Andolana originals

ಅಳಿಸಿರುವ ಯುಎಚ್ಐಡಿ ಸಂಖ್ಯೆ; ಸಮೀಕ್ಷೆಗೆ ತೊಡಕು

ಪ್ರಸಾದ್ ಲಕ್ಕೂರು

ಮುಂದುವರಿದ ಆಪ್ ತಾಂತ್ರಿಕ ತೊಂದರೆ; ಗಣತಿದಾರರನ್ನು ಕಾಡುತ್ತಿರುವ ಸರ್ವರ್ ಬ್ಯುಸಿ 

ಚಾಮರಾಜನಗರ: ರಾಜ್ಯ ಸರ್ಕಾರವು ಹಿಂದುಳಿದ ವರ್ಗಗಳ ಆಯೋಗದ ಮೂಲಕ ಕೈಗೊಂಡಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಮನೆ ಮನೆಗಳಲ್ಲಿ ಅಂಟಿಸಿ ರುವ ಮನೆ ಸಂಖ್ಯೆಯು (ಯುಎಚ್‌ಐಡಿ- ಯುನಿಕ್ ಐಡೆಂಟಿಫಿಕೇಶನ್ ನಂಬರ್) ಕೆಲವು ಕಡೆ ಅಳಿಸಿ ಹೋಗಿದ್ದು, ಸರಿಯಾಗಿ ಸಮೀಕ್ಷೆ ನಡೆಸಲು ಸಾಧ್ಯವಾಗಲಿಲ್ಲ.

ಇದರಿಂದಾಗಿ ಆಪ್‌ನಲ್ಲಿ ಯುಎಚ್‌ಐಡಿ ನಂಬರ್ ಬರುತ್ತಿಲ್ಲ. ಇದಲ್ಲದೆ ಯುಎಚ್‌ಐಡಿ ನಂಬರ್ ಲಭ್ಯವಿರುವ ಕಡೆ ಆಪ್ ತೆರೆದು ಸಮೀಕ್ಷೆ ಶುರು ಮಾಡಿದರೆ ಇದ್ದಕ್ಕಿದ್ದಂತೆ ಹ್ಯಾಂಗ್ ಆಗಿ ಸರ್ವರ್ ಬ್ಯುಸಿ ಎಂಬ ಉತ್ತರ ಬರುತ್ತಿದೆ. ಇದರಿಂದ ಜಿಲ್ಲಾದ್ಯಂತ ೫ನೇ ದಿನವೂ ಸಮೀಕ್ಷೆ ನಡೆಸಲು ಸಾಧ್ಯವಾಗದೆ ಗಣತಿದಾರರು ಮನೆಗೆ ವಾಪಸ್ ಹೋಗಿದ್ದಾರೆ.

ತಿಂಗಳ ಹಿಂದೆಯೇ ಯುಎಚ್‌ಐಡಿ ನಂಬರ್ ಇರುವ ಚೀಟಿಯನ್ನು ಪ್ರತಿಯೊಂದು ಮನೆ ಮನೆಗೂ ಅಂಟಿಸಲಾಗಿದೆ. ಆದರೆ. ಅಲ್ಲಿರುವ ಯುಎಚ್‌ಐಡಿ ನಂಬರ್ ಅಳಿಸಿ ಹೋಗಿದೆ. ಇದರಿಂದ ಸಮೀಕ್ಷೆಗೆ ತೊಂಡಕಾಗಿ ಪರಿಣಮಿಸಿದೆ.

ಇದನ್ನು ಓದಿ : ವ್ಯರ್ಥ ಪದಾರ್ಥಗಳ ಸಂಗ್ರಹಣೆ ಬ್ಯಾಂಕ್‌

ಹಾಗಾಗಿ ಆಪ್‌ನಲ್ಲಿ ಯುಎಚ್‌ಐಡಿ ಸಂಖ್ಯೆ ನಮೂದಿಸುವ ಅವಕಾಶವೇ ಸಿಗಲಿಲ್ಲ. ಬದಲಿಗೆ. ‘ಸಮೀಕ್ಷೆ ಮುಗಿದಿದೆ. ಹೊಸ ಸರ್ವೆ ಆರಂಭಿಸಿ’ ಎಂಬ ಅಡಿ ಸಾಲು ನೋಡಿ ಸಾಕಾಯಿತು ಎಂದು ಕೆಲವು ಸಮೀಕ್ಷಕರು ‘ಆಂದೋಲನ’ಕ್ಕೆ ತಿಳಿಸಿದರು.

ಯುಎಚ್‌ಐಡಿ ಸಂಖ್ಯೆ ಅಳಿಸಿ ಹೋಗಿದ್ದು ಸಮೀಕ್ಷೆ ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ಅಽಕಾರಿಗಳ ಗಮನಕ್ಕೆ ತಂದರೂ ಪ್ರಯೋಜನ ವಾಗಿಲ್ಲ. ತುರ್ತಾಗಿ ಸರಿಪಡಿಸಲಾಗುತ್ತದೆ ಎಂಬ ಉತ್ತರ ಬರುತ್ತಿದೆ ಎಂದು ಸಮೀಕ್ಷೆದಾರರು ತಿಳಿಸಿದ್ದಾg

‘ಆಫ್‌ಲೈನ್ ಸಮೀಕ್ಷೆಗೆ ಅವಕಾಶ ಕಲ್ಪಿಸಿ’: 

ಆನ್‌ಲೈನ್ ಸಮೀಕ್ಷೆಗೆ ಎದುರಾದ ತಾಂತ್ರಿಕ ತೊಂದರೆಗಳಿಂದ ಬೇಸತ್ತಿರುವ ಸಮೀಕ್ಷೆದಾರರು, ಆಫ್‌ಲೈನ್ ಸಮೀಕ್ಷೆ ನಡೆಸಲು ಅವಕಾಶ ನೀಡಬೇಕು. ಆಗ ಸರ್ವರ್ ಸಮಸ್ಯೆ ಇರುವುದಿಲ್ಲ; ಬೇಗ ಮನೆಗಳ ಸಮೀಕ್ಷೆ ನಡೆಸಲು ಸಾಧ್ಯ ಎಂದು ಗಣತಿದಾರರು ಹೇಳುತ್ತಿದ್ದಾರೆ. ಹಿಂದಿನ ವರ್ಷಗಳಲ್ಲಿ ಅಚ್ಚುಕಟ್ಟಾಗಿ ಆಫ್‌ಲೈನ್ ಸಮೀಕ್ಷೆಗಳನ್ನು ನಡೆಸಿದ್ದೇವೆ. ಈಗಿನ ಆಪ್‌ನಿಂದ ಸಮಸ್ಯೆಯಾಗಿದೆ. ಸುಮ್ಮನೆ ಅಲೆದಾಡಬೇಕಿದೆ. ೫ ದಿನಗಳಾದರೂ ತಾಂತ್ರಿಕ ಸಮಸ್ಯೆಗಳು ಪರಿಹಾರವಾಗದೆ ಬೇಸತ್ತಿರುವ ಗಣತಿದಾರರು ಮೊದಲು ಆಪ್‌ನ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಬೇಕು. ನೆಮ್ಮದಿಯಿಂದ ಸಮೀಕ್ಷೆ ನಡೆಸಲು ಅವಕಾಶ ಮಾಡಿಕೊಡಬೇಕು ಎಂದು ಮೇಲ್ವಿಚಾರಕರಲ್ಲಿ ಮನವಿ ಮಾಡುತ್ತಿದ್ದಾರೆ.

” ಜಿಲ್ಲಾ ಮಟ್ಟದ ಅಧಿಕಾರಿಗಳ ತಂಡದೊಂದಿಗೆ ಕ್ಷೇತ್ರಕ್ಕೆ ಭೇಟಿ ನೀಡಿ ಖುದ್ದು ಸಮೀಕ್ಷೆ ಕಾರ್ಯವನ್ನು ಮೊಬೈಲ್ ಆಪ್‌ನಲ್ಲಿ ಪರಿಶೀಲಿಸಿದ್ದೇನೆ. ಪ್ರಸ್ತುತ ತಾಂತ್ರಿಕ ಸಮಸ್ಯೆ ಪರಿಹರಿಸಲಾ ಗಿದೆ. ಯಾವುದೇ ತಾಂತ್ರಿಕ ಸಮಸ್ಯೆಗಳು ಉದ್ಭವಿಸಿದಲ್ಲಿ ಪರಿಹಾರಕ್ಕಾಗಿ ತಾಂತ್ರಿಕ ಪರಿಣತರನ್ನು ತಾಲ್ಲೂಕುವಾರು ನೇಮಕ ಗೊಳಿಸಲಾಗಿದೆ. ಮನೆಗಳಿಗೆ ಅಂಟಿಸಿರುವ ಯು ಎಚ್‌ಐಡಿ ಸಂಖ್ಯೆ ಅಳಿಸಿರುವುದು ಗಮನಕ್ಕೆ ಬಂದಿದೆ. ಆ ಸಮಸ್ಯೆ ಪರಿಹರಿಸಲು ಕ್ರಮ ವಹಿಸಲಾಗುವುದು.”

-ಸಿ.ಟಿ.ಶಿಲ್ಪಾನಾಗ್, ಜಿಲ್ಲಾಧಿಕಾರಿ

ಆಂದೋಲನ ಡೆಸ್ಕ್

Recent Posts

ವರ್ತನೆ ತಪ್ಪಿದರೆ ದಾಳಿ ನಿಶ್ಚಿತ : ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ

ವಾಷಿಂಗ್ಟನ್ : ಇರಾನ್ ತಪ್ಪು ವರ್ತನೆ ತೋರಿದರೆ ಮತ್ತೆ ಸೇನಾ ದಾಳಿ ಆರಂಭವಾಗಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

7 hours ago

ನಿಗದಿಗಿಂತ ಮುನ್ನವೇ ಮುಂಗಾರು ಮಳೆ : ಮೇ ಅಂತ್ಯಕ್ಕೆ ಕೇರಳ ಪ್ರವೇಶ

ಬೆಂಗಳೂರು : ಬಿರುಬೇಸಿಗೆಯಿಂದಾಗಿ ಬಳಲಿ ಬೆಂಡಾಗಿರುವ ಜನತೆಗೆ ಕೇಂದ್ರ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿ ನಿಗದಿಗಿಂತ ಮುಂಚಿತವಾಗಿಯೇ…

7 hours ago

ಬೆಟ್ಟದಪುರ | ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶ ; ಬಾಲಕ ಸಾವು

ಬೆಟ್ಟದಪುರ : ಪಿರಿಯಾಪಟ್ಟಣ ತಾಲ್ಲೂಕಿನ ಬಿ.ಟಿ.ಎಂ. ಕೊಪ್ಪಲು ಗ್ರಾಮದಲ್ಲಿ ಮನೆಯ ಹಿಂದೆ ಕ್ರಿಕೆಟ್ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ…

8 hours ago

ಚಿಪ್ಪುಹಂದಿ ಬೇಟೆಯಾಡಿ ಮಾರಾಟಕ್ಕೆ ಯತ್ನ: ಓರ್ವ ಬಂಧನ

ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ…

10 hours ago

ʼದೃಷ್ಟಿ ಉಪಗ್ರಹʼ ಉಡಾವಣೆ ಯಶಸ್ವಿ

ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…

11 hours ago

ಮೇ.6ರಂದು ಯಸಳೂರಿನ ಅರ್ಜುನ ಆನೆ ಸಮಾಧಿ ಸ್ಥಳದ ಸ್ಮಾರಕ ಉದ್ಘಾಟನೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…

13 hours ago