುದು ಜನರ ದುರದೃಷ್ಟವಾಗಿದೆ.

ಕಾರ್ಖಾನೆಗಳ ತ್ಯಾಜ್ಯ ನೀರು ಸೇರಿದಂತೆ ನದಿ ಹರಿಯುವ ಮಾರ್ಗ ಮಧ್ಯೆ ಹಲವು ವಿಷಯುಕ್ತ ಅಂಶಗಳು ನದಿ ಒಡಲು ಸೇರುತ್ತಿವೆ. ಜತೆಗೆ ವಿಶ್ವೇಶ್ವರಯ್ಯ ನಾಲೆ ದಡದಲ್ಲಿರುವ ಅನೇಕ ಗ್ರಾಮಗಳ ಮನೆಗಳ ಮಲಿನ ನೀರು ಚರಂಡಿಗಳ ಮೂಲಕ ನಾಲೆ ಸೇರುತ್ತಿರುವ ಪರಿಣಾಮ ನೀರು ಅಶುದ್ಧವಾಗುತ್ತಿದೆ. ಈ ನೀರನ್ನು ಶುದ್ಧೀಕರಿಸದೆ ಕುಡಿದರೆ ಅಪಾಯ ಕಟ್ಟಿಟ್ಟ ಬುತ್ತಿ. ಈ ವಿಷಯ ತಿಳಿದಿದ್ದರೂ ಪುರಸಭೆ ಅಧಿಕಾರಿಗಳು ನೀರನ್ನು ಶುದ್ಧೀಕರಿಸದೆ,ಕ್ಲೋರಿನೇಷನ್ ಮಾಡದೆ ನೇರವಾಗಿ ಮನೆಗಳಿಗೆ ಸರಬರಾಜು ಮಾಡುತ್ತಿದ್ದಾರೆ. ಅಧಿಕಾರಿಗಳು, ಪುರಸಭೆ ಆಡಳಿತ ಮಂಡಳಿ ಹಾಗೂ ಜನಪ್ರತಿನಿಧಿಗಳು ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹವಾಗಿದೆ.

ಶುದ್ಧ ಕುಡಿಯುವ ನೀರಿನ ಘಟಕಗಳ ಹೆಚ್ಚಳ:  ಪಾಂಡವಪುರ ಪಟ್ಟಣಕ್ಕೆ ಶುದ್ಧ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ ಎಂಬ ಕಾರಣಕ್ಕಾಗಿಯೇ ಪಟ್ಟಣದ ಹಲವೆಡೆ ಖಾಸಗಿ ವ್ಯಕ್ತಿಗಳು ಶುದ್ಧ ನೀರಿನ ಘಟಕಗಳನ್ನು ತೆರೆದಿದ್ದು, ಒಂದು ಕ್ಯಾನಿಗೆ ೫ ರೂ. ಮತ್ತೆ ಕೆಲವೆಡೆ ೧೦ ರೂ. ಪಡೆದು ಶುದ್ಧೀಕರಿಸಿದ ನೀರನ್ನುಮಾರಾಟ ಮಾಡುತ್ತಿದ್ದಾರೆ. ಪುರಸಭೆ ಅಧಿಕಾರಿಗಳು ಜವಾಬ್ದಾರಿಯುತವಾಗಿ ವರ್ತಿಸಿ ನೀರು ಶುದ್ಧೀಕರಿಸಿ, ನಾಗರಿಕರಿಗೆ ಪೂರೈಕೆ ಮಾಡಿದರೆ ಜನ ನೀರಿಗೆ ಹಣ ಕೊಡುವ ಅವಶ್ಯಕತೆ ಇರುವುದಿಲ್ಲ.

” ಪಟ್ಟಣದ ಕೃಷ್ಣಾನಗರದಲ್ಲಿ ನೀರು ಶುದ್ಧೀಕರಣ ಘಟಕ ಮರು ಸ್ಥಾಪನೆಗೆ ಸರ್ಕಾರ ೪೦ ಲಕ್ಷ ರೂ.ಅನುದಾನ ನೀಡಿದ್ದು, ಟೆಂಡರ್ ಪ್ರಕ್ರಿಯೆಯೂ ಮುಗಿದಿದೆ. ವರ್ಕ್ ಆರ್ಡರ್ ನೀಡಿದರೆ ಕೆಲಸ ಪ್ರಾರಂಭವಾಗುತ್ತದೆ. ವಿಶ್ವೇಶ್ವರಯ್ಯ ನಾಲೆಯಿಂದ ಲಿಫ್ಟ್ ಮಾಡುವ ಕುಡಿಯುವ ನೀರಿಗೆ ಕ್ಲೋರಿನೇಷನ್ ಮಾಡಲು ಇಲ್ಲಿ ಅವಕಾಶ ಇಲ್ಲದ ಕಾರಣ ಶ್ರೀರಂಗಪಟ್ಟಣದ ಪಂಪ್‌ಹೌಸ್‌ನಲ್ಲಿ ಈ ನೀರಿಗೂ ಅಗತ್ಯವಿರುವಷ್ಟು ಕ್ಲೋರಿನ್ ಅನ್ನು ಹೆಚ್ಚುವರಿಯಾಗಿ ಹಾಕಲಾಗುತ್ತಿದೆ. ಇದರಿಂದ ಯಾವುದೇ ತೊಂದರೆ ಆಗುವುದಿಲ್ಲ. ಕ್ಲೋರಿನೇಷನ್ ಹೊರತುಪಡಿಸಿ ಉಳಿದಂತೆ ಎಲ್ಲ ರೀತಿಯಲ್ಲೂ ನೀರನ್ನು ಶುದ್ಧೀಕರಿಸಲಾಗುತ್ತಿದೆ.”

-ಚೌಡಪ್ಪ, ಪುರಸಭೆ ಇಂಜಿನಿಯರ್

ಆಂದೋಲನ ಡೆಸ್ಕ್

Recent Posts

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

8 hours ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

8 hours ago

ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ : ಸಚಿವ ಖಂಡ್ರೆ ಭರವಸೆ

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…

8 hours ago

ಭದ್ರಾ ಅಭಯಾರಣ್ಯ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಲು ಕ್ರಮ : ಈಶ್ವರ ಖಂಡ್ರೆ

ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…

8 hours ago

ಎಲ್‌ಪಿಜಿ ರಿಫಿಲಿಂಗ್‌ ಅವಧಿ ಹೆಚ್ಚಳ ; ವದಂತಿ ನಿರಾಕರಿಸಿದ ಕೇಂದ್ರ

ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್‌ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…

9 hours ago

ಆಕಸ್ಮಿಕ ಬೆಂಕಿ; ಸ್ಕೂಟಿ ಭಸ್ಮ, ಮಹಿಳೆ ಪಾರು

ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…

9 hours ago