Andolana originals

ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಬೇಕು ಸರ್ಜರಿ

ದೇವರಾಜ ಅರಸು ಕಾಲೋನಿ, ಪೌರಕಾರ್ಮಿಕರ ಕಾಲೋನಿಯಲ್ಲಿ ನೀರಿನ ಸಮಸ್ಯೆ

ಪ್ರಶಾಂತ್ ಎಸ್.

ಮೈಸೂರು: ಮಹಾನಗರ ಪಾಲಿಕೆ ವಾರ್ಡ್ ಸಂಖ್ಯೆ ೬೨ರ ದೇವರಾಜ ಅರಸು ಕಾಲೋನಿ ಮತ್ತು ಪೌರಕಾರ್ಮಿಕರ ಕಾಲೋನಿಗಳಲ್ಲಿ ಸ್ಥಾಪಿಸಿರುವ ಶುದ್ಧ ಕುಡಿಯುವ ನೀರಿನ ಘಟಕಗಳು ಕೆಟ್ಟು ನಿಂತಿದ್ದು, ಈ ಭಾಗದ ಜನತೆ ಶುದ್ಧ ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ.

ಶುದ್ಧ ಕುಡಿಯುವ ನೀರಿನ ಘಟಕ ಸುಸ್ಥಿತಿಯಲ್ಲಿದ್ದಾಗ ಈ ಕಾಲೋನಿಗಳಿಗೆ ಬರುವ ಸಾರ್ವಜನಿಕರು, ಸುತ್ತಮುತ್ತಲಿನ ಅಂಗಡಿ ಮಾಲೀಕರು, ಕೂಲಿ ಕಾರ್ಮಿಕರು ಇದರ ಪ್ರಯೋಜನವನ್ನು ಸದ್ಬಳಕೆ ಮಾಡಿಕೊಂಡಿದ್ದರು. ಕೆಲವೇ ದಿನಗಳಲ್ಲಿ ಯಂತ್ರಗಳೆಲ್ಲ ಕೆಟ್ಟು ಹೋಗಿವೆ.

ನಲ್ಲಿ ಹಾಗೂ ಕಾಯಿನ್ ಬಾಕ್ಸ್ ನಾಪತ್ತೆ: ಶುದ್ಧ ಕುಡಿಯುವ ನೀರಿನ ಘಟಕದ ಬಾಗಿಲಿನ ಗಾಜುಗಳನ್ನು ಕಿಡಿಗೇಡಿಗಳು ಒಡೆದು ಹಾಕಿದ್ದಾರೆ. ಆದರೂ ನಗರಪಾಲಿಕೆ ಅಧಿಕಾರಿಗಳು ಮಾತ್ರ ಇತ್ತ ಗಮನಗರಿಸಿಲ್ಲ. ೬೨ನೇ ವಾರ್ಡ್‌ನಲ್ಲಿ ನಿರ್ಮಾಣ ಮಾಡಿರುವ ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ನೀರು ತುಂಬಿಸಿಕೊಳ್ಳಲು ಅಳವಡಿಸಲಾಗಿದ್ದ ಪೈಪ್ ಹಾಗೂ ೫ ರೂ. ನಾಣ್ಯ ಹಾಕಲು ಇಡಲಾಗಿದ್ದ ಕಾಯಿನ್ ಬಾಕ್ಸ್ ಕೂಡ ನಾಪತ್ತೆಯಾಗಿದೆ.

ಸರ್ಕಾರದ ಆಸ್ತಿಯನ್ನು ರಕ್ಷಣೆ ಮಾಡಬೇಕಾದ ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಶುದ್ಧ ಕುಡಿಯುವ ನೀರಿನ ಘಟಕ ಉಪಯೋಗಕ್ಕೆ ಬಾರದಂತಾಗಿದೆ. ಇದೀಗ ಬೇಸಿಗೆ ಪ್ರಾರಂಭವಾಗಿರುವುದರಿಂದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರಿನ ಅಗತ್ಯವಿದೆ. ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ದುರಸ್ತಿ ಮಾಡಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ದುರಸ್ತಿ ಮಾಡುವವರು ಯಾರು?: ನಿರ್ವಹಣೆ ಕೊರತೆಯಿಂದಾಗಿ ಶುದ್ಧ ಕುಡಿಯುವ ನೀರಿನ ಘಟಕ ಹಾಳಾಗಿದ್ದು, ಇಲ್ಲಿ ಹೆಸರಿಗಷ್ಟೇ ಶುದ್ಧ ನೀರಿನ ಘಟಕವಿದೆ. ಅಲ್ಲಿ ನೀರು ಬರುತ್ತಿಲ್ಲ. ದುರಸ್ತಿ ಮಾಡುವವರು ಯಾರು ಎಂಬ ಪ್ರಶ್ನೆಗೆ ಉತ್ತರ ಇಲ್ಲವಾಗಿದೆ. ತಾಂತ್ರಿಕ ದೋಷ ಸೇರಿದಂತೆ ಇನ್ನಿತರ ಕಾರಣಗಳಿಂದ ಘಟಕ ಕಾರ್ಯ ನಿರ್ವಹಿಸದೆ ಇರುವ ಬಗ್ಗೆ ಪಾಲಿಕೆ ಅಧಿಕಾರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದರೂ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ದೂರುತ್ತಾರೆ ಸ್ಥಳೀಯರು.

” ಶುದ್ಧ ಕುಡಿಯುವ ನೀರಿನ ಘಟಕ ಕೆಲ ತಾಂತ್ರಿಕ ದೋಷಗಳಿಂದ ಕೆಟ್ಟಿದ್ದು, ನಂತರ ಇದನ್ನು ಅಧಿಕಾರಿಗಳು ದುರಸ್ತಿ ಮಾಡದೇ ಇರುವುದರಿಂದ ಉಪಯೋಗಕ್ಕೆ ಬಾರದಂತಾಗಿದೆ. ಬೇಸಿಗೆ ಕಾಲದಲ್ಲಿ ಜನರಿಗೆ ಶುದ್ಧ ಕುಡಿಯುವ ನೀರಿನ ಘಟಕದ ಅವಶ್ಯವಿದೆ. ನಗರ ಪಾಲಿಕೆ ಇದನ್ನು ದುರಸ್ತಿ ಮಾಡಿದರೆ ಈ ಭಾಗದ ನಿವಾಸಿಗಳಿಗೆ ಅನುಕೂಲವಾಗಲಿದೆ.”

-ನಾರಾಯಣ ಹೆಗ್ಗಡೆ, ಸ್ಥಳೀಯರು

” ನಗರ ವ್ಯಾಪ್ತಿಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳ ಮಾಹಿತಿ ನೀಡುವಂತೆ ಸಂಬಂಧಪಟ್ಟ ಅಭಿಯಂತರರಿಗೆ ಸೂಚನೆ ನೀಡಿದ್ದು, ಅದನ್ನು ಪರಿಶೀಲಿಸಿ ಶುದ್ಧ ಕುಡಿಯುವ ನೀರಿನ ಘಟಕಗಳು ಕೆಟ್ಟಿದ್ದರೆ ಶೀಘ್ರದಲ್ಲಿಯೇ ದುರಸ್ತಿ ಮಾಡಿಸಲಾಗುವುದು.”

-ಶೇಖ್ ತನ್ವೀರ್ ಆಸಿಫ್, ನಗರಪಾಲಿಕೆ ಆಯುಕ್ತರು

 

 

ಆಂದೋಲನ ಡೆಸ್ಕ್

Recent Posts

ಮಂಡ್ಯ | ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿದ್ದ ಕೈದಿ ಜನರ ಕೈಗೆ ಸಿಕ್ಕಿಬಿದ್ದ

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…

58 mins ago

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…

2 hours ago

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

2 hours ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

3 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

7 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

10 hours ago