Andolana originals

‘ಮೆಂದಾರೆ ಗ್ರಾಮ ಸ್ಥಳಾಂತರ ಸಂಬಂಧ ಸರ್ವೆ’

ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೆಂದಾರೆ ಗ್ರಾಮವನ್ನು ಸ್ಥಳಾಂತರ ಮಾಡುವ ಸಂಬಂಧ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಕಮಿಟಿ ರಚನೆ ಮಾಡಲಾಗಿದ್ದು, ಮೂರು ದಿನಗಳ ಕಾಲ ಸರ್ವೆ ಮಾಡಿ ವರದಿ ಸಿದ್ಧಪಡಿಸಲಾಗುವುದು ಎಂದು ಉಪ ವಿಭಾಗಾಧಿಕಾರಿ ಶಿವಮೂರ್ತಿ ತಿಳಿಸಿದರು. ಸಾಮಾಜಿಕ, ಆರ್ಥಿಕ ಸ್ಥಿತಿಯ ಸರ್ವೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಇಂಡಿಗನತ್ತ ಗ್ರಾಮದ ಮತಗಟ್ಟೆ ಧ್ವಂಸ ಪ್ರಕರಣ ನಂತರ ಗ್ರಾಮದ ವಾಸ್ತವತೆ ತಿಳಿಯಲು ಮೆಂದಾರೆ ಗ್ರಾಮಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾ ನಾಗ್‌ರವರಿಗೆ ಮೆಂದಾರೆ ಗ್ರಾಮದವರು ತಮ್ಮನ್ನು ಸ್ಥಳಾಂತರ ಮಾಡುವಂತೆ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಈ ಸಭೆ ನಡೆಸಲಾಗಿದೆ. ಮಂದಾರೆ ಗ್ರಾಮದಲ್ಲಿರುವ ಕುಟುಂಬಗಳು, ವಿದ್ಯಾವಂತರು, ಅವಿದ್ಯಾವಂತರು, ಮಾಡುವ ವೃತ್ತಿ, ಸ್ವಂತ ಮನೆ, ಜಮೀನು, ಜಾನುವಾರುಗಳು, ಆಧಾರ್ ಕಾರ್ಡ್, ಮೊಬೈಲ್, ಮತದಾರರ ಗುರುತಿನ ಚೀಟಿ ಸೇರಿದಂತೆ 24 ಪ್ರಮುಖ ಅಂಶಗಳನ್ನು ಗುರುತಿಸಲು ಈಗಾಗಲೇ ಕಮಿಟಿ ರಚನೆ ಮಾಡಲಾಗಿದೆ.

ಮೇ 27ರಿಂದ ಮೂರು ದಿನಗಳ ಕಾಲ ಸರ್ವೆ ನಡೆಸಿ ಕಮಿಟಿ ಸದಸ್ಯರು ನಮಗೆ ಕಮಿಟಿ ಸದಸ್ಯರು ನಮಗೆ ವರದಿ ನೀಡಲಿದ್ದಾರೆ. ಆ ವರದಿಯ ಆಧಾರದ ಮೇಲೆ ಎಲ್ಲಾ ಮಾಹಿತಿಯನ್ನು ಕ್ರೋಢೀಕರಿಸಿ ಮತ್ತೊಮ್ಮೆ ಗ್ರಾಮದಲ್ಲಿ ಗ್ರಾಮ ಸಭೆ ನಡೆಸಿ ಸ್ಥಳಾಂತರಕ್ಕೆ ಎಷ್ಟು ಜನ ಒಪ್ಪಿಗೆ ಕೊಟ್ಟಿದ್ದಾರೆ ಎಂಬುದರ ಬಗ್ಗೆ ಮಾಹಿತಿ ತೆಗೆದುಕೊಳ್ಳುತ್ತೇವೆ. ಜೂನ್ ಮೊದಲ ವಾರದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಅಂತಿಮ ವರದಿ ತಯಾರು ಮಾಡಿ ಜಿಲ್ಲಾಧಿಕಾರಿಗಳಿಗೆ ಸಮಗ್ರ ವರದಿಯನ್ನು ನೀಡುತ್ತೇವೆ ಎಂದು ತಿಳಿಸಿದರು.

ತಹಸಿಲ್ದಾರ್ ಗುರುಪ್ರಸಾದ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ನವೀನ್ ಮಠದ್, ಎಸಿಎಫ್ ಚಂದ್ರಶೇಖರ್, ಇಒ ಉಮೇಶ್, ಎಡಿಎಲ್ಆರ್ ನಟರಾಜು, ಕಿರಣ್, ಇನ್ನಿತರರು ಹಾಜರಿದ್ದರು.

andolana

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

4 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

7 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

7 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

7 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

8 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

8 hours ago