Andolana originals

ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಬೇಕು ಸರ್ಜರಿ

ದೇವರಾಜ ಅರಸು ಕಾಲೋನಿ, ಪೌರಕಾರ್ಮಿಕರ ಕಾಲೋನಿಯಲ್ಲಿ ನೀರಿನ ಸಮಸ್ಯೆ

ಪ್ರಶಾಂತ್ ಎಸ್.

ಮೈಸೂರು: ಮಹಾನಗರ ಪಾಲಿಕೆ ವಾರ್ಡ್ ಸಂಖ್ಯೆ ೬೨ರ ದೇವರಾಜ ಅರಸು ಕಾಲೋನಿ ಮತ್ತು ಪೌರಕಾರ್ಮಿಕರ ಕಾಲೋನಿಗಳಲ್ಲಿ ಸ್ಥಾಪಿಸಿರುವ ಶುದ್ಧ ಕುಡಿಯುವ ನೀರಿನ ಘಟಕಗಳು ಕೆಟ್ಟು ನಿಂತಿದ್ದು, ಈ ಭಾಗದ ಜನತೆ ಶುದ್ಧ ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ.

ಶುದ್ಧ ಕುಡಿಯುವ ನೀರಿನ ಘಟಕ ಸುಸ್ಥಿತಿಯಲ್ಲಿದ್ದಾಗ ಈ ಕಾಲೋನಿಗಳಿಗೆ ಬರುವ ಸಾರ್ವಜನಿಕರು, ಸುತ್ತಮುತ್ತಲಿನ ಅಂಗಡಿ ಮಾಲೀಕರು, ಕೂಲಿ ಕಾರ್ಮಿಕರು ಇದರ ಪ್ರಯೋಜನವನ್ನು ಸದ್ಬಳಕೆ ಮಾಡಿಕೊಂಡಿದ್ದರು. ಕೆಲವೇ ದಿನಗಳಲ್ಲಿ ಯಂತ್ರಗಳೆಲ್ಲ ಕೆಟ್ಟು ಹೋಗಿವೆ.

ನಲ್ಲಿ ಹಾಗೂ ಕಾಯಿನ್ ಬಾಕ್ಸ್ ನಾಪತ್ತೆ: ಶುದ್ಧ ಕುಡಿಯುವ ನೀರಿನ ಘಟಕದ ಬಾಗಿಲಿನ ಗಾಜುಗಳನ್ನು ಕಿಡಿಗೇಡಿಗಳು ಒಡೆದು ಹಾಕಿದ್ದಾರೆ. ಆದರೂ ನಗರಪಾಲಿಕೆ ಅಧಿಕಾರಿಗಳು ಮಾತ್ರ ಇತ್ತ ಗಮನಗರಿಸಿಲ್ಲ. ೬೨ನೇ ವಾರ್ಡ್‌ನಲ್ಲಿ ನಿರ್ಮಾಣ ಮಾಡಿರುವ ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ನೀರು ತುಂಬಿಸಿಕೊಳ್ಳಲು ಅಳವಡಿಸಲಾಗಿದ್ದ ಪೈಪ್ ಹಾಗೂ ೫ ರೂ. ನಾಣ್ಯ ಹಾಕಲು ಇಡಲಾಗಿದ್ದ ಕಾಯಿನ್ ಬಾಕ್ಸ್ ಕೂಡ ನಾಪತ್ತೆಯಾಗಿದೆ.

ಸರ್ಕಾರದ ಆಸ್ತಿಯನ್ನು ರಕ್ಷಣೆ ಮಾಡಬೇಕಾದ ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಶುದ್ಧ ಕುಡಿಯುವ ನೀರಿನ ಘಟಕ ಉಪಯೋಗಕ್ಕೆ ಬಾರದಂತಾಗಿದೆ. ಇದೀಗ ಬೇಸಿಗೆ ಪ್ರಾರಂಭವಾಗಿರುವುದರಿಂದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರಿನ ಅಗತ್ಯವಿದೆ. ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ದುರಸ್ತಿ ಮಾಡಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ದುರಸ್ತಿ ಮಾಡುವವರು ಯಾರು?: ನಿರ್ವಹಣೆ ಕೊರತೆಯಿಂದಾಗಿ ಶುದ್ಧ ಕುಡಿಯುವ ನೀರಿನ ಘಟಕ ಹಾಳಾಗಿದ್ದು, ಇಲ್ಲಿ ಹೆಸರಿಗಷ್ಟೇ ಶುದ್ಧ ನೀರಿನ ಘಟಕವಿದೆ. ಅಲ್ಲಿ ನೀರು ಬರುತ್ತಿಲ್ಲ. ದುರಸ್ತಿ ಮಾಡುವವರು ಯಾರು ಎಂಬ ಪ್ರಶ್ನೆಗೆ ಉತ್ತರ ಇಲ್ಲವಾಗಿದೆ. ತಾಂತ್ರಿಕ ದೋಷ ಸೇರಿದಂತೆ ಇನ್ನಿತರ ಕಾರಣಗಳಿಂದ ಘಟಕ ಕಾರ್ಯ ನಿರ್ವಹಿಸದೆ ಇರುವ ಬಗ್ಗೆ ಪಾಲಿಕೆ ಅಧಿಕಾರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದರೂ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ದೂರುತ್ತಾರೆ ಸ್ಥಳೀಯರು.

” ಶುದ್ಧ ಕುಡಿಯುವ ನೀರಿನ ಘಟಕ ಕೆಲ ತಾಂತ್ರಿಕ ದೋಷಗಳಿಂದ ಕೆಟ್ಟಿದ್ದು, ನಂತರ ಇದನ್ನು ಅಧಿಕಾರಿಗಳು ದುರಸ್ತಿ ಮಾಡದೇ ಇರುವುದರಿಂದ ಉಪಯೋಗಕ್ಕೆ ಬಾರದಂತಾಗಿದೆ. ಬೇಸಿಗೆ ಕಾಲದಲ್ಲಿ ಜನರಿಗೆ ಶುದ್ಧ ಕುಡಿಯುವ ನೀರಿನ ಘಟಕದ ಅವಶ್ಯವಿದೆ. ನಗರ ಪಾಲಿಕೆ ಇದನ್ನು ದುರಸ್ತಿ ಮಾಡಿದರೆ ಈ ಭಾಗದ ನಿವಾಸಿಗಳಿಗೆ ಅನುಕೂಲವಾಗಲಿದೆ.”

-ನಾರಾಯಣ ಹೆಗ್ಗಡೆ, ಸ್ಥಳೀಯರು

” ನಗರ ವ್ಯಾಪ್ತಿಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳ ಮಾಹಿತಿ ನೀಡುವಂತೆ ಸಂಬಂಧಪಟ್ಟ ಅಭಿಯಂತರರಿಗೆ ಸೂಚನೆ ನೀಡಿದ್ದು, ಅದನ್ನು ಪರಿಶೀಲಿಸಿ ಶುದ್ಧ ಕುಡಿಯುವ ನೀರಿನ ಘಟಕಗಳು ಕೆಟ್ಟಿದ್ದರೆ ಶೀಘ್ರದಲ್ಲಿಯೇ ದುರಸ್ತಿ ಮಾಡಿಸಲಾಗುವುದು.”

-ಶೇಖ್ ತನ್ವೀರ್ ಆಸಿಫ್, ನಗರಪಾಲಿಕೆ ಆಯುಕ್ತರು

 

 

ಆಂದೋಲನ ಡೆಸ್ಕ್

Recent Posts

ಬ್ರೇಕ್‌ಫಾಸ್ಟ್‌ ಮೀಟಿಂಗ್:‌ ಸಿದ್ದರಾಮಯ್ಯರನ್ನು ತಬ್ಬಿ ಕಾಲಿಗೆ ಬಿದ್ದ ಡಿಸಿಎಂ ಡಿಕೆಶಿ

ಬೆಂಗಳೂರು: ಇಂದು ಬೆಳಿಗ್ಗೆ ಉಪಹಾರಕ್ಕೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್‌ ಅವರು ಸಿದ್ದರಾಮಯ್ಯರನ್ನು ತಬ್ಬಿಕೊಂಡು ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.…

1 hour ago

ಓದುಗರ ಪತ್ರ: ತಡೆಯಲಿ ಸರ್ಕಾರ!

ತಡೆಯಲಿ ಸರ್ಕಾರ! ಏರುತ್ತಲೇ ಇದೆ ಇಂಧನ ಬೆಲೆ ಇಳಿಯುತ್ತಲೇ ಇದೆ ಮಾನವ ಬೆಲೆ! ಈ ಪರಿಯ ಹಾವು-ಏಣಿ ಆಟದಲಿ ಅಧೋಗತಿಗೆ…

1 hour ago

ಓದುಗರ ಪತ್ರ: ಬಿಪಿಎಲ್ ಆದಾಯ ಮಿತಿ ಹೆಚ್ಚಿಸಿ

ರಾಜ್ಯಾದ್ಯಂತ ಹೊಸ ಬಿಪಿಎಲ್ ಕಾರ್ಡ್‌ಗಾಗಿ ಸಲ್ಲಿಕೆಯಾಗಿರುವ ಮೂರು ಲಕ್ಷ ಅರ್ಜಿಗಳು ನಾಲ್ಕು ವರ್ಷಗಳಿಂದ ವಿಲೇವಾರಿಯಾಗದೆ ಬಾಕಿ ಉಳಿದಿರುವುದು ಬೇಸರದ ಸಂಗತಿ.…

1 hour ago

ಓದುಗರ ಪತ್ರ: ರಸ್ತೆಗೆ ಡಾಂಬರೀಕರಣ ಮಾಡಿ

ಚಾಮರಾಜನಗರ ಜಿಲ್ಲೆಯ ಮರಿಯಾಲ ಗ್ರಾಮದ ಪ್ರಮುಖ ರಸ್ತೆಯು ಹಾಳಾಗಿದೆ. ಈ ರಸ್ತೆಯು ಕೆಲ್ಲಂಬಳ್ಳಿ, ಕಸ್ತೂರು ಮೂಲಕ ವಿವಿಧ ಗ್ರಾಮಗಳ ಮೂಲಕ…

1 hour ago

ಓದುಗರ ಪತ್ರ: ವಿಷಯದ ಗಂಭೀರತೆ ಮರೆತ ಪೊಲೀಸರು

ತಮಿಳುನಾಡಿನಲ್ಲಿ, ಕಳೆದ ಕೆಲವು ದಿನಗಳ ಹಿಂದೆ, ೧೦ ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಆಕೆಯನ್ನು ಕೊಲೆಗೈದ ವಿಷಯಕ್ಕೆ ಸಂಬಂಧಿಸಿದಂತೆ…

2 hours ago

ಓದುಗರ ಪತ್ರ: ಇಂಧನದ ಮೇಲಿನ ತೆರಿಗೆ ಇಳಿಸಿ

ಅಮೆರಿಕ -ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಇರಾನ್ ಹಾರ್ಮುಜ್ ಜಲಸಂಽಯನ್ನು ಮುಚ್ಚಿದ್ದರಿಂದಾಗಿ ಕಚ್ಚಾತೈಲದ ಆಮದು ಪ್ರಮಾಣವು…

2 hours ago